ಆಲೂಗಡ್ಡೆ ಮಾರಾಟ ಚುರುಕು, ಬಿತ್ತನೆಯೂ ಆರಂಭ


Team Udayavani, May 31, 2019, 3:00 AM IST

aloogade

ಹಾಸನ: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮಳೆಯಾಗುತ್ತಿರುವುದರಿಂದ ಆಲೂಗಡ್ಡೆ ಬಿತ್ತನೆ ಆರಂಭವಾಗಿದ್ದು, ಹಾಸನದ ಆಲೂಗಡ್ಡೆ ಮಾರುಕಟ್ಟೆಯಲ್ಲೂ ಬಿತ್ತನೆ ಆಲೂಗಡ್ಡೆ ಮಾರಾಟದ ವಹಿವಾಟು ಚುಕುಕಾಗಿದೆ.

ಗುರುವಾರ ಮಾರುಕಟ್ಟೆಯಲ್ಲಿ 100 ಲಾರಿ ಲೋಡ್‌ಗೂ ಹೆಚ್ಚು ಆಲೂಗಡ್ಡೆ ಮಾರಾಟವಾಗಿದೆ. ಆಲೂಗಡ್ಡೆ ಬೇಡಿಕೆ ಬಂದಿದ್ದರಿಂದ ದರವೂ ತುಸು ಏರಿದ್ದು, ಗುರುವಾರ ಕ್ವಿಂಟಲ್‌ ಬಿತ್ತನೆ ಆಲೂಗಡ್ಡೆ 1,300 ರಿಂದ 1,400 ರೂ. ದರದಲ್ಲಿ ಮಾರಾಟವಾಯಿತು.

ಚಿಕ್ಕಮಗಳೂರು ರೈತರಿಂದ ಖರೀದಿ: ಚಿಕ್ಕಮಗಳೂರು ತಾಲೂಕಿನ ರೈತರು ಗುರುವಾರ ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆ ಆಲೂಗಡ್ಡೆಯನ್ನು ಖರೀದಿಸಿದರು. ಬೇಡಿಕೆ ಹೆಚ್ಚುತ್ತಿರುವುದರಿಂದ ವರ್ತಕರು ಆಲೂಗಡ್ಡೆಯನ್ನು ಶೀತಲಗೃಹಗಳಿಂದ ಎಪಿಎಂಸಿ ಪ್ರಾಂಗಣಕ್ಕೆ ತರಿಸಿಕೊಳ್ಳುತ್ತಿದ್ದಾರೆ.

ಹಾಸನದ ಎಪಿಎಂಸಿ ಪ್ರಾಂಗಣದಲ್ಲಿ ಮೇ16 ರಿಂದ ಬಿತ್ತನೆ ಲೂಗಡ್ಡೆ ಮಾರಾಟ ಆರಂಭವಾಗಿದೆ. ಆದರೆ ಮಳೆ ಇಲ್ಲದಿದ್ದರಿಂದ ಎರಡು ವಾರಗಳಿಂದಲೂ ರೈತರು ಆಲೂಗಡ್ಡೆ ಖರೀದಿಗೆ ಮುಂದಾಗಿರಲಿಲ್ಲ. ಆದರೆ ನಾಲ್ಕೈದು ದಿನಗಳಿಂದ ಜಿಲ್ಲೆಯಲ್ಲಿ ಮಳೆಯಾಗುತ್ತಿದೆ. ಆದರೆ ಭೂಮಿ ತಂಪಾಗುವಷ್ಟು ಹಾಗೂ ಆಲೂಗಡ್ಡೆ ಬಿತ್ತನೆ ಮಾಡುವಷ್ಟು ಹಿತಕರವಾದ ಮಳೆ ಆಗಿಲ್ಲ.

ಹಾಗಾಗಿ ಕೆಲ ರೈತರು ಬಿತ್ತನೆ ಆಲೂಗಡ್ಡೆ ಖರೀದಿಸಿದರೂ ಬಿತ್ತನೆಗೆ ಮುಂದಾಗಿಲ್ಲ. ಆದರೆ ಪಂಪ್‌ಸೆಟ್‌ಗಳನ್ನು ಹೊಂದಿರುವ ರೈತರು ಆಲೂಗಡ್ಡೆ ಬಿತ್ತನೆ ಆರಂಭಿಸಿದ್ದು, ಆ ರೈತರನ್ನು ಕಂಡು ಮಳೆ ಆಶ್ರಯದ ಹಾಸನ ತಾಲೂಕಿನ ಕೆಲ ರೈತರೂ ಭೂಮಿ ತಂಪಾಗದಿದ್ದರೂ ಆಲೂಗಡ್ಡೆ ಬಿತ್ತನೆ ಆರಂಭಿಸಿದ್ದಾರೆ.

