ಸಕಲೇಶಪುರ ಪಟ್ಟಣಕ್ಕಿಲ್ಲ ಮೂಲ ಸೌಲಭ್ಯ


Team Udayavani, Nov 15, 2022, 3:39 PM IST

ಸಕಲೇಶಪುರ ಪಟ್ಟಣಕ್ಕಿಲ್ಲ ಮೂಲ ಸೌಲಭ್ಯ

ಸಕಲೇಶಪುರ: ಕಿರಿದಾದ ರಸ್ತೆಗಳು, ಶುದ್ಧ ಕುಡಿಯುವ ನೀರಿನ ಸಮಸ್ಯೆ, ಸರಿಯಾಗಿ ಬೆಳಗದ ಬೀದಿ ದೀಪ, ಕಸ ವಿಲೇವಾರಿ ಸಮಸ್ಯೆ, ಸಂಚಾರ ದಟ್ಟಣೆಯಿಂದ ಪಟ್ಟಣದ ನಾಗರಿಕರು ಹೈರಾಣಾಗಿದ್ದಾರೆ. ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ-75 ಹಾದು ಹೋಗಿರುವ, ನೂರಾರು ಪ್ರವಾಸಿಗರು ಭೇಟಿ ನೀಡುವ ಪಟ್ಟಣ ನಿರೀಕ್ಷೆಯಂತೆ ಅಭಿವೃದ್ಧಿ ಕಂಡಿಲ್ಲ. ಸತತ ಮೂರು ಬಾರಿ ಶಾಸಕರಾಗಿರುವ ಎಚ್‌.ಕೆ.ಕುಮಾರಸ್ವಾಮಿ, ಪುರಸಭೆ ಆಡಳಿತ ಪಟ್ಟಣದ ಅಭಿವೃದ್ಧಿಗೆ ಗಂಭೀರ ಚಿಂತನೆ ನಡೆಸಬೇಕಿದೆ.

ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ಕಿರಿದಾಗಿರುವ ಕಾರಣ ದಿನನಿತ್ಯ ಟ್ರಾಫಿಕ್‌ ಕಿರಿಕಿರಿ ಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯರಸ್ತೆ ಅಗಲೀಕರಣ ಮಾಡ ಬೇಕೆಂಬ ಒತ್ತಾಯ ಕಳೆದ ಎರಡು ದಶಕಗಳಿಂದ ಕೇಳಿ ಬರುತ್ತಿದ್ದರೂ ಜನಪ್ರತಿನಿಧಿಗಳು, ಅಧಿಕಾರಿಗಳು ಗಮನ ಹರಿಸಿಲ್ಲ. ನಿತ್ಯ ಭಾರೀ ಗಾತ್ರದ ವಾಹನಗಳು, ಟ್ಯಾಂಕರ್‌ ಗಳು ಸೇರಿ 8000ಕ್ಕೂ ಹೆಚ್ಚು ವಾಹನಗಳು ಓಡಾಡುತ್ತವೆ. ಹೀಗಾಗಿ ರಸ್ತೆ ಬದಿ ವಾಹನ ನಿಲುಗಡೆ ನಿಷೇಧ ಹೇರಿದ್ದು, ವರ್ತಕರು, ವ್ಯಾಪಾರಿಗಳು ಕಂಗಾಲಾಗಿದ್ದಾರೆ.

