ಹೇಮೆ ಹಿನ್ನೀರಿನಲ್ಲಿ ಮುಳುಗಿದ ಚರ್ಚ್‌


Team Udayavani, Aug 1, 2018, 3:47 PM IST

has.jpg

ಹಾಸನ: ಭರ್ತಿಯಾದ ಹೇಮಾವತಿ ಜಲಾಶಯ ಪ್ರವಾಸಿಗರನ್ನು ಸೆಳೆಯುತ್ತಿದೆ. ಈಗ ಜಲಾಶಯದ ಕ್ರಸ್ಟ್‌ಗೇಟ್‌ಗಳಲ್ಲಿ ನೀರಿನ ಹರಿವನ್ನು ಸ್ಥಗಿತಗೊಳಿಸಿದ ನಂತರ ಹೇಮಾವತಿ ಹಿನ್ನೀರಿನ ಪ್ರದೇಶಗಳು ಪ್ರವಾಸಿ ತಾಣ ಗಳಾಗಿವೆ. ಕೋನಾಪುರ ದ್ವೀಪ ಹಾಗೂ ಶೆಟ್ಟಿಹಳ್ಳಿಯ ಹಳೆಯ ಚರ್ಚ್‌ ಪ್ರವಾಸಿಗರನ್ನು ಸೆಳೆಯುತ್ತಿವೆ.

ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿರುವ ಪುರಾತನ ಚರ್ಚ್‌ ತೇಲುವ ಹಡಗಿನಂತೆ ಗೋಚರಿಸುತ್ತಿದೆ. ಈ ಹಿಂದೆ ಕೆಲವು ಚಲನಚಿತ್ರಗಳ ಚಿತ್ರೀಕರಣದ ತಾಣ ವಾಗಿದ್ದ ಚರ್ಚ್‌ ಈಗ ಪ್ರವಾಸಿಗರ ತಾಣವಾಗಿದೆ. ಜಲಾಶಯದ ನೀರು ಇಳಿದ ಬೇಸಿಗೆಯ ಸಂದರ್ಭದಲ್ಲಿ ಯುವಜನರ ಮೋಜಿನ ತಾಣವಾಗುವ ಶೆಟ್ಟಿಹಳ್ಳಿ ಹಳೆಯ ಚರ್ಚ್‌ ಪರಿಸರ ಮಳೆಗಾಲದಲ್ಲಿ ಜಲಾಶಯ ಭರ್ತಿಯಾದ ಸಂದರ್ಭದಲ್ಲಿ ಪ್ರವಾಸಿಗರನ್ನು ಸೆಳೆಯುತ್ತಿದೆ.

1860 ರಲ್ಲಿ ಪ್ರಂಚ್‌ ಪಾದ್ರಿಗಳಾದ ಅಬ್ಬೆ – ದಬ್ಬೆ ಎಂಬುವರ ನೇತೃತ್ವದಲ್ಲಿ ನಿರ್ಮಾಣವಾಗಿದ್ದ ಚರ್ಚ್‌ ಹೇಮಾವತಿ ಜಲಾಶಯದ ನಿರ್ಮಾಣವಾಗಿ ಜಲಾಶಯದಲ್ಲಿ ಪೂರ್ಣ ಪ್ರಮಾಣದಲ್ಲಿ ನೀರು ನಿಲುಗಡೆ ಮಾಡಿದ ನಂತರ ಮುಳುಗಡೆ ಪ್ರದೇಶವಾಯಿತು.

ಜಲಾಶಯವು ಭರ್ತಿಯಾದ ಸಂದರ್ಭದಲ್ಲಿ ಬಹುಪಾಲು ಮುಳುಗುವ ಚರ್ಚ್‌ ಮುಳುಗುವ ಹಡಗಿನಂತೆ ಗೋಚರಿಸುತ್ತದೆ. ಹಾಗಾಗಿ ಮಂಗಳೂರು -ಬೆಂಗಳೂರು ನಡುವೆ ಸಂಚ ರಿಸುವ ಪ್ರವಾಸಿಗರು ಸಮಯ ಸಿಕ್ಕರೆ ಶೆಟ್ಟಿಹಳ್ಳಿ ಚರ್ಚ್‌ ವೀಕ್ಷಿಸಿ ಫೋಟೋ ಕ್ಲಿಕ್ಕಿಸಿ ಕೊಂಡು ಹೋಗುತ್ತಾರೆ.

ಹಾಸನದಿಂದ ಸುಮಾರು 15 ಕಿ.ಮೀ. ದೂರದಲ್ಲಿರುವ ಶೆಟ್ಟಿಹಳ್ಳಿ ಪ್ರಮುಖ ಗ್ರಾಮ. ಹಾಸನದಿಂದ ಶಂಕರನಹಳ್ಳಿ – ಕಲ್ಲಹಳ್ಳಿ ಮಾರ್ಗವಾಗಿ ಶೆಟ್ಟಿಹಳ್ಳಿ ತಲಪ ಬಹುದು. ಹಾಸನ – ಅರಕಲಗೂಡು ರಸ್ತೆಯಲ್ಲಿ ಕಟ್ಟಾಯ ಗ್ರಾಮ ಕಡೆಯಿಂದಲೂ ಶೆಟ್ಟಿಹಳ್ಳಿಗೆ ಹೋಗಬಹುದು.

ಹೇಮಾವತಿ ಜಲಾಶಯದಲ್ಲಿ ಕಳೆದ 36 ವರ್ಷಗಳಿಂದ ನೀರು ನಿಲ್ಲಿಸಲಾಗುತ್ತಿದೆ. ಅಷ್ಟು ವರ್ಷಗಳಿಂದಲೂ ಶೆಟ್ಟಿಹಳ್ಳಿಯ
ಚರ್ಚ್‌ ಕೆಲವು ವರ್ಷಗಳ ಮಳೆಗಾಲದಲ್ಲಿ ಭಾಗಶಃ, ಜಲಾಶಯ ಭರ್ತಿಯಾದ ವರ್ಷ ದಲ್ಲಿ ಬಹುಪಾಲು ಮುಳುಗುತ್ತದೆ.

ಆದರೂ ಚರ್ಚ್‌ನ ಗೋಡೆಗಳು, ಕಮಾನುಗಳು ಮಾತ್ರ ಕುಸಿದು ಬಿದ್ದಿಲ್ಲ. ಇದು ಅಂದಿನ ಗುಣ ಮಟ್ಟದ ಕಾಮಗಾರಿಗೆ
ಸಾಕ್ಷಿಯಾದಂತಿದೆ. ಬೇಸಿಗೆ ಕಾಲದಲ್ಲಿ ನೀರು ಇಳಿದ ನಂತರ ಚರ್ಚ್‌ ಸುತ್ತಾಡಿ ಬರಬಹುದು. ಈಗ ನೀರು ತುಂಬಿರುವುದರಿಂದ ದೂರದಿಂದಲೇ ಚರ್ಚ್‌ನ ತುದಿಯ ಗೋಡೆಗಳು ಜಲ ರಾಶಿಯ ನಡುವೆ ಮಳುಗುತ್ತಿರುವ ಹಡಗಿನಂತಹ ದೃಶ್ಯವನ್ನು ಕಣ್ತುಂಬಿಕೊಳ್ಳಬಹುದು.  

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.