ಜನಪದ ಸಂಸ್ಕೃತಿ ಉಳಿಸಿ, ಬೆಳೆಸಿ


Team Udayavani, Oct 15, 2019, 3:00 AM IST

janapada

ರಾಮನಾಥಪುರ: ಆಧುನಿಕತೆಯ ಭರಾಟೆಯಲ್ಲಿ ಜನಪದ ಸಂಸ್ಕೃತಿ ಅಳಿಯಲು ಅವಕಾಶ ನೀಡಬಾರದು ಎಂದು ಶಾಸಕ ಎ.ಟಿ. ರಾಮಸ್ವಾಮಿ ಹೇಳಿದರು. ರಾಮನಾಥಪುರದ ಬಸವೇಶ್ವರ ವೃತ್ತದಲ್ಲಿರುವ ವೆಂಕಟೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಗಿರಿಜನ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜನಪದ ಮೂಲ ಸೊಗಡು: ಜನಪದ ಸಂಸ್ಕೃತಿ ಅಳಿದರೆ ನಮ್ಮತನವನ್ನು ನಾವು ಕಳೆದುಕೊಂಡಂತೆ, ಜನಪದ ಸೊಗಡಿನಲ್ಲೇ ಭಾರತೀಯ ಮೂಲ, ಪರಂಪರೆಯ ಸತ್ವ ಅಡಗಿದೆ. ಹಾಗಾಗಿ ಆಧುನಿಕತೆ ಭರಾಟೆಗೆ ಸಿಲುಕಿ ಇಂತಹ ಮಾತೃ ಸಂಸ್ಕೃತಿ ಅಳಿಯಲು ಬಿಡಬಾರದು. ಜನಪದ ಸಂಸ್ಕೃತಿ ಉಳಿಸಿ ಪೋಷಿಸಬೇಕು ಎಂದರು.

ಮಕ್ಕಳಿಗೆ ಜೀವನ ಮೌಲ್ಯ ಕಲಿಸಿ: ರಾಮಯಣ ಮಹಾಕಾವ್ಯ ರಚಿಸಿದ ವಾಲ್ಮೀಕಿ ದೇಶಕ್ಕೆ ಮಾತ್ರವಲ್ಲದೇ ಜಗತ್ತಿನ ಮೆಚ್ಚುಗೆಗೆ ಪಾತ್ರವಾದ ಮಹಾಕವಿ. ಶಿಕ್ಷಕರು ಮಕ್ಕಳಿಗೆ ವಿದ್ಯೆ ಜೊತೆಗೆ ಜೀವನದ ಮೌಲ್ಯಗಳನ್ನು ಕಲಿಸಬೇಕು. ಜ್ಞಾನ ಸಂಪಾದಿಸಿದರೆ ಸಕಲ ಸಂಪತ್ತುಗಳನ್ನು ಗಳಿಸಲು ಸಾಧ್ಯ. ಗಿರಿಜನರ ಕಲ್ಯಾಣಕ್ಕಾಗಿ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದ್ದು, ಅವುಗಳು ಪ್ರಾಮಾಣಿಕವಾಗಿ ಅರ್ಹ ಫ‌ಲಾನುಣವಿಗಳಿಗೆ ತಲುಪುವಂತೆ ಸಂಬಂಧಪಟ್ಟ ಇಲಾಖೆ ಕ್ರಮ ಕೈಗೊಂಡರೆ ಮಾತ್ರ ಗಿರಿಜನರ ಬದುಕು ಹಸನಾಗಲು ಸಾಧ್ಯ ಎಂದು ಎ.ಟಿ.ರಾಮಸ್ವಾಮಿ ಅವರು ಅಭಿಪ್ರಾಯಪಟ್ಟರು.

