ಆ. 15ರಂದು ಪ್ಲಾಸ್ಟಿಕ್‌ ಮುಕ್ತ ಪಟ್ಟಣ ಘೋಷಣೆ

ಜೂ. 1ರಿಂದ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ನಿಷೇಧಿಸಲು ಉಪವಿಭಾಗಾಧಿಕಾರಿ ನಾಗರಾಜು ಸೂಚನೆ

Team Udayavani, May 18, 2019, 3:16 PM IST

hasan-tdy-2..

ಹೊಳೆನರಸೀಪುರ ಪುರಸಭೆ ಸಭಾಂಗಣದಲ್ಲಿ ನಡೆದ ಪ್ಲಾಸ್ಟಿಕ್‌ ನಿಷೇಧ ಕುರಿತ ಸಭೆಯನ್ನು ಉದ್ದೇಶಿಸಿ ತಹಶೀಲ್ದಾರ್‌ ಶ್ರೀನಿವಾಸ್‌ ಮಾತನಾಡಿದರು. ಉಪ ವಿಭಾಧಿಕಾರಿ ಡಾ.ಎಚ್.ಎಲ್.ನಾಗರಾಜು ಸೇರಿದಂತೆ ಸಾರ್ವಜನಿಕರಿದ್ದರು.

ಹೊಳೆನರಸೀಪುರ: ಪಟ್ಟಣವನ್ನು ಆಗಸ್ಟ್‌ 15 ರಂದು ಪ್ಲಾಸ್ಟಿಕ್‌ ಮುಕ್ತ ಪಟ್ಟಣದ ಎಂದು ಘೋಷಣೆ ಮಾಡಲಾಗುತ್ತಿದ್ದು, ಅದಕ್ಕಾಗಿ ಜೂನ್‌ ಒಂದರಿಂದ ಪಟ್ಟಣದಲ್ಲಿ ಕಠಿಣ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಉಪವಿಭಾಗಾಧಿಕಾರಿ ಡಾ.ಎಚ್.ಎಲ್.ನಾಗರಾಜು ತಿಳಿಸಿದರು.

ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಏರ್ಪಡಿಸಿದ್ದ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ನಿಷೇಧಿಸುವ ಕುರಿತು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪ್ರಸ್ತುತ ಪಟ್ಟಣದಲ್ಲಿ ಪ್ಲಾಸ್ಟಿಕ್‌ ತ್ಯಾಜ್ಯದಿಂದ ಪರಿಸರಕ್ಕೆ ತೀವ್ರ ದಕ್ಕೆ ಉಂಟಾಗಿದೆ. ಆದ್ದರಿಂದ ಶನಿವಾರದಿಂದಲೇ ಪ್ಲಾಸ್ಟಿಕ್‌ ನಿಷೇಧಕ್ಕೆ ಚಾಲನೆ ನೀಡಲು ಬಂದಿರುವುದಾಗಿ ತಿಳಿಸಿದರು.

ಪ್ಲಾಸ್ಟಿಕ್‌ ಬಳಕೆಯಿಂದ ಸಮಾಜದ ಮೇಲೆ ತೀವ್ರವಾದ ಪರಿಣಾಮ ಬೀರಿದ್ದು ಪ್ಲಾಸ್ಟಿಕ್‌ ತಡೆಗಟ್ಟಲು ಕಾನೂನಿನ ಕ್ರಮದ ಜೊತೆಗೆ ಸಮಾಜದ ಪ್ರತಿಯೊಬ್ಬರು ಸಹ ಕಟಿಬದ್ಧರಾಗಿ ನಿಷೇಧ ಜಾರಿಗೆ ತರುವಲ್ಲಿ ಕೈಜೋಡಿಸುವಂತೆ ಕೋರಿದರು.

ಜೂನ್‌ ಒಂದರಿಂದ ಪಟ್ಟಣದಲ್ಲಿ ಶಾಶ್ವತವಾಗಿ ಪ್ಲಾಸ್ಟಿಕ್‌ ಮುಕ್ತಗೊಳಿಸಲು ತಾಲೂಕು ಆಡಳಿತ ಹತ್ತು ತಂಡಗಳನ್ನು ರಚಿಸಿ ನಿತ್ಯವೂ ಪಟ್ಟಣದಲ್ಲಿ ಪ್ಲಾಸ್ಟಿಕ್‌ ಮಾರಾಟ ಮಾಡುವ ಮತ್ತು ಅದನ್ನು ಉಪಯೋಗಿಸುವ ವರ್ತಕರ ಅಂಗಡಿಗಳ ಮೇಲೆ ದಾಳಿ ನಡೆಸಲಾಗುವುದು ಅದಕ್ಕಾಗಿ ಈಗಾಗಲೇ ತಂಡಗಳನ್ನು ರಚಿ ಸಿದ್ದು, ಪ್ರತಿ ತಂಡದಲ್ಲಿ ಸರ್ಕಾರಿ ಇಲಾಖೆಯ ಒರ್ವ ಅಧಿಕಾರಿ , ಪುರಸಭೆ ಅಧಿಕಾರಿ ಮತ್ತಿತರರು ಇರಲಿದ್ದಾರೆ ಎಂದರು.

