ಸಕಲೇಶಪುರ : ಪೆಟ್ರೋಲಿಯಂ ಉತ್ಪನ್ನ ಕಳ್ಳವಿಗೆ ಯತ್ನ : ಆರೋಪಿಗಳು ಪರಾರಿ, ಸೊತ್ತು ವಶಕ್ಕೆ
Team Udayavani, Jun 4, 2022, 8:49 PM IST
ಸಕಲೇಶಪುರ: ಕಿಡಿಗೇಡಿಗಳ ಗುಂಪೊಂದು ನೆಲದೊಳಗೆ ಹಾದುಹೋಗಿರುವ ಪೆಟ್ರೋಲ್ ಪೈಪ್ಲೈನ್ ತುಂಡರಿಸಿ ಪೆಟ್ರೋಲಿಯಂ ಉತ್ಪನ್ನಗಳನ್ನು ಕದಿಯಲು ಯತ್ನ ಮಾಡಿ ವಿಫಲವಾಗಿರುವ ಘಟನೆ ತಾಲೂಕಿನ ಹಾನುಬಾಳ್ ಹೋಬಳಿ ಹುರುಡಿ ಸಮೀಪ ನಡೆದಿದೆ.
ಶುಕ್ರವಾರ ತಡ ರಾತ್ರಿ ಹುರುಡಿ ಗ್ರಾಮದ ಸಮೀಪ ಗದ್ದೆಗಳಿರುವ ಜಾಗದಲ್ಲಿ ಹಾದು ಹೋಗಿರುವ ಪೆಟ್ರೋನೆಟ್ ಎಮ್.ಎಚ್.ಬಿ ಲಿಮಿಟೆಡ್ನ ಪೈಪ್ ಲೈನ್ನ್ನು ಹಿಟಾಚಿ ಯಂತ್ರದಿಂದ ಬಗೆದು ಪೆಟ್ರೋಲ್-ಡಿಸೇಲ್ ಕಳ್ಳತನ ಮಾಡಲು ವಾಲ್ ಫಿಟ್ ಮಾಡಿ ಪೈಪ್ ಅಳವಡಿಸಿ ಡ್ರಿಲ್ ಮಾಡಲು ಹೋದಾಗ ಎಮ್.ಎಚ್.ಬಿ ಕಂಪನಿಯ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕು ನೆರಿಯ ಸ್ಟೇಷನ್ನ ಸಿಗ್ನಲ್ನಲ್ಲಿ ಪೆಟ್ರೋಲ್ ಪೈಪ್ ಲೈನ್ಗೆ ಡ್ರಿಲ್ ಮಾಡುತ್ತಿರುವುದು ಸೆನ್ಸಾರ್ ಮುಖಾಂತರ ಗೊತ್ತಾಗಿದೆ.
ತಕ್ಷಣ ಕಂಪನಿಯ ಸಿಬ್ಬಂದಿಗಳನ್ನು ಸ್ಥಳಕ್ಕೆ ಪೋಲಿಸರ ಜೊತೆ ಕಳುಹಿಸಿರುತ್ತಾರೆ. ಈ ಸಂಧರ್ಭದಲ್ಲಿ ಪೋಲಿಸರನ್ನು ನೋಡಿದ ಕಿಡಿಗೇಡಿಗಳು ಹಿಟಾಚಿಯನ್ನು ಬಿಟ್ಟು ಪರಾರಿಯಾಗಿದ್ದಾರೆ.
ಇದನ್ನೂ ಓದಿ : ಶಿಕ್ಷಕರು, ಪದವೀಧರ ಕ್ಷೇತ್ರಗಳ ಚುನಾವಣೆ: ಜೂ. 6ರಿಂದ ಬಿಜೆಪಿ ನಾಯಕರಿಂದ ಪ್ರವಾಸ
ಗ್ರಾಮಾಂತರ ಠಾಣೆಯ ಪೋಲಿಸರು ಹಿಟಾಚಿ ವಶ ಪಡೆದು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಎಮ್.ಎಚ್.ಬಿ ಕಂಪನಿಯ ಸ್ಥಳೀಯ ಉಸ್ತುವಾರಿ ಮಹೇಶ್ ಹೆಗ್ಡೆ ಹಾಗು ಅಧಿಕಾರಿಗಳು ಭೇಟಿ ನೀಡಿರುತ್ತಾರೆ. ಪೆಟ್ರೋಲ್ ಪೈಪ್ಲೈನ್ ತುಂಡರಿಸಿ ಪೆಟ್ರೋಲಿಯಂ ಉತ್ಪನ್ನಗಳನ್ನು ಕಳ್ಳತನ ಮಾಡುವುದು ಹುರುಡಿ ಸುತ್ತಮುತ್ತ ಸಾಮಾನ್ಯವಾಗಿತ್ತು. ಕಳೆದ ಎರಡು ವರ್ಷಗಳ ಹಿಂದೆ ಈ ಪ್ರಕರಣದ ಹಿನ್ನೆಲೆಯಲ್ಲಿ ಕೆಲವರನ್ನು ಬಂಧಿಸಲಾಗಿತ್ತು. ಪ್ರಸ್ತುತ ಈ ಕಳ್ಳತನ ಯತ್ನದಲ್ಲಿ ಸ್ಥಳೀಯ ಪ್ರಭಾವಿಗಳು ಭಾಗಿಯಾಗಿದ್ದಾರೆ ಎಂದು ಹೇಳಲಾಗುತ್ತಿದ್ದು ಈ ಕುರಿತು ಸರಿಯಾದ ತನಿಖೆ ನಡೆಯಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