ಕಾಡ್ಗಿಚ್ಚು ತಡೆಗೆ ಉಪಗ್ರಹ ನೆರವು


Team Udayavani, Jan 24, 2020, 12:50 PM IST

hasan-tdy-1

ಸಾಂಧರ್ಬಿಕ ಚಿತ್ರ

ಹಾಸನ: ಬೇಸಿಗೆ ಬಂತೆಂದರೆ ಕಾಡ್ಗಿಚ್ಚಿನ ಆತಂಕ ಕಾಡುತ್ತದೆ. ಅರಣ್ಯ ಇಲಾಖೆ ಕಾಡ್ಗಿಚ್ಚು ತಡೆಗೆ ಪ್ರತಿವರ್ಷ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೂ ಕಾಡ್ಗಿಚ್ಚು ಹಬ್ಬುವುದು ನಿಲ್ಲುವುದಿಲ್ಲ. ಆದರೂ ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನ ಅಳವಡಿಸಿಕೊಂಡು ಕಾಡ್ಗಿಚ್ಚು ತಡೆಗೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಫಾರೆಸ್ಟ್‌ ಸರ್ವೆ ಆಫ್ ಇಂಡಿಯಾ ( ಎಫ್ಎಸ್‌ಐ) ಉಪಗ್ರಹಗಳಿಂದ ಮಾಹಿತಿ ಪಡೆದು ಕಾಡ್ಗಿಚ್ಚು ತಡೆಗೆ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಸಂಭವನೀಯ ಕಾಡ್ಗಿಚ್ಚು ಪ್ರದೇಶಗಳಲ್ಲಿ ಪ್ರತಿದಿನವೂ ಉಪಗ್ರಹಗಳಿಂದ ಕಾಡಿಗೆ ಬೆಂಕಿ ಬಿದ್ದರೆ ಮಾಹಿತಿ ಪಡೆಯಲಾಗುತ್ತಿದೆ. ಕಾಡ್ಗಿಚ್ಚು ಕಾಣಿಸಿಕೊಂಡ ಚಿತ್ರಗಳನ್ನು ತಕ್ಷಣ ಉಪಗ್ರಹಗಳ ಮೂಲಕ ಪಡೆಯುವ ಎಫ್ಎಸ್‌ಐ ಸಂಬಂಧಪಟ್ಟ ಅರಣ್ಯ ವಲಯಕ್ಕೆ ರವಾನಿಸುತ್ತದೆ. ಅರಣ್ಯ ಸಿಬ್ಬಂದಿ ತಕ್ಷಣವೇ ಕಾಡ್ಗಿಚ್ಚು ಶಮನಕ್ಕೆ ಕ್ರಮ ಕೈಗೊಳ್ಳುತ್ತಾರೆ. ಇದು ಇತ್ತೀಚಿನ ದಿನಗಳಲ್ಲಿ ಕಾಡ್ಗಿಚ್ಚು ಶಮನಕ್ಕೆ ಅರಣ್ಯ ಇಲಾಖೆ ಕಂಡುಕೊಂಡಿರುವ ತಾಂತ್ರಿಕ ಬೆಳವಣಿಗೆ. ಫೈರ್‌ಲೈನ್‌ಗಳ ನಿರ್ಮಾಣ: ಸಾಂಪ್ರದಾಯಿಕವಾಗಿ ಕಾಡ್ಗಿಚ್ಚು ತಡೆಗೆ ಅಗ್ನಿ ನಿವಾರಣಾ ಮಾರ್ಗ (ಫೈರ್‌ ಲೈನ್‌)ಗಳ ನಿರ್ಮಾಣ, ಕಾವಲುಗಾರರ ನೇಮಕ, ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕೆಲಸಗಳನ್ನೂ ಅರಣ್ಯ ಇಲಾಖೆ ಮಾಡುತ್ತಾ ಬಂದಿದೆ.

