ಮಳೆ ಕೊರತೆ ನಡುವೆ ಭತ್ತ ನಾಟಿಗೆ ಸಿದ್ಧತೆ


Team Udayavani, Jun 12, 2023, 4:44 PM IST

ಮಳೆ ಕೊರತೆ ನಡುವೆ ಭತ್ತ ನಾಟಿಗೆ ಸಿದ್ಧತೆ

ಸಕಲೇಶಪುರ: ಮಳೆಯ ಕೊರತೆ ನಡುವೆ 2023-24 ನೇ ಸಾಲಿನಲ್ಲಿ ತಾಲೂಕಿನ ರೈತರು ಭತ್ತ ಬಿತ್ತನೆ ಮಾಡಲು ಸಿದ್ಧತೆ ನಡೆಸುತಿದ್ದು ತಾಲೂಕಿನ ಹಲವೆಡೆ ಟ್ರ್ಯಾಕ್ಟರ್‌ ಹಾಗೂ ಎತ್ತುಗಳ ಮೂಲಕ ಭೂಮಿ ಹದಗೊಳಿಸುವ ಕೆಲಸವನ್ನು ರೈತರು ಮಾಡುತ್ತಿದ್ದಾರೆ.

ತಾಲೂಕಿನಲ್ಲಿ ಒಟ್ಟು ಅಂದಾಜು 4000 ಹೆಕ್ಟೇರ್‌ ವಿಸ್ತೀರ್ಣದಲ್ಲಿ ಭತ್ತದ ಬೆಳೆ ನಾಟಿ ಆಗುವ ಅಂದಾಜಿದೆ. ಮುಂಗಾರು ಹಂಗಾಮಿಗೆ ಕೃಷಿ ಇಲಾಖೆ ವತಿಯಿಂದ ರೈತರ ನೆರ ವಿಗೆ ಎಲ್ಲಾ ರೀತಿಯ ಸಿದ್ಧತೆ ನಡೆಸಲಾಗಿದೆ.

