ಸರಳವಾಗಿ ಚನ್ನಕೇಶವ ದೇವರ ರಥೋತ್ಸವ ಆಚರಣೆ


Team Udayavani, Mar 23, 2020, 3:00 AM IST

saralavagi

ಬೇಲೂರು: ಕೊರೊನಾ ವೈರಸ್‌ ಭೀತಿಯ ಹಿನ್ನೆಲೆಯಲ್ಲಿ ಶ್ರೀ ಚನ್ನಕೇಶವಸ್ವಾಮಿ ರಥೋತ್ಸವ ಹಾಗೂ ಇತರ ಉತ್ಸವಗಳನ್ನು ಸರಳವಾಗಿ ಆಚರಿಸಲಾಗುತ್ತಿದ್ದು ಭಕ್ತರು ಸಹಕರಿಸಬೇಕೆಂದು ಶಾಸಕ ಕೆ.ಎಸ್‌.ಲಿಂಗೇಶ್‌ ಮನವಿ ಮಾಡಿದರು.

ದೇಗುಲದ ದಾಸೋಹ ಸಭಾಂಗಣದಲ್ಲಿ ಕರೆಯಲಾಗಿದ್ದ ಅಡ್ಡೆಗಾರರ, ನಾಡಪಟೇಲರ ಹಾಗೂ ಅರ್ಚಕರ ಸಭೆಯಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಶ್ರೀಚನ್ನಕೇಶವಸ್ವಾಮಿ ರಥೋತ್ಸವವನ್ನು ಸರಳವಾಗಿ ದೇಗುಲದ ಪ್ರಾಂಗಣದೊಳಗೆ ಆಚರಿಸಲು ನಿರ್ಧರಿಸಲಾಗಿದೆ ಎಂದರು.

ದೇಗುಲದ ಕಾರ್ಯನಿವಹಣಾಧಿಕಾರಿ ವಿದ್ಯುಲ್ಲತಾ ಮಾತನಾಡಿ, ಪ್ರತಿವರ್ಷ ಯುಗಾದಿ ಹಬ್ಬದಂದು ದೇವರಿಗೆ ಆಭರಣ ತೊಡಿಸಲಾಗುತ್ತಿತ್ತು. ಆದರೆ ಈ ವರ್ಷ ಅದನ್ನು ನಿಲ್ಲಿಸಲಾಗಿದೆ. ಸರ್ಕಾರಿ ಸೇವೆ ಮೂಲಕ ಉತ್ಸವಗಳನ್ನು ನಡೆಸಲಾಗುತ್ತಿದೆ.

ಹನುಮಂತ, ಗರುಡ ಇತ್ಯಾದಿ ದೊಡ್ಡ ಉತ್ಸವಗಳನ್ನು ಸ್ಥಗಿತಗೊಳಿಸಲಾಗಿದೆ. ಉಳಿದಂತೆ ಪ್ರತಿನಿತ್ಯ ದೇಗುಲದೊಳಗೆ ಬೆಳಗ್ಗೆ ಮತ್ತು ಸಂಜೆ ಉತ್ಸವಗಳು ನಡೆಯಲಿದೆ. ಏ.4,5 ರಂದು ಬ್ರಹ್ಮರಥ, ನಾಡರಥವನ್ನು ದೇಗುಲದೊಳಗೆ ಚಿಕ್ಕರಥ ಎಳೆಯುವ ಮೂಲಕ ರಥೋತ್ಸವ ನಡೆಸಲಾಗುವುದು ಎಂದರು.

ಮಂಗಳವಾದ್ಯ ಹೊರತು ಪಡಿಸಿದರೆ ಇತರೆ ವಾದ್ಯಗಳಿರುವುದಿಲ್ಲ. ದೇಗುಲಕ್ಕೆ ವಿದ್ಯುತ್‌ ಅಲಂಕಾರ ಇರುವುದಿಲ್ಲ ಎಂದರು. ಮಾ.28ರಿಂದ ಏ.10 ವರೆಗೆ ಅಡ್ಡೆಗಾರರು 40 ಜನ, ರಥೋತ್ಸವ ನಡೆಯುವ ಸಂದರ್ಭ ಏ.3 ಮತ್ತು 6 ರಂದು ನಾಡಪಟೇಲರು 16 ಜನ, ಏ.5ರಂದು ಕುರಾನ್‌ ಪಠಣಕ್ಕೆ ಒಬ್ಬರು , ಬಲಿಗೆ 2, ರಥದ ನಗಾರಿ ಬಾರಿಸಲು ಒಬ್ಬರು, ಏ. 5,6 ರಂದು ನಗಾರಿ ಬಾರಿರಲು ಒಬ್ಬರು, ಬಳ್ಳೂರು ಪಾಳ್ಯದವರು ಒಟ್ಟು 5 ಜನರು,

ಏ.4ರಂದು ವಿಶ್ವಕರ್ಮರು ಇಬ್ಬರು, ಏ.5 ರಂದು ದೇವರ ಉತ್ಸವ ಮಾಡಿಸಲು 12 ಬ್ರಾಹ್ಮಣರು ಸೇರಿದಂತೆ ಪ್ರತಿನಿತ್ಯ ನಾಲ್ವರು ಪತ್ರಕರ್ತರು 4 ಜನ, ಪೊಲೀಸ್‌ ಸಿಬ್ಬಂದಿ ಹಾಗೂ ದೇಗುಲದ ಅರ್ಚಕರು, ಸಿಬ್ಬಂದಿಯೊಂದಿಗೆ ಹೆಚ್ಚುವರಿಯಾಗಿ 4 ಜನ ಸಿಬ್ಬಂದಿ ಇರಲಿದ್ದಾರೆಂದರು. ದೇಗುಲದ ಮುಖ್ಯ ಅರ್ಚಕ ಕೃಷ್ಣಸ್ವಾಮಿ ಭಟ್ಟರ್‌ ಮೊದಲಾದವರಿದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.