ಬೆಂಬಲ ಬೆಲೆ: ರಾಗಿ ಖರೀದಿ ಶುರು


Team Udayavani, Dec 19, 2021, 2:16 PM IST

ಬೆಂಬಲ ಬೆಲೆ: ರಾಗಿ ಖರೀದಿ ಶುರು

ಹಾಸನ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ  ಮತ್ತು ರಾಗಿ ಖರೀದಿಯ ಪ್ರಕ್ರಿಯೆ ಆರಂಭವಾಗಿದ್ದು, ರೈತರು ಫ್ರೂಟ್ಸ್‌ ತಂತ್ರಾಂಶದ ಗುರುತಿನ ಪತ್ರ ನೀಡಿ ಡಿ.30 ರೊಳಗೆ ನೋಂದಾಯಿಸಿಕೊಳ್ಳಬೇಕು ಎಂದು ಆಹಾರ ಇಲಾಖೆ ಉಪ ನಿರ್ದೇಶಕರು ಸೂಚಿಸಿದ್ದಾರೆ.

ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ಮಾರ್ಕೆಟಿಂಗ್‌ ಫೆಡರೇಷನ್‌) ದಿಂದ ಪ್ರತಿ ಕ್ವಿಂಟಲ್‌ ಭತ್ತವನ್ನು 1940 ರೂ.ನಿಂದ 1969 ರೂ., ರಾಗಿಯನ್ನು 3377 ರೂ. ದರದಲ್ಲಿಖರೀದಿಸಲಾಗುವುದು. ಖರೀದಿ ಕೇಂದ್ರದಲ್ಲಿ ಭತ್ರ ಮತ್ತು ರಾಗಿ ಮಾರಾಟ ಮಾಡಿದ ರೈತರ ಬ್ಯಾಂಕ್‌ ಖಾತೆಗಳಿಗೆ ಹಣವನ್ನು ನೇರವಾಗಿ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರತಿ ಕ್ವಿಂಟಲ್‌ ಸಾಮಾನ್ಯ ದರ್ಜೆ ಭತ್ತವನ್ನು 1,940 ರೂ. ದರಲ್ಲಿ ಹಾಗೂ ಭತ್ತ ಗ್ರೇಡ್‌ ಎ ಭತ್ತವನ್ನು 1,960 ರೂ.ದರದಲ್ಲಿ ಪ್ರತಿ ರೈತರಿಂದ ಗರಿಷ್ಠ 40 ಕ್ವಿಂಟಲ್‌ ವರೆಗೆ ಪ್ರತಿ ಎಕರೆಗೆ 25 ಕ್ವಿಂಟಲ್‌ನಂತೆ ಖರೀದಿಸಲಾಗುವುದು. ರಾಗಿಯನ್ನು ಪ್ರತಿ ಕ್ವಿಂಟಲ್‌ಗೆ 377 ರೂ. ದರದಲ್ಲಿ ಎಕರೆಗೆ 10 ಕ್ವಿಂಟಲ್‌ನಂತೆ ಪ್ರತಿರೈತರಿಂದ ಗರಿಷ್ಠ 20 ಕ್ವಿಂಟಲ್‌ ಖರೀದಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಹಾಸನ ಜಿಲ್ಲೆಯ ಈ ಕೆಳಕಂಡ ತಾಲೂಕಿನ ಸ್ಥಳಗಳಲ್ಲಿ ರೈತರು ಕೃ ಇಲಾಖೆುಂದ ಜಾರಿಗೊಳಿಸಿರುವ ಫ್ರೂಟ್ಸ್‌ ತಂತ್ರಾಂಶದ ಗುರುತಿನ ಪತ್ರ ನೀಡಿ ಡಿ.31 ರೊಳಗೆ ನೋಂದಣಿ ಮಾಡಬಹುದಾಗಿದೆ.ಜಿಲ್ಲೆಯ ರೈತರು ಈ ಸದವಕಾಶವನ್ನು ಬಳಸಿಕೊಳ್ಳಬೇಕು. ಆಲೂರು ಮತ್ತು ಹಾಸನ ತಾಲೂಕಿನ ರೈತರಿಂದ ಭತ್ತ ಮತ್ತು ರಾಗಿಯನ್ನು ಹಾಸನದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ,ಅರಕಲಗೂಡು ತಾಲೂಕಿನ ರೈತರಿಂದ ಅರಕಲಗೂಡು ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಭತ್ತ ಮತ್ತು ರಾಗಿ ಖರೀದಿಸಲಾಗುತ್ತದೆ.

