ಬಚ್ಚಲು ಗುಂಡಿ ನಿರ್ಮಾಣ: ಹಳೇಬೀಡು ಫ‌ಸ್ಟ್‌

ನರೇಗಾ ಯೋಜನೆ ಹಣ ಸಮರ್ಪಕ ಬಳಕೆ

Team Udayavani, Oct 6, 2020, 2:47 PM IST

ಬಚ್ಚಲು ಗುಂಡಿ ನಿರ್ಮಾಣ: ಹಳೇಬೀಡು ಫ‌ಸ್ಟ್‌

ಹಳೇಬೀಡು: ನರೇಗಾ ಅನುದಾನ ಸಮರ್ಪಕವಾಗಿ ಬಳಕೆ ಮಾಡಿಕೊಂಡು ಅತಿಹೆಚ್ಚುಬಚ್ಚಲು ಗುಂಡಿ ನಿರ್ಮಾಣ ಮಾಡಿದ ಜಿಲ್ಲೆಯ ಮೊದಲ ಗ್ರಾಪಂ ಎಂಬ ಹೆಗ್ಗಳಿಕೆಗೆ ಹಳೇಬೀಡು ಪಾತ್ರವಾಗಿದೆ.

ಗ್ರಾಮೀಣ ಜನರ ಅಭಿವೃದ್ಧಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಾಕಷ್ಟು ಯೋಜನೆ ಜಾರಿಗೆ ತಂದಿರುತ್ತಿವೆ. ಆದರೂ, ಅಧಿಕಾರಿ ಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಅರ್ಹರಿಗೆ ಅದರ ಪ್ರಯೋಜನ ಸಿಗುತ್ತಿಲ್ಲ. ಆದರೆ, ಹಳೇಗ್ರಾಪಂ ಪಿಡಿಒ ಅವರ ಕಾರ್ಯದಕ್ಷತೆಯಿಂದ ಗ್ರಾಮೀಣ ಜನರಿಗೆ ಸೌಲಭ್ಯ ದೊರೆಯುವಂತಾಗಿದೆ.

125 ಬಚ್ಚಲುಗುಂಡಿ: ಗ್ರಾಮೀಣ ಭಾಗದಲ್ಲಿ ಸ್ವಚ್ಛತೆ ಕಾಪಾಡುವ ದೃಷ್ಟಿಯಿಂದ ಸರ್ಕಾರ ಪ್ರತಿ ಮನೆಗೂ ಬಚ್ಚಲುಗುಂಡಿ ನಿರ್ಮಿಸಿ ಕೊಳ್ಳಲು ಉದ್ಯೋಗ ಖಾತ್ರಿ ಅಡಿಯಲ್ಲಿ 17 ಸಾವಿರ ರೂ. ಸಹಾಯಧನ ನೀಡುತ್ತಿದೆ. ಇದರಲ್ಲಿ 5 ಸಾವಿರ ರೂ. ಕೂಲಿ, ಉಳಿದ 12 ಸಾವಿರ ರೂ. ಉಪಕರಣ ಖರೀದಿಗೆ ನೀಡಲಾಗುತ್ತದೆ. ಈ ಯೋಜನೆಯನ್ನು ಪಿಡಿಒಗಳೇ ಖುದ್ದು ಕಾಮಗಾರಿ ವೀಕ್ಷಣೆ ಮಾಡಿ, ಹಣ ಬಿಡುಗಡೆ ಮಾಡುತ್ತಾರೆ. ಕೆಲಸ ಆಗದೆ ಕೇವಲ ಹೆಸರು ಹೇಳಿ ಬಿಲ್‌ ಮಾಡುವ ಕೆಲಸಕ್ಕೆ ಬ್ರೇಕ್‌ ಹಾಕಿ, ಫ‌ಲಾನುಭವಿಗಳಿಗೆ ಯೋಜನೆ ತಲುಪಿಸುವ ಕಾರ್ಯವನ್ನು ಪಿಡಿಒ ರವಿಕುಮಾರ್‌ ಮಾಡುತ್ತಿದ್ದಾರೆ.

ಬೇರೆ ತಾಲೂಕುಗಳಲ್ಲಿ 10 ರಿಂದ 15 ಬಚ್ಚಲುಗುಂಡಿಗಳು ಮಾತ್ರ ನಿರ್ಮಿಸಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಹಳೇ ಬೀಡು ಗ್ರಾಪಂ ಮಾತ್ರ 125ಕ್ಕೂ ಹೆಚ್ಚು ಬಚ್ಚಲುಗುಂಡಿ ನಿರ್ಮಾಣ ಮಾಡಿ, ನರೇಗಾ ಹಣವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡಮೊದಲ ಪಂಚಾಯ್ತಿ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ.

