ನರ್ಸಿಂಗ್‌ ಸೇವೆಗೆ ಪೂರಕವಾದ ಶಿಕ್ಷಣ: ಶಶಿಧರ್‌

ನರ್ಸಿಂಗ್‌ ಸೇವೆಗೆ ಪೂರಕವಾದ ಶಿಕ್ಷಣ: ಶಶಿಧರ್‌

Team Udayavani, May 26, 2019, 3:00 AM IST

nursing

ಚನ್ನರಾಯಪಟ್ಟಣ: ಸೇವೆಗೆ ಪೂರಕವಾಗಿರುವ ನರ್ಸಿಂಗ್‌ ಶಿಕ್ಷಣವನ್ನು ತಮ್ಮ ಮಕ್ಕಳಿಗೆ ಕೊಡಿಸಲು ಮುಂದಾಗಿರುವ ಪೋಷಕರಿಗೆ ಅನಂತ ಧನ್ಯವಾದಗಳು ಎಂದು ಪುರಸಭೆ ಸದಸ್ಯ ಸಿ.ಎನ್‌.ಶಶಿಧರ್‌ ತಿಳಿಸಿದರು.

ಪಟ್ಟಣದಲ್ಲಿನ ವೈದ್ಯ ಸ್ಕೂಲ್‌ ಆಫ್ ನರ್ಸಿಂಗ್‌ ಕಾಲೇಜಿನ 15ನೇ ವರ್ಷದ ವಾಷಿಕೋತ್ಸವ ಸಮಾರಂಭ, ದೀಪ ಪ್ರಜ್ವಲನ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಮಾದರಿ ಪೋಷಕರು: ಇತ್ತೀಚಿನ ದಿನಗಳಲ್ಲಿ ತಮ್ಮ ಮಕ್ಕಳಿಗೆ ಎಂಜಿನಿಯರ್‌ ಹಾಗೂ ವೈದ್ಯಕೀಯ ಶಿಕ್ಷಣ ಕೊಡಿಸಲು ಮುಂದಾಗುವ ಯುಗದಲ್ಲಿ ನರ್ಸಿಂಗ್‌ ಶಿಕ್ಷಣವನ್ನು ಮಕ್ಕಳಿಗೆ ಕೊಡಿಸುವ ಮೂಲಕ ಹಲವು ಮಂದಿ ಪೋಷಕರು ಸಮಾಜಕ್ಕೆ ಆದರ್ಶವಾಗುತ್ತಿದ್ದಾರೆ ಎಂದರು.

ಶ್ರಮ: ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಗಿಂತ ಮೊದಲು ರೋಗಿಗಳ ಶುಶ್ರೂಷೆ ಮಾಡುವುದು ನರ್ಸ್‌ಗಳು, ಯಾವುದೇ ರೋಗಿ ಆಸ್ಪತ್ರೆಗೆ ಆಗಮಿಸಿದಾಗ ಪ್ರಾಥಮಿಕ ಚಿಕಿತ್ಸೆ ನೀಡಿ ಆರೈಕೆ ಮಾಡುವುದಲ್ಲದೇ ರೋಗಿಗಳ ಪಾಲಿಗೆ ತಂದೆ, ತಾಯಿಯಾಗಿ ಅವರನ್ನು ಸಂಪೂರ್ಣ ಗುಣಮುಖ ಮಾಡುವಲ್ಲಿ ನರ್ಸ್‌ಗಳು ಶ್ರಮಿಸುತ್ತಾರೆ. ಹಾಗಾಗಿ ಇದೊಂದು ಪವಿತ್ರ ಶಿಕ್ಷಣ ಹಾಗಾಗಿ ವಿದ್ಯಾರ್ಥಿಗಳ ಬದುಕು ನಂದಾದೀಪವಾಗಿರಲಿ ಎಂದು ಶುಭಹಾರೈಸಿದರು.

