ಭಾರತ ಸಂವಿಧಾನ ಶ್ರೇಷ್ಠ: ಶಾಸಕ ಕುಮಾರಸ್ವಾಮಿ
Team Udayavani, Jan 27, 2019, 9:29 AM IST
ಸಕಲೇಶಪುರ: ದೇಶದಲ್ಲಿ ಸಂವಿಧಾನವನ್ನು ಜಾರಿಗೆ ಮಾಡಿದ್ದರಿಂದ ಭಾರತ ದೇಶ ಬೇರೆಲ್ಲಾ ದೇಶಗಳಿಗಿಂತ ಸುಭದ್ರವಾಗಿದೆ ಎಂದು ಶಾಸಕ ಎಚ್.ಕೆ. ಕುಮಾರಸ್ವಾಮಿ ಹೇಳಿದರು.
ಪಟ್ಟಣದ ಸುಭಾಷ್ ಮೈದಾನದಲ್ಲಿ 70ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತ ಸಂವಿಧಾನವನ್ನು ನಾವು ಅಳ ವಡಿಸಿಕೊಂಡ ನಂತರ ಮೇಲು, ಕೀಳು, ಜಾತಿ, ಧರ್ಮಗಳ ಅಂತರ ಕಡಿಮೆಯಾ ಗುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದರು. ರಾಜ್ಯಗಳ ನಡುವೆ ಪರಸ್ಪರ ಪೈಪೋಟಿ ನಡೆಯುತ್ತಿದ್ದು, ಈ ಪೈಪೋಟಿಯನ್ನು ತೊಡೆದು ಹಾಕಿ ದೇಶ ಮೊದಲು ಎಂಬ ಭಾವನೆಯನ್ನು ಅಳ ವಡಿಸಿಕೊಳ್ಳಬೇಕು. ಇದರಿಂದ ದೇಶ ಹೆಚ್ಚು ಮುಂದುವರಿಯಲು ಸಹಕಾರಿ ಯಾಗುತ್ತದೆ ಎಂದರು.
ದೇಶದಲ್ಲಿ ಸಂವಿಧಾನ ಜಾರಿಗೆ ಬಂದು ಸುಮಾರು 70 ವರ್ಷಗಳಾಗು ತ್ತಿದೆ. ಇದರಿಂದ ದೇಶದಲ್ಲಿ ಹಲವು ಬದಲಾವಣೆಯಾಗಿದೆ. ದೇಶಕ್ಕಾಗಿ ತ್ಯಾಗ ಮಾಡುವ ಪ್ರತಿಜ್ಞೆಯೊಂದಿಗೆ ಗಣ ರಾಜ್ಯೋತ್ಸವವನ್ನು ಸಂಭ್ರಮಿ ಸೋಣ ಎಂದರು.
ಉಪ ವಿಭಾಗಾಧಿಕಾರಿ ಗಿರೀಶ್ ನಂದನ್ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದರೂ ದೇಶದಲ್ಲಿ ರಾಜರ ಆಡಳಿತ ವಿತ್ತು. ಆದ್ದರಿಂದ ಎಲ್ಲರನ್ನೂ ದೇಶದಲ್ಲಿ ಒಂದೂಗೂಡಿಸಲು ಸಂವಿಧಾನದ ಅಗತ್ಯವಿತ್ತು. ಈ ಹಿನ್ನೆಲೆಯಲ್ಲಿ ಅಂಬೇಡ್ಕರ್ ಸಂವಿಧಾನವನ್ನು ರಚಿಸಿ ಎಲ್ಲರನ್ನೂ ಒಗ್ಗೂಡಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವನ್ನು ಸನ್ಮಾನಿಸಲಾಯಿತು. ಮಕ್ಕಳಿಂದ ನೃತ್ಯ ಪ್ರದರ್ಶನ ನಡೆಯಿತು.ತಾಪಂ ಅಧ್ಯಕ್ಷೆ ಶ್ವೇತಾ, ಉಪಾಧ್ಯಕ್ಷ ಉದಯ್, ತಹಶೀಲ್ದಾರ್ ನಾಗ ಭೂಷಣ್, ಪುರಸಭಾ ಮುಖ್ಯಾಧಿಕಾರಿ ವಿಲ್ಸನ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್ಡಿಡಿ
Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ
Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್ಗೆ ಲಾಭ?
Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್ ರೇವಣ್ಣ ಪ್ರಚಾರಕ್ಕೆ ಚಾಲನೆ
MUST WATCH
ಹೊಸ ಸೇರ್ಪಡೆ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