ಹಲ್ಮಿಡಿ ಗ್ರಾಮದಲ್ಲಿ ತಹಶೀಲ್ದಾರ್‌ ವಾಸ್ತವ್ಯ; 30 ಅರ್ಜಿ ಇತ್ಯರ್ಥ


Team Udayavani, Feb 21, 2021, 3:54 PM IST

Untitled-1

ಬೇಲೂರು: ತಾಲೂಕಿನ ಹಲ್ಮಿಡಿ ಗ್ರಾಮದಲ್ಲಿ ತಾಲೂಕು ಆಡಳಿತ ಶನಿವಾರ ಆಯೋಜಿಸಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಖಾತೆ ಬದಲಾವಣೆ, ಅಕ್ರಮ ಮದ್ಯ ಮಾರಾಟ, ಮನೆ ಹಕ್ಕುಪತ್ರ, ಜಮೀನಿಗೆ ಸಂಬಂಧಿಸಿದ ಸಮಸ್ಯೆಗಳು ಗ್ರಾಮೀಣ ಜನರಿಂದ ಕೇಳಿ ಬಂದವು.

ಅಹವಾಲು ಸ್ವೀಕರಿಸಿದ ತಹಶೀಲ್ದಾರ್‌ ನಟೇಶ್‌, ಅಕ್ರಮ ಮನೆ ನಿರ್ಮಾಣ ಮಾಡಿದ್ದ ಕೆಲವರ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಿದರು. ಸರ್ಕಾರ ಅಧಿಕಾರಿಗಳ ನಡಿಗೆ ಹಳ್ಳಿ ಕಡೆಗಳಿಗೆ ಎಂಬ ಮಹತ್ವಪೂರ್ಣ ಕಾರ್ಯಕ್ರಮ ಹಮ್ಮಿ ಕೊಂಡಿದ್ದು, ತಹಶೀಲ್ದಾರ್‌ ಹಲ್ಮಿಡಿ ಗ್ರಾಮದಲ್ಲಿ ಪ್ರಥಮ ವಾಸ್ತವ್ಯ ನಡೆಸಿದರು.

ನಾರಾಯಣಪುರ ಗ್ರಾಪಂ ವ್ಯಾಪ್ತಿಯ ಹೊಸಮನೆಹಳ್ಳಿ, ಎಸ್‌.ಹೊಸಹಳ್ಳಿ, ಹಲ್ಮಿಡಿ, ದಾಸಗೊಡನಹಳ್ಳಿ, ಕೆಳೆಹಳ್ಳಿ, ಯಕಶೆಟ್ಟಿಹಳ್ಳಿ, ಚನ್ನಪುರ, ಕರಗಡ, ದುಮ್ಮೇನಹಳ್ಳಿ, ಬಂದಹಳ್ಳಿ, ಶೆಟ್ಟಿಗೆರೆ ಮತ್ತು ಬೆಣ್ಣೂರು ಗಡಿ ಗ್ರಾಮದ ನೂರಾರು ಜನರು ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆದರು.

ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ತಹಶೀಲ್ದಾರ್‌ ಎನ್‌.ವಿ.ನಟೇಶ್‌ ಮಾತನಾಡಿ, ಗ್ರಾಮ ವಾಸ್ತವ್ಯದಲ್ಲಿ ಹಕ್ಕುಪತ್ರಗಳ ಬಗ್ಗೆ ಹೆಚ್ಚಿನ ಅರ್ಜಿಗಳು ಬಂದಿವೆ. ಕಂದಾಯ, ಪಂಚಾಯ್ತಿ ಮೂಲಕ ನೀಡುವ ಹಕ್ಕುಪತ್ರಗಳ ಬಗ್ಗೆ ಪರಿಶೀಲನೆ ನಡೆಸಿ, ಶೀಘ್ರವೇ ನೀಡಲಾಗುತ್ತದೆ ಎಂದು ಹೇಳಿದರು.

ತಾಪಂ ಇಒ ರವಿಕುಮಾರ್‌ ಮಾತನಾಡಿ, ಗ್ರಾಮದಲ್ಲಿ ಸ್ವಚ್ಛತೆ, ಕಸ ವಿಲೇವಾರಿ, ಕುಡಿಯುವ ನೀರು, ರಸ್ತೆ ಚರಂಡಿ ಸೇರಿ ಉದ್ಯೋಗ ಖಾತ್ರಿ ಯೋಜನೆಗಳ ಸೌಲಭ್ಯಗಳನ್ನು ಬಗ್ಗೆ ಸಾರ್ವಜನಿಕರು ಅಯಾ ಅಧಿಕಾರಿಗಳಲ್ಲಿ ಸಮಾಲೋಚನೆ ನಡೆಸಿ ಸೂಕ್ತ ಪರಿಹಾರ ಪಡೆಯಬಹದು ಎಂದು ತಿಳಿಸಿದರು.

ಅಕ್ರಮ ಮದ್ಯ ಮಾರಾಟ: ಕೋಡನಹಳ್ಳಿ ಗ್ರಾಮದಲ್ಲಿ ತೆರೆಯಲಾಗಿರುವ ಮದ್ಯದ ಅಂಗಡಿತೆರವು ಮಾಡಬೇಡಬೇಕೆಂದು ಗ್ರಾಮಸ್ಥರುಒತ್ತಾಯಿಸಿದ್ರೆ, ನಾರಾಯಣಪುರ ಗ್ರಾಮದಲ್ಲಿನಿತ್ಯ ಅಕ್ರಮ ಮದ್ಯ ಮಾರಾಟವಾಗುತ್ತಿದೆ ಎಂದು ಆರೋಪಿಸಿದರು. ಈ ಬಗ್ಗೆ ತಹಶೀಲ್ದಾರ್‌ ನಟೇಶ್‌ ಸ್ಥಳದಲ್ಲೇ ಇದ್ದ ಅಬಕಾರಿ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ಸೂಚಿಸಿದರು.

ತಹಶೀಲ್ದಾರ್‌ರಿಂದ ಭರವಸೆ: ಗ್ರಾಮಸ್ಥರಾದ ದಯಾನಂದ್‌ ಮಾತನಾಡಿ, ಯಗಚಿ ಜಲಾಶಯದ ನಿರ್ಮಾಣಕ್ಕಾಗಿ ಹಲ್ಮಿಡಿ ಗ್ರಾಮದ ಸುತ್ತಲಿನ ರೈತರು ಜಮೀನು, ಮನೆ ಕಳೆದುಕೊಂಡು ನಿರಾಶ್ರಿತರಾಗಿ ಹಲವು ದಶಕಗಳೇ ಕಳೆದಿದ್ದರೂ ಈ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ತಮ್ಮ ಅಹವಾಲನ್ನು ನೀಡಿದರು. ಈ ಬಗ್ಗೆ ಯಗಚಿ ಯೋಜನೆಯಅಧಿಕಾರಿಗಳೊಂದಿಗೆ ಮಾತನಾಡಿ, ಪರಿಶೀಲನೆನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್‌ ಭರವಸೆ ನೀಡಿದರು.

ಗಾಮ ವಾಸ್ತವ್ಯದಲ್ಲಿ 110 ಅರ್ಜಿ ಸಲ್ಲಿಸಿದ್ದು,

ಅದರಲ್ಲಿ 30 ಅನ್ನು ತಹಶೀಲ್ದಾರ್‌ ನಟೇಶ್‌ ಸ್ಥಳದಲ್ಲೇ ಬಗೆಹರಿಸಿದರು. ನಾರಾಯಣಪುರ ಗ್ರಾಪಂ ಅಧ್ಯಕ್ಷೆ ಹೇಮಾವತಿ, ಉಪಾಧ್ಯಕ್ಷ ನಾಗೇಶ್‌, ವೃತ್ತ ನಿರೀಕ್ಷಕ ಶ್ರೀಕಾಂತ್‌, ಕ್ಷೇತ್ರಶಿಕ್ಷಣಾಧಿಕಾರಿ ಲೋಕೇಶ್‌, ಅಭಿವೃದ್ಧಿ ಅಧಿಕಾರಿ ರಾಜಶೇಖರ, ಲೋಕೋಪಯೋಗಿಎಂಜಿನಿಯರ್‌ ಪುಟ್ಟರಾಜಪ್ಪ, ಆಹಾರ ಅಧಿಕಾರಿ ಮಂಜುನಾಥ್‌, ಕೃಷಿ ಅಧಿಕಾರಿ ಪ್ರಸನ್ನ, ಎಪಿಎಂಸಿ ಕಾರ್ಯದರ್ಶಿ ಮಧು, ಸಹಾಯಕ ಕೃಷಿ ನಿರ್ದೇಶಕ ಪರಮೇಶ್‌ ಉಪಸ್ಥಿತರಿದ್ದರು.

 

ಡಿ.ಬಿ.ಮೋಹನ್‌ ಕುಮಾರ್‌

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.