ರಸ್ತೆಯಲ್ಲಿ ಸಿಕ್ಕ ಹಣವನ್ನು ವಾರಸುದಾರರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಟೀ ಅಂಗಡಿ ಮಾಲೀಕ
Team Udayavani, Jun 27, 2022, 7:40 PM IST
ಸಕಲೇಶಪುರ: ರಸ್ತೆಯಲ್ಲಿ ವ್ಯಕ್ತಿಯೋರ್ವರು ಅಕಸ್ಮಿಕವಾಗಿ ಬೀಳಿಸಿಕೊಂಡು ಹೋಗಿದ್ದ ಹಣ ಹಾಗೂ ಬ್ಯಾಂಕ್ ಪಾಸ್ ಬುಕ್ ಗಳನ್ನು ಟೀ ಅಂಗಡಿ ಮಾಲಿಕರೊರ್ವರು ನೈಜ ಮಾಲಿಕರಿಗೆ ಹಿಂತಿರುಗಿಸುವ ಮುಖಾಂತರ ಪ್ರಾಮಾಣಿಕತೆ ಮೆರೆದಿದ್ದಾರೆ.
ಪಟ್ಟಣದ ಬಿ.ಎಮ್ ರಸ್ತೆಯಲ್ಲಿರುವ ಲಕ್ಷ್ಮಣ್ ಎಂಬುವರ ಟೀ ಅಂಗಡಿ ಸಮೀಪ ಇದೇ ತಿಂಗಳ 23 ರಂದು ಮಳಲಿ ಗ್ರಾಮದ ವಸಂತ್ ಕುಮಾರ್ ಎನ್ನುವ ವೃದ್ದರೊರ್ವರು 5000ರೂ ನಗದು ಹಾಗೂ ಬ್ಯಾಂಕ್ ಪಾಸ್ ಬುಕ್ ಗಳನ್ನು ಬೀಳಿಸಿಕೊಂಡು ಹೋಗಿದ್ದರು. ಬ್ಯಾಂಕ್ ಪಾಸ್ ಬುಕ್ ನಲ್ಲಿ ವಸಂತ್ ಕುಮಾರ್ ರವರ ದೂರವಾಣಿ ಸಂಖ್ಯೆ ಇರದ ಕಾರಣ ಲಕ್ಷ್ಮಣ್ ಪಾಸ್ ಬುಕ್ ದಾಖಲಾತಿಗಳನ್ನು ಕೆಲವು ವಾಟ್ಸಪ್ ಗ್ರೂಪ್ ಗಳಲ್ಲಿ ಹಂಚಿಕೊಂಡಿದ್ದರು. ಇದನ್ನು ವಾಟ್ಸಪ್ ಗ್ರೂಪ್ ಒಂದರಲ್ಲಿ ನೋಡಿದ ವ್ಯಕ್ತಿಯೋರ್ವರು ವಸಂತ್ ಕುಮಾರ್ ರವರ ಮಗನಿಗೆ ವಿಷಯ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸೋಮವಾರ ಲಕ್ಷ್ಮಣ್ ರವರ ಅಂಗಡಿಗೆ ಆಗಮಿಸಿದ ವಸಂತ್ ಕುಮಾರ್ ರವವರಿಗೆ ಲಕ್ಷ್ಮಣ್ ರವರು ಬೀಳಿಸಿಕೊಂಡಿದ್ದ 5000ರೂಗಳು ಹಾಗೂ ಪಾಸ್ ಬುಕ್ ಹಿಂತಿರುಗಿಸುವ ಮುಖಾಂತರ ಪ್ರಾಮಾಣಿಕತೆ ಮೆರೆದಿದ್ದಾರೆ. ಈ ಹಿನ್ನೆಲೆಯಲ್ಲಿ ವಸಂತ್ ಕುಮಾರ್ ರವರ ಕುಟುಂಬ ಹಾಗೂ ಸಾರ್ವಜನಿಕರು ಟೀ ಅಂಗಡಿ ಮಾಲಿಕ ಲಕ್ಚ್ಮಣ್ ರವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಸಾಗರ: ವಿಕಿಪೀಡಿಯಾ ಪ್ರಕಾರ ಕಾಗೋಡು ಈಗ ಮಾಜಿ ರಾಜಕಾರಣಿ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು