ಕದ್ದು ಮುಚ್ಚಿ ಪಿಒಪಿ ಗಣೇಶ ಮೂರ್ತಿಗಳ ಮಾರಾಟ


Team Udayavani, Aug 31, 2019, 12:29 PM IST

hasan-tdy-1

ಹಾಸನದ ಮಹಾವೀರ ಸರ್ಕಲ್, ಕಸ್ತೂರಿಬಾ ರಸ್ತೆಯಲ್ಲಿ ಗಣೇಶಮೂರ್ತಿಗಳ ಮಾರಾಟ.

ಹಾಸನ: ಗೌರಿ-ಗಣೇಶ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಬಣ್ಣ – ಬಣ್ಣದ ಗಣೇಶ ಮೂರ್ತಿಗಳು ಈಗ ಮಾರುಕಟ್ಟೆಗೆ ಬಂದಿವೆ. ಪ್ಲಾಸ್ಟರ್‌ ಆಫ್ ಪ್ಯಾರೀಸ್‌ (ಪಿಒಪಿ) ಮತ್ತು ತೈಲ ವರ್ಣ( ಆಯಿಲ್ ಪೈಂಟ್) ಗಣೇಶ ಮೂರ್ತಿಗಳ ಬದಲು ಪರಿಸರಸ್ನೇಹಿ ಬಣ್ಣಗಳ ಗಣೇಶ ಮೂರ್ತಿ ಗಳನ್ನು ಪೂಜಿಸಿ ಎಂದು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಸ್ಥಳೀಯ ಸಂಸ್ಥೆಗಳು ಜಾಗೃತಿ ಮೂಡಿಸಿದರೂ ಅಲ್ಲಲ್ಲಿ ಪಿಒಪಿ ಗಣೇಶ ಮೂರ್ತಿಗಳ ಮಾರಾಟ ಕದ್ದುಮುಚ್ಚಿ ನಡೆಯುವುದು ಮಾತ್ರ ನಿಂತಿಲ್ಲ.

ಜಾಗೃತಿ ಮೂಡಿಸಿದರೂ ಪರಿಸರಕ್ಕೆ ಮಾರಕವಾದ ನಿಷೇಧಿತ ವರ್ಣಗಳ ಗಣೇಶ ಮೂರ್ತಿಗಳ ಮಾರಾಟದ ಸುಳಿವು ಪಡೆದಿರುವ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ಪರಿಶೀಲನೆ ನಡೆಸುತ್ತಿದ್ದು ಪಿಒಪಿ ಮತ್ತು ತೈಲ ವರ್ಣದ ಗಣೇಶಮೂರ್ತೀಗಳ ಮಾರಾಟದ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ.

ಜಲಚರಗಳಿಗೆ ಧಕ್ಕೆ: ಬಹುತೇಕ ವೃತಿಪರರು ಮಣ್ಣಿನ ಗಣೇಶಮೂರ್ತಿಗಳಿಗೆ ಜಲವರ್ಣ (ವಾಟರ್‌ ಪೈಂಟ್) ಮಾಡಿ ಮಾರಾಟ ಮಾಡುತ್ತಿದ್ದಾರೆ. ಇಂತಹ ಗಣೇಶ ಮೂರ್ತಿಗಳು ಮಾರಾಟವಾಗದೆ ಬಾಕಿ ಉಳಿದರೆ ಮುಂದಿನ ವರ್ಷದ ವೇಳೆಗೆ ಆ ಮೂರ್ತಿ ಗಳ ಬಣ್ಣ ಮಾಸುತ್ತವೆ. ಆದರೆ ಅಂತಹ ಮೂರ್ತಿ ಗಳಿಂದ ಪರಿಸರಕ್ಕೆ ಹಾನಿ ಇಲ್ಲ. ಆದರೆ ಆಕರ್ಷಕವಾಗಿ ಕಾಣಲೆಂದು ಗಣೇಶಮೂರ್ತಿಗಳಿಗೆ ತೈಲವರ್ಣ ಬಳಸಿದರೆ ಅದರಿಂದ ನೀರು ಕಲುಷಿತವಾಗಿ ಜಲಚರಗಳಿಗೆ ಧಕ್ಕೆಯಾಗುತ್ತದೆ. ಈ ಬಗ್ಗೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಪರಸರಸ್ನೇಹಿ ಸಂಘಟನೆಗಳು, ಹಿಂದೂ ಜನಜಾಗೃತಿ ಸಮಿತಿ ಜನ ಜಾಗೃತಿ ಮೂಡಿಸಿದ ಪರಿಣಾಮ ಮಾರುಕಟ್ಟೆಗಳಲ್ಲಿ ಈಗ ಬಹುಪಾಲು ಜಲವರ್ಣದ ಗಣೇಶ ಮೂರ್ತಿ ಗಳು ಕಾಣುತ್ತಿವೆ. ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಅಲ್ಲಲ್ಲಿ ತೈಲ ವರ್ಣ ಹಾಗೂ ಪಿಒಪಿ ಗಣೇಶಮೂರ್ತಿ ಪ್ರತಿಷ್ಠಾಪನೆಯಾಗುತ್ತಿವೆ ಎಂದು ವೃತಿಪರ ಗಣೇಶ ಮೂರ್ತಿಗಳ ಮಾರಾಟಗಾರರಿಂದ ಸಾಮಾನ್ಯವಾಗಿ ಕೇಳಿಬರುತ್ತಿದೆ.

ಈ ಹಿನ್ನಲೆಯಲ್ಲಿ ಕಳೆದೊಂದು ವಾರದಿಂದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಗಳು ದೂರು ಬಂದ ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ, ಇದುವರೆಗೂ ಪಿಒಪಿ ಗಣೇಶ ಮೂರ್ತಿಗಳ ಮಾರಾಟದ ಸುಳಿವು ಸಿಕ್ಕಿಲ್ಲ.

ಪಿಒಪಿ ಗಣೇಶಮೂರ್ತಿಗಳನ್ನೇಕೆ ಬಯಸುತ್ತಾರೆ?: ಗಣೇಶಮೂರ್ತಿಗಳ ವೃತ್ತಿಪರ ಮಾರಾಟಗಾರರು ಹೇಳುವುದೇನೆಂದರೆ, ಪಿಒಪಿ ಮೂರ್ತಿಗಳು ಗಣೇಶನ ವಿವಿಧ ಆಕೃತಿಗಳಲ್ಲಿ ಅಂದರೆ, ನಾಟ್ಯಭಂಗಿ, ಸೈನಿಕನ ಭಂಗಿ ಸೇರಿ ವಿವಿವಿಧ ರೂಪಗಳಲ್ಲಿ ಆಕರ್ಷಕವಾಗಿ ನಿರ್ಮಾಣವಾಗಿರುತ್ತವೆ. ಹಗುರವಾಗಿದ್ದು ಸಾಗಣೆ ಸುಲಭ. ಹೀಗಾಗಿ ಬೃಹತ್‌ ಗಾತ್ರದ, ವಿಭಿನ್ನ ರೂಪದ ಗಣಪತಿಗಳನ್ನು ಪ್ರತಿಷ್ಠಾಪಿಸಿದ್ದೇವೆ ಎಂಬ ಪ್ರತಿಷ್ಠೆ ಪ್ರದರ್ಶಿಸಲು ಗ್ರಾಮೀಣ ಜನರು ಪಿಒಪಿ ಮೂರ್ತಿ ಖರೀದಿಸುತ್ತಾರೆ. ನಗರ, ಪಟ್ಟಣ ಪ್ರದೇಶ ದಲ್ಲಿ ಪಿಒಪಿ ಗಣೇಶಮೂರ್ತಿ ಮಾರಾಟವಾಗದಿದ್ದರೂ ಬೆಂಗಳೂರು ಮತ್ತಿತರ ಕಡೆಗಳಿಂದ ಗುಟ್ಟಾಗಿ ತಂದು ಮಾರಾಟ ಮಾಡುವ ಜಾಲವೇ ಇದೆ ಎಂದು ಅಭಿಪ್ರಾಯಪಡುತ್ತಾರೆ.

ಅಧಿಕಾರಿಗಳು ಚುರುಕಾಗಬೇಕು: ನಗರಗಳಲ್ಲಿ ಪಿಒಪಿ ತೈಲವರ್ಣದ ಗಣೇಶಮೂರ್ತಿಗಳು ಮಾರಾಟವಾಗುವುದಿಲ್ಲ. ಆದರೆ, ಗ್ರಾಮೀಣ ಪ್ರದೇಶ ಗಳಲ್ಲಿ ಮಾರಾಟವಾಗುತ್ತವೆ. ಕೇಳಿದ ಸ್ಥಳಕ್ಕೆ ತಲು ಪಿಸುವ ಜಾಲವೇ ಇದೆ. ಅಧಿಕಾರಿಗಳು ಇನ್ನಷ್ಟು ಚುರುಕಾಗಿ ಪರಿಶೀಲನೆ ನಡೆಸಬೇಕು. ನಾವು ಪರಿಸರ ಸ್ನೇಹಿ ಬಣ್ಣ ಬಳಸಿ ನಿರ್ಮಿಸಿದ ಮೂರ್ತಿಗಳನ್ನು ಜನ ನೋಡಿ. ದರ ವಿಚಾರಿಸಿ ಹೋಗುತ್ತಾರೆ. ಕೊನೆಗೆ ತೈಲ ವರ್ಣದ ಆಕರ್ಷಕ ಮೂರ್ತಿ ಖರೀದಿಸುತ್ತಾರೆ. ನಿಷೇಧಿತ ವರ್ಣದ ಮೂರ್ತಿ ಮಾರಾಟ ಮಾಡು ವವರ ವಿರುದ್ಧ ಕಠಿಣ ಕ್ರಮ ಕೈಗೊಂಡರೆ ನಮಂತಹ ವೃತ್ತಿಪರರು ಉಳಿಯಲು ಸಾಧ್ಯ ಎನ್ನುತ್ತಾರೆ ಹಾಸನದ ಮಹಾವೀರ ಸರ್ಕಲ್ನಲ್ಲಿ ಗಣೇಶಮೂರ್ತಿ ಮಾರಾಟ ಮಾಡುತ್ತಿರುವ ಶಂಕರ್‌ ಅವರು.

 

● ಎನ್‌. ನಂಜುಂಡೇಗೌಡ

ಟಾಪ್ ನ್ಯೂಸ್

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-14

ಹಬ್ಬದ ಮೂಡ್‌ನ‌ಲ್ಲಿ ಸ್ಯಾಂಡಲ್‌ವುಡ್‌ ತಾರೆಯರು

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

tdy-7

ಗಂಗಾವತಿಯಲ್ಲಿ ಪೊಲೀಸ್ ಬಂದೋಬಸ್ತಿನಲ್ಲಿ ಸಡಗರದ ಗಣೇಶ ಚತುರ್ಥಿ ಆಚರಣೆ

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

7-

ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.