ವೈರಾಗ್ಯಮೂರ್ತಿಯ 88ನೇ ಮಹಾಮಸ್ತಕಾಭಿಷೇಕ ಸಂಪನ್ನ


Team Udayavani, Feb 26, 2018, 6:15 AM IST

25BNP-(26).jpg

ಹಾಸನ: ಶ್ರವಣಬೆಳಗೊಳದ ಬಾಹುಬಲಿಮೂರ್ತಿಗೆ ಈ ಶತಮಾನದ 2ನೇ ಮಹಾಮಸ್ತಕಾಭಿಷೇಕಕ್ಕೆ ಭಾನುವಾರ ವಿಧ್ಯುಕ್ತವಾಗಿ ತೆರೆಬಿದ್ದಿತು. 9 ದಿನಗಳು ನಡೆದ ವೈರಾಗ್ಯಮೂರ್ತಿಯ 88ನೇ ಮಹಾ ಮಸ್ತಕಾಭಿಷೇಕಕ್ಕೆ ಕೊನೆಯ ದಿನ ಲಕ್ಷಾಂತರ ಜನರು ಸಾಕ್ಷಿಯಾದರು.

ಭಾನುವಾರ ಕೊನೆಯ ದಿನವೂ ಆಗಿದ್ದರಿಂದ ಪ್ರವೇಶದ ಪಾಸುಗಳನ್ನು ಹೊಂದಿದ್ದವರು ಮುಂಜಾನೆ 6.30 ರಿಂದಲೇ ವಿಂಧ್ಯಗಿರಿಯನ್ನೇರಿ ಆಟ್ಟಣಿಗೆಯಲ್ಲಿ ಕುಳಿತು ಮಹಾಮಜ್ಜನ ಕಣ್ತಂಬಿಕೊಂಡರು. ಎಂದಿನಂತೆ 1,008 ಕಳಶಗಳ ಜಲಾಭಿಷೇಕದ ನಂತರ ಎಳನೀರು, ಕಬ್ಬಿನ ಹಾಲು, ಕ್ಷೀರ, ಕಲಕಚೂರ್ಣ, ಅರಿಶಿಣ, ಅಷ್ಟಗಂಧ, ಚಂದನದ ಅಭಿಷೇಕ ನಡೆಯುವ ವೇಳೆ ಜೈ ಗೊಮ್ಮಟೇಶ ಎಂದು ಭಕ್ತರು ಜಯಘೋಷ ಕೂಗುತ್ತಾ ಭಕ್ತಿಯ ಪರಾಕಾಷ್ಠೆ ಮೆರೆದರು.

ಗರಿಷ್ಠ 5,500 ಜನರು ಸೇರಬಹುದಾದ ಅಟ್ಟಣಿಗೆ ಭರ್ತಿಯಾಗಿದ್ದರಿಂದ ಅಟ್ಟಣಿಗೆ ಏರುವ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಮೊದಲು ದರ್ಶನಕ್ಕೆ ಬಂದ ಭಕ್ತರನ್ನು ಕಳುಹಿಸಿ ಅಟ್ಟಣಿಗೆಯ ಕೆಳಗೆ ಕಾಯುತ್ತಿದ್ದವರ ದರ್ಶನಕ್ಕೆ ಅವಕಾಶ ಮಾಡಿಕೊಟ್ಟರು. ಕೊನೆಯ ದಿನವಾದ್ದರಿಂದ ಪಂಚಾಮೃತ ಅಭಿಷೇಕ ನೆರವೇರುವುದೂ ಸುಮಾರು ಒಂದು ಗಂಟೆ ವಿಳಂಬವಾಯಿತು. ನವದಿನಗಳಿಂದ ಬಣ್ಣದ ಓಕುಳಿಯಲ್ಲಿ ಮಿಂದಿದ್ದ ಮಂದಸ್ಮಿತ ಮಂಗಳಾರತಿ ವೇಳೆಗೆ ಸಹಜ ಸ್ಥಿತಿಗೆ ಮರಳಿದ್ದ. ಮಧ್ಯಾಹ್ನ 3.30ರ ವೇಳೆಗೆ ಮಹಾಮಂಗಳಾರತಿ ನೆರವೇರುವುದರೊಂದಿಗೆ ಬಾಹುಬಲಿಮೂರ್ತಿಯ 88ನೇ ಮಹಾಮಸ್ತಕಾಭಿಷೇಕಕ್ಕೆ ತೆರೆ ಬಿದ್ದಿತು.

ಮಧ್ಯಾಹ್ನ 2 ಗಂಟೆಯಿಂದ ಅರಂಭವಾಗಬೇಕಿದ್ದ ಧರ್ಮದರ್ಶನಕ್ಕೆ ಬೆಳಗ್ಗೆ 10 ಗಂಟೆಯಿಂದಲೇ ಸರದಿ ಸಾಲಿನಲ್ಲಿ ನಿಂತಿದ್ದ ಸಾವಿರಾರು ಭಕ್ತರು ಉರಿ ಬಿಸಿಲಿನ ತಾಪದಿಂದ ಬಳಲಿದ್ದರು. ಪಂಚಾಮೃತ ಅಭಿಷೇಕ ವಿಳಂಬವಾಗಿದ್ದರಿಂದ ಧರ್ಮ ದರ್ಶನವೂ ವಿಳಂಬವಾಯಿತು. 

ಪೊಲೀಸರು 2.15 ರ ವೇಳೆಗೆ ಸಾರ್ವಜನಿಕರನ್ನು ಧರ್ಮದರ್ಶನಕ್ಕೆ ಬಿಟ್ಟರು. ವಿದ್ಯುದ್ದೀಪಗಳಿಂದ ಅಲಂಕಾರಗೊಂಡ ವಿಂಧ್ಯಗಿರಿಯತ್ತ ರಾತ್ರಿ 10 ಗಂಟೆವರೆಗೂ ಭಕ್ತರ ದಂಡು ಸಾಗಿತ್ತು. ಭಾನುವಾರ ರಾತ್ರಿ 11 ಗಂಟೆವರೆಗೂ ಶ್ರೀ ಬಾಹುಬಲಿ ಮೂರ್ತಿಯ ದರ್ಶನಕ್ಕೆ ಅವಕಾಶ ನೀಡಲಾಗಿತ್ತು.

ಅಂತಿಮ ದಿನದ ಮಹಾಮಸ್ತಕಾಭಿಷೇಕದಲ್ಲಿ ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮತ್ತು ವಿವಿಧ ಜೈನ ಮಠಗಳ ಸ್ವಾಮೀಜಿಯವರು ಪಾಲ್ಗೊಂಡು ಧನ್ಯತಾ ಭಾವ ಮೆರೆದರು. ಶ್ರೀ ಬಾಹುಬಲಿಮೂರ್ತಿಗೆ ತಮ್ಮ ನೇತೃತ್ವದಲ್ಲಿ 4ನೇ ಮಹಾಮಸ್ತಕಾಭಿಷೇಕವನ್ನು ಯಶಸ್ವಿಯಾಗಿ ನೆರವೇರಿಸಿದ ಸಂತೃಪ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೊಗದಲ್ಲಿ ಹೊರಸೂಸುತ್ತಿತ್ತು.

– ಎನ್‌. ನಂಜುಂಡೇಗೌಡ

ಟಾಪ್ ನ್ಯೂಸ್

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.