ಜಿಪಂ ಉಪಾಧ್ಯಕ್ಷರಾಗಿ ಸ್ವರೂಪ್ ಆಯ್ಕೆ
ಸ್ವರೂಪ್ ಹಾಸನ ತಾ| ಕಂದಲಿ ಕ್ಷೇತ್ರದ ಜೆಡಿಎಸ್ ಸದಸ್ಯ, ಮಾಜಿ ಶಾಸಕ ದಿ.ಎಚ್.ಎಸ್. ಪ್ರಕಾಶ್ ಪುತ್ರ
Team Udayavani, May 25, 2019, 3:07 PM IST
ಹಾಸನ ಜಿಪಂ ಉಪಾಧ್ಯಕ್ಷರಾಗಿ ಆಯ್ಕೆಯಾದ ಎಚ್.ಪಿ.ಸ್ವರೂಪ್ ಅವರನ್ನು ಚುನಾವಣಾಧಿಕಾರಿ ಮೈಸೂರು ಪ್ರಾದೇಶಿಕ ಆಯುಕ್ತ ಅನಿಲ್ಕುಮಾರ್ ಅಭಿನಂದಿಸಿದರು. ಜಿಪಂ ಸಿಇಒ ಕೆ.ಎನ್.ವಿಜಯಪ್ರಕಾಶ್ ಉಪಸ್ಥಿತರಿದ್ದರು.
ಹಾಸನ: ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾಗಿ ಹಾಸನ ತಾಲೂಕು ಕಂದಲಿ ಕ್ಷೇತ್ರದ ಜೆಡಿಎಸ್ ಸದಸ್ಯ ಎಚ್.ಪಿ.ಸ್ವರೂಪ್ ಅವರು ಶುಕ್ರವಾರ ಅವಿರೋಧವಾಗಿ ಆಯ್ಕೆಯಾದರು.
ಅಧಿಕಾರ ಹಂಚಿಕೆಯ ಸಂಬಂಧ ಜೆಡಿಎಸ್ನಲ್ಲಿ ಆಗಿದ್ದ ಆಂತರಿಕ ಒಪ್ಪಂದದಂತೆ ಕಳೆದ ಏ.24 ರಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾಗಿದ್ದ ಸುಪ್ರದೀಪ್ ಯಜಮಾನ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಶುಕ್ರವಾರ ಚುನಾವಣೆ ದಿನಾಂಕ ನಿಗದಿಯಾಗಿತ್ತು.
ಬೆಳಗ್ಗೆ 10.30 ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಎಚ್.ಪಿ.ಸ್ವರೂಪ್ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿದ್ದ ಮೈಸೂರು ಪ್ರಾದೇಶಿಕ ಆಯುಕ್ತ ಅನಿಲ್ಕುಮಾರ್ ಅವರು ಸ್ವರೂಪ್ ಅವರ ಅವಿರೋಧ ಆಯ್ಕೆಯನ್ನು ಘೋಷಿಸಿದರು.
ಜಿಪಂ ಸದಸ್ಯರ ಅಭಿನಂದನೆ: ಸ್ವರೂಪ್ ಅವರು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾಗಿ 2021 ರ ಜೂ.2ರವರೆಗೂ ಕಾರ್ಯ ನಿರ್ವಹಿಸಲಿದ್ದಾರೆಂದು ಚುನಾವಣಾಧಿಕಾರಿ ಘೋಷಿಸಿದರು. ನೂತನ ಉಪಾಧ್ಯಕ್ಷ ಸ್ವರೂಪ್ ಅವರನ್ನು ಪ್ರಾದೇಶಿಕ ಆಯುಕ್ತ ಅನಿಲ್ಕುಮಾರ್ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಕೆ.ಎನ್.ವಿಜಯಪ್ರಕಾಶ್ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯರು ಅಭಿನಂದಿಸಿದರು.
ಕಾಂಗ್ರೆಸ್ ಸದಸ್ಯರ ಗೈರು: ಸ್ವರೂಪ್ ಅವರ ನಾಮಪತ್ರಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯರಾದ ಮಮತಾ ಹಾಗೂ ಪುಟ್ಟಸ್ವಾಮಿಗೌಡ ಅವರು ಸೂಚಕರಾಗಿ ಸಹಿ ಮಾಡಿದ್ದರು. ಉಪಾಧ್ಯಕ್ಷರ ಆಯ್ಕೆಯ ಜಿಲ್ಲಾ ಪಂಚಾಯಿತಿಯ ವಿಶೇಷ ಸಭೆಗೆ ಒಟ್ಟು 40 ಸದಸ್ಯರ ಪೈಕಿ 27 ಸದಸ್ಯರು ಹಾಜರಾಗಿದ್ದರು. ಜಿಪಂ ಅಧ್ಯಕ್ಷೆ ಬಿ.ಎಸ್.ಶ್ವೇತಾ ಸೇರಿ ಕಾಂಗ್ರೆಸ್ನ ಬಹುತೇಕ ಸದಸ್ಯರು ಗೈರು ಹಾಜರಾಗಿದ್ದರೆ, ಕಾಂಗ್ರೆಸ್ ಹಿರಿಯ ಸದಸ್ಯ ಪಟೇಲ್ ಶಿವಪ್ಪ ಸೇರಿ ಮೂವರು ಹಾಜರಾಗಿದ್ದರು. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ರೇವಣ್ಣ ಅವರೂ ಗೈರು ಹಾಜರಾಗಿದ್ದರು.
ಹಾಸನ ತಾಲೂಕು ಜೆಡಿಎಸ್ ಅಧ್ಯಕ್ಷ ಎಸ್.ದ್ಯಾವೇಗೌಡ, ಹಾಸನ ತಾ.ಪಂ ಅಧ್ಯಕ್ಷ ನಿಂಗೇಗೌಡ, ಜಿಲ್ಲಾ ಜೆಡಿಎಸ್ ವಕ್ತಾರ ಎಚ್.ಎಸ್.ರಘು, ಪಕ್ಷದ ಮುಖಂಡರಾದ ಎಚ್.ಎಸ್.ಅನಿಲ್ ಕುಮಾರ್, ಮೊಗಣ್ಣಗೌಡ ಮತ್ತಿತ್ತರ ಜೆಡಿಎಸ್ ಮುಖಂಡರು ಉಪಾಧ್ಯಕ್ಷ ಸ್ವರೂಪ್ ಅವರನ್ನು ಅಭಿನಂದಿಸಿದರು.
ಜನರ ಆಶೋತ್ತರಗಳಿಗೆ ಸ್ಪಂದಿಸುವೆ: ಸ್ವರೂಪ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