![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಜಿಲ್ಲೆಯಲ್ಲಿ 29 ಇಂಗ್ಲಿಷ್ ಮಾಧ್ಯಮದ ಸರ್ಕಾರಿ ಶಾಲೆ ಆರಂಭ
Team Udayavani, May 3, 2019, 2:23 PM IST
![has-4](https://www.udayavani.com/wp-content/uploads/2019/05/has-4-620x446.jpg)
ಹಾಸನ: ರಾಜ್ಯ ಸರ್ಕಾರ 2019 20ನೇ ಶೈಕ್ಷಣಿಕ ಸಾಲಿನಿಂದಲೇ ರಾಜ್ಯದಲ್ಲಿ 1ಸಾವಿರ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಸರ್ಕಾರ ದಿಂದಲೇ ಆರಂಭಿಸಲು ನಿರ್ಧರಿಸಿದ್ದು, ಜೂನ್ನಿಂದ ಒಂದನೇ ತರಗತಿಯಿಂದ ಇಂಗ್ಲಿಷ್ ಮಾಧ್ಯಮದ ಸರ್ಕಾರಿ ಶಾಲೆಗಳು ಆರಂಭವಾಗಲಿವೆ. ಹಾಸನ ಜಿಲ್ಲೆಯಲ್ಲಿ ಒಟ್ಟು 29 ಇಂಗ್ಲಿಷ್ ಮಾಧ್ಯಮದ ಸರ್ಕಾರಿ ಶಾಲೆಗಳು ಆರಂಭವಾಲಿವೆ.
ಸಕಲೇಶಪುರ, ಆಲೂರು ಕ್ಷೇತ್ರಕ್ಕೆ ಹೆಚ್ಚು: ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಿಗೆ ತಲಾ 4 ಇಂಗ್ಲಿಷ್ ಮಾಧ್ಯಮದ ಶಾಲೆಗಳ ಮಂಜೂರಾತಿಯ ಪ್ರಸ್ತಾವನೆ ಸರ್ಕಾರದ ಮುಂದಿದ್ದು, ಆ ಪೈಕಿ ಸಕಲೇಶಪುರ ಆಲೂರು ವಿಧಾನಸಭಾ ಕ್ಷೇತ್ರಕ್ಕೆ ಮಾತ್ರ 5 ಶಾಲೆ ಗಳು ಮಂಜೂರಾಗಲಿವೆ. ಸಕಲೇಶಪುರ ವಿಧಾನಸಭಾ ಕ್ಷೇತ್ರ ವಿಸ್ತಾರ ವಾದ ಮತ್ತು ಮೂರು ತಾಲೂಕುಗಳನ್ನು ಒಳಗೊಳ್ಳುವುದರಿಂದ ಇಂಗ್ಲಿಷ್ ಮಾಧ್ಯಮದ ಒಂದು ಶಾಲೆಯನ್ನು ಹೆಚ್ಚುವರಿಯಾಗಿ ಮಂಜೂರಾತಿಯ ಪ್ರಸ್ತಾವನೆಯಿದೆ.
ಪಬ್ಲಿಕ್ ಶಾಲೆಗಳಲ್ಲಿ ಆರಂಭ: ಜಿಲ್ಲೆಯಲ್ಲಿ ಹಾಲಿ ಇರುವ 9 ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿಯೇ ಒಂದನೇ ತರಗತಿಯಿಂದ ಆರಂಭವಾಗುವ ಇಂಗ್ಲಿಷ್ ಮಾಧ್ಯಮ ಆರಂಭವಾಗಲಿದ್ದು, ಇನ್ನುಳಿದ 20 ಶಾಲೆಗಳನ್ನು ಹೊಸದಾಗಿ ಆಯ್ಕೆ ಮಾಡಲಾಗಿದೆ. ಹೋಬಳಿ ಕೇಂದ್ರ ಅಥವಾ ದೊಡ್ಡ ಗ್ರಾಮಗಳಲ್ಲಿ ಈಗಿರುವ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿಯೇ ಕನ್ನಡ ಮಾಧ್ಯಮದ ಜೊತೆಗೇ ಇಂಗ್ಲಿಷ್ ಮಾಧ್ಯಮದ ಬೋಧನೆ ಒಂದನೇ ತರಗತಿಯಿಂದ ಆರಂಭವಾಗಲಿದ್ದು, ಪೋಷಕರು ತಮ್ಮ ಮಕ್ಕಳನ್ನು ಕನ್ನಡ ಅಥವಾ ಇಂಗ್ಲಿಷ್ ಮಾಧ್ಯಮಕ್ಕೆ ಸೇರಿಸಬಹುದು.