ಮಳೆ ಬೆಳೆ ಪರಿಸ್ಥಿತಿ: 2023-24 ನೇ ಸಾಲಿನಲ್ಲಿ ಜನವರಿ 1 ರಿಂದ ಜೂನ್‌ 8 ರವರೆಗೆ ವಾಡಿಕೆ ಮಳೆ 268.2ಮಿ.ಮೀ ನಷ್ಟಿದ್ದು, ಈ ಅವಧಿಯಲ್ಲಿ ಪ್ರಸ್ತುತ ಸಾಲಿನಲ್ಲಿ 184.8 ಮಿ.ಮೀನಷ್ಟು ಮಾತ್ರ ಮಳೆಯಾಗಿದ್ದು, (ಶೇಕಡ 31 ರಷ್ಟು ಕೊರತೆಯಾಗಿರುತ್ತದೆ) ಒಟ್ಟಾರೆಯಾಗಿ ಇಲ್ಲಿಯವರೆಗೆ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುತ್ತದೆ. ಜೂನ್‌ ಮಾಹೆಯಲ್ಲಿ ವಾಡಿಕೆ ಮಳೆ ಜೂನ್‌ 1 ರಿಂದ 8 ನೇ ದಿನಾಂಕದ ವರೆಗೆ 60.3 ಮಿ.ಮೀ ಇದ್ದು ಪ್ರಸ್ತುತ 12.2 ಮಿ.ಮೀ ಮಾತ್ರ ಮಳೆಯಾಗಿದ್ದು ಶೇ.80ರಷ್ಟು ಕೊರತೆ ಆಗಿದೆ. ಭತ್ತದ ಸಸಿಮಡಿ ಸಿದ್ಧತೆ ಹಾಗೂ ನಾಟಿ ಕಾರ್ಯಕ್ಕೆ ಮಳೆ ಕೊರತೆಯಿಂದ ಹಿನ್ನಡೆ ಆಗಿರುತ್ತದೆ. ನೈಋತ್ಯ ಮುಂಗಾರು ಇದೀಗ ಕೇರಳ ಪ್ರವೇಶಿಸಿದ್ದು, ಮುಂದಿ ನ ಎರಡ್ಮೂರು ದಿನಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರವೇಶಿಸುವ ಸಾಧ್ಯತೆಯಿದ್ದು, ಮುಂಗಾರಿನ ಪ್ರವೇಶದ ನಂತರ ಕೃಷಿ ಚಟುವಟಿಕೆಗಳು ಬಿರುಸುಗೊಳ್ಳುವ ಸಾಧ್ಯತೆ ಇರುತ್ತದೆ. ಈ ಬಾರಿ ವಾಡಿಕೆ ಮಳೆ ಆಗಲಿದೆಯೆಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಿತ್ತನೆ ಬೀಜ ವಿತರಣೆ: ತಾಲೂಕಿನ ರೈತ ಸಂಪರ್ಕ ಕೇಂದ್ರಗಳಿಗೆ (ಕಸಬಾ, ಬೆಳಗೋಡು, ಹಾನುಬಾಳು, ಹೆತ್ತೂರು, ಯಸಳೂರು) ಈ ಸಾಲಿನಲ್ಲಿ ಒಟ್ಟು 1328.25 ಕ್ವಿಂಟ ಲ್‌ ಭತ್ತದ ಬಿತ್ತನೆ ಬೀಜ (ಇಂಟಾನ್‌, ತುಂಗಾ ತಳಿ) ಸರಬರಾಜು ಆಗಿದ್ದು, 973.25 ಕ್ವಿಂಟ ಲ್‌ ಬಿತ್ತನೆ ಬೀಜವನ್ನು ರೈತರಿಗೆ ಸಹಾಯಧನ ದರದಲ್ಲಿ ವಿತರಣೆ ಮಾಡಲಾಗಿರುತ್ತದೆ. ಪ್ರಸ್ತುತ 355 ಕ್ವಿಂಟಲ್‌ ಬಿತ್ತನೆ ಬೀಜ ವಿವಿಧ ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಲಭ್ಯವಿದ್ದು, ಬಿತ್ತನೆ ಬೀಜಕ್ಕೆ ಯಾವುದೇ ಕೊರತೆ ಇಲ್ಲ ಎಂದು ತಾಲೂಕು ಆಡ ಳಿತದ ಮೂಲ ಗಳಿಂದ ತಿಳಿದು ಬಂದಿದೆ.

ರಸಗೊಬ್ಬರ ಪೂರೈಕೆ: ತಾಲೂಕಿಗೆ ಈ ಮುಂಗಾರು ಹಂಗಾಮಿನಲ್ಲಿ ಸುಮಾರು 5121 ಮೆಟ್ರಿಕ್‌ ಟನ್‌ ನಷ್ಟು (ಯೂರಿಯ, ಪೋಟಾಶಿಯಂ, ಡಿಎಪಿ, ಕಾಂಪ್ಲೆಕ್ಸ್‌ ) ರಸಗೊಬ್ಬರ ಸರಬರಾಜು ಆಗಿದ್ದು, 2000 ಮೆಟ್ರಿಕ್‌ ಟನ್‌ ರಸಗೊಬ್ಬರ ರೈತರಿಗೆ ವಿತರಣೆ ಯಾಗಿರುತ್ತದೆ. ಪ್ರಸ್ತುತ ಖಾಸಗಿ ಮಾರಾಟಗಾರರ ಬಳಿ 2121 ಟನ್‌ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಕೇಂದ್ರ ಗಳಲ್ಲಿಗಳಲ್ಲಿ 1000 ಟನ್‌ ರಸಗೊಬ್ಬರ ದಾಸ್ತಾನು ಲಭ್ಯವಿದೆ. ಕಾಂಪ್ಲೆಕ್ಸ್‌ ರಸಗೊಬ್ಬರ ಗಳನ್ನು ಡಿಎಪಿ ಮತ್ತು ಎಂಒಪಿ ರಸಗೊಬ್ಬರಗಳ ಬದಲಾಗಿ ಬಳಸಲು ಸಹಾಯಕ ಕೃಷಿ ನಿರ್ದೇಶಕರು, ರೈತರಲ್ಲಿ ಮನವಿ ಮಾಡಿದ್ದಾರೆ.