ಮುಖ್ಯ ರಸ್ತೆಯ ಮಧ್ಯಭಾಗದಿಂದ 45 ಮೀಟರ್‌ ಹೊಸ ಕಟ್ಟಡಗಳನ್ನು ಕಟ್ಟಬೇಕೆಂಬ ನಿಯಮವಿರು ವು ದರಿಂದ ಯಾರು ಹೊಸ ಕಟ್ಟಡಗಳನ್ನು ಕಟ್ಟಲು ಮುಂದಾಗುತ್ತಿಲ್ಲ. ಇದರಿಂದ ಪಟ್ಟಣ ಹಳೆಯ ಪಟ್ಟಣ ದಂತೆ ಭಾಸವಾಗುತ್ತದೆ. ಇನ್ನು ಬೈಪಾಸ್‌ ರಸ್ತೆ ಕಾಮಗಾರಿ ಕುಂಟುತ್ತ ಸಾಗುತ್ತಿದೆ. ಬೈಪಾಸ್‌ ರಸ್ತೆ ಕಾಮಗಾರಿ ಪೂರ್ಣಗೊಳ್ಳಲು ಕನಿಷ್ಠ 2 ವರ್ಷ ಬೇಕಾಗುತ್ತದೆ. ಪಟ್ಟಣದ ಅಭಿವೃದ್ಧಿ ದೃಷ್ಟಿಯಿಂದ ವರ್ತಕರಿಗೆ ಪರಿಹಾರ ಕೊಟ್ಟು, ಮುಖ್ಯರಸ್ತೆ ಅಗಲೀಕರಣ ಮಾಡಬೇಕು. ಆದರೆ, ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆ ಎದ್ದುಕಾಣುತ್ತಿದೆ.

ಸ್ವಾಗತ ಕಮಾನು ಇಲ್ಲ: ತಾಲೂಕು ಕೇಂದ್ರಗಳಿಗೆ ಪ್ರವೇಶ ಮಾಡುವಾಗ ಬಹುತೇಕವಾಗಿ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿಗಳಲ್ಲಿ ಸ್ವಾಗತ ಫ‌ಲಕವಿರುತ್ತದೆ. ಆದರೆ, ಸಕಲೇಶಪುರ ಪಟ್ಟಣಕ್ಕೆ ಸ್ವಾಗತ ಫ‌ಲಕ ಹಾಕಿಸಲು ಜನಪ್ರತಿನಿಧಿಗಳು, ಅಧಿಕಾರಿಗಳು ವಿಫ‌ಲರಾಗಿದ್ದಾರೆ. ಪ್ರತಿ ಪುರಸಭಾ ಸಾಮಾನ್ಯ ಸಭೆಯಲ್ಲಿ ಸ್ವಾಗತ ಕಮಾನಿನ ಕುರಿತು ಚರ್ಚೆ ಆಗುತ್ತದೆ. ಆದರೆ, ಜಾರಿ ಆಗುತ್ತಿಲ್ಲ.

ಬಗೆ ಹರಿಯದ ಕಸ ವಿಲೇವಾರಿ ಸಮಸ್ಯೆ: ಕಳೆದೊಂದು ದಶಕದಿಂದ ಪಟ್ಟಣದಲ್ಲಿ ಮನೆಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗೆ ಕಸವಿಲೇವಾರಿ ಸಮಸ್ಯೆ ಗಂಭೀರವಾಗುತ್ತಿದೆ. ಶಾಶ್ವತ ಪರಿಹಾರ ಹುಡುಕಲು ಜನಪ್ರತಿನಿಧಿ ಗಳು ಹಾಗೂ ಅಧಿಕಾರಿಗಳು ವಿಫ‌ಲರಾಗಿರುವ ಕಾರಣ, ಪಟ್ಟಣದ ಜಾತ್ರಾ ಮೈದಾನದಲ್ಲೇ ಕಸ ವಿಲೇವಾರಿ ಮಾಡಲಾಗುತ್ತಿದೆ. ಇದರಿಂದ ಮೈದಾನ ದುರ್ನಾತ ಬೀರುತ್ತಿದೆ. ಕಳೆದ ವರ್ಷ ಕಸದ ರಾಶಿ ನಡುವೆ ಜಾತ್ರೆ ನಡೆಸಲಾಗಿತ್ತು.