ಮಾಹಿತಿ ಮಳಿಗೆಗೆ ರೈತರ ಭೇಟಿ: ಆಲೂಗಡ್ಡೆ ಖರೀದಿ ಚುರುಕಾಗುತ್ತಿದ್ದಂತೆ ತೋಟಗಾರಿಕೆ ಇಲಾಖೆ ಎಪಿಎಂಸಿ ಪ್ರಾಂಗಣದಲ್ಲಿ ತೆರೆದಿರುವ ಆಲೂಗಡ್ಡೆ ತಾಂತ್ರಿಕ ಮಾಹಿತಿ ಮಳಿಗೆಗಳಿಗೂ ರೈತರು ಭೇಟಿ ನೀಡುತ್ತಿದ್ದು, ಆಲೂಗಡ್ಡೆಗೆ ಸಿಗುವ ಸಬ್ಸಿಡಿ, ಬೀಜೋಪಚಾರದ ಹಾಗೂ ಸಸ್ಯಸಂರಕ್ಷಣಾ ಔಷಧಿಗಳನ್ನೂ ರಿಯಾಯ್ತಿ ದರದಲ್ಲಿ ಖರೀದಿಸಲು ಮುಂದಾಗುತ್ತಿದ್ದಾರೆ.

ಗುರುವಾರ ವ್ಯಾಪಕ ಮಳೆ: ಜಿಲ್ಲೆಯ ವಿವಿಧೆಡೆ ಗುರುವಾರ ವ್ಯಾಪಕ ಮಳೆಯಾಗಿದೆ. ಹಾಸನ ನಗರದಲ್ಲಿಯೂ ಮಧ್ಯಾಹ್ನ 3.45 ರಿಂದ 4.10 ಗಂಟೆ ವರೆಗೂ ಗುಡುಗು – ಸಿಡಿಲು ಸಹಿತ ಮಳೆ ಸುರಿಯಿತು. ಹಾಸನ ತಾಲೂಕಿನಲ್ಲಿ ವ್ಯಾಪಕವಾಗಿ ಮಳೆಯಾಗಿದೆೆ. ಮಳೆಯಿಂದ ವಾತಾವರಣ ತಂಪಾಗಿದ್ದು, ಆಲೂಗಡ್ಡೆ ಬಿತ್ತನೆಗೆ ಪೂರಕವಾಗಿದೆ. ಹಾಗಾಗಿ ರೈತರು ಆಲೂಗಡ್ಡೆ ಖರೀದಿಗೆ ಮುಂದಾಗುವ ನಿರೀಕ್ಷೆಯಿದ್ದು ಶುಕ್ರವಾರದಿಂದ ಆಲೂಗಡ್ಡೆ ಮಾರುಕಟ್ಟೆಯಲ್ಲಿ ವಹಿವಾಟು ಹೆಚ್ಚುವುದೆಂದು ವರ್ತಕರು ನಿರೀಕ್ಷಿಸಿದ್ದಾರೆ.

1.25 ಲಕ್ಷ ಕ್ವಿಂಟಲ್‌ ಆಲೂಗಡ್ಡೆ ಮಾರಾಟ: ಹಾಸನ ಎಪಿಎಂಸಿ ಮಾರುಕಟ್ಟೆಯಲ್ಲಿ ಮೇ.16 ರಿಂದ ಬಿತ್ತನೆ ಆಲೂಗಡ್ಡೆ ಮಾರಾಟ ಆರಂಭವಾದಂದಿನಿಂದ ಈ ವರೆಗೆ 1.25 ಲಕ್ಷ ಕ್ವಿಂಟಲ್‌ ಆಲೂಗಡ್ಡೆ ಮಾರಾಟವಾಗಿದ್ದು, ಅ ಪೈಕಿ 86 ಸಾವಿರ ಕ್ವಿಂಟಲ್‌ ಆಲೂಗಡ್ಡೆಯನ್ನು ಹಾಸನ ಜಿಲ್ಲೆಯ ರೈತರು ಖರೀದಿಸಿದ್ದಾರೆ ಎಂದು ಹಾಸನ ಎಪಿಎಂಸಿ ಮಾಹಿತಿ ನೀಡಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಬಿತ್ತನೆ ಆಲೂಗಡ್ಡೆ ಮಾರಾಟ ಕುಸಿದಿದೆ. ಆದರೆ ಮಳೆ ಪ್ರಮಾಣ ಸುಧಾರಿಸಿದರೆ ಹಾಗೂ ಜೂ.15 ರ ವರೆಗೂ ಆಲೂಗಡ್ಡೆ ಬಿತ್ತನೆಗೆ ಅವಕಾಶವಿರುವುದರಿಂದ ಕಾದು ನೋಡಬೇಕಾಗಿದೆ ಎಂದೂ ಎಪಿಎಂಸಿ ಅಧಿಕಾರಿಗಳು ತಿಳಿಸಿದ್ದಾರೆ.

* ಎನ್‌. ನಂಜುಂಡೇಗೌಡ

ಟಾಪ್ ನ್ಯೂಸ್

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.