ಸಕಲೇಶಪುರ ದೊಡ್ಡಕೆರೆಗೆ ಬೇಕಿದೆ ಕಾಯಕಲ್ಪ

ಕೆರೆ ಅಭಿವೃದ್ಧಿಪಡಿಸಿದರೂ ಸಾರ್ವಜನಿಕರಿಗೆ ಕೂರಲು ಆಸನ ಸೇರಿದಂತೆ ಅಗತ್ಯ ಸೌಲಭ್ಯಗಳಿಲ್ಲ

Team Udayavani, Apr 23, 2019, 3:30 PM IST

hasan 4

● ಸುಧೀರ್‌ ಎಸ್‌.ಎಲ್

ಸಕಲೇಶಪುರ: ಪಟ್ಟಣದ ಜನರ ಕನಸಿನ ಕೂಸಾದ ದೊಡ್ಡಕೆರೆ ನಿತ್ಯ ನೂರಾರು ಜನರನ್ನು ತನ್ನತ್ತ ಸೆಳೆಯುತ್ತಿದೆ. ಆದರೆ ಈ ಸುಂದರ ಕೆರೆ ಹಲವು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ.

ಪಟ್ಟಣದ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಹೋಗುವ ರಸ್ತೆಗೆ ಹೊಂದಿಕೊಂಡಿರುವ ಸರ್ವೆ ನಂ. 193ರಲ್ಲಿ ಸುಮಾರು 5.25 ಎಕರೆಯಷ್ಟು ಪ್ರದೇಶದಲ್ಲಿ ಸರ್ಕಾರಿ ಕೆರೆ ಹಲವು ವರ್ಷಗಳ ಕಾಲ ಹಾಳು ಬಿದ್ದಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ರಾಜ್ಯ ಸಮನ್ವಯ ಅಧಿಕಾರಿ ಬೈಕೆರೆ ನಾಗೇಶ್‌ ವಿಶೇಷ ಆಸಕ್ತಿ ವಹಿಸಿ ಕೆರೆಯನ್ನು ಅಭಿವೃದ್ಧಿ ಪಡಿಸಲು ಸುಮಾರು 1.5ಕೋಟಿಗೂ ಹೆಚ್ಚು ಅನುದಾನವನ್ನು ಕಳೆದ ನಾಲ್ಕು ವರ್ಷಗಳ ಹಿಂದೆ ಬಿಡುಗಡೆ ಮಾಡಿಸಿದ್ದರು.

ಹೂಳು ತೆಗೆಯಲು ಸುಮಾರು ಎರಡು ವರ್ಷಗಳ ಕಾಲ ತೆಗೆದುಕೊಂಡ ಗುತ್ತಿಗೆದಾರರು ಕಳೆದ 2ವರ್ಷಗಳ ಹಿಂದೆ ಕಾಮಗಾರಿ ಮುಗಿಸುವಲ್ಲಿ ಯಶಸ್ವಿಯಾಗಿದ್ದು, ಅಂತಿಮವಾಗಿ ಶಾಸಕ ಎಚ್.ಕೆ ಕುಮಾರಸ್ವಾಮಿ ಅವರು ಕಾಮಗಾರಿಯನ್ನು ಉದ್ಘಾಟಿಸಿದ್ದರು. ಕೆರೆಯ ಸುತ್ತಲು ವಾಕಿಂಗ್‌ ಪಾತ್‌ ಮಾಡಲಾಗಿದ್ದು ನಿತ್ಯ ನೂರಾರು ಜನ ವಾಕಿಂಗ್‌ ಮಾಡಲು ಇಲ್ಲಿಗೆ ಬರುತ್ತಿದ್ದಾರೆ.

ಕೆರೆಗೆ ಶೌಚಾಲಯದ ನೀರು: ಕೆರೆಯ ಕೊನೆ ಭಾಗ ದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಶೌಚಾಲ ಯದಿಂದ ಕಲುಷಿತ ನೀರನ್ನು ನೇರವಾಗಿ ಕೆರೆಗೆ ಬಿಡುತ್ತಿರುವುದರಿಂದ ಕೆರೆಯ ನೀರು ಮಲಿನ ಗೊಂಡು ಗಬ್ಬು ವಾಸನೆ ಬರುತ್ತಿದ್ದು, ವಾಕಿಂಗ್‌ ಮಾಡಲು ಬರುವವರು ಮೂಗು ಮುಚ್ಚಿಕೊಂಡು ವಾಕಿಂಗ್‌ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಮೊದ ಲಿಗೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಶೌಚಾಲಯದ ಕಲುಷಿತ ನೀರನ್ನು ಬೇರೆಡೆಗೆ ಬಿಡಲು ಕೂಡಲೇ ಕ್ರಮ ಕೈಗೊಳ್ಳಬೇಕಾಗಿದೆ.