ಶುದ್ಧ ಕುಡಿಯುವ ನೀರು ಮರೀಚಿಕೆ: ಎತ್ತಿನಹೊಳೆ ಯೋಜನೆಯಡಿ 12 ಕೋಟಿ ರೂ.ನಲ್ಲಿ ಶುದ್ಧ ಕುಡಿ ಯುವ ನೀರಿನ ಯೋಜನೆ ರೂಪಿಸಲಾಗಿದೆ ಎಂದು ಶಾಸಕರು ಹೇಳುತ್ತಿದ್ದಾರೆ. ಆದರೆ, ಇದುವರೆಗೆ ಈ ಯೋಜನೆ ಕಾರ್ಯಗತವಾಗಿಲ್ಲ. ಪಟ್ಟಣದ ಹೇಮಾವತಿ ನದಿ ನೀರನ್ನೇ ನೇರವಾಗಿ ಕುಡಿಯಬೇಕಾಗಿದೆ.

ಒಳಚರಂಡಿ ವ್ಯವಸ್ಥೆ ನಾಪತ್ತೆ: ಪಟ್ಟಣದಲ್ಲಿ ಸರಿಯಾದ ರೀತಿಯಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ, ಹಲವು ಬಡಾವಣೆಗಳಲ್ಲಿ ಮಳೆ ನೀರು ಚರಂಡಿ ಮೇಲೆ ಉಕ್ಕಿ ಹರಿಯುತ್ತದೆ. ಹಲವು ಕಡೆ ಚರಂಡಿ ನೀರು ಹೇಮಾವತಿ ನದಿಗೆ ಹೋಗುತ್ತಿರುವುದು ನಾಗರಿಕರ ಆತಂಕಕ್ಕೆ ಕಾರಣವಾಗಿದೆ.

ಪಾರ್ಕಿಂಗ್‌, ಬೀದಿ ದೀಪಗಳ ಸಮಸ್ಯೆ: ಪಟ್ಟಣ ವ್ಯಾಪ್ತಿಯ ಹಳೇ ತಾಲೂಕು ಕಚೇರಿ ಆವರಣದಲ್ಲಿ ವಾಹ ನ ಗಳ ನಿಲುಗಡೆಗೆ ಅವಕಾಶ ನೀಡಲಾಗಿದೆ. ಆದರೆ, ಇಲ್ಲಿ ಜಾಗ ಸಾಕಾಗುತ್ತಿಲ್ಲ, ಮುಖ್ಯರಸ್ತೆ ಬದಿ ಯಲ್ಲಿ ವಾಹನಗಳ ನಿಲುಗಡೆಗೆ ನಿಷೇಧ ಇರುವುದರಿಂದ ವರ್ತಕರು ವ್ಯಾಪಾರವಿಲ್ಲದೆ ಕಂಗಾಲಾಗಿದ್ದಾರೆ. ಇನ್ನು ಗುಣಮಟ್ಟದ ಎಲ್‌ಇಡಿ ಬೀದಿ ದೀಪಗಳನ್ನು ಪಟ್ಟಣದ ಮುಖ್ಯ ರಸ್ತೆಯಲ್ಲಿ ಅಳವಡಿಸಬೇಕಿದೆ. ಅದರಲ್ಲೂ ತೇಜಸ್ವಿ ಚಿತ್ರಮಂದಿರದಿಂದ ಹೇಮಾವತಿ ಸೇತುವೆ ವರೆಗೆ ಬೀದಿ ದೀಪಗಳು ಸರಿಯಾಗಿ ಬೆಳಗದೇ ಸಂಪೂರ್ಣ ಕತ್ತಲಮಯವಾಗಿದೆ.