ಅಗ್ನಿಮಾರ್ಗ ನಿರ್ಮಾಣ ಅಂದರೆ ಮಳೆಗಾಲದಲ್ಲಿ ಅರಣ್ಯದಂಚಿನಲ್ಲಿ ಬೆಳೆಯುವ ಹುಲ್ಲು, ಗಿಡಗಂಟಿಗಳು ಬೇಸಿಗೆಯಲ್ಲಿ ಒಣಗಿರುತ್ತವೆ. ಅವುಗಳಿಗೆ ಯಾವುದಾದರೂ ಸಂದರ್ಭದಲ್ಲಿ ಬೆಂಕಿ ಕಿಡಿ ತಗುಲಿದರೂ ಕಾಡಿಗೆ ಬೆಂಕಿ ಆವರಿಸುತ್ತದೆ. ಹಾಗಾಗಿ ಅರಣ್ಯದಂಚಿನಲ್ಲಿ ಬೆಳೆದಿರುವ ಹುಲ್ಲು, ಗಿಡಗಂಟಿಗಳು ಹಾಗೂ ಮರದಿಂದ ಉದುರಿದ ಎಲೆಗಳನ್ನು ಅರಣ್ಯ ಸಿಬ್ಬಂದಿಯೇ ಸುಟ್ಟು ಹಾಕಿ ಅರಣ್ಯದತ್ತ ಬೆಂಕಿ ಹರಡದಂತೆ ತಡೆಯುವ ಕ್ರಮಗಳು ಅಗ್ನಿ ನಿವಾರಣಾಮಾರ್ಗ (ಫೈರ್‌ಲೈನ್‌) ನಿರ್ಮಾಣ. ಪ್ರತಿ ವರ್ಷವೂ ಇಂತಹ ಕ್ರಮಗಳನ್ನು ಅರಣ್ಯ ಇಲಾಖೆ ಕೈಗೊಳ್ಳುತ್ತಿದೆ.

ತಾತ್ಕಾಲಿಕ ಕಾವಲುಗಾರರ ನೇಮಕ: ಕಾಡ್ಗಿಚ್ಚು ಹರಡದಂತೆ ತಡೆಯುವ ಹಾಗೂ ಕಾಡ್ಗಿಚ್ಚು ಕಾಣಿಸಿಕೊಂಡರೆ ತಕ್ಷಣ ಬೆಂಕಿ ನಂದಿಸುವ ಕಾರ್ಯಾಚರಣೆಗಾಗಿ ಪ್ರತಿ ವರ್ಷ ಜನವರಿಯಿಂದ ಮಾರ್ಚ್‌ ಅಂತ್ಯದವರೆಗೆ ತಾತ್ಕಾಲಿಕವಾಗಿಕಾವಲುಗಾರರನ್ನು ನೇಮಿಸಿಕೊಳ್ಳಲಾಗುತ್ತದೆ. ತಾತ್ಕಾಲಿಕ ಕಾವಲುಗಾರರು ಅರಣ್ಯ ಇಲಾಖೆ ಸಿಬ್ಬಂದಿಯೊಂದಿಗೆ ಕಾಡ್ಗಿಚ್ಚು ತಡೆಗೆ ಸಹಕಾರ ನೀಡಲಿದ್ದಾರೆ.

ಅರಣ್ಯ ಕಾವಲುಗಾರರಿಗೆ ತರಬೇತಿ: ಕಾಡ್ಗಿಚ್ಚು ಹರಡಿದ ನಂತರ ನಂದಿಸುವ ಕೆಲಸಕ್ಕಿಂತ ಕಾಡ್ಗಿಚ್ಚು ಸಂಭವಿಸದಂತೆ ನೋಡಿಕೊಳ್ಳುವುದು ಬಹು ಮುಖ್ಯ. ಆ ನಿಟ್ಟಿನಲ್ಲಿ ಜನಜಾಗೃತಿ ಕಾರ್ಯಕ್ರಮಗಳನ್ನೂ ಅರಣ್ಯ ಇಲಾಖೆ ಕೈಗೊಳ್ಳುತ್ತದೆ. ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಸಹಯೋಗದೊಂದಿಗೆ ಕಾಡ್ಗಿಚ್ಚು ನಂದಿಸುವತರಬೇತಿಯನ್ನು ಕಾವಲುಗಾರರಿಗೆ ಹಾಗೂ ಆಸಕ್ತ ಸಾರ್ವಜನಿಕರಿಗೆ ನೀಡುವುದು. ಬೀದಿ ನಾಟಕಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುವುದು ಮತ್ತಿತರ ಕಾರ್ಯಕ್ರಮಗಳನ್ನೂ ಕೈಗೊಳ್ಳುತ್ತಿದೆ. ಅದಕ್ಕಾಗಿ ಪ್ರತಿ ಅರಣ್ಯ ವಿಭಾಗಕ್ಕೂ ವಿಶೇಷ ಅನುದಾನ ನೀಡುತ್ತದೆ. ಹೀಗೆ ಹಲವು ಕ್ರಮಗಳನ್ನು ಅರಣ್ಯ ಇಲಾಖೆ ಕೈಗೊಂಡರೂ ಪ್ರತಿವರ್ಷ ಕಾಡ್ಗಿಚ್ಚು ಹರಡಿ ನೂರಾರು ಹೆಕ್ಟೇರ್‌ ಅರಣ್ಯ ನಾಶವಾಗುತ್ತದೆ.

