ಬೀದಿನಾಯಿಗಳ ಹಾವಳಿ: ಆತಂಕದಲಿ ಸಾರ್ವಜನಿಕರು


Team Udayavani, May 18, 2022, 4:01 PM IST

ಬೀದಿನಾಯಿಗಳ ಹಾವಳಿ: ಆತಂಕದಲಿ ಸಾರ್ವಜನಿಕರು

ಅರಸೀಕೆರೆ: ನಗರದ ಬಹುತೇಕ ವಾರ್ಡ್‌ಗಳಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವಯೋವೃದ್ಧರು, ಮಹಿಳೆಯರು, ಮಕ್ಕಳು ಹಾಗೂ ಜಾನುವಾರುಗಳು ನಗರದ ರಸ್ತೆಗಳಲ್ಲಿ ಭಯ ಮುಕ್ತವಾಗಿ ಓಡಾಡಲು ಸಾಧ್ಯವಾಗದಂತ ಪರಿಸ್ಥಿತಿ ನಿರ್ಮಾಣವಾಗಿದ್ದು, ನಗರಸಭೆ ಆಡಳಿತ ಸಾರ್ವಜನಿಕರ ಈ ಸಮಸ್ಯೆಗೆ ಅತ್ಯಂತ ತ್ವರಿತವಾಗಿ ಪರಿಹಾರ ನೀಡಲು ಮುಂದಾಗಬೇಕಾಗಿದೆ.

ನಗರದ ಬಹುತೇಕ ವಾರ್ಡುಗಳಲ್ಲಿ 10 ರಿಂದ20ಕ್ಕೂ ಹೆಚ್ಚಿನ ಬೀದಿ ನಾಯಿಗಳು ಗುಂಪು-ಗುಂಪಾಗಿ ತಿರುಗಾಡುತ್ತಿದ್ದು, ರಸ್ತೆಗಳಲ್ಲಿ ವಯೋವೃದ್ಧರು, ಮಹಿಳೆಯರು ಹಾಗೂಮಕ್ಕಳು ತಿರುಗಾಡುವ ಸಂದರ್ಭದಲ್ಲಿಬೀದಿನಾಯಿಗಳ ಗುಂಪು ದಿಢೀರ್‌ ದಾಳಿಮಾಡಲು ಮುಂದಾಗುತ್ತಿರುವುದು ಜನರಲ್ಲಿ ಭಯದ ವಾತವರಣ ನಿರ್ಮಿಸಿದೆ. ಹಾಡುಹಗಲೇವಿದ್ಯಾನಗರದ ಬಡಾವಣೆಗಳಲ್ಲಿ ನಾಯಿಗಳ ಹಿಂಡು ಮನೆ ಮುಂದಿದ್ದ ಮೇಕೆ ಮೇಲೆ ದಾಳಿ ಮಾಡಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.

ನಾಯಿಗಳ ದಿಢೀರ್‌ ದಾಳಿ: ಬೀದಿ ನಾಯಿಗಳು ರಕ್ತ ಮತ್ತು ಮಾಂಸದ ರುಚಿ ಕಂಡಿ ರುವ ಕಾರಣ ವಯೋವೃದ್ಧರು ಮತ್ತು ಮಕ್ಕಳು ಹಾಗೂ ಮಹಿಳೆಯರ ಮೇಲೆ ದಾಳಿ ನಡೆಸಲು ಮುಂದಾಗುತ್ತಿವೆ. ಇಂತಹ ಗಂಭೀರ ಸಮಸ್ಯೆ ಕೇವಲಒಂದು ವಾರ್ಡ್‌ಗೆ ಮಾತ್ರ ಸೀಮಿತವಾಗದೆನಗರದ ಬಹುತೇಕ ವಾರ್ಡ್‌ಗಳಲ್ಲಿ ಇದೇ ರೀತಿಯ ಪರಿಸ್ಥಿತಿ ಇದೆ.