ಸರ್ಕಾರಿ ಆಸ್ಪತ್ರೆಯಲ್ಲಿ ನುರಿತ ವೈದ್ಯರಿಲ್ಲ: ತಾಲೂಕಿನ ಜನರಿಗೆ ಸರ್ಕಾರಿ ಕ್ರಾಫ‌ರ್ಡ್‌ ಆಸ್ಪತ್ರೆಯೇ ಆಧಾರವಾಗಿದ್ದು, ಕೆಲವು ರೋಗಗಳಿಗೆ ಮಾತ್ರ ಇಲ್ಲಿ ಚಿಕಿತ್ಸೆ ನೀಡಲಾಗು ತ್ತದೆ. ಹೃದಯಾಘಾತ ಸೇರಿ ಗಂಭೀರ ಕಾಯಿಲೆಗಳಿಗೆ ಹಾಸನ, ಮಂಗಳೂರಿಗೆ ಹೋಗಬೇಕಾಗಿದೆ. ಇಲ್ಲಿನ ಜನಪ್ರತಿನಿಧಿಗಳು ಆರೋಗ್ಯ ಕ್ಷೇತ್ರದ ಕಡೆಗೆ ಅಷ್ಟಾಗಿ ಗಮನ ಹರಿಸಿಲ್ಲ. ಅಲ್ಲದೆ, ನುರಿತ ವೈದ್ಯರ ನೇಮಕವೂ ಆಗಬೇಕಿದೆ.

ಕ್ರೀಡಾಪಟುಗಳಿಗೆ ಇಲ್ಲ ಸೌಕರ್ಯ: ಪಟ್ಟಣದಲ್ಲಿರುವ ಏಕೈಕ ಕ್ರೀಡಾ ಮೈದಾನ ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ಕ್ರೀಡಾಂಗಣದ ಅಭಿವೃದ್ಧಿಗೆ ಯುವಜನ ಕ್ರೀಡಾ ಇಲಾಖೆಯಿಂದ 24 ಲಕ್ಷ ರೂ. ಬಿಡುಗಡೆ ಆಗಿ ದ್ದರೂ, ಯಾವುದೇ ಕೆಲಸ ಆಗಿಲ್ಲ. ಇರುವ ಮೈದಾನ ಹಾಳು ಮಾಡಲಾಗಿದೆ. ಹೋಬಳಿ, ತಾಲೂಕು ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಕಲ್ಲು ತುಳಿದುಕೊಂಡೇ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಒಳಾಂಗಣ ಕ್ರೀಡಾಂಗಣ, ಈಜುಕೊಳ ನಿರ್ಮಾಣದ ಭರವಸೆ ನೀಡಿದ್ದ ಶಾಸಕರು, ಇದುವರೆಗೂ ಕಾರ್ಯಗತವಾಗಿಲ್ಲ.

ಪಟ್ಟಣಕ್ಕಿಲ್ಲ ಉದ್ಯಾನ: ಸಣ್ಣ ಪುಟ್ಟ ಪಟ್ಟಣಗಳಲ್ಲೂ ಉದ್ಯಾನ ಇರುತ್ತದೆ. ಆದರೆ, ಸಕಲೇಶಪುರ ತಾಲೂಕು ಕೇಂದ್ರದಲ್ಲಿ ಕನಿಷ್ಠ ಮಕ್ಕಳಿಗೆ ಆಟವಾಡಲು ಪ್ರತ್ಯೇಕ ಸ್ಥಳ ಇಲ್ಲ. ಇನ್ನೂ ಉದ್ಯಾನದ ಕಥೆ ಕೇಳುವುದೇ ಬೇಡ.

ಸೌಕರ್ಯವಿಲ್ಲದ ಹಿಂದೂ ರುದ್ರಭೂಮಿ: ಪಟ್ಟಣದಲ್ಲಿ 9 ಎಕರೆ ಹಿಂದೂಗಳ ರುದ್ರಭೂಮಿ ಇದ್ದು, ಮೂಲ ಸೌಲಭ್ಯದಿಂದ ವಂಚಿತವಾಗಿದೆ. ಮಳೆಗಾಲದಲ್ಲಿ ಶವ ಸಂಸ್ಕಾರ ಮಾಡಲು ಪರದಾಡಬೇಕಾಗಿದೆ. ಈ ಬಗ್ಗೆ ಪುರಸಭೆ ಕ್ರಮಕೈಗೊಳ್ಳಬೇಕು.