ಕೆರೆಯ ಸುತ್ತ ಗಿಡಗೆಂಟೆ: ಕೆರೆ ಆವರಣದ ಸುತ್ತಲು ಗಿಡಗುಂಟೆಗಳು ಕಾಡಿನಂತೆ ಬೆಳೆದಿದ್ದು,ಇದನ್ನು ತೆಗೆ ಯಲು ಯಾರು ಮುಂದಾಗಿಲ್ಲ. ಈ ಹಿಂದೆ ರೋಟರಿ ಸಂಸ್ಥೆಯವರು ಒಮ್ಮೆ ಇಲ್ಲಿರುವ ಗಿಡ ಗುಂಟೆಗಳನ್ನು ತೆಗೆಸಿದ್ದು ನಂತರ ಇದರ ಉಸ್ತುವಾರಿಯನ್ನು ಯಾರೂ ವಹಿಸಿಕೊಂಡಿಲ್ಲ. ಇಲ್ಲಿರುವ ಹೈಮಾಸ್ಟ್‌ ದೀಪ ಹಾಳಾಗಿರುವ ಕಾರಣ ಕತ್ತಲಾದ ನಂತರ ವಾಕಿಂಗ್‌ ಮಾಡುವುದು ಅಸಾಧ್ಯವಾಗಿದೆ.

ಕೂರಲು ಬೆಂಚ್‌ಗಳಿಲ್ಲ: ಕೆರೆಯ ವಾಕಿಂಗ್‌ ಪಾತ್‌ ಸುತ್ತಲೂ ಬೆಂಚ್‌ಗಳನ್ನು ಅಳವಡಿಸಬೇಕಾಗಿದ್ದು ಬೆಂಚ್‌ಗಳು ಇಲ್ಲದೆ ವಿಶ್ರಾಂತಿ ಪಡೆಯಲು ಕೆರೆ ಸಮೀಪದ ಕಟ್ಟೆಯಲ್ಲಿ ಕೂರಬೇಕಾಗಿದೆ.

ಮಕ್ಕಳ ಆಟಿಕೆಗಳಿಲ್ಲ: ಮಕ್ಕಳ ಮನೋರಂಜನೆಗಾಗಿ ಮಿನಿ ಪಾರ್ಕ್‌ ಮಾಡಲು ಜಾಗ ಬಿಡಲಾಗಿದೆ. ಆದರೆ ಈ ಜಾಗದಲ್ಲಿ ಮಕ್ಕಳ ಆಟದ ವಸ್ತುಗಳನ್ನು ಸಹ ಹಾಕಿರುವುದಿಲ್ಲ. ಕೂಡಲೇ ಇಲ್ಲಿ ಮಕ್ಕಳಿಗಾಗಿ ಮಿನಿ ಪಾರ್ಕ್‌ ಮಾಡಲು ಕ್ರಮ ಕೈಗೊಳ್ಳಬೇಕಾಗಿದೆ.

ಬೋಟಿಂಗ್‌ ವ್ಯವಸ್ಥೆ ಮಾಡಿ: ಹೊರ ಊರು ಗಳಿಂದಲೂ ಸಹ ಇಲ್ಲಿನ ಜನ ಇಲ್ಲಿಗೆ ಬರುತ್ತಿದ್ದು ಬೋಟಿಂಗ್‌ ವ್ಯವಸ್ಥೆ ಮಾಡಿದಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಲ್ಲಿ ಅನುಮಾನವಿಲ್ಲ. ಬೋಟಿಂಗ್‌ ವ್ಯವಸ್ಥೆ ಮಾಡಲು ಕ್ರಮ ಕೈಗೊಂಡಲ್ಲಿ ತಾಲೂಕಿನ ಪ್ರವಾಸೋದ್ಯಮ ಅಭಿವೃದ್ಧಿಗೂ ಸಹ ಸಹಾಯವಾಗುವುದು. ಈ ಹಿಂದೆ ನೀರಾವರಿ ಇಲಾಖೆ ವಶದಲ್ಲಿದ್ದ ಕೆರೆಯನ್ನು ಪುರಸಭೆಯ ಸುರ್ಪದಿಗೆ ನೀಡಲಾಗಿದೆ. ಕೆರೆ ಇನ್ನಾದರೂ ಅಭಿವೃದ್ಧಿ ಯಾಗುವುದೇ ಎಂದು ಕಾದು ನೋಡಬೇಕಾಗಿದೆ.

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.