ಸಮಸ್ಯೆ ಪರಿಹರಿಸಿ: ನಗರಸಭೆ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಅಧಿಕಾರಿಗಳು ಹೆಚ್ಚಿನಜವಾಬ್ದಾರಿ ವಹಿಸುವ ಮೂಲಕ ಸೂಕ್ತಕ್ರಮಕೈಗೊಂಡು ಬೀದಿ ನಾಯಿಗಳ ಹಾವಳಿಗೆಕಡಿವಾಣ ಹಾಕುವ ನಿಟ್ಟಿನಲ್ಲಿ ಪ್ರಾಣಿದಯಾ ಸಂಘದ ಪದಾಧಿಕಾರಿ ಗಳೊಂದಿಗೆ ಮಾತುಕತೆ ನಡೆಸುವ ಮೂಲಕ ಇಂತಹ ಗಂಭೀರಸಮಸ್ಯೆಗೆ ಸೂಕ್ತ ಪರಿಹಾರ ಕಲ್ಪಿಸಲು ಮುಂದಾಗಬೇಕಾಗಿದೆ. ತಪ್ಪಿದಲ್ಲಿ ಜನರ ಪ್ರತಿರೋಧ ಎದುರಿಸಬೇಕಾಗುತ್ತದೆ.

ನಗರಸಭೆ ಅಧ್ಯಕ್ಷರು ಏನಂತಾರೆ?: ನಗರಸಭೆಆಡಳಿತಕ್ಕೆ ಬೀದಿ ನಾಯಿಗಳ ಹಾವಳಿ ದಿನದಿಂದದಿನಕ್ಕೆ ತಲೆನೋವಾಗಿ ಪರಿಣಮಿಸಿದೆ. ಬೀದಿನಾಯಿಗಳನ್ನು ಸಾಯಿಸಲು ಅಥವಾ ಸ್ಥಳಾಂತರಕ್ಕೆಕಾನೂನಿನಲ್ಲಿ ಅವಕಾ ಶವಿಲ್ಲ. ಹಾಗಾಗಿ ಈ ಬೀದಿನಾಯಿಗಳಿಗೆ ಸಂತಾನಹರಣ ಚಿಕಿತ್ಸೆಗೆ ಮೂರುಬಾರಿ ಟೆಂಡರ್‌ ಕರೆಯಲಾಗಿದೆ. ಆದರೆ ಯಾರೂಟೆಂಡರ್‌ನಲ್ಲಿ ಭಾಗವಹಿಸದ ಕಾರಣ ಮೇಲಾಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿ ಅವರ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಸಮಸ್ಯೆ ಪರಿಹಾರ ಮುಖ್ಯ: ನಗರಸಭೆ ಆಡಳಿತ ಬೀದಿ ನಾಯಿಗಳನ್ನು ನಿಯಂತ್ರಿಸಲು ಸಂತಾನಹರಣ ಶಸ್ತ್ರ ಚಿಕಿತ್ಸೆಯನ್ನು ಬೀದಿನಾಯಿಗಳಿಗೆ ಮಾಡಿಸುವುದು ಅನಿವಾರ್ಯ ಮಾರ್ಗವಾಗಿದೆ. ಆದರೆ ನಾವು ಟೆಂಡರ್‌ಕರೆದಿದ್ದೇವೆ, ಯಾರು ಟೆಂಡರ್‌ ಹಾಕಿಲ್ಲ ಎನ್ನುವ ನಗರಸಭೆ ಆಡಳಿತದ ಉತ್ತರದಿಂದ ಸಮಸ್ಯೆಗೆಸೂಕ್ತ ಪರಿಹಾರ ನೀಡಲು ಸಾಧ್ಯವಿಲ್ಲ,ಪರ್ಯಾಯ ಮಾರ್ಗದ ಬಗ್ಗೆ ಅತ್ಯಂತತ್ವರಿತವಾಗಿ ಕ್ರಮಕೈಗೊಳ್ಳುವ ಮೂಲಕ ಸಮಸ್ಯೆಗೆ ಇತಿಶ್ರೀ ಹೇಳಬೇಕೆಂದು ರೈತ ಸಂಘದ ಮುಖಂಡ ಪ್ರಸನ್ನ ಕುಮಾರ್‌ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Revanna 2

BJP ಸ್ಥಳೀಯ ಮುಖಂಡರ ಅಸಹಕಾರ: ಬಿಎಸ್‌ವೈ ಬಳಿ ರಕ್ಷಣೆಗೆ ಮೊರೆಯಿಟ್ಟ ಎಚ್‌.ಡಿ.ರೇವಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.