ಅಗಲೀಕರಣವಾಗದ ತೇಜಸ್ವಿ ವೃತ್ತ: ರಾಷ್ಟ್ರೀಯ ಹೆದ್ದಾರಿ -75, ಸಕಲೇಶಪುರ-ಬೇಲೂರು ರಾಜ್ಯ ಹೆದ್ದಾರಿ ಸೇರುವ ತೇಜಸ್ವಿ ವೃತ್ತ ಕಿರಿದಾಗಿದ್ದು, ಅಪಘಾತಗಳು ಸರ್ವೆ ಸಾಮಾನ್ಯವಾಗಿದೆ. ವೃತ್ತ ಅಗಲೀಕರಣ ಮಾಡುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳು ಪ್ರತಿಭಟಿಸಿದ್ದರೂ ಶಾಸಕರಾಗಲಿ, ಪುರಸಭೆ ಆಗಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಗುಂಡಿ ಬಿದ್ದು ವಾಹನ ಸಂಚಾರಕ್ಕೆ ತೊಂದರೆ ಆಗಿರುವ ಹೇಮಾವತಿ ನದಿ ಸೇತುವೆ ಮೇಲಿನ ರಸ್ತೆ ದುರಸ್ತಿ ಮಾಡಿಲ್ಲ. ಸೇತುವೆ ಪಕ್ಕದಲ್ಲಿರುವ ಪಾದಚಾರಿ ಸೇತುವೆಯೂ ಅಭಿವೃದ್ಧಿಪಡಿಸಿಲ್ಲ. ಒಟ್ಟಾರೆಯಾಗಿ ಮೂರು ಬಾರಿ ಸಕಲೇಶಪುರದಲ್ಲಿ ಶಾಸಕರಾಗಿ ಎಚ್‌.ಕೆ.ಕುಮಾರಸ್ವಾಮಿ ಹಾಗೂ ಪುರಸಭಾ ಆಡಳಿತ ಪಟ್ಟಣ ಅಭಿವೃದ್ಧಿಗೆ ಸಂಪೂರ್ಣ ಕಾರಣಗಳನ್ನೇ ಹೇಳಿಕೊಂಡು ಪಟ್ಟಣದ ಅಭಿವೃದ್ಧಿಗೆ ಮುಂದಾಗದ ಕಾರಣ, ಸಾರ್ವಜನಿಕರ ವಲಯದಿಂದ ವ್ಯಾಪಕ ಆಕ್ರೋಶ ಕೇಳಿ ಬರುತ್ತಿದೆ. ಇದರಿಂದಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಟ್ಟಣ ವ್ಯಾಪ್ತಿಯಲ್ಲಿ ಮತದಾರರು ಜೆಡಿಎಸ್‌ ಬಿಟ್ಟು ಬೇರೆ ಪಕ್ಷಗಳತ್ತ ಮುಖ ಮಾಡುವ ಸಾಧ್ಯತೆಯಿದೆ.

ಸತತ ಮೂರು ಬಾರಿ ಗೆಲುವು ಸಾಧಿಸಿದ ಶಾಸಕ ಎಚ್‌.ಕೆ. ಕುಮಾರಸ್ವಾಮಿ ಸಕಲೇಶಪುರ ಪಟ್ಟಣದ ಅಭಿವೃದ್ಧಿ ಮಾಡಲು ಮುಂದಾಗದ ಕಾರಣ, ನಾಗರಿಕರು ಮೂಲ ಸೌಲಭ್ಯದಿಂದ ವಂಚಿತರಾಗಬೇಕಿದೆ. ಇದು ಬೇಸರದ ಸಂಗತಿ. -ಸುಬ್ರಹ್ಮಣ್ಯ, ಕಾಫಿ ಮೆಣಸು ವರ್ತಕರು

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Revanna 2

BJP ಸ್ಥಳೀಯ ಮುಖಂಡರ ಅಸಹಕಾರ: ಬಿಎಸ್‌ವೈ ಬಳಿ ರಕ್ಷಣೆಗೆ ಮೊರೆಯಿಟ್ಟ ಎಚ್‌.ಡಿ.ರೇವಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.