ತಂತ್ರಜ್ಞಾನ ಅಳವಡಿಸಿ ಕನ್ನಡ ಉಳಿಸಿ-ಬೆಳೆಸಿ; ಟಿ.ಎಸ್‌. ನಾಗಾಭರಣ

ಇಂಗ್ಲಿಷ್‌ ಭಾಷಾ ವ್ಯಾಮೋಹ ದಿಂದ ಕನ್ನಡಕ್ಕೆ ಧಕ್ಕೆ ಎದುರಾಗಿದೆ.

Team Udayavani, Mar 31, 2022, 5:48 PM IST

ತಂತ್ರಜ್ಞಾನ ಅಳವಡಿಸಿ ಕನ್ನಡ ಉಳಿಸಿ-ಬೆಳೆಸಿ; ಟಿ.ಎಸ್‌. ನಾಗಾಭರಣ

ಹಾಸನ: ಭವಿಷ್ಯದಲ್ಲಿ ಕನ್ನಡದ ಉಳಿವಿಗೆ ತಂತ್ರಜ್ಞಾನ ದೊಂದಿಗೆ ಕನ್ನಡ ಜೋಡಣೆ ಕೆಲಸ ಆಗಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌. ನಾಗಾಭರಣ ಅಭಿಪ್ರಾಯಪಟ್ಟರು.

ಹಾಸನದ ಹೊರ ವಲಯ ಬೂವನಹಳ್ಳಿಯಲ್ಲಿ ಜಿಲ್ಲಾ ಕಸಾಪ ಹಮ್ಮಿಕೊಂಡಿರುವ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಕನ್ನಡ ಭಾಷೆಯ ಆಸ್ಮಿತೆ ಉಳಿಯಬೇಕಾದರೆ ನೆನಪು ಗಳನ್ನು ಅಳಿಸಿ ಹಾಕುತ್ತಿರುವ ಯಾಂತ್ರಿಕ ಬದುಕಿನ ವಿರುದ್ಧ ಹೋರಾಡುತ್ತಲೇ ನಮ್ಮತನ ಹೆಚ್ಚು ಮಾಡಿ ಕೊಳ್ಳಬೇಕು. ಭವಿಷ್ಯದಲ್ಲಿ ಕೃತಕ ಬುದ್ಧಿಮತ್ತೆ ನಮ್ಮ ಬದುಕನ್ನು ಆವರಿಸುತ್ತದೆ. ಅಂತಹ ಸಂದರ್ಭದಲ್ಲಿ ಮಾನವೀಯತೆ, ಕಲೆ, ಸಾಹಿತ್ಯ, ನೃತ್ಯ, ನಾಟಕ, ಸಿನಿಮಾ ಸೇರಿದಂತೆ ಅಂತರ್‌ ಸಂಬಂಧಿ ವಿಷಯ ಗಳನ್ನು ಕನ್ನಡದ ಪರವಾದ ಚಟುವಟಿಕೆಗಳಿಗೆ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕನ್ನಡದ ಕಲಿಕೆ, ಬಳಕೆ ನಿರಂತರವಾಗಿರಲಿ: ಹಾಸನ ಜಿಲ್ಲೆಯು ಸಾಹಿತ್ಯ ಮತ್ತು ಸಂಸ್ಕೃತಿಯಲ್ಲಿ ಹಲವು ಬಾರಿ ಅಗ್ರ ಸ್ಥಾನ ಕಾಯ್ದುಕೊಂಡಿದೆ. ಅಂತಹ ದೊಡ್ಡ ಪಟ್ಟಿಯೇ ಇದೆ. ಅಂತಹ ಪಟ್ಟಿಗೆ ಇಂದಿನ ಯುವ ಜನರು ಸೇರಬೇಕು. ಅ ನಿಟ್ಟಿನಲ್ಲಿ ಮಕ್ಕಳಲ್ಲಿ ಸಾಹಿತ್ಯಾ ಭಿರುಚಿ ಬೆಳಸಬೇಕು. ನಿರಂತರ ಕನ್ನಡದ ಕಲಿಕೆ ಮತ್ತು ಬಳಕೆ ನಮ್ಮ ಕಾಯಕವಾಗಬೇಕು. ಆಗ ಮಾತ್ರ ಕನ್ನಡ ಬೆಳೆಯುತ್ತದೆ ಎಂದರು.

ಕನ್ನಡದಲ್ಲೇ ವ್ಯವಹರಿಸಿ: ಸಾಹಿತ್ಯ ಸಿರಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಅವರು ಮಾತನಾಡಿ, 2500 ವರ್ಷಗಳ ಇತಿಹಾಸ ವನ್ನು ಕನ್ನಡ ಹೊಂದಿರುವುದು ಕನ್ನಡಿಗರಾದ ನಮಗೆ ಹೆಮ್ಮೆ. ಕನ್ನಡ ಉಳಿಯಬೇಕಾದರೆ ಬಳಸಬೇಕು. ಆ ನಿಟ್ಟಿ ನಲ್ಲಿ ಪರಭಾಷೆಯವರೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸುವ ಮೂಲಕ ಕನ್ನಡದ ಆಸ್ಮಿತೆ ಎತ್ತಿ ಹಿಡಿಯಬೇಕು ಎಂದರು.

ಭಾಷ ಅಭಿಮಾನವಿರಲಿ: ಜಿಪಂ ಸಿಇಒ ಕಾಂತರಾಜ್‌ ಅವರು ಮಾತನಾಡಿ, ಇಂಗ್ಲಿಷ್‌ ಭಾಷಾ ವ್ಯಾಮೋಹ ದಿಂದ ಕನ್ನಡಕ್ಕೆ ಧಕ್ಕೆ ಎದುರಾಗಿದೆ. ಕನ್ನಡಿಗರು ಕೀಳ ರಮೆ ಬಿಟ್ಟು ಕನ್ನಡದಲ್ಲಿಯೇ ಮಾತನಾಡಿ, ಭಾಷಾಭಿ ಮಾನ ಮೆರೆಯಬೇಕು ಎಂದರು.

ಬೂವನಹಳ್ಳಿಹಿರಿಮೆ: ಬೂವನಹಳ್ಳಿಯ ಮುಖಂಡ, ಮಾಜಿ ಶಾಸಕ ಬಿ.ವಿ.ಕರೀಗೌಡ ಅವರು ಮಾತನಾಡಿ, ಇಬ್ಬರು ಶಾಸಕರನ್ನು ಕೊಟ್ಟ ರಾಜಕೀಯ ಪ್ರಭಾವದ, ಶಿಕ್ಷಣಕ್ಕೆ ಕೊಡುಗೆ ನೀಡಿದ ಬೂವನಹಳ್ಳಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ನಮಗೆ ಹೆಮ್ಮೆ. ಸಮ್ಮೇಳನವು ಯಶಸ್ವಿಯಾಗುವುದರಲ್ಲಿ ಅನುಮಾನವೇ ಇಲ್ಲ ಎಂದು ಹೇಳಿದರು.

ಇತಿಹಾಸ ನಿರ್ಮಾಣ: ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಎಚ್‌.ಎಲ್‌,ಮಲ್ಲೇಶಗೌಡ ಅವರು ಪ್ರಾಸ್ತಾವಿನ ನುಡಿಗಳನ್ನಾಡಿ, ಗ್ರಾಮೀಣ ಪ್ರದೇಶಕ್ಕೆ ಕಸಾಪ ಕೊಂಡೊ ಯ್ಯುವುದಾಗಿ ಚುನಾವಣೆ ವೇಳೆ ಹೇಳಿದ್ದಕ್ಕೆ ಪೂರಕ ವಾಗಿ ಈಗ ಬೂವನಹಳ್ಳಿಯಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನ ನಡೆಸಲಾಗುತ್ತಿದೆ. ಪರಿಷತ್ತಿನ ಇತಿಹಾಸದಲ್ಲಿ ಇದೊಂದು ದಾಖಲೆಯಾಗಿದೆ ಎಂದು ಹೇಳಿದರು.

ನಿಕಟಪೂರ್ವ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಮೇಟಿಕೆರೆ ಹಿರಿಯಣ್ಣ, ಕೆಆರ್‌ಡಿಸಿಎಲ್‌ ಉಪಾಧ್ಯಕ್ಷ ಜಿವಿಟಿ ಬಸವರಾಜು ಅವರು ಮಾತನಾಡಿದರು. ಶ್ರೀ ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿಯವರು ಆಶೀರ್ವಚನ ನೀಡಿ ದರು. ಜಿಲ್ಲಾಕಸಾಪ ಗೌರವಕಾರ್ಯದರ್ಶಿ ಬಿ.ಆರ್‌. ಬೊಮ್ಮೇಗೌಡ ಅವರು ಸ್ವಾಗತಿಸಿದರು. ಮತೋರ್ವ ಗೌರವ ಕಾರ್ಯದರ್ಶಿ ಜಾವಗಲ್‌ ಪ್ರಸನ್ನ ಅವರು ಸಾಹಿತ್ಯ ಸಮ್ಮೇಳನಾಧ್ಯಕ್ಷರ ಪರಿಚಯ ನೀಡಿದರು.

ಕಸಾಪ ನಿಕಟಪೂರ್ವ ಜಿಲ್ಲಾಕಸಾಪ ಮಾಜಿ ಅಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಈ. ಕೃಷ್ಣೇಗೌಡ,ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಜಯರಾಮ್‌,ಜಿಪಂ ಮಾಜಿ ಅಧ್ಯಕ್ಷ ಸ್ವಾಮಿಗೌಡ, ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಅಧ್ಯಕ್ಷ ಚ.ನಾ ಅಶೋಕ್‌. ಜಿಲ್ಲಾ ಕಸಾಪ ಕೋಶಾದ್ಯಕ್ಷ ಬಿ.ಎನ್‌.ಜಯರಾಂ, ಆರ್‌. ಶಂಕರ್‌, ಕೆ.ಟಿ. ಜಯಶ್ರೀ ಮತ್ತಿತರರು ಉಪಸ್ಥಿತರಿದ್ದರು. ಎಚ್‌.ಕೆ. ಲಕ್ಷ್ಮಿನಾರಾಯಣ ನಿರೂಪಿಸಿದರು.

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.