ಶಿರಾಡಿ ಘಾಟ್ ಬಂದ್ ಮಾಡುವುದಿಲ್ಲ: ಸಚಿವ ಸಿ. ಸಿ. ಪಾಟೀಲ್ ಸ್ಪಷ್ಟನೆ
Team Udayavani, Jul 11, 2022, 5:38 PM IST
ಸಕಲೇಶಪುರ: ಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಮುಖ ಸಂಪರ್ಕ ಮಾರ್ಗವಾಗಿರುವ ಶಿರಾಡಿಘಾಟ್ ದುರಸ್ತಿಯ ನಿಮಿತ್ತ ಈ ಮಳೆಗಾಲದಲ್ಲಿ ಈ ಪ್ರದೇಶದಲ್ಲಿ ವಾಹನ ಸಂಚಾರ ನಿಷೇಧ ಮಾಡುವುದಿಲ್ಲ. ಆದರೆ ರಸ್ತೆ ದುರಸ್ತಿ ಕಾಮಗಾರಿ ಮುಂದುವರಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು ಮತ್ತು ಶಿರಾಡಿ ಘಾಟ್ ನಡುವಿನ ಹೆದ್ದಾರಿ ಇತರ ಸೇತುವೆಗಳ ಕಾಮಗಾರಿ ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಸಕಲೇಶಪುರ ಹಾಗೂ ಶಿರಾಡಿ ಘಾಟ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಶಿರಾಡಿಘಾಟ್ ಮೂಲಕ ಪ್ರತಿನಿತ್ಯ ಸರಾಸರಿ 30 ಸಾವಿರ ವಾಹನಗಳು ಸಂಚರಿಸುತ್ತವೆ. ಒಂದು ವೇಳೆ ರಸ್ತೆ ಬಂದ್ ಮಾಡಿದರೆ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತದೆ. ಆದ್ದರಿಂದ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟು, ಮತ್ತೊಂದು ಭಾಗದಲ್ಲಿ ದುರಸ್ತಿ ಕಾಮಗಾರಿಗಳಿಗೆ ಅವಕಾಶ ಮಾಡಿಕೊಡಲಾಗುವುದು, ತೀರಾ ಅನಿವಾರ್ಯವಾದರೆ ಮಾತ್ರ ಏಕಮುಖ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಪರಿಶೀಲಿಸಲಾಗುವುದು, ಸದ್ಯಕ್ಕಂತೂ ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಎಂದು ಸಮಜಾಯಿಷಿ ನೀಡಿದರು.
ಮಳೆ ಮತ್ತಿತರ ನೈಸರ್ಗಿಕ ಪ್ರಕೋಪಗಳಿಂದ ರಸ್ತೆಗಳು ಅಥವಾ ಸೇತುವೆಗಳು ಹಾನಿಗೊಳಗಾದರೆ ದುರಸ್ತಿ ಕಾಮಗಾರಿ ನಡೆಸುವುದಕ್ಕೆ ಯಾವುದೇ ಹಣಕಾಸು ತೊಂದರೆ ಇಲ್ಲ. ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳಲಾಗುವುದು ಎಂದು ವಿವರಿಸಿದರು.
ಇದನ್ನೂ ಓದಿ: ಬೆಂಗಳೂರಿನಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ: ಸಚಿವ ಪ್ರಭು ಚವ್ಹಾಣ್
ಸ್ಥಳೀಯ ಶಾಸಕ ಕುಮಾರಸ್ವಾಮಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಡಾ. ಕೃಷ್ಣ ರೆಡ್ಡಿ, ಮತ್ತಿತರ ಅಧಿಕಾರಿಗಳು ಸಚಿವರ ಹೆದ್ದಾರಿ ಪರಿಶೀಲನೆ ಸಂದರ್ಭದಲ್ಲಿ ಜತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್