ಸಭೆಯಲ್ಲಿ ಹಾಜರಿದ್ದ ತಾಲೂಕು ವರ್ತಕರ ಸಂಘದ ಕಾರ್ಯದರ್ಶಿ ಮಾತನಾಡಿ, ಈ ಹಿಂದೆ ಪುರಸಭೆ ಮುಖ್ಯಾಧಿ ಕಾರಿ ಗಳು ಮತ್ತಿತರರು ಕರೆದಿದ್ದ ಸಭೆಯಲ್ಲಿ ವರ್ತಕ ಸವ ುುದಾಯದ ಮುಖಂಡುರಿದ್ದು, ಆ ಸಭೆಯಲ್ಲಿ ಪ್ಲಾಸ್ಟಿಕ್‌ ನಿಷೇಧ ಕುರಿತ ಚರ್ಚೆಯಲ್ಲಿ ಏಕಾಏಕಿ ಪ್ಲಾಸ್ಟಿಕ್‌ ನಿಷೇಧ ಮಾಡುವುದು ಬೇಡ ಜೂನ್‌ ಒಂದರವರೆಗೆ ವರ್ತಕರಿಗೆ ತಿಳಿ ಹೇಳಿ ಪ್ಲಾಸ್ಟಿಕ್‌ ಬಳಕೆ ಮತ್ತು ವ್ಯಾಪಾರ ಮಾಡುವುದು ಬೇಡೆವೆಂದು ಅರಿವು ಮೂಡಿಸುತ್ತೇವೆ ಎಂದರು.

ಅದಕ್ಕೆ ಸಹಮತ ವ್ಯಕ್ತ ಪಡಿಸಿದ ಉಪವಿಭಾಗಾಧಿಕಾರಿ ಡಾ. ಎಚ್.ಎಲ್.ನಾಗರಾಜು ಇದಕ್ಕೆ ಬೇಕಾದ ಕಾರ್ಯಕ್ರಮಗ ಳನ್ನು ಹಮ್ಮಿಕೊಂಡು ಸಾರ್ವಜನಿಕರು ಮತ್ತು ವರ್ತಕರುಗಳಿಗೆ ಅರಿವು ಮೂಡಿಸಲು ವರ್ತಕರ ಸಂಘ ಸಹಕರಿಸುವಂತೆ ತಿಳಿಸಿದರು.

ಈ ಸಭೆಗೆ ಕೇವಲ ಒಂದೇ ಒಂದು ವರ್ತಕ ಸಂಘದ ಹಾಜ ರಾತಿ ಇದೆ, ಆದರೆ ಪಟ್ಟಣದ ಇನ್ನು ಮೂರು-ನಾಲ್ಕು ಸಂಘ ಗಳಿದ್ದು, ಅವುಗಳನ್ನು ಈ ನಿಷೇಧ ಕಾರ್ಯಕ್ರಮಕ್ಕೆ ಸೇರ್ಪಡೆ ಮಾಡಿಕೊಳ್ಳುವುದರಿಂದ ಪ್ಲಾಸ್ಟಿಕ್‌ ನಿಷೇಧದ ಕಾರ್ಯಕ್ರಮ ಸಫಲತೆ ಕಾಣಲು ಸಾಧ್ಯವಿದೆ ಎಂದು ಸಭೆ ನಿರ್ಧರಿಸಿತು.

ಸಾರ್ವಜನಿಕರುಗಳು ತಮ್ಮಲ್ಲಿನ ಅನಿಸಿಕೆಗಳನ್ನು ವ್ಯಕ್ತ ಪಡಿಸಿ ಪ್ಲಾಸ್ಟಿಕ್‌ ನಿಷೇಧಕ್ಕೆ ಮೊದಲು ಅದಕ್ಕೆ ಪರ್ಯಾಯ ವ್ಯವಸ್ಥೆ ಬಗ್ಗೆ ತೀವ್ರವಾಗಿ ಚರ್ಚೆ ನಡೆಯಿತು. ಉಪವಿಭಾಧಿಕಾರಿ ಎಚ್.ಎಲ್.ನಾಗರಾಜು ಅವರೊಂದಿಗೆ ಆಗಮಿಸಿದ್ದ ಅಧಿಕಾರಿಗಳು ಪ್ಲಾಸ್ಟಿಕ್‌ಗೆ ಪರ್ಯಾಯÊಾಗಿ ಬೇಕಾದ ಸಲಕರಣೆಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ತಾಲೂಕು ವರ್ತಕರ ಸಂಘದ ಅಧ್ಯಕ್ಷ ಕೆ. ಶ್ರೀಧರ್‌, ತಾಲೂಕು ಸ್ವಾಮಿ ವಿವೇಕಾನಂದ ಯುವ ವೇದಿಕೆ ಅಧ್ಯಕ್ಷ ಎಂ.ಎಂ.ಎ.ರಹೆಮಾನ್‌ ಸೇರಿದಂತೆ ಪಟ್ಟಣದ ಬೆರ ಳೆಣಿಕೆಯಷ್ಟು ಮಂದಿ ವರ್ತಕರು ಮತ್ತು ವಿವಿಧ ಸಂಘದ ಪದಾಧಿಕಾರಿಗಳು ಹಾಜರಿದ್ದರು. ಪುರಸಭೆ ಮುಖ್ಯಾಧಿಕಾರಿ ಕೃಷ್ಣ, ತಾಲೂಕು ವೈದ್ಯಾಧಿಕಾರಿ ಎಚ್.ಎನ್‌.ರಾಜೇಶ್‌ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.