ಅರಕಲಗೂಡು ವಿಧಾನಸಭಾ ಕ್ಷೇತ್ರ: ಬಾಲಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಸವಾಪಟ್ಟಣ (ಕೆಪಿಎಸ್), ಸರ್ಕಾರಿ ಪದವಿ ಪೂರ್ವ ಕಾಲೇಜು, ದೊಡ್ಡಮಗ್ಗೆ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಅರಕಲಗೂಡು, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಹಳ್ಳಿ ಮೈಸೂರು,
ಅರಸೀಕೆರೆ ವಿಧಾನಸಭಾ ಕ್ಷೇತ್ರ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಾಣಾವರ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುರುವಂಕ (ಕೆಪಿಎಸ್), ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಚಿಂದೇನಹಳ್ಳಿ ಗಡಿ (ಕೆಪಿಎಸ್), ಅರಸೀಕೆರೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ.
ಬೇಲೂರು ವಿಧಾನಸಭಾ ಕ್ಷೇತ್ರ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಳೆಬೀಡು (ಕೆಪಿಎಸ್), ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅರೇಹಳ್ಳಿ ಅಥವಾ ಹಲ್ಮಿಡಿ, ಸರ್ಕಾರಿ ಪದವಿ ಪೂರ್ವ ಕಾಲೇಜು ಹಗರೆ, ಬಾಲಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೇಲೂರು.
ಹಾಸನ ವಿಧಾನಸಭಾ ಕ್ಷೇತ್ರ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬೈಲಹಳ್ಳಿ (ಕೆಪಿಎಸ್), ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ವಾಣಿ ವಿಲಾಸ ಹಾಸನ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಧಾನ ಹಾಸನ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪೆನ್ಷನ್ ಮೊಹಲ್ಲಾ ಹಾಸನ.
ಹೊಳೆನರಸೀಪುರ ವಿಧಾನಸಭಾ ಕ್ಷೇತ್ರ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆನೆಕೆರೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊಸಳೆ ಹೊಸಹಳ್ಳಿ (ಕೆಪಿಎಸ್), ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹರಿಹರಪುರ (ಕೆಪಿಎಸ್), ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೋಟೆ, ಹೊಳೆನರಸೀಪುರ.
ಸಕಲೇಶಪುರ ಆಲೂರು ವಿಧಾನಸಭಾ ಕ್ಷೇತ್ರ: ನೂತನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಯರಕೊಪ್ಪಲು (ಕೆಪಿಎಸ್), ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆತ್ತೂರು (ಕೆಪಿಎಸ್), ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಕಲೇಶಪುರ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಾನುಬಾಳು (ಕೆಪಿಎಸ್).
ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರ: ಬಾಲಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ನುಗ್ಗೇಹಳ್ಳಿ (ಕೆಪಿಎಸ್), ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಚನ್ನರಾಯಪಟ್ಟಣ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೇಗಲಕೇರಿ ಚನ್ನರಾಯಪಟ್ಟಣ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪೇಟೆ, ಚನ್ನರಾಯಪಟ್ಟಣ.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![hassan](https://www.udayavani.com/wp-content/uploads/2024/07/hassan-2-150x84.jpg)
Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ
![Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ](https://www.udayavani.com/wp-content/uploads/2024/07/road-s-150x96.jpg)
Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ
![Sakaleshpura](https://www.udayavani.com/wp-content/uploads/2024/07/Sakaleshpura-1-150x84.jpg)
National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ
![HDK](https://www.udayavani.com/wp-content/uploads/2024/07/HDK-5-150x90.jpg)
MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್ಡಿಕೆ
![Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ](https://www.udayavani.com/wp-content/uploads/2024/07/19-4-150x90.jpg)
Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.