ಪರಿಸರ ಕಾಳಜಿ ಅಗತ್ಯ: ವಿದ್ಯಾರ್ಥಿಗಳು ಓದಿನ ಜೊತೆಯಲ್ಲಿ ಪರಿಸರ ಕಾಳಜಿ ಹೊಂದಬೇಕು. ಗಿಡ, ಮರ ಬೆಳೆಸುವುದಲ್ಲದೆ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಬೇಕು. ಇತ್ತೀಚಿನ ದಿನಗಳಲ್ಲಿ ಭೂಮಿಯನ್ನು ಹಾಳು ಮಾಡುವವರ ಸಂಖ್ಯೆ ಹೆಚ್ಚುತ್ತಿದೆ ಮಳೆ ಕಡಿಮೆಯಾಗಿ ಎಲ್ಲೆಡೆ ನೀರಿನ ಸಮಸ್ಯೆ ತಾಂಡವಾಸುತ್ತಿದೆ ಮಿತನೀರು ಬಳಕೆಗೆ ಮುಂದಾಗಬೇಕು. ಪುರಸಭೆ ವ್ಯಾಪ್ತಿಯ ವಾರ್ಡ್‌ನಲ್ಲಿ ನೀರು ಬಳಕೆ ಬಗ್ಗೆ ಜಾಗೃತಿ ಜಾಥಾ ನಡೆಸುವಂತೆ ಸಲಹೆ ನೀಡಿದರು.

ಬೆಳ್ಳೂರು ಕ್ರಾಸಿನಲ್ಲಿರುವ ಆದಿಚುಂಚನಗಿರಿ ನರ್ಸಿಂಗ್‌ ಕಾಲೇಜಿನ ಪ್ರಾಂಶುಪಾಲ ಪ್ರೊ. ಕೆ.ಜೆ.ವಿಜಯಕುಮಾರ್‌ ಮಾತನಾಡಿ, ವೃತ್ತಿನಿರತ ಶುಶ್ರೂಷಕರು ಜಾಗರೂಕತೆಯಿಂದ ಸೇವೆ ಸಲ್ಲಿಸಬೇಕು. ವಿಜ್ಞಾನದ ಹೃದಯವಾಗಿರುವ ನರ್ಸಿಂಗ್‌ ಶಿಕ್ಷಣ ಪಡೆಯುವ ವೇಳೆ ಪುಸ್ತಕಕ್ಕೆ ಸೀಮಿತವಾಗಿದ್ದರೆ ಸಾಲದು ರೋಗಿಗಳ ಸೇವೆ ಮಾಡುವ ಮೂಲಕ ಉತ್ತನ ಶುಶ್ರೂಷಕರಾಗಿ ಹೊರಬನ್ನಿ ಎಂದು ಕಾಲೇಜಿಗೆ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳಿಗೆ ಹಾರೈಸಿದರು.

ಶುಶ್ರೂಷಕರು ಮೊದಲು ಸ್ಥಳೀಯ ಭಾಷೆಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು, ಸಂವಹನ ಮುಖ್ಯವಾಗಿರುತ್ತದೆ, ರೋಗಿಯು ಯಾವ ಭಾಷೆಯಲ್ಲಿ ಮಾತನಾಡುತ್ತಾರೆ ಅದರ ಅರಿವು ಮುಖ್ಯವಾಗಿರುತ್ತದೆ, ಹೊರ ರಾಜ್ಯ ಹಾಗೂ ದೇಶದಲ್ಲಿ ಸೇವೆ ಸಲ್ಲಿಸುವ ನರ್ಸ್‌ಗಳಿಗೆ ಆಂಗ್ಲಭಾಷೆ ತಿಳುವಳಿಕೆ ಅಗತ್ಯವಿದೆ ಎಂದು ಹೇಳಿದರು.

ಭಾರತದಲ್ಲಿ ಇಂದಿಗೂ ಸಾಂಕ್ರಾಮಿಕ ರೋಗ ಮುಕ್ತವಾಗಿಲ್ಲ ಆದರೆ ಹಲವು ದೇಶಗಳಲ್ಲಿ ಕ್ಷಯಾ, ಮಲೇರಿಯಾದಂತಹ ರೋಗಗಳು ಕಾಣುವುದಿಲ್ಲ ಅಲ್ಲಿನ ಜೀವನ ಶೈಲಿಯಿಂದ ಸಾಂಕ್ರಾಮಿಕ ರೋಗ ಮುಕ್ತ ದೇಶವಾಗಿದೆ ಭಾರತ ಇದರ ಕಡೆಗೆ ಹೆಜ್ಜೆ ಇಡಬೇಕಿದೆ ಎಂದು ತಿಳಿಸಿದರು.
ಸರ್ಕಾರಿ ಆಸ್ಪತ್ರೆ ಆರೋಗ್ಯ ಶಿಕ್ಷಣಾಧಿಕಾರಿ ಅನಿತಾ, ವೈದ್ಯ ಸ್ಕೂಲ್‌ ಆಫ್ ನರ್ಸಿಂಗ್‌ ಕಾಲೇಜಿನ ಪ್ರಾಂಶುಪಾಲ ಅರಣಕುಮಾರ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.