ಸಕಲೇಶಪುರ ತಾಪಂ ಕ್ಷೇತ್ರ 11ರಿಂದ 9ಕ್ಕೆ ಇಳಿಕೆ


Team Udayavani, Feb 15, 2021, 8:43 PM IST

ಸಕಲೇಶಪುರ ತಾಪಂ ಕ್ಷೇತ್ರ 11ರಿಂದ 9ಕ್ಕೆ ಇಳಿಕೆ

ಸಕಲೇಶಪುರ: ಮುಂಬರುವ ಜಿಪಂ, ತಾಪಂ ಚುನಾವಣೆಗಾಗಿ ಕ್ಷೇತ್ರ ಪುನರ್‌ ವಿಂಗಡಣೆ ಮಾಡಲಾಗುತ್ತಿದ್ದು, ಸದ್ಯದ\ ಮಾಹಿತಿ ಪ್ರಕಾರ ತಾಲೂಕು 2 ತಾಪಂ ಕ್ಷೇತ್ರ ಕಳೆದುಕೊಂಡು, ಒಂದು ಜಿಪಂ ಕ್ಷೇತ್ರ ಹೆಚ್ಚಿಸಿಕೊಂಡಿದೆ.

ತಾಲೂಕಿನಲ್ಲಿ ಸದ್ಯ ಮೂರು ಜಿಲ್ಲಾ ಪಂಚಾಯ್ತಿ ಕ್ಷೇತ್ರಗಳಿದ್ದು, ಮುಂದೆ ನಾಲ್ಕು ಆಗುವ ಸಾಧ್ಯತೆ ಇದೆ. 11 ತಾಲೂಕು ಪಂಚಾಯ್ತಿ ಕ್ಷೇತ್ರ 9ಕ್ಕೆ ಇಳಿಕೆ ಆಗಲಿದೆ. ಈ ಕುರಿತು ರಾಜ್ಯ ಚುನಾವಣೆ ಆಯೋಗ ಅಂತಿಮವಾಗಿ ಅಧಿಕೃತ ಘೋಷಣೆ ಮಾಡಬೇಕಿದೆ. ಕ್ಷೇತ್ರ ಕಳೆದುಕೊಳ್ಳುವ ಆತಂಕ ಎದುರಿಸುತ್ತಿರುವ ಹಾಲಿ ತಾಪಂ ಸದಸ್ಯರು ಹಾಗೂಮುಂಬರುವ ಚುನಾವಣೆಯಲ್ಲಿ ಆ ಕ್ಷೇತ್ರಗಳಿಂದ ಸ್ಪರ್ಧಿಸಬೇಕೆಂದು ಸಿದ್ಧತೆ ನಡೆಸಿದ್ದ ಆಕಾಂಕ್ಷಿಗಳಿಗೆ ಸದ್ಯ ನಿರಾಸೆಯಂತೂ ಉಂಟಾಗಿದೆ. ಮುಂದೆಅಂತಿಮ ವರದಿಯಲ್ಲಿ ಏನು ಬದಲಾವಣೆ ಆಗುತ್ತದೋ ಕಾದು ನೋಡಬೇಕಿದೆ.

ಈಗಾಗಲೇ ತಾಲೂಕಿನಲ್ಲಿ ಬೆಳಗೋಡು, ಯಸಳೂರು, ಹಾನುಬಾಳ್‌ ಜಿಪಂ ಕ್ಷೇತ್ರಗಳಿದ್ದು, ಜೊತೆಗೆ ಹೆತ್ತೂರು ಜಿಪಂ ಕ್ಷೇತ್ರ ಮಾಡಲಾಗುತ್ತದೆಎಂಬ ಮಾಹಿತಿ ಇದೆ. ಕೆಲವರು ಕಸಬಾ ಹೋಬಳಿಯನ್ನು ಪ್ರತ್ಯೇಕ ಜಿಪಂ ಕ್ಷೇತ್ರ ಮಾಡಬೇಕೆಂದು ಅಭಿಪ್ರಾಯ ಪಡುತ್ತಿದ್ದಾರೆ. ಈ ತಿಂಗಳ 22ರ ಒಳಗೆ ಕ್ಷೇತ್ರ ಪುನರ್‌ ವಿಂಗಡಣೆ ಮಾಡಬೇಕಾಗಿದೆ. ಇದು ರಾಜಕೀಯ ಮುಖಂಡರಲ್ಲಿ, ಕಾರ್ಯಕರ್ತರಲ್ಲಿ ಹಲವು ಗೊಂದಲ ಹುಟ್ಟಿಹಾಕಿದೆ.

ಮುಂಬರುವ ಜಿಪಂ ಚುನಾವಣೆಗಾಗಿ ಕೆಲವು ಆಕಾಂಕ್ಷಿಗಳು ತೆರೆಮರೆಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಕೆಲವರಿಗೆ ಕ್ಷೇತ್ರ ಮರು ವಿಂಗಡಣೆ ವರದಿ ಏನು ಆಗುತ್ತದೋ ಎಂದು ಕಾದು ನೋಡುತ್ತಿದ್ದಾರೆ. ಕ್ಷೇತ್ರ ಮರು ವಿಂಗಡಣೆಯಿಂದ ಕೆಲವು ಗ್ರಾಮಗಳು ಹಾಲಿ ಇರುವ ಕ್ಷೇತ್ರಗಳಿಂದ ಕೈತಪ್ಪಿ ಹೋಗಬಹುದೆಂಬ ಆತಂಕವೂ ಇದೆ.ಒಟ್ಟಾರೆಯಾಗಿ ಕ್ಷೇತ್ರ ಮರು ವಿಂಗಡಣೆ ಕೆಲವರಿಗೆ ರಾಜಕೀಯ ಲಾಭ ತರುವ ನಿರೀಕ್ಷೆಯಿದ್ದು, ಮತ್ತೆ ಕೆಲವರಿಗೆ ರಾಜಕೀಯ ನಷ್ಟವುಂಟಾಗುವ ಸಾಧ್ಯತೆಯಿದೆ.

 

-ಸುಧೀರ್‌ ಎಸ್‌.ಎಲ್‌.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.