ಕಬ್ಬಳಿ ಏತ ನೀರಾವರಿ ಯೋಜನೆ ಸರ್ವೆಗೆ ಶಾಸಕ ಚಾಲನೆ


Team Udayavani, Sep 23, 2020, 4:45 PM IST

ಕಬ್ಬಳಿ ಏತ ನೀರಾವರಿ ಯೋಜನೆ ಸರ್ವೆಗೆ ಶಾಸಕ ಚಾಲನೆ

ಚನ್ನರಾಯಪಟ್ಟಣ: ತಾಲೂಕಿನ ಹಿರೀಸಾವೆ ಹೋಬಳಿದಿಡಗ-ಕಬ್ಬಳಿ,ದಿಂಡಗೂರು-ಗೂಡೆಹೊಸ ಹಳ್ಳಿ ವ್ಯಾಪ್ತಿಯ ಕೆರೆಗಳಿಗೆ ನೀರು ತುಂಬಿಸುವ ಯೋಜನಾ ವರದಿ ತಯಾರಿಸಲು ಸರ್ವೆ ಕಾರ್ಯಕ್ಕೆ ಶಾಸಕ ಸಿ.ಎನ್‌.ಬಾಲಕೃಷ್ಣ ಚಾಲನೆ ನೀಡಿದರು.

ಈ ವೇಳೆ ಅವರು ಮಾತನಾಡಿ, ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಿಂದ ಸರ್ವೆ ಕಾರ್ಯ ನಡೆಸಲಾಗುತ್ತಿದೆ. ತಾಲೂಕಿನ ಬಾಗೂರು ಹೋಬಳಿಪಾಪನಘಟ್ಟ ಗ್ರಾಮದ ನಾಕನಕೆರೆ ಬಳಿ ದಿಡಗ ಹಾಗೂ ಕಬ್ಬಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ 22 ಕೆರೆಗಳಿಗೆ ನೀರು ತುಂಬಿಸುವ ದೃಷ್ಟಿಯಿದ ಈ ಏತನೀರಾವರಿ ಯೋಜನೆಗೆ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.

ಹಸಿರು ನಿಶಾನೆ ತೋರಲಿ: ಈಗಾಗಲೇತಾಲೂಕಿನಲ್ಲಿ ಏಳು ಏತನೀರಾವರಿ ಯೋಜನೆಗಳು ಪ್ರಗತಿಯಲ್ಲಿವೆ, ಪೂರ್ಣಗೊಂಡಲ್ಲಿ ತಾಲೂಕಿನಲ್ಲಿ ನೀರಿನ ಸಮಸ್ಯೆ ಬಗೆ ಹರಿಸಲಿದೆ, ಇನ್ನು ಅಂಜರ್ತಲ ವೃದ್ಧಿಯಾಗಿ ರೈತರು ಸಮೃದ್ಧ ಜೀವನ ಮಾಡಬಹುದು, ಇನ್ನು ಕಬ್ಬಳಿ, ದಿಡಗ ಭಾಗಕ್ಕೆ ನೀರಿನ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ. ಕಬ್ಬಳಿ ಏತ ನೀರಾವರಿ ಯೋಜನೆಗೆ ಸರ್ಕಾರ ಹಸಿರು ನಿಶಾನೆ ತೋರಿದರೆ ಇಲ್ಲಿನ ಸಮಸ್ಯೆಯೂ ಬಗೆಹರಿಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಶ್ರೀಗಳಿಂದಒತ್ತಾಯ:ಈ ಯೊಜನೆಯಿಂದದಿಡಗ- ಕಬ್ಬಳಿ ಗ್ರಾಪಂ ವ್ಯಾಪ್ತಿಯ 22 ಕೆರೆ, ದಿಂಡಗೂರು ಗ್ರಾಪಂ ವ್ಯಾಪ್ತಿಯ 11 ಕೆರೆ ತುಂಬಿಸಲಾಗುವುದು, ಇದಕ್ಕಾಗಿ ಆದಿಚುಂಚನಗಿರಿ ಶ್ರೀಗಳು ಹಲವು ವರ್ಷದಿಂದ ಮಂತ್ರಿಗಳ ಗಮನಕ್ಕೆ ತಂದಿದ್ದರು. ಹಾಗಾಗಿ ಯೋಜನೆಗೆ ಸರ್ಕಾರ ಅನುಮೋದನೆ ನೀಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಜನಿವಾರ ಅಮಾನಿಕೆರೆ ಹೇಮಾವತಿ ಎಡದಂಡೆ ನಾಲೆಯಲ್ಲಿ ನೀರು ಹರಿಯುವಾಗ ಮಾತ್ರ ತುಂಬಲಿದೆ, ಬೇಸಿಗೆ ವೇಳೆ ನೀರಿನ ಸಮಸ್ಯೆ ಉಂಟಾಗಿ ಹಿರೀಸಾವೆ ಜುಟ್ಟನಹಳ್ಳಿ ಏತನೀರಾವರಿಗೆ ಅನುಕೂಲವಾಗಲಿದೆ, ಹಾಗಾಗಿ ಗೂಡೆಹೊಸಹಳ್ಳಿ ಗ್ರಾಮದ ಬಳಿ ಹೇಮಾವತಿ ನದಿಯಿಂದ ನೀರನ್ನು ಎತ್ತಿ ಜನಿವಾರ ಕೆರೆಗೆ ತುಂಬಿಸುವ ಯೋಜನೆಗೆ ಯೋಜನಾ ವರದಿ ತಯಾರಿಸಲು 2020-21ನೇ ಸಾಲಿನಲ್ಲಿ ಸರ್ವೆ ಕೆಲಸ, ಯೋಜನೇತರ ಲೆಕ್ಕ ಶೀರ್ಷಿಕೆಯಡಿ 15 ಲಕ್ಷ ರೂ. ಅಂದಾಜು ಮೊತ್ತ ಹಾಗೂ 5 ಲಕ್ಷ ರೂ. ಅನುದಾನ ಲಭ್ಯವಾಗಿದೆ ಎಂದು ವಿವರಿಸಿದರು.

ಹಲವು ವರ್ಷಗಳ ಹೋರಾಟ ಹಾಗೂ ಪರಿ ಶ್ರಮಕ್ಕೆ ಸದ್ಯ ಪ್ರತಿಫ‌ಲ ಸಿಕ್ಕಿದೆ. ಡಿಪಿಆರ್‌ ಸಿದ್ಧಗೊಂಡ ತಕ್ಷಣ ಅನುಮೋದನೆಗೆ ಕಳುಹಿಸಲಾಗುವುದು, ಈ ಯೋಜನೆಯು ಕಲ್ಲಹಳ್ಳಿ ಗುಡ್ಡದಲ್ಲಿವಿಭಾಗಗೊಂಡು ಎಲ್ಲೂ ಕೆರೆಗಳಿಗೂ ಪೈಪ್‌ಲೈನ್‌ ಮೂಲಕವೇ ನೀರು ಹರಿಸಲಾಗುವುದು ಎಂದರು.

ತಾಪಂ ಸದಸ್ಯ ಎಂ.ಆರ್‌.ವಾಸು, ಮಾಜಿ ಸದಸ್ಯ ಪುಟ್ಟರಾಜು, ಎಪಿಎಂಸಿ ಮಾಜಿ ಅಧ್ಯಕ್ಷ ರಘುರಾಮ್‌, ಪಿಕಾರ್ಡ್‌ ಬ್ಯಾಂಕ್‌ ನಿರ್ದೇಶಕ ನಟೇಶ್‌, ಗುತ್ತಿಗೆದಾರ ರಾಮಚಂದ್ರ, ದಿಡಗ ಹಾಗೂ ಕಬ್ಬಳಿ ಗ್ರಾಪಂ ವ್ಯಾಪ್ತಿಯ ರೈತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hassan

Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Sakaleshpura

National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ

HDK

MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್‌ಡಿಕೆ

Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್‌ ವಸೂಲಿಗೆ ಬಿಡುವುದಿಲ್ಲ

Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್‌ ವಸೂಲಿಗೆ ಬಿಡುವುದಿಲ್ಲ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.