ಶಿಥಿಲವಾಗಿರುವ ಕುಂಬ್ರಹಳ್ಳಿ ಸರ್ಕಾರಿ ಶಾಲಾ ಕಟ್ಟಡ


Team Udayavani, May 26, 2019, 3:00 AM IST

shithila

ಸಕಲೇಶಪುರ: ತಾಲೂಕಿನ ಯಸಳೂರು ಹೋಬಳಿಯ ಕುಂಬ್ರಹಳ್ಳಿ, ಹೆಸರು ಕೇಳಿದೊಡನೆ ಎಲ್ಲರಿಗೂ ನೆನಪಾಗುವುದು ಪಕ್ಷಾತೀತ ಸುಶಿಕ್ಷಿತ ರಾಜಕಾರಣಿ ಮಾಜಿ ಶಾಸಕ ದಿವಂಗತ ಬಿ.ಬಿ. ಶಿವಪ್ಪನವರು. ಆದರೆ ಇಂತಹ ಸುಶಿಕ್ಷಿತರ ಊರಿನಲ್ಲಿ ಇಂದು ಮಕ್ಕಳಿಗೆ ಶಿಕ್ಷಣ ಮರೀಚಿಕೆಯಾಗುವ ಪರಿಸ್ಥಿತಿ ಬಂದೊದಗಿರುವುದು ವಿಪರ್ಯಾಸವಾಗಿದೆ.

ಬಡ ಮಕ್ಕಳ ವ್ಯಾಸಂಗ: ಸುಮಾರು 350 ಜನಸಂಖ್ಯೆ ಇರುವ ಈ ಊರಿಗೆ ಹೊಂದಿಕೊಂಡಂತೆ ಹೂವಿನಳ್ಳಿ, ಕೋಡ್ರಳ್ಳಿ, ಕೊತ್ತನಹಳ್ಳಿ, ಚಿಕ್ಕಲ್ಲೂರು ಗ್ರಾಮಗಳಿದ್ದು ಈ ಎಲ್ಲಾ ಊರುಗಳಲ್ಲಿ, ಬಹುತೇಕ ಬಡವರು ಹಾಗೂ ಮಧ್ಯಮವರ್ಗದ ಜನರೇ ವಾಸಿಸುತ್ತಿದ್ದಾರೆ.

ಆರ್ಥಿಕವಾಗಿ ಸಬಲರಾಗಿರುವ ಪೋಷಕರು ತಮ್ಮ ಮಕ್ಕಳನ್ನು ದೂರದ ಊರುಗಳಾದ ಹೊಸಕೋಟೆ, ಶುಕ್ರವಾರಸಂತೆ, ಕೊಡ್ಲಿಪೇಟೆ, ಹೆತ್ತೂರಿನ ಶಾಲೆಗಳಿಗೆ ವಿದ್ಯಾಭ್ಯಾಸಕ್ಕೆ ಕಳುಹಿಸುತ್ತಿದ್ದಾರೆ. ದುಬಾರಿ ಶಾಲಾ ವಾಹನದ ವೆಚ್ಚವನ್ನು ಭರಿಸಲು ಆಗದ ಈ 5 ಊರಿನ ಹಲವು ಬಡ ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಕುಂಬ್ರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನೇ ಆಶ್ರಯಿಸಿದ್ದಾರೆ.

ಕುಂಬ್ರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಒಂದರಿಂದ ಏಳನೇ ತರಗತಿವರೆಗೆ 7 ಪ್ರತ್ಯೇಕ ಕೊಠಡಿಗಳಿದ್ದು, ಸುಮಾರು 48 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಶಾಲೆಯು ಉತ್ತಮ ಶಿಕ್ಷಕರನ್ನು ಹೊಂದಿದ್ದು, ಹೋಬಳಿಯ ಎರಡನೇ ಅತಿ ಹೆಚ್ಚು ಮಕ್ಕಳಿರುವ ಸರ್ಕಾರಿ ಶಾಲೆಯಾಗಿರುವುದು ಸುತ್ತಮುತ್ತಲಿನ ಊರಿನ ಜನರಿಗೆ ಹೆಮ್ಮೆಯಾಗಿದೆ.

ಕುಸಿಯುತ್ತಿದೆ ಶಾಲೆ: ಕಳೆದ ವರ್ಷ ಸುರಿದ ಅಧಿಕ ಮಳೆ ಹಾಗೂ ಹತ್ತಿರದಲ್ಲೇ ಹರಿಯುವ ಹೇಮಾವತಿಯ ಹಿನ್ನೀರಿನ ಪರಿಣಾಮ, ಮಣ್ಣಿನ ಗೋಡೆಯಿಂದ ನಿರ್ಮಿಸಿದ ಈ ಹಳೆ ಶಾಲೆಯ ಕಟ್ಟಡಗಳು ಅಧಿಕ ಶೀತದಿಂದ ಕುಸಿಯಲಾರಂಬಿಸಿದೆ. ಈ ಶಾಲೆಯ ದುಸ್ಥಿತಿ ಯಾವ ಮಟ್ಟಕ್ಕೆ ತಲುಪಿದೆಯೆಂದರೆ ಪ್ರಾಣಕ್ಕೆ ಕುತ್ತು ತರಬಹುದಾದ ಈ ಕೊಠಡಿಗಳಿಂದ ಮಕ್ಕಳನ್ನು ರಕ್ಷಿಸಲು, ಎಲ್ಲಾ ತರಗತಿಯ ಮಕ್ಕಳನ್ನು ಒಂದೇ ಕೊಠಡಿಯಲ್ಲಿ ಕೂರಿಸಿ ಪಾಠ ಮಾಡುತ್ತಿದ್ದಾರೆ.

ಶಾಲೆ ಮುಚ್ಚುವ ಭೀತಿ: ಚಿಕ್ಕಲ್ಲೂರಿನಲ್ಲಿ ಇದ್ದ ಸರ್ಕಾರಿ ಶಾಲೆಯೂ ಮುಚ್ಚಿದ್ದು, ಕುಂಬ್ರಹಳ್ಳಿಯ ಈ ಶಾಲೆಯೂ ಮುಚ್ಚಿದರೆ, ಸುತ್ತಲಿನ 5 ಊರಿನ ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಕಡು ಬಡತನವಿದ್ದರೂ ತಮ್ಮ ಕಷ್ಟಗಳನ್ನು ಲೆಕ್ಕಿಸದೇ, ಮಕ್ಕಳನ್ನು ಶಾಲೆಗೆ ಕಳುಹಿಸಿ ಅವರ ಭವಿಷ್ಯ ರೂಪಿಸಲು ಹೊರಟ ಪೋಷಕರಿಗೆ ಇಂದು ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಆ ಮಕ್ಕಳ ಶೈಕ್ಷಣಿಕ ಭವಿಷ್ಯ ಪ್ರಾಣ ಎರಡೂ ಅಪಾಯದಲ್ಲಿದೆ. ಈ ಹಿನ್ನೆಲೆಯಲ್ಲಿ ಕಟ್ಟಡ ದುರಸ್ತಿಗೆ ಶಾಸಕರಾದ ಕುಮಾರಸ್ವಾಮಿಯವರು 4.5 ಲಕ್ಷ ರೂ. ಬಿಡುಗಡೆ ಮಾಡಿದ್ದು ಹಾಗೂ ತಾಲೂಕು ಪಂಚಾಯಿತಿಯ ಉಪಾಧ್ಯಕ್ಷ ಕೃಷ್ಣೇಗೌಡರು ತಾಲೂಕು ಪಂಚಾಯಿತಿಯಿಂದ 2 ಲಕ್ಷ ರೂ. ಬಿಡುಗಡೆ ಮಾಡುವ ಬಗ್ಗೆ ಭರವಸೆ ನೀಡಿದ್ದಾರೆ.

ಶಾಲೆಯ 7 ಕೊಠಡಿಗಳು ದುರಸ್ತಿ ಮಾಡಲಾಗದಷ್ಟು ಹದಗೆಟ್ಟಿದ್ದು, ಎಲ್ಲಾ ಕೊಠಡಿಗಳನ್ನು ಹೊಸದಾಗಿಯೇ ನಿರ್ಮಿಸಬೇಕಾಗಿದೆ. ಶಾಸಕರ ಅನುದಾನ ಸೇರಿದಂತೆ ಇತರರು ಕೊಡಲು ಉದ್ದೇಶಿಸಿರುವ ಧನಸಹಾಯವು, ಒಂದು ಕೊಠಡಿಯ ನಿರ್ಮಾಣಕ್ಕೂ ಸಾಕಾಗುವುದಿಲ್ಲ. ಇದರಿಂದ ಮುಂದೇನು ಮಾಡಬೇಕೆಂಬುದು ಯಕ್ಷಪ್ರಶ್ನೆಯಾಗಿದೆ.

ಸಂಬಂಧಪಟ್ಟ ಅಧಿಕಾರಿಗಳು, ರಾಜಕಾರಣಿಗಳು ಜನಪ್ರತಿನಿಧಿಗಳು ಶೀಘ್ರದಲ್ಲಿ ಇತ್ತ ಗಮನಹರಿಸಿ, ಬಡಮಕ್ಕಳ ಭವಿಷ್ಯವನ್ನು ಅಂಧಕಾರಕ್ಕೆ ತಳ್ಳದೆ, ಅವರಿಗೆ ದಾರಿದೀಪವಾಗಬೇಕೆಂದು ಕುಂಬ್ರಹಳ್ಳಿ ಸುತ್ತಮುತ್ತಲಿನ ಊರಿನ ಪೋಷಕರು ವಿನಯಪೂರ್ವಕವಾಗಿ ಮನವಿ ಮಾಡುತ್ತಿದ್ದಾರೆ.

ಶಾಲೆಗೆ ನೂತನ ಕಟ್ಟಡ ನಿರ್ಮಾಣ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ನೀತಿ ಸಂಹಿತೆ ಮುಗಿದ ನಂತರ ಹೊಸ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಸುಮಾರು 50ಲಕ್ಷ ರೂ.ಬಿಡುಗಡೆಯಾಗಬಹುದು.
-ಶಿವಾನಂದ್‌, ಕ್ಷೇತ್ರ ಶಿಕ್ಷಣಾಧಿಕಾರಿ

ಶಾಲಾ ಕಟ್ಟಡವನ್ನು ಹೊಸದಾಗಿ ಕಟ್ಟಲು ಶಿಕ್ಷಣ ಇಲಾಖೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಲು ಕ್ರಮ ಕೈಗೊಳ್ಳಬೇಕು ಹಾಗೂ ದಾನಿಗಳು ಸಹ ಶಾಲೆಯ ಅಭಿವೃದ್ಧಿಗೆ ಸಹಾಯ ಹಸ್ತ ಚಾಚಬೇಕು.
-ಕಿರಣ್‌, ಕುರುಭತ್ತೂರು ಗ್ರಾಪಂ ಮಾಜಿ ಅಧ್ಯಕ್ಷ

* ಸುಧೀರ್‌ ಎಸ್‌.ಎಲ್‌

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.