ಜಿಪಂ ಉಪಾಧ್ಯಕ್ಷರಾಗಿ ಸ್ವರೂಪ್‌ ಆಯ್ಕೆ

ಸ್ವರೂಪ್‌ ಹಾಸನ ತಾ| ಕಂದಲಿ ಕ್ಷೇತ್ರದ ಜೆಡಿಎಸ್‌ ಸದಸ್ಯ, ಮಾಜಿ ಶಾಸಕ ದಿ.ಎಚ್‌.ಎಸ್‌. ಪ್ರಕಾಶ್‌ ಪುತ್ರ

Team Udayavani, May 25, 2019, 3:07 PM IST

hasan-tdy-1..

ಹಾಸನ ಜಿಪಂ ಉಪಾಧ್ಯಕ್ಷರಾಗಿ ಆಯ್ಕೆಯಾದ ಎಚ್.ಪಿ.ಸ್ವರೂಪ್‌ ಅವರನ್ನು ಚುನಾವಣಾಧಿಕಾರಿ ಮೈಸೂರು ಪ್ರಾದೇಶಿಕ ಆಯುಕ್ತ‌ ಅನಿಲ್ಕುಮಾರ್‌ ಅಭಿನಂದಿಸಿದರು. ಜಿಪಂ ಸಿಇಒ ಕೆ.ಎನ್‌.ವಿಜಯಪ್ರಕಾಶ್‌ ಉಪಸ್ಥಿತರಿದ್ದರು.

ಹಾಸನ: ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾಗಿ ಹಾಸನ ತಾಲೂಕು ಕಂದಲಿ ಕ್ಷೇತ್ರದ ಜೆಡಿಎಸ್‌ ಸದಸ್ಯ ಎಚ್.ಪಿ.ಸ್ವರೂಪ್‌ ಅವರು ಶುಕ್ರವಾರ ಅವಿರೋಧವಾಗಿ ಆಯ್ಕೆಯಾದರು.

ಅಧಿಕಾರ ಹಂಚಿಕೆಯ ಸಂಬಂಧ ಜೆಡಿಎಸ್‌ನಲ್ಲಿ ಆಗಿದ್ದ ಆಂತರಿಕ ಒಪ್ಪಂದದಂತೆ ಕಳೆದ ಏ.24 ರಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾಗಿದ್ದ ಸುಪ್ರದೀಪ್‌ ಯಜಮಾನ್‌ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಶುಕ್ರವಾರ ಚುನಾವಣೆ ದಿನಾಂಕ ನಿಗದಿಯಾಗಿತ್ತು.

ಬೆಳಗ್ಗೆ 10.30 ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಎಚ್.ಪಿ.ಸ್ವರೂಪ್‌ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿದ್ದ ಮೈಸೂರು ಪ್ರಾದೇಶಿಕ ಆಯುಕ್ತ‌ ಅನಿಲ್ಕುಮಾರ್‌ ಅವರು ಸ್ವರೂಪ್‌ ಅವರ ಅವಿರೋಧ ಆಯ್ಕೆಯನ್ನು ಘೋಷಿಸಿದರು.

ಜಿಪಂ ಸದಸ್ಯರ ಅಭಿನಂದನೆ: ಸ್ವರೂಪ್‌ ಅವರು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾಗಿ 2021 ರ ಜೂ.2ರವರೆಗೂ ಕಾರ್ಯ ನಿರ್ವಹಿಸಲಿದ್ದಾರೆಂದು ಚುನಾವಣಾಧಿಕಾರಿ ಘೋಷಿಸಿದರು. ನೂತನ ಉಪಾಧ್ಯಕ್ಷ ಸ್ವರೂಪ್‌ ಅವರನ್ನು ಪ್ರಾದೇಶಿಕ ಆಯುಕ್ತ ಅನಿಲ್ಕುಮಾರ್‌ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಕೆ.ಎನ್‌.ವಿಜಯಪ್ರಕಾಶ್‌ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯರು ಅಭಿನಂದಿಸಿದರು.

ಕಾಂಗ್ರೆಸ್‌ ಸದಸ್ಯರ ಗೈರು: ಸ್ವರೂಪ್‌ ಅವರ ನಾಮಪತ್ರಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯರಾದ ಮಮತಾ ಹಾಗೂ ಪುಟ್ಟಸ್ವಾಮಿಗೌಡ ಅವರು ಸೂಚಕರಾಗಿ ಸಹಿ ಮಾಡಿದ್ದರು. ಉಪಾಧ್ಯಕ್ಷರ ಆಯ್ಕೆಯ ಜಿಲ್ಲಾ ಪಂಚಾಯಿತಿಯ ವಿಶೇಷ ಸಭೆಗೆ ಒಟ್ಟು 40 ಸದಸ್ಯರ ಪೈಕಿ 27 ಸದಸ್ಯರು ಹಾಜರಾಗಿದ್ದರು. ಜಿಪಂ ಅಧ್ಯಕ್ಷೆ ಬಿ.ಎಸ್‌.ಶ್ವೇತಾ ಸೇರಿ ಕಾಂಗ್ರೆಸ್‌ನ ಬಹುತೇಕ ಸದಸ್ಯರು ಗೈರು ಹಾಜರಾಗಿದ್ದರೆ, ಕಾಂಗ್ರೆಸ್‌ ಹಿರಿಯ ಸದಸ್ಯ ಪಟೇಲ್ ಶಿವಪ್ಪ ಸೇರಿ ಮೂವರು ಹಾಜರಾಗಿದ್ದರು. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ರೇವಣ್ಣ ಅವರೂ ಗೈರು ಹಾಜರಾಗಿದ್ದರು.

ಹಾಸನ ತಾಲೂಕು ಜೆಡಿಎಸ್‌ ಅಧ್ಯಕ್ಷ ಎಸ್‌.ದ್ಯಾವೇಗೌಡ, ಹಾಸನ ತಾ.ಪಂ ಅಧ್ಯಕ್ಷ ನಿಂಗೇಗೌಡ, ಜಿಲ್ಲಾ ಜೆಡಿಎಸ್‌ ವಕ್ತಾರ ಎಚ್.ಎಸ್‌.ರಘು, ಪಕ್ಷದ ಮುಖಂಡರಾದ ಎಚ್.ಎಸ್‌.ಅನಿಲ್ ಕುಮಾರ್‌, ಮೊಗಣ್ಣಗೌಡ ಮತ್ತಿತ್ತರ ಜೆಡಿಎಸ್‌ ಮುಖಂಡರು ಉಪಾಧ್ಯಕ್ಷ ಸ್ವರೂಪ್‌ ಅವರನ್ನು ಅಭಿನಂದಿಸಿದರು.

ಜನರ ಆಶೋತ್ತರಗಳಿಗೆ ಸ್ಪಂದಿಸುವೆ: ಸ್ವರೂಪ್‌

ಉಪಾಧ್ಯಕ್ಷರಾಗಿ ಆಯ್ಕೆಯಾದ ನಂತರ ಸುದ್ದಿಗಾರ ರೊಂದಿಗೆ ಮಾತನಾಡಿದ ಎಚ್.ಪಿ.ಸ್ವರೂಪ್‌ ಅವರು ಜನರ ಆಶೋತ್ತರಗಳನ್ನು ಅರಿತು ಕೆಲಸ ಮಾಡುವೆ ಎಂದು ತಿಳಿಸಿದರು. ಕುಡಿಯುವ ನೀರಿನ ಸಮಸ್ಯೆ ಹಾಗೂ ಬರ ನಿರ್ವಹಣೆಗೆ ಆದ್ಯತೆ ನೀಡುವುದಾಗಿಯೂ ಹೇಳಿದ ಅವರು ಗ್ರಾಮ ಮಟ್ಟಲ್ಲಿನ ಕುಂದು ಕೊರತೆಗಳ ನಿವಾರಣೆಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು. ರೇವಣ್ಣನವರ ನಿರ್ಧಾರಕ್ಕೆ ಬದ್ಧ: ಉಪಾಧ್ಯಕ್ಷರ ಅಧಿಕಾರ ವಧಿಯ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಸಚಿವ ಎಚ್.ಡಿ. ರೇವಣ್ಣ ಅವರ ಸೂಚನೆಗೆ ಬದ್ಧನಾಗಿ ನಡೆದುಕೊಳ್ಳುವೆ ಎಂದು ಸ್ವರೂಪ್‌ ಅವರು ಸ್ಪಷ್ಟಪಡಿಸಿದರು. ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿರುವುದರಿಂದ ಪಕ್ಷ ಸಂಘಟನೆ ಹಿನ್ನಲೆಯಲ್ಲಿ ಹಾಸನ ಕ್ಷೇತ್ರದ ಮಾಜಿ ಶಾಸಕ ದಿವಂಗತ ಎಚ್.ಎಸ್‌ಪ್ರಕಾಶ್‌ ಅವರ ಪುತ್ರರಾದ ಸ್ವರೂಪ್‌ ಅವರನ್ನು ಜಿಪಂ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.