ಬೇಲೂರು ತಾಲೂಕಿನ ರೈತರಿಂದ ಬೇಲೂರು ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಭತ್ತ ಮತ್ತು ರಾಗಿ, ಚನ್ನರಾಯ ಪಟ್ಟಣ ತಾಲೂಕಿನ ರೈತರಿಂದ ಚನ್ನರಾಯಪಟ್ಟಣದ ಕೃಷಿ ಉತ್ಪನ್ನಮಾರುಕಟ್ಟೆ ಪ್ರಾಂಗಣದಲ್ಲಿ ಮತ್ತು ನುಗ್ಗೇಹಳ್ಳಿ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಭತ್ತ ಮತ್ತು ರಾಗಿಯನ್ನು ಖರೀದಿಸಲಾಗುತ್ತದೆ ಎಂದು ಹೇಳಿದ್ದಾರೆ.

ಹೊಳೆನರಸೀಪುರದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಹೊಳೆನರಸೀಪುರ ತಾಲೂಕಿನ ರೈತರಿಂದ ಭತ್ತ ಮತ್ತು ರಾಗಿಯನ್ನು ಖರೀದಿಸಲಾಗುವುದು. ಸಕಲೇಶಪುರ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಸಕಲೇಶಪುರ ತಾಲೂಕಿನರೈತರಿಂದ ಭತ್ತ ಮಾತ್ರ ಖರೀದಿಸಲಾಗುವುದು ಎಂದಿದ್ದಾರೆ. ಅರಸೀಕೆರೆ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣ, ಜಾವಗಲ್‌ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣ, ಗಂಡಸಿ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣ , ಜೆ.ಸಿ ಪುರದಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣ ಹಾಗೂ ಬಾಣಾವಾರದಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರಾಗಿಯನ್ನು ಮಾತ್ರ ಖರೀದಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಮಾರ್ಗಸೂಚಿಗಳು :

ಭತ್ತವನ್ನು ರೈತರು ಚೀಲಗಳಲ್ಲಿ ತಂದು ಅಕ್ಕಿ ಗಿರಣಿಗೆ ಸಲ್ಲಿಸಿದಾಗ ಪ್ರತಿ ಕ್ವಿಂಟಲ್‌ ಚೀಲಕ್ಕೆ 6 ರೂ.ನಂತೆ ಖರೀದಿ ಏಜೆನ್ಸಿಗಳು ಪಾವತಿ ಮಾಡತಕ್ಕದ್ದು. ರೈತರು ಭತ್ತವನ್ನುಒಮ್ಮೆ ಬಳಸಿದ ಉತ್ತಮ ಗುಣಮಟ್ಟದ ಗೋಣಿ ಚೀಲದಲ್ಲಿಯೇ ಮಾರಾಟಕ್ಕೆ ತರಬೇಕು. ಗೋಣಿ ಚೀಲ ಖರೀದಿ ವೆಚ್ಚ ಪ್ರತಿ 50 ಕೆ.ಜಿ. ಚೀಲಕ್ಕೆ 22 ರೂ. ನಂತೆ ನೇರ ನಗದು ವರ್ಗಾವಣೆಯನ್ನು ರೈತರಿಗೆ ರೈತರಿಗೆ ಪಾವತಿಸಲಾಗುವುದು. ಖರೀದಿ ಪ್ರಕ್ರಿಯೆಯ ಬಗ್ಗೆ ಸಮಸ್ಯೆಗಳು ಉದ್ಭವಿದಲ್ಲಿ ಕೂಡಲೇ ಆಯಾ ತಾಲೂಕಿನಆಹಾರ ಶಿರಸ್ತೇದಾರರು, ಆಹಾರ ನಿರೀಕ್ಷಕರನ್ನಾಗಲೀಸಂಪರ್ಕಿಸಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಆಹಾರ ಮತ್ತು ನಾಗರೀಕರ ಸರಬರಾಜು ಇಲಾಖೆ ಉಪ ನಿರ್ದೇಶಕರು ಸೂಚಿಸಿದ್ದಾರೆ

ಟಾಪ್ ನ್ಯೂಸ್

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.