ಕಲುಷಿತವಾಗುತ್ತಿದೆ ಹೇಮಾವತಿ ನದಿ


Team Udayavani, Nov 26, 2019, 3:00 AM IST

kalushita

ಹೊಳೆನರಸೀಪುರ: ಪಟ್ಟಣದಲ್ಲಿ ಶೇಖರಣೆಯಾಗುವ ಚರಂಡಿ ನೀರು ಹೇಮಾವತಿ ನದಿಗೆ ಸೇರುತ್ತಿದ್ದು, ನದಿ ಕಲುಷಿತವಾಗುತ್ತಿದೆ. ಕಳೆದ ಹತ್ತಾರು ವರ್ಷಗಳಿಂದ ಪಟ್ಟಣದ ಚರಂಡಿ ನೀರು ನೇರವಾಗಿ ನದಿ ಸೇರುತ್ತಿದೆ. ಈ ಬಗ್ಗೆ ಸಾರ್ವಜನಿಕರು ಅನೇಕ ಬಾರಿ ಜಿಲ್ಲಾಡಳಿತದ ಗಮನ ಸೆಳೆದಿದ್ದರೂ ಚರಂಡಿ ನೀರು ನದಿಗೆ ಸೇರುವುದನ್ನು ತಡೆಗಟ್ಟುವಲ್ಲಿ ಪುರಸಭೆ ಅಧಿಕಾರಿಗಳು ಇಲ್ಲಿಯವರೆಗೂ ಯಾವುದೇ ಕ್ರಮಕೈಗೊಳ್ಳದೇ ಇರುವುದು ಆತಂಕಕಾರಿ ವಿಷಯವಾಗಿದೆ.

ಸಂಸ್ಕರಣ ಘಟಕವಿದ್ದರೂ ಪ್ರಯೋಜನವಿಲ್ಲ: ಪ್ರಸ್ತುತ ಪಟ್