ಅಕ್ರಮ ಲೇಔಟ್‌ ತಡೆಗಟ್ಟಿ


Team Udayavani, Mar 30, 2021, 5:08 PM IST

ಅಕ್ರಮ ಲೇಔಟ್‌ ತಡೆಗಟ್ಟಿ

ಹಾಸನ: ನಗರದ ಸುತ್ತಮುತ್ತ ಅಕ್ರಮ ಲೇಔಟ್‌ಗಳು ನಿರ್ಮಾಣವಾಗುತ್ತಿದ್ದು, ಜಿಲ್ಲಾಧಿಕಾರಿಯವರು ಪರಿಶೀಲಿಸಿ ಕ್ರಮ ಕೈಗೊಳ್ಳ  ಬೇಕು ಎಂದು ಜೆಡಿಎಸ್‌ ಮುಖಂಡ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಒತ್ತಾಯಿಸಿದರು.

ಸಿಎಂ, ಸಚಿವರ ಗಮನಕ್ಕೆ ತರುವೆ: ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭೂಮಾಲಿಕರಿಗೆ ಹೆದರಿಸಿ ಜಮೀನು ಖರೀದಿಸಿ ಖಾಸಗಿ ವಸತಿ ಬಡಾವಣೆಗಳು ನಿರ್ಮಾಣವಾಗುತ್ತಿವೆ. ನಗರದ ಹೊರವಲಯ ಬಿ.ಎಂ. ರಸ್ತೆಯ ಬದಿ ಬುಸ್ತೇನಹಳ್ಳಿ ಬಳಿ ಖಾಸಗಿಬಡಾವಣೆ ನಿರ್ಮಾಣದಲ್ಲಿ ಕಾನೂನು ಉಲ್ಲಂಘಿಸಲಾಗಿದೆ. ರಾಜಕಾಲುವೆ ಮುಚ್ಚಿ , ಹೈ ಟೆನ್ಷನ್‌ ವಿದ್ಯುತ್‌ ಮಾರ್ಗ ಇರುವಪ್ರದೇಶದಲ್ಲಿ ನಿವೇಶಗಳನ್ನು ನಿರ್ಮಿಸಲಾಗುತ್ತಿದೆ ಎಂದು ಹಲವು ಸಂಘ-ಸಂಸ್ಥೆಗಳು ನನಗೆ ಮಾಹಿತಿ ನೀಡಿವೆ. ಈ ಬಗ್ಗೆ ಪರಿಶೀಲಿಸಿ,ದಾಖಲೆ ಸಂಗ್ರಹಿಸಿ ನಾನು ಮುಖ್ಯಮಂತ್ರಿ ಯವರು, ನಗರಾಭಿವೃದ್ಧಿ , ವಸತಿ ಸಚಿವರಗಮನಕ್ಕೆ ತಂದು ತನಿಖೆ ನಡೆಸಲು ಕ್ರಮ ಕೈಗೊಳ್ಳುವೆ. ಅವರು ಸ್ಪಂದಿಸದಿದ್ದರೆ ಕಾನೂನುಹೋರಾಟದ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.

ಬುಸ್ತೇನಹಳ್ಳಿ ಬಳಿ ನಿರ್ಮಾಣವಾಗುತ್ತಿರುವ ಬಡಾವಣೆಯಲ್ಲಿ ನಿಯಮ ಉಲ್ಲಂ ಸಿರುವುದು ಗೊತ್ತಿದ್ದರೂ ಕೆಲ ಅಧಿಕಾರಿಗಳುಪರೋಕ್ಷ ಸಹಕಾರ ನೀಡುತ್ತಿದ್ದಾರೆ. ನಗರ ಯೋಜನಾ ಪ್ರಾಧಿಕಾರ, ಕಂದಾಯ ಇಲಾಖೆ,ಹಾಸನ ನಗರಾಭಿವೃದ್ಧಿ ಇಲಾಖೆ,ತೋಟಗಾರಿಕೆ, ಅರಣ್ಯ ಇಲಾಖೆ, ಕೆಪಿಟಿಸಿಎಲ್‌ಅಧಿಕಾರಿಗಳೂ ಶಾಮೀಲಾಗಿದ್ದಾರೆ ಎಂದು ರೇವಣ್ಣ ದೂರಿದರು.

ನಿವೇಶನ ನೀಡಿ ಅನುಮತಿ: ಖಾಸಗಿಬಡಾವಣೆಗಳ ನಿರ್ಮಾಣದಲ್ಲಿ ನಿರ್ದಿಷ್ಟಅಳತೆಯ ರಸ್ತೆ, ಒಳ ಚರಂಡಿ ವ್ಯವಸ್ಥೆಮಾಡಬೇಕು. ಉದ್ಯಾನವನ, ಶಾಲೆ, ಕಾಲೇಜುಸೇರಿ ಸಾರ್ವಜನಿಕರ ಬಳಕೆಗೆ ಸ್ಥಳ ಬಿಡಬೇಕು.ಅಂದರೆ ಬಡಾವಣೆಯಲ್ಲಿ ಶೇ. 60 ಭಾಗದಲ್ಲಿನಿವೇಶನ ನಿರ್ಮಿಸಿದರೆ, ಶೇ.40 ಭಾಗವನ್ನುಸಾರ್ವಜನಿಕ ಬಳಕೆಗೆ ಮೀಸಲಿಡಬೇಕು.ಆದರೆ, ಇದ್ಯಾವುದೇ ನಿಯಮಗಳನ್ನು ಪಾಲಿಸದೆ ಪ್ರಭಾವಿಗಳಿಗೆ ಶೇ.20 ನಿವೇಶನಗಳನ್ನುಉಚಿತವಾಗಿ ನೀಡಿ ಬಡಾವಣೆಗೆ ಅನುಮತಿಪಡೆಯುವ ಪ್ರಯತ್ನ ನಡೆದಿದೆ ಎಂದೂ ಆರೋಪಿಸಿದರು.

