ಕೇಂದ್ರದಿಂದ ಹೆಲಿಕಾಪ್ಟರ್ ಕೊರತೆ ಸೃಷ್ಟಿ
ಪ್ರಚಾರಕ್ಕೆ ಅಡ್ಡಿ ಮಾಡುತ್ತಿರುವ ಬಿಜೆಪಿ ಸರ್ಕಾರ ಎಂದ ಎಚ್ಡಿಕೆ
Team Udayavani, Apr 4, 2019, 6:00 AM IST
ಚನ್ನರಾಯಪಟ್ಟಣ: ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರಿಗೆ ಹೆಲಿಕಾಪ್ಟರ್ ದೊರೆಯದಂತೆ ಕುತಂತ್ರ ಮಾಡಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.
ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಗೆ ಹೆಲಿ ಕಾ ಪ್ಟರ್ ದೊರೆತಲ್ಲಿ ಹೆಚ್ಚು ಓಡಾಡುತ್ತಾರೆ. ಇದರಿಂದ ಹೆಚ್ಚು ಜನರಿಗೆ ತಲುಪುತ್ತಾರೆ
ಎಂಬ ಕಾರಣದಿಂದಾಗಿ ಹೆಲಿಕಾಪ್ಟರ್ಗಳ ಕೊರತೆ ಸೃಷ್ಟಿಸಲಾಗಿದೆ.ಈ ಮೂಲಕ ಬಿಜೆಪಿ ಕೀಳು ಮಟ್ಟದ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿದರು.
ಚಿತ್ರ ನಟರು ಛತ್ರಿಯಿಂದ ಹೊರ ಬರಲಿ: ಮಂಡ್ಯದಲ್ಲಿ ಪ್ರಚಾರ ನಡೆಸುತ್ತಿ ರುವ ನಟ ಯಶ್ ಮತ್ತು ದರ್ಶನ್ ವಿರುದಟಛಿವೂ ಹರಿಹಾಯ್ದ ಅವರು,ನಟರಿಗೆ ಸಿನಿಮಾ ಚಿತ್ರೀಕರಣ ವೇಳೆ ಛತ್ರಿಯಲ್ಲಿ ಇದ್ದು ಅನುಭವವಾಗಿದೆ. ಅವರಿಗೆ ರೈತರು ಅನುಭವಿಸುವ ಕಷ್ಟ ಗೊತ್ತಿಲ್ಲ. ಈಗಲಾದರೂ ಛತ್ರಿಯಿಂದ ಹೊರ ಬಂದು ಬಿಸಿಲ ತಾಪಮಾನ ನೋಡಲಿ. ಆಗ ನಾಡಿನ ಜನರು ಅನುಭವಿಸುವ ಕಷ್ಟಗಳು ತಿಳಿಯುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK