![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಚುನಾವಣಾ ಅಕ್ರಮಗಳ ತಡೆಗೆ ಕಟ್ಟೆಚ್ಚರ ವಹಿಸಿ
Team Udayavani, Apr 21, 2018, 12:37 PM IST
![Kalu-sanka-1.jpg](https://www.udayavani.com/wp-content/uploads/2018/04/21/Kalu-sanka-1.jpg)
ಹಾಸನ: ವಿಧಾನಸಭಾ ಚುನಾವನೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು. ಅಭ್ಯರ್ಥಿಗಳ ಖರ್ಚು ವೆಚ್ಚಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಂದೀಪ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಚುನಾವಣೆಗಾಗಿ ರಚಿಸಲಾಗಿರುವ ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಚುನಾವಣೆಯಲ್ಲಿ ಪ್ರತಿಯೊಂದು ಅಂಶವನ್ನೂ ಅತ್ಯಂತ ಸೂಕ್ಷ್ಮವಾಗಿ ಗಮನಿಸಬೇಕು. ಎಲ್ಲಾ ನೋಡಲ್ ಅಧಿಕಾರಿಗಳು ತಮ್ಮ ಕಾರ್ಯ ವ್ಯಾಪ್ತಿಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಅಭ್ಯìರ್ಥಿಗಳ ಚುನಾವಣಾ ವೆಚ್ಚಗಳ ಬಗ್ಗೆ ಅತ್ಯಂತ ಹೆಚ್ಚಿನ ಗಮನ ಹರಿಸಬೇಕು. ಚುನಾವಣೆಯ ಜಿಲ್ಲಾ ಲೆಕ್ಕ ವೆಚ್ಚ ಅಧಿಕಾರಿಗಳು ಎಲ್ಲಾ ತಾಲೂಕುಗಳಿಂದ ಪ್ರತಿನಿತ್ಯ ಮಾಹಿತಿ ಪಡೆದು ಕ್ರೂಢೀಕರಿಸಿ ವಿವರ ನೀಡಬೇಕು. ಜಿಲ್ಲಾಧಿಕಾರಿ ಕಚೇರಿಯ ದೂರು ಕೋಶದಲ್ಲಿ ಬರುವ ದೂರುಗಳ ಬಗ್ಗೆ ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದರು.
ತಾಲೂಕು ಮಟ್ಟದಲ್ಲಿ ಸ್ಥಾಪನೆಯಾಗಿರುವ ದೂರುಕೋಶಗಳಲ್ಲಿ ದಾಖಲಾಗಿರುವ ದೂರುಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಕ್ರೂಢೀಕರಿಸಿ ಕೈಗೊಳ್ಳುವ ಕ್ರಮಗಳ ಬಗ್ಗೆ ಪ್ರತಿ ದಿನ ವಿವರ ಒದಗಿಸಬೇಕು ಎಂದು ದೂರು ನಿರ್ವಹಣಾ ಕೋಶದ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ರಂದೀಪ್ ಸೂಚನೆ ನೀಡಿದರು.
ಪೋಸ್ಟಲ್ ಬ್ಯಾಲೆಟ್ ನಿರ್ವಹಣಾ ಜವಾಬ್ದಾರಿ ಅತ್ಯಂತ ಮಹತ್ವದ್ದು. ಇದನ್ನು ಎಚ್ಚರಿಕೆಯಿಂದ ನಿರ್ವಹಿಸುವಂತೆ ನೋಡಲ್ ಅಧಿಕಾರಿಗಳಿಗೆ ತಿಳಿಸಿದ ಜಿಲ್ಲಾಧಿಕಾರಿಯವರು ಚುನಾವಣಾ ಕರ್ತವ್ಯದಲ್ಲಿ ಪಾಲ್ಗೊಳ್ಳುವ ಯಾವುದೇ ಸಿಬ್ಬಂದಿ ಮತದಾನದ ಸೌಲಭ್ಯದಿಂದ ವಂಚಿತರಾಗದಂತೆ ಅಥವಾ ಮತದಾನದಿಂದ ಹೊರಗುಳಿಯದಂತೆ ಗಮನ ಹರಿಸಿ ಸ್ವೀಪ್ ಸಮಿತಿಯು ಚುನಾವಣಾ ಸಿಬ್ಬಂದಿ ತರಬೇತಿ ಸಂದರ್ಭಗಳಲ್ಲಿ ಹಾಜರಿದ್ದು ಕಡ್ಡಾಯವಾಗಿ ತಮ್ಮ ಹಕ್ಕು ಚಲಾಯಿಸಬೇಕು ಎಂದರು.
ಮಾಧ್ಯಮ ದೃಢೀಕರಣ ಮತ್ತು ಮೇಲ್ವಿಚಾರಣಾ ಸಮಿತಿಯು ಸುದ್ದಿಮಾಧ್ಯಮಗಳಿ ಬರುವ ಜಾಹೀರಾತು ಮತ್ತು ಪಾವತಿ ಸುದ್ದಿಗಳ ಬಗ್ಗೆ ನಿಗಾ ವಹಿಸಬೇಕು ಮತ್ತು ಕಾಲಕಾಲಕ್ಕೆ ನಿಗದಿತ ನಮೂನೆಯಲ್ಲಿ ವರದಿ ಸಲ್ಲಿಸಬೇಕು. ಸಾಮಾಜಿಕ ಜಾಲತಾಣಗಳ ಬಗ್ಗೆ ವಿಶೇಷ ನಿಗಾ ವಹಿಸಬೇಕಾಗಿದ್ದು ಎನ್.ಐ.ಸಿ. ನೇತ„ತ್ವದಲ್ಲಿ ಇದರ ಜವಾಬ್ದಾರಿ ನಿರ್ವಹಣೆಯಾಗಬೇಕಿದೆ ಎಂದು ತಿಳಿಸಿದರು.
ಜಿಪಂ ಸಿಇಒ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷೆ ಕೆ.ಎಂ.ಜಾನಕಿ, ಅಪರ ಜಿಲ್ಲಾಧಿಕಾರಿ ಬಿ.ಆರ್.ಪೂರ್ಣಿಮಾ, ಚುನಾವಣಾ ಜಿಲ್ಲಾ ವೆಚ್ಚ ನಿರ್ವಹಣಾಧಿಕಾರಿ ಜಿ.ರಾಜೇಂದ್ರ ಕುಮಾರ್, ಆಹಾರ ಇಲಾಖೆ ಉಪ ನಿರ್ದೇಶಕ ಹಾಗೂ ಬೇಲೂರು ಕ್ಷೇತ್ರದ ಎಂ.ಸಿ.ಸಿ. ನೋಡಲ್ ಅಧಿಕಾರಿ, ಎನ್.ಎಸ್.ಶ್ರೀಕಂಠಮೂರ್ತಿ, ಡಿ.ಇ.ಎಂ.ಪಿ. ನೋಡಲ್ ಅಧಿಕಾರಿ ಸಿದ್ದರಾಜು, ವಾರ್ತಾಧಿಕಾರಿ ವಿನೋದ್ಚಂದ್ರ, ಎನ್.ಐ.ಸಿ. ಜಿಲ್ಲಾ ಇನ್ರೆಟಿಕ್ ಅಧಿಕಾರಿ ಸತ್ಯಮೂರ್ತಿ, ಪೋಸ್ಟಲ್ ಬ್ಯಾಲೆಟ್ ಸೆಕ್ಷನ್ ಅಧಿಕಾರಿ ಎಂ. ಜಿನೇಂದ್ರ ಎಂ., ಪ್ರಾದೇಶಿಕ ಸಾರಿಗೆ ಅಧಿಕಾರಿ ಜಿ.ಕುಲಕರ್ಣಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿ ವೇಮರಾಜ್ ಇತರರು ಇದ್ದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![hassan](https://www.udayavani.com/wp-content/uploads/2024/07/hassan-2-150x84.jpg)
Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ
![Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ](https://www.udayavani.com/wp-content/uploads/2024/07/road-s-150x96.jpg)
Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ
![Sakaleshpura](https://www.udayavani.com/wp-content/uploads/2024/07/Sakaleshpura-1-150x84.jpg)
National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ
![HDK](https://www.udayavani.com/wp-content/uploads/2024/07/HDK-5-150x90.jpg)
MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್ಡಿಕೆ
![Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ](https://www.udayavani.com/wp-content/uploads/2024/07/19-4-150x90.jpg)
Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.