ಜನರ ನಿರ್ಲಕ್ಷ್ಯದಿಂದ ಕಾಡಿಗೆ ಬೆಂಕಿ: ನೈಸರ್ಗಿಕವಾಗಿ ಹರಡುವ ಕಾಡ್ಗಿಚ್ಚು ಒಂದೆಡೆಯಾದರೆ, ಮಾನವರ ನಿರ್ಲಕ್ಷ್ಯದಿಂದಲೂ ಕಾಡಿಗೆ ಬೆಂಕಿ ಆವರಿಸಿ ಅಮೂಲ್ಯ ವನ ಸಂಪತ್ತು ನಾಶವಾಗುತ್ತದೆ. ಬೇಸಿಗೆಯ ದಿನಗಳಲ್ಲಿ ಸಾರ್ವಜನಿಕರು, ವಿಶೇಷವಾಗಿ ಅರಣ್ಯದಂಚಿನ ಜನರು ಬೀಡಿ, ಸಿಗರೇಟು ಸೇದಿ ಬಿಸಾಡುವುದು, ಹಬ್ಬ, ಹರಿದಿನಗಳಲ್ಲಿ ಅರಣ್ಯದಂಚಿನ ದೇವಾಲಯಗಳ ಬಳಿ ದೀಪ, ಕರ್ಪೂರ ಮತ್ತಿತರ ಅಗ್ನಿಕಾರಕ ವಸ್ತುಗಳನ್ನು ಬಳಸುವಾಗ ಮುನ್ನೆಚ್ಚರಿಕೆ ವಹಿಸುವುದು ಮುಖ್ಯ.

ಆತಂಕಪಡುವ ಅಗತ್ಯವಿಲ್ಲ : ಪ್ರತಿ ವರ್ಷದಂತೆ ಈ ವರ್ಷವೂ ಕಾಡ್ಗಿಚ್ಚು ತಡೆಗೆ ಎಲ್ಲ ಪೂರ್ವಭಾವಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹಾಸನ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿವರಾಂ ಬಾಬು ತಿಳಿಸಿದ್ದಾರೆ. ಈಗಾಗಲೇ ಅಗ್ನಿಮಾರ್ಗ ನಿರ್ಮಾಣ, ತಾತ್ಕಾಲಿಕ ಕಾವಲುಗಾರರ ನೇಮಕ ಮಾಡಿಕೊಳ್ಳಲಾಗಿದೆ. ಅಗ್ನಿಶಾಮಕ ಇಲಾಖೆ ಸಹಕಾರದೊಂದಿಗೆ ಅಗ್ನಿ ನಂದಿಸುವ ತರಬೇತಿ ಕಾರ್ಯಕ್ರಮಗಳು, ಜನರಲ್ಲಿ ಜಾಗೃತಿ ಮೂಡಿಸಲು ಬೀದಿನಾಟಕ ಪ್ರದರ್ಶನ ನಡೆಯುತ್ತಿದೆ. ಕಾಡ್ಗಿಚ್ಚು ತಡೆಗೆ ಫಾರೆಸ್ಟ್‌ ಸರ್ವೆ ಆಫ್ ಇಂಡಿಯಾ ( ಎಫ್ ಎಸ್‌ಐ) ಉಪಗ್ರಹಗಳ ನೆರವನ್ನೂ ಪಡೆಯಲಾಗುತ್ತಿದೆ. ಹಾಗಾಗಿ ಅರಣ್ಯಕ್ಕೆ ಕಾಡ್ಗಿಚ್ಚು ಹಬ್ಬದಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹಾಗಾಗಿ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

 

-ಎನ್‌. ನಂಜುಂಡೇಗೌಡ

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.