ತಾಲೂಕಿನಲ್ಲಿ ರೈತರಿಗೆ ಯಾವುದೆ ಗೊಂದಲವಿಲ್ಲದಂತೆ ಭತ್ತದ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿದೆ. ತಾಲೂಕಿನಲ್ಲಿ ಬೆಳೆಯುವ ಭತ್ತದ ಬೆಳಗೆ ಮಾತ್ರವಲ್ಲದೆ ಕಾಫಿ, ಮೆಣಸು, ಏಲಕ್ಕಿ ಸೇರಿದಂತೆ ಇತರ ಬೆಳೆಗಳಿಗೂ ಸಹ ಯಾವುದೆ ರೀತಿಯಲ್ಲಿ ಕೊರತೆ ಇಲ್ಲದಂತೆ ರಸಗೊಬ್ಬರ ದಾಸ್ತನಿರಿಸಲಾಗಿದೆ. ಚೆಲುವರಂಗಪ್ಪ, ಸಹಾಯಕ ಕೃಷಿ ನಿರ್ದೇಶಕರು

ತಾಲೂಕಿನಲ್ಲಿ ಯಾರಾದರು ರೈತರಿಗೆ ಭತ್ತದ ಬಿತ್ತನೆ ಬೀಜ ಅಥವಾ ರಸಗೊಬ್ಬರ ಕೊರತೆ ಕಂಡು ಬಂದರೆ ನೇರವಾಗಿ ನನ್ನನ್ನು ಸಂಪರ್ಕ ಮಾಡಲಿ, ರೈತರು ಆತಂಕಕ್ಕೆ ಒಳಗಾಗುವುದು ಬೇಡ. ● ಸಿಮೆಂಟ್‌ ಮಂಜು, ಸಕಲೇಶಪುರ ಶಾಸಕ

ಮಲೆನಾಡಿನಲ್ಲಿ ತುಂಗಾ ತಳಿಯ ಭತ್ತವನ್ನು ಬೆಳೆಯಲು ಇತ್ತೀಚಿನ ದಿನಗಳಲ್ಲಿ ಆದ್ಯತೆ ನೀಡಲಾಗುತ್ತಿದೆ. ಏಕೆಂದರೆ ತುಂಗಾ ತಳಿಯು ರೋಗದಿಂದ ಮುಕ್ತವಾಗಿದ್ದು ಎಕರೆಗೆ 20 ರಿಂದ 25 ಕ್ವಿಂಟಲ್‌ ಭತ್ತ ಬೆಳೆಯಬಹುದಾಗಿದೆ. 25 ಕೆ.ಜಿ.ಯ ತುಂಗಾ ಬಿತ್ತನೆ ಬೀಜಕ್ಕೆ ಸೊಸೈಟಿಗಳಲ್ಲಿ 750ರೂ.ಗೆ ದೊರಕುತ್ತಿದ್ದು ಮಾರುಕಟ್ಟೆಯಲ್ಲಿ 2000 ರೂ.ದರವಿದೆ. ವಾಡಿಕೆಯಂತೆ ಜೂನ್‌ 10ರ ಒಳಗೆ ಭತ್ತದ ಸಸಿ ಮಡುವುಗಳನ್ನು ನಾಟಿ ಮಾಡಬೇಕಿತ್ತು. ಆದರೆ, ಮಳೆಯಿಲ್ಲದೆ ಕಾರಣ ಸಸಿ ಮಡುವುಗಳನ್ನು ನಾಟಿ ಮಾಡುವುದು ವಿಳಂಬವಾಗುತ್ತಿದೆ. ಇದರಿಂದ ಇಳುವರಿ ಕಡಿಮೆಯಾಗುವ ಸಾಧ್ಯತೆಯಿದೆ. ಲೋಹಿತ್‌ ಕೌಡಹಳ್ಳಿ, ಭತ್ತದ ಬೆಳೆಗಾರರ

ಸುಧೀರ್‌ ಎಸ್‌.ಎಲ್‌

ಟಾಪ್ ನ್ಯೂಸ್

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.