ವಾಲ್ಮೀಕಿ ಶ್ರೇಷ್ಠ ಜ್ಞಾನಿ: ಸಾನ್ನಿಧ್ಯ ವಹಿಸಿದ್ದ ತುಮಕೂರು ಶಿಡ್ಲಕೋಣದ ಶ್ರೀ ಸಂಜಯ ಕುಮಾರಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಮಹರ್ಷಿ ವಾಲ್ಮೀಕಿ ಅವರೊಬ್ಬ ಮಹನ್‌ ಜ್ಞಾನಿ ಎಂದು 2010 ರಲ್ಲಿ ಪಂಜಾಬ್‌ – ಹರಿಯಾಣ ಹೈಕೋಟ್‌ನಲ್ಲಿ ಮಹತ್ವದ ತಿರ್ಪು ನೀಡಿದೆ. ವಾಲ್ಮೀಕಿ ಮಹರ್ಷಿ ಜೀವನದ ಆರಂಭದಲ್ಲಿ ಕಳ್ಳನಾಗಿರಲಿಲ್ಲ, ಸುಸಂಸ್ಕೃತ ಮನೆತನದಲ್ಲೇ ಹುಟ್ಟಿ ಬೆಳೆದು ದೈವಾಂಶ ಸಂಭೂತರೆನಿಸಿಕೊಂಡಿದ್ದ ವಾಲ್ಮೀಕಿ ಮಹರ್ಷಿ ವಿಶ್ವವೇ ಬೆರಗಾಗುವಂತೆ ರಾಮಾಯಣ ಮಹಾಕಾವ್ಯ ರಚಿಸಿ ಭಾರತೀಯ ಸಂಸ್ಕೃತಿಯನ್ನು ಜಗತ್ತಿನಲ್ಲೆಡೆ ಎತ್ತಿಡಿದ ಮಹಾನ್‌ ಚೇತನ ಎಂದರು. ರಾಜ್ಯ ಮಟ್ಟದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನೃತ್ಯ ಪ್ರದರ್ಶಿಸಿ ಪ್ರಥಮ ಸ್ಥಾನ ಗಳಿಸಿದ ಅರಕಲಗೂಡು ತಾಲೂಕು ಹೆಗ್ಗಡಿಹಳ್ಳಿಯ ವಿದ್ಯಾರ್ಥಿಗಳಾದ ಎಚ್‌.ಎಸ್‌. ತನುಶ್ರೀ, ಪ್ರೀತಂ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಗ್ರಾಪಂ ಅಧ್ಯಕ್ಷ ಕಾಳೇಗೌಡ ಅಧ್ಯಕ್ಷತೆ ವಹಿಸಿದ್ದರು. ತಾಪಂ ಉಪಾಧ್ಯಕ್ಷ ಎಸ್‌.ಆರ್‌. ನಾಗರಾಜ್‌, ಸದಸ್ಯರಾದ ವೀರಾಜ್‌, ದೇವಿಕಾ, ತಹಸೀಲ್ದಾರ್‌ ಶಿವರಾಜ್‌, ಅರಕಲಗೂಡು ಪಪಂ ಮುಖ್ಯಾಧಿಕಾರಿ ಸುರೇಶ್‌ಬಾಬು, ಮುಖಂಡರಾದ ಬಸವನಾಯಕ, ನಾಗಣ್ಣ ನಾಯಕ, ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯದರ್ಶಿ ತಿಮ್ಮರಾಜು, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಸಾಧಿಕ್‌ಸಾಬ್‌, ನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಶಿವಲಿಂಗಪ್ಪ ಎನ್‌.ಕುಂಬಾರ, ಮತ್ತಿತರರು ಕಾರ್ಯಕ್ರಮದಲ್ಲಿು ಉಪಸ್ಥಿತರಿದ್ದರು. ಶಿಕ್ಷಕ ಮನು ಸ್ವಾಗತಿಸಿ ವಂದಿಸಿದರು.

ಜನಮನ ಸೆಳೆದ ಸಾಂಸ್ಕೃತಿಕ ಕಾರ್ಯಕ್ರಮ: ವಿದ್ಯಾರ್ಥಿಗಳು ಗಿರಿಜನ ನೃತ್ಯ ಪ್ರದರ್ಶಿಸಿ ರಂಜಿಸಿದರು. ವಿವಿಧ ಕಲಾವಿದರ ತಂಡಗಳು ಪ್ರಸ್ತುತ ಪಡಿಸಿದ ವಚನ ಗಾಯನ, ಜನಪದ ಗೀತೆಗಳು, ಸುಮಗ ಸಂಗೀತ, ಭರತ ನಾಟ್ಯ, ಭಜನೆ ಮತ್ತು ತತ್ವಪದ, ಗೀಗಿ ಪದಗಳು ಜನಮನ ಸೂರೆಗೊಂಡವು. ಇದಕ್ಕೂ ಮುನ್ನಕಾವೇರಿ ನದಿ ದಂಡೆ ಮೇಲಿರುವ ರಾಮೇಶ್ವರ ದೇವಾಲಯದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರದೊಂದಿಗೆ ಶ್ರೀ ಸಂಜಯಕುಮಾರಾನಂದ ಸ್ವಾಮೀಜಿ ಅವರನ್ನು ಹೊತ್ತ ರಥವು ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿತು. ಡೊಳ್ಳುಕುಣಿತ, ವೀರಗಾಸೆ, ಗಾರುಡಿಗೊಂಬೆ, ನಾಸಿಕ್‌ ಡೋಲು, ಕೀಲು ಕುದುರೆ, ಚಿಟ್ಟಿಮೇಳ, ಪೂಜಾಕುಣಿತ ಮೆರವಣಿಗೆಗೆ ಮೆರಗು ನೀಡಿದವು.

ಟಾಪ್ ನ್ಯೂಸ್

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.