ಪಿಡಿಒ ಕಾರ್ಯಕ್ಕೆ ಶ್ಲಾಘನೆ: ಗ್ರಾಪಂ ವ್ಯಾಪ್ತಿಯ ಪ್ರತಿ ಮನೆಗೆ ಭೇಟಿ ನೀಡಿ, ಅಲ್ಲಿ ಬಚ್ಚಲು ನೀರು ರಸ್ತೆಗೆ ಹರಿಯುತ್ತಿದ್ದರೆ, ಆ ಮನೆಯ ಸದಸ್ಯರಿಗೆ ಈಯೋಜನೆ ಮತ್ತು ಅದರ ಉಪಯೋಗ ತಿಳಿಸುವ ಕಾರ್ಯವನ್ನು ಖುದ್ದು ಪಿಡಿಒ ರವಿಕುಮಾರ್‌ಮಾಡುತ್ತಿದ್ದಾರೆ. ಅಲ್ಲದೆ, ಗುಂಡಿ ನಿರ್ಮಾಣಕ್ಕೆನರೇಗಾದಡಿ ಸಿಗುವ ಸಹಾಯಧನ ವಿತರಿಸುವಮೂಲಕ ಅರ್ಹರಿಗೆ ಯೋಜನೆಯ ಫ‌ಲಸಿಗುವಂತೆ ಮಾಡುತ್ತಿದ್ದಾರೆ. ಇದಕ್ಕೆ ಹಳೇಬೀಡು ಸುತ್ತ ಮುತ್ತಲಿನ ಹಳ್ಳಿಗಳ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೋವಿಡ್ ಸಮಯದಲ್ಲಿ ಹಲವು ಹಳ್ಳಿಗೆ ಭೇಟಿ ನೀಡಿದಾಗ ಮನೆಯಲ್ಲಿ ಬಳಸಿದ ನೀರು ನೇರ ರಸ್ತೆಗೆ ಹರಿಯುವುದನ್ನು ಗಮನಿಸಿದೆ. ಆ ನಂತರ ಮನೆಯ ಸದಸ್ಯರಿಗೆ ಬಚ್ಚಲು ಗುಂಡಿ ನಿರ್ಮಾಣ ಕುರಿತು ಸಲಹೆ ನೀಡಿದೆ. ಇದಕ್ಕೆ ಸರ್ಕಾರ ನೀಡುವ 17 ಸಾವಿರ ರೂ. ಸಹಾಯಧನವನ್ನು ಬಳಸಿಕೊಂಡು ಹೆಚ್ಚು ಮಂದಿ ಈ ಯೋಜನೆ ಪ್ರಯೋಜನೆ ಪಡೆದಿದ್ದಾರೆ. ರವಿಕುಮಾರ್‌, ಪಿಡಿಒ, ಹಳೇಬೀಡು

ಬಚ್ಚಲುಗುಂಡಿ ನಿರ್ಮಾಣಕ್ಕೆ ಸರ್ಕಾರ ಹಣ ಕೊಡುತ್ತದೆ ಎಂಬುದು ಗೊತ್ತಿರಲಿಲ್ಲ. ಪಾತ್ರೆ ತೊಳೆದಿದ್ದು, ಸ್ನಾನ ಮಾಡಿದ ನೀರು ರಸ್ತೆಗೆ ಹರಿಯುತ್ತಿತ್ತು. ಇದನ್ನು ಗಮನಿಸಿದ ಪಿಡಿಒಖುದ್ದು ಮನೆಗೆ ಬಂದು ಪರಿಶೀಲನೆ ಮಾಡಿ, ಅವರೇ ಬಚ್ಚಲು ಗುಂಡಿ ನಿರ್ಮಾಣ ಮಾಡಿಕೊಳ್ಳಲು ಸೂಚಿಸಿ, ಸಹಾಯಧನವನ್ನು ಬಿಡುಗಡೆ ಮಾಡಿದರು. ಮಂಜುನಾಥ್‌ ಬಿ.ಆರ್‌, ಹಳೇಬೀಡು

 

ಡಾ.ಕುಮಾರ್‌ ಎಂ.ಸಿ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.