ಎಸ್ಸೆಸ್ಸೆಲ್ಸಿ ಪರೀಕ್ಷೆ: ಸುರಕ್ಷತಾ ಕ್ರಮ ಅನುಸರಿಸಿ
Team Udayavani, Jun 21, 2020, 6:55 AM IST
ಸಕಲೇಶಪುರ: ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆ ತಾಲೂಕು ಆಡಳಿತದಿಂದ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಚ್.ಕೆ. ಕುಮಾರಸ್ವಾಮಿ ಅವರು ಹೇಳಿದರು. ಪಟ್ಟಣದ ಸಂತಜೋಸೆಫರ ಶಾಲಾ ಆವರಣದಲ್ಲಿ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಆಕಸ್ಮಿಕವಾಗಿ ಅನಿವಾರರ್ಯ ಕಾರಣ ಗಳಿಂದ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗು ವುದು ತಡವಾದರೆ ಅಂತಹ ವಿದ್ಯಾರ್ಥಿಗಳಿಗೆ ಆತ್ಮ ಸ್ಥೆರ್ಯ ತುಂಬಿ ಪರೀಕ್ಷೆಯನ್ನು ಬರೆಸಬೇಕು ಎಂದು ಹೇಳಿದರು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷೆ ಮುಗಿಯುವರೆಗೂ ನಾನು ಕುಡಿಯುವ ನೀರಿನ ವ್ಯವಸ್ಥೆಯನ್ನು ವೈಯುಕ್ತಿಕವಾಗಿ ಮಾಡು ತ್ತಿದ್ದೇನೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿ ಗಳಿಗಾಗಿ ಸ್ಕೌಟ್ ಗೈಡ್ಸ್ ಸಂಸ್ಥೆ ಸುಮಾರು 1,500 ಮಾಸ್ಕ್ಗಳನ್ನು ನೀಡುತ್ತಿರುವುದು ಶ್ಲಾಘನೀಯ ಎಂದರು. ಮುಂದಿನ ದಿನಗಳಲ್ಲಿ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆ ಸ್ವಂತ ಕಟ್ಟಡ ಕಟ್ಟಿಕೊಳ್ಳಲು ನಾನು ಅನುದಾನ ಕೊಡುತ್ತೇನೆ ಎಂದು ಹೇಳಿದರು.
ಜಿಪಂ ಸದಸ್ಯೆ ಚಂಚಲಾ ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಗಿರೀಶ್ ನಂದನ್, ತಹಶೀಲ್ದಾರ್ ಮಂಜುನಾಥ್, ಬಿಇಒ ಶಿವಾನಂದ್, ರೋಟರಿ ಟ್ರಸ್ಟ್ ಮಾಜಿ ಅಧ್ಯಕ್ಷ ಎಂ.ಎಸ್.ವಿಜಯ್ ಶಂಕರ್, ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆ ಜಿಲ್ಲಾ ಆಯುಕ್ತ ವೀರಭದ್ರಪ್ಪ, ತಾಲೂಕು ಅಧ್ಯಕ್ಷ ಆರ್.ಎನ್ ಕೃಷ್ಣಮೂರ್ತಿ, ಕಾರ್ಯದರ್ಶಿ ಕೀರ್ತಿ ಕುಮಾರ್, ಸಂತ ಜೋಸೆಫರ ಶಾಲೆ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಆಶಾ ಇದ್ದರು.