ಲೂಟಿ ಮಾಡುತ್ತಿದ್ದಾರೆ: ನಗರಾಭಿವೃದ್ಧಿ ಪ್ರಾಧಿಕಾರಗಳು, ಕರ್ನಾಟಕ ಗೃಹ ಮಂಡಳಿಹೆಚ್ಚು ಬಡಾವಣೆ ನಿರ್ಮಿಸಿ ವಸತಿ ರಹಿತರಿಗೆನಿವೇಶನ ಹಂಚಿಕೆ ಮಾಡಬೇಕು. ಆದರೆ,ನಗರಾಭಿವೃದ್ಧಿ ಪ್ರಾಧಿಕಾರಗಳು ಮತ್ತು ಕರ್ನಾಟಕ ಗೃಹ ಮಂಡಳಿ ವಸತಿ ಬಡಾವಣೆಗಳನ್ನು ನಿರ್ಮಿಸುವುದನ್ನೇ ಮರೆತಿವೆ.ಖಾಸಗಿಯವರು ನಿಯಮ ಬದಿಗೊತ್ತಿ ವಸತಿಬಡಾವಣೆ ನಿರ್ಮಿಸಿ ಲೂಟಿ ಮಾಡುತ್ತಿದ್ದಾರೆ.ಖಾಸಗಿಯವರೇ ನಿವೇಶನ ನಿರ್ಮಿಸಿಹಂಚುವುದಾದರೆ ಗೃಹಮಂಡಳಿ, ನಗರಾಭಿ ವೃದ್ಧಿ ಪ್ರಾಧಿಕಾರಗಳನ್ನು ಸರ್ಕಾರ ಮುಚ್ಚಿ ಬಿಡಲಿ ಎಂದು ವ್ಯಂಗ್ಯವಾಡಿದರು.

ಹಾಸನ ತಾಲೂಕು ಕಟ್ಟಾಯ ಹೋಬಳಿಯಲ್ಲಿ ತಾಪಂ ಕ್ಷೇತ್ರಗಳ ಪುನರ್‌ ವಿಂಗಡಣೆಯಲ್ಲಿ ಲೋಪಗಳಾಗಿವೆ. ಈ ಬಗ್ಗೆ ಜೆಡಿಎಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.ಶಾಸಕ ಎಚ್‌.ಕೆ.ಕುಮಾರಸ್ವಾಮಿ ಸಂಬಂಧಪಟ್ಟ ಸಚಿವರು, ರಾಜ್ಯ ಚುನಾವಣಾ ಆಯೋಗದ ಗಮನಕ್ಕೂ ತಂದಿದ್ದಾರೆ. ಜಿಲ್ಲಾಧಿಕಾರಿ ಅವರು ಪರಿಶೀಲಿಸಿ ಆಗಿರುವ ಲೋಪ ಸರಿಪಡಿಸಬಹುದು ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಸರ್ಕಾರ ನಿಯಮಗಳನ್ನೇ ರದ್ದುಪಡಿಸಿದೆ :

ನಗರಾಭಿವೃದ್ಧಿ ಪ್ರಾಧಿಕಾರಗಳು ಹಾಗೂ ಕರ್ನಾಟಕ ಗೃಹ ಮಂಡಳಿ ನಿವೇಶನ ಹಂಚಿಕೆ ಮಾಡುವಾಗ ವಸತಿ ರಹಿತರಿಗೆ ನಿವೇಶನ ನೀಡಬೇಕು. ನಿವೇಶನ ಪಡೆದವರು 15 ವರ್ಷ ಪರಭಾರೆ ಮಾಡಬಾರದು. ಈಗಾಗಲೇ ಮನೆ, ನಿವೇಶನಗಳನ್ನು ಹೊಂದಿದ್ದವರು ನಿವೇಶನಗಳನ್ನು ನಗರಾಭಿವೃದ್ಧಿ ಪ್ರಾಧಿಕಾರಗಳು ಹಾಗೂ ಕರ್ನಾಟಕ ಗೃಹ ಮಂಡಳಿಯಿಂದ ಪಡೆದರೆ ಅಂತಹ ಹಂಚಿಕೆ ರದ್ದುಪಡಿಸಬೇಕು ಎಂಬ ನಿಯಮವಿತ್ತು. ಆದರೆ, ಬಿಜೆಪಿಸರ್ಕಾರ ಬಂದಾಗ ಈ ನಿಯಮಗಳನ್ನು ರದ್ದುಪಡಿಸಿರುವುದರಿಂದ ಉಳ್ಳವರೇ ನಿವೇಶನ ಪಡೆದು ಮಾರಾಟ ಮಾಡಿಕೊಂಡು ಲಾಭ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಬೇಸರಿಸಿದರು.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.