ಮೈನವಿರೇಳಿಸಿದ ರೋಚಕ ಎತಿನಗಾಡಿಗಳ ಓಟ


Team Udayavani, Dec 22, 2021, 3:16 PM IST

ೆತ್ತಿನ ಓಟ

ಜಾವಗಲ್‌: ಸುಮಾರು 60 ಅಡಿಗಳ ಎರಡು ಟ್ರ್ಯಾಕ್‌, 72 ಎತ್ತಿನಗಾಡಿ, ಗೆಲ್ಲಲೇಬೇಕೆಂದು ಹಠಕ್ಕೆ ಬಿದ್ದವರ ಹುಮ್ಮಸ್ಸು, ನಿರೀಕ್ಷೆಗೂ ಮೀರಿದ ಜನ, ಎಲ್ಲಿ ನೋಡಿದರೂ ಶಿಳ್ಳೆ ಚಪ್ಪಾಳೆ-ಕೂಗಾಟ…. ಇದೆಲ್ಲಾ ಕಂಡು ಬಂದಿದ್ದು ಅರಸೀಕೆರೆ ತಾಲೂಕು ಜಾವಗಲ್‌ ಸಮೀಪದ ಕೆಂಪಗೌಡನಹಳ್ಳಿಯಲ್ಲಿ. ಇಲ್ಲಿ ಹನುಮ ಜಯಂತಿ ಅಂಗವಾಗಿ ಏರ್ಪಡಿಸಿದ್ದ ಜೋಡಿ ಎತ್ತಿನಗಾಡಿ ಸ್ಪರ್ಧೆ ರೋಚಕವಾಗಿದ್ದು, ಗ್ರಾಮೀಣ ಸೊಗಡಿನ ಈ ಸ್ಪರ್ಧೆ ಜನರನ್ನು ಮನಸೂರೆಗೊಳಿಸಿತು.

ಶಿಳ್ಳೆ-ಚಪ್ಪಾಳೆ: ಕೆಂಪಗೌಡನಹಳ್ಳಿಯ ಶ್ರೀ ವೀರಾಂಜನೇಯ ಸೇವಾ ಸಮಿತಿ ಪ್ರಥಮ ಬಾರಿಗೆ ಭಾನುವಾರ ಏರ್ಪಡಿಸಿದ್ದ ಈ ಸ್ಪರ್ಧೆಯಲ್ಲಿ ವಿವಿಧ ಜಿಲ್ಲೆಗಳಿಂದ 72 ಎತ್ತಿನಗಾಡಿಗಳು ಪಾಲ್ಗೊಂಡಿದ್ದವು. 3000 ರೂ. ಪ್ರವೇಶ ಶುಲ್ಕವನ್ನು ಪಾವತಿಸಿ ಎತ್ತಿನಗಾಡಿಗಳ ಓಟದಲ್ಲಿ ಪಾಲ್ಗೊಂಡಿದ್ದವರು ಬಹುಮಾನ ಗೆಲ್ಲಲೇಬೇಕೆಂಬ ಹುಮ್ಮಸ್ಸಿನಿಂದ ಗಾಡಿಗಳನ್ನು ಓಡಿಸುತ್ತಿದ್ದುದು, ಅವರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶಿಳ್ಳೆ, ಕೂಗಾಟಗಳು ರಂಜನೀಯವಾಗಿದ್ದವು.

ನಿರೀಕ್ಷೆಗೂ ಮೀರಿದ ಜನ: ನಿರೀಕ್ಷೆಗೂ ಮೀರಿ ಬಂದಿದ್ದ ಪ್ರವೇಶದಿಂದಾಗಿ ಸ್ಥಳಾವಕಾಶದ ಕೊರತೆ ಇದ್ದರೂ ಕಾರ್ಯಕ್ರಮ ಸಂಘಟಕರು ಸ್ಪರ್ಧೆಗೆ ಬಂದಿದ್ದ ಎತ್ತಿನಗಾಡಿಗಳ ನಿರ್ವಹಿಸಲು ಪರದಾಡಿದರು. ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಎಚ್ಚರ ವಹಿಸಿ ಸ್ಪರ್ಧೆ ನಿರ್ವಹಿಸಿದರು. ಸುಮಾರು 60 ಅಡಿಗಳ ಎರಡು ಟ್ರ್ಯಾಕ್‌ಗಳಲ್ಲಿ ಎತ್ತಿನಗಾಡಿಗಳನ್ನು ಓಡಿಸಲು ವ್ಯವಸ್ಥೆ ಮಾಡಿದ್ದರು. ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಎತ್ತಿನಗಾಡಿಗಳು ಒಂದೂವರೆಯಿಂದ 2 ನಿಮಿಷದೊಳಗೆ ಸುಮಾರು 300 ಮೀಟರ್‌ ಗುರಿ ಮುಟ್ಟಿದವು.

ಒಂದೂವರೆ ನಿಮಿ ಷದೊಳಗೆ ಗುರಿ ಮುಟ್ಟಿದ ಎತ್ತಿನಗಾಡಿಗಳನ್ನು ಕ್ರಮ ವಾಗಿ ಬಹುಮಾನಕ್ಕೆ ಆಯ್ಕೆ ಮಾಡಲಾಯಿತು ಎಂದು ಸ್ಪರ್ಧೆಯ ಸಂಘಟಕರು ಮಾಹಿತಿ ನೀಡಿದರು. ವಿಶೇಷವಾದ ಎತ್ತಿನಗಾಡಿ ಸ್ಪರ್ಧೆ ನೋಡಲು ನೆರೆಹೊರೆಯ ಗ್ರಾಮಗಳಿಂದ ಸಾವಿರಾರು ಜನ ಸೇರಿದ್ದರು. ಸ್ಪರ್ಧೆ ನಡೆಯುವ ಸಮೀಪದಲ್ಲಿ ತಿಂಡಿ ತಿನಿಸುಗಳ ಅಂಗಡಿಗಳೂ ತೆರೆದಿದ್ದರಿಂದ ಜಾತ್ರೆಯ ವಾತಾವರಣ ನಿರ್ಮಾಣವಾಗಿತ್ತು.

ಬೀರೂರಿಗೆ ಪ್ರಥಮ ಸ್ಥಾನ

ಎತ್ತಿನಗಾಡಿ ಸ್ಪರ್ಧೆಯಲ್ಲಿ ಮೊದಲ ಬಹುಮಾನ ಪಡೆದ ಬೀರೂರಿನ ಎತ್ತಿನಗಾಡಿಗೆ 50 ಸಾವಿರ ರೂ.ನಗದು, 2ನೇ ಬಹುಮಾನ ಚಿಕ್ಕಮಗಳೂರು ತಾಲೂಕಿನ ಬೆಳವಾಡಿ ಗ್ರಾಮದ ಎತ್ತಿನಗಾಡಿಗೆ 40 ಸಾವಿರ ರೂ., ಕೆಂಪಗೌಡನಹಳ್ಳಿ ಗ್ರಾಮದ ಎತ್ತಿನಗಾಡಿಗೆ 3ನೇ ಬಹುಮಾನ 30 ಸಾವಿರ ರೂ. ಮೈಸೂರು ಜಿಲ್ಲೆಯ ಎತ್ತಿನ ಗಾಡಿಗೆ 4ನೇ ಬಹುಮಾನ 20 ಸಾವಿರ ರೂ. ಮತ್ತು ಟ್ರೋμ ವಿತರಿಸಲಾಯಿತು.

7 ಸುತ್ತಿನ ಬೈಕ್‌ ರೇಸ್‌ ಸ್ಪರ್ಧೆ

ಹಾಸನ: ನಗರದ ಹೊರ ವಲಯ ಬೇಲೂರು ರಸ್ತೆ ಹೂವನಹಳ್ಳಿಯ ಬಳಿ ಏರ್ಪಡಿಸಿದ್ದ ಡರ್ಟ್‌ ಬೈಕ್‌ ರೇಸ್‌ ಮೈನವಿರೇಳಿಸುವಂತಿತ್ತು. ಜಮೀರ್‌ ಅಹ ಮದ್‌ ಅಭಿಮಾನಿಗಳ ಬಳಗ ಹಮ್ಮಿಕೊಂಡಿದ್ದ ಡರ್ಟ್‌ ಬೈಕ್‌ ರೇಸ್‌ನಲ್ಲಿ ರಾಜ್ಯದ ಹಾಸನ, ಮಡಿ ಕೇರಿ ಸೇರಿ ಹಲವು ಜಿಲ್ಲೆಗಳ ಬೈಕ್‌ ರೈಡರ್‌ಗಳಷ್ಟೇ ಅಲ್ಲದೆ ಕೇರಳ, ತಮಿಳುನಾಡು ರಾಜ್ಯಗಳಿಂದಲೂ ಸ್ಪರ್ಧಿಗಳು ಆಗಮಿಸಿದ್ದರು. 40 ಕ್ಕೂ ಹೆಚ್ಚು 40 ಕ್ಕೂ ಬೈಕ್‌ ರೈಡ್ಸ್‌ ಸ್ಪರ್ಧೆಯಲ್ಲಿ ಭಾಗಿಯಾಗಿದ್ದರು.

7 ಸುತ್ತಿ ನ ಓಟದಲ್ಲಿ ಪ್ರಥಮ ಬಹುಮಾನವಾಗಿ 30 ಸಾವಿರ ರೂ. ಘೋಷಿಸಲಾಗಿತ್ತು. ಬೈಕ್‌ಗಳ ಶಬ್ಧ, ದೂಳೆಬ್ಬಿಸಿ ಬೈಕ್‌ ಸಾಗುವ ದೃಶ್ಯಗಳು ಮೈನಡುಗಿಸುವಂತಿತ್ತು. ಮೈನವೀರೇಳಿಸುವಂಥ ವೇಗದಲ್ಲಿ ಸಾಗುತ್ತಿದ್ದ ಬೈಕ್‌ ಸವಾರರು ಜಟಾಪಟಿಗೆ ಬಿದ್ದಿದ್ದರೆ,ಅತ್ತ ನೋಡು ಗರು ಈ ಬೈಕ್‌ ರೇಸ್‌ ನೋಡಿ ಶಿಳ್ಳೆ, ಚಪ್ಪಾಳೆ ತಟ್ಟಿ ಸಂಭ್ರಮಿಸಿದರು. ಯುವಕರು ರಸ್ತೆಯಲ್ಲಿ ವೇಗ ವಾಗಿ ಬೈಕ್‌ ಓಡಿಸಿ ಏನೇನೋ ಅವಾಂತರ ಮಾಡಿ ಕೊಳ್ಳುವುದನ್ನು ತಪ್ಪಿಸಿ ಸುರಕ್ಷಿತವಾಗಿ ಬೈಕ್‌ ರೇಸ್‌ ಅನುಭವಿಸಲೆಂದು ಈ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಮಹಮ್ಮದ್‌ ಅಲಿ ಹೇಳಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.