ತಾಲೂಕಿನಲ್ಲಿ ಮಿತಿ ಮೀರಿದ ಮಾದಕ ವಸ್ತು ಮಾರಾಟ ದಂಧೆ

ಗಾಂಜಾ ವ್ಯಸನಕ್ಕೆ ದಾಸರಾಗುತ್ತಿರುವ ಯುವ ಜನರು , ಸಾರ್ವಜನಿಕರು ದೂರು ನೀಡಿದರೂ ಪ್ರಯೋಜನವಿಲ್ಲ

Team Udayavani, Jul 9, 2019, 12:31 PM IST

HASAN-TDY-1..

ಮಾದಕ ವಸ್ತುಗಳ ಸೇವನೆ ತಾಣವಾಗಿರುವ ಪಾಳು ಬಿದ್ದಿರುವ ರೈತ ತರಬೇತಿ ಕೇಂದ್ರ.

ಅರಕಲಗೂಡು: ತಾಲೂಕಿನಲ್ಲಿ ಮಾದಕ ವಸ್ತು ಮಾರಾಟ ದಂಧೆ ಮಿತಿ ಮೀರಿದ್ದು, ಪೊಲೀಸ್‌ ಇಲಾಖೆ ಮೌನವಹಿಸಿದೆ.

ಅರಕಲಗೂಡು ತಾಲೂಕಿನಲ್ಲಿ ಮಾದಕ ವಸ್ತುಗಳ ಸೇವನೆಗೆ ಯುವಕರು ಬಲಿಯಾಗುತ್ತಿರುವ ಸಂಖ್ಯೆ ಅಧಿಕವಾಗಿದೆ. ಪಟ್ಟಣದ ತಾಲೂಕು ಕ್ರೀಡಾಂಗಣ, ಶಾಲಾ ಮೈದಾನ, ಸಂಜೆ ಸಮಯದಲ್ಲಿ ಸರ್ಕಾರಿ ಕಚೇರಿಗಳ ಕಾಂಪೌಂಡ್‌, ಸ್ಮಶಾನ, ಕೃಷಿ ಪಾಠಶಾಲೆ ಕಟ್ಟಡ ಹಾಗೂ ಬಸ್‌ ನಿಲ್ದಾಣಗಳು ಮಾದಕ ವಸ್ತುಗಳ ಸೇವನೆಯ ತಾಣಗಳಾಗಿವೆ.

ಈ ಸ್ಥಳಗಳಲ್ಲಿ ಮತ್ತಿನಿಂದ ತೂರಾಡುವ ವ್ಯಕ್ತಿಗಳನ್ನು ಸಾರ್ವಜನಿಕರು ಪ್ರಶ್ನೆ ಮಾಡಲು ಮುಂದಾದರೆ ಮೇಲೆ ಹಲ್ಲೆಗೆ ಮುಂದಾಗುತ್ತಾರೆ. ಈ ಬಗ್ಗೆ ಸಾರ್ವಜನಿಕರು ಹಲವಾರು ಬಾರಿ ಪೊಲೀಸ್‌ ಇಲಾಖೆಗೆ ದೂರು ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.

ಈ ಎಲ್ಲಾ ಬೆಳವಣಿಗೆಯಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಪೋಷಕರಲ್ಲಿ ಆತಂಕ ಸೃಷ್ಟಿಯಾಗಿದ್ದು, ಇದರಿಂದ ಮುಗ್ಧ ಮನಸ್ಸುಗಳನ್ನ ರಕ್ಷಿಸುವವರು ಯಾರು, ಈ ದಂಧೆ ನಡೆಸುತ್ತಿರುವ ತಂಡಗಳನ್ನ ಮಟ್ಟಹಾಕಲು ಯಾರೂ ಮುಂದಾಗದಿ ರುವುದು ಆತಂಕ ಸೃಷ್ಟಿಯಾಗಿದೆ.

ಗಾಂಜಾ ದಂಧೆಯ ಐವರ ಬಂಧನ: ತಾಲೂಕಿನಲ್ಲಿ ಗಂಜಾ ಮಾರಾಟ ರಾಜರೋಷವಾಗಿ ನಡೆಯುತ್ತಿದೆ ಎಂಬುದಕ್ಕೆ ತಾಲೂಕಿನ ಮಲ್ಲಿಪಟ್ಟಣ ಹೋಬಳಿ, ಅಬ್ಬೂರು ಮಾಚಗೌಡನಹಳ್ಳಿ ಗ್ರಾಮದಲ್ಲಿ ಜು.2 ರಂದು ಗಾಂಜಾ ಮಾರಾಟಕ್ಕೆ ಮುಂದಾಗಿದ್ದ ಅಡ್ಡೆಯ ಮೇಲೆ ಪೋಲೀಸರು ದಾಳಿ ನಡೆಸಿ ಸುಮಾರು 23 ಕೇಜಿ ಗಾಂಜಾ ವಶಪಡಿಸಿಕೊಂಡು ಐವರನ್ನು ಬಂಧಿಸಿ ದ್ದಾರೆ. ಆದರೆ ಈ ಗ್ರಾಮದಲ್ಲಿ ಇದೇ ಮೊದಲೇನಲ್ಲ, ಕಳೆದ 4-5 ತಿಂಗಳ ಹಿಂದೆ ಇದೇ ಗ್ರಾಮದ ಬಾಸೀದ್‌ ಎಂಬುವವನ ಮನೆಯ ಮೇಲೆ ದಾಳಿ ನಡೆಸಿ ಗಾಂಜಾ ವಶಪಡಿಸಿಕೊಂಡಿದ್ದರೂ ಗಾಂಜಾ ಮಾರಾಟ ದಂಧೆ ನಿರಾತಂಕವಾಗಿ ನಡೆಯುತ್ತಿದೆ.

ಒಡಿಶಾ ರಾಜ್ಯದ ಸಂಬಂಧ: ಅಬ್ಬೂರು ಮಾಚ ಗೌಡನಹಳ್ಳಿ ಗ್ರಾಮದಲ್ಲಿ 2 ಬಾರಿ ಪೊಲೀಸರ ಕಾರ್ಯಾ ಚರಣೆಯಲ್ಲಿ ಸಿಕ್ಕಿಬಿದ್ದ ವ್ಯಕ್ತಿಗಳು ಒಡಿಶಾ ರಾಜ್ಯದವ ರಾಗಿದ್ದು, ಗಾಂಜಾವನ್ನ ಆ ರಾಜ್ಯದಿಂದಲೇ ತಂದು ಈ ಗ್ರಾಮದ ಕೆಲ ಕುಟುಂಬಗಳೊಂದಿಗೆ ವ್ಯಾಪಾರ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಜು.2 ರಂದು ಪೊಲೀಸರು ಬಂಧಿಸಿದ ಆರೋಪಿಗಳು ಒಡಿಶಾ ರಾಜ್ಯದ ಕಾಲಿಮೆಲ್ಲಾ ತಾಲೂಕು ಮಲಕನಗಿರಿ ಜಿಲ್ಲೆಯ ಎಂ.ವಿ. 90 ಗ್ರಾಮದ ನಿಬಾಸ್‌ ಸುಷ್ಮಾ ಸರ್ಕಾರ್‌, ಹಾಗೂ ರೇಖಾಮಂಡಲ್ ಬಾಪನ್‌ಪಲ್ಲಿ ಎಂ.ಪಿ.ವಿ. 67ರ ನಿವಾಸಿಗಳನ್ನ ಬಂಧಿಸಿದ್ದಾರೆ. ಇವರು ಅಬ್ಬೂರು ಮಾಚಗೌಡನಹಳ್ಳಿ ನಿವಾಸಿ ಇನಾಯತ್‌ ಮತ್ತು ನೂರ್‌ ಅಹಮದ್‌ ಮನೆಗೆ ತಂದು ಹಸ್ತಾಂತರ ಮಾಡುವ ಸಮಯದಲ್ಲಿ ಬಂಧಿಸ ಲಾಗಿದೆ. ಆದರೂ ಗಾಂಜಾ ಮಾರಾಟ ದಂಧೆ ನಡೆ ಯುತ್ತಿದೆ ಎಂದರೆ, ಪೊಲೀಸ್‌ ಆಡಳಿತದ ವ್ಯವಸ್ಥೆಯ ಮೇಲೆ ಸಾರ್ವಜನಿಕರಿಗೆ ಅನುಮಾನ ಹುಟ್ಟಿಸುತ್ತದೆ.

ಕೊಡಗು, ಮಂಗಳೂರಿನಿಂದಲೂ ಮಾದಕ ವಸ್ತು ಗಳು ರವಾನೆಯಾಗುತ್ತಿದೆ ಎಂಬ ವಿಷಯ ಸಾರ್ವ ಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ.ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ನೀಡಿ ಇಂತಹ ಜಾಲಗಳನ್ನು ಬಗ್ಗು ಬಡಿಯದಿದ್ದರೆ ಯುವ ಪೀಳಿಗೆ ಈ ದಂಧೆಯಲ್ಲಿ ಸಿಲುಕಿ ನರಳಬೇಕಾಗುತ್ತದೆ.

 

● ಅರಕಲಗೂಡು ಶಂಕರ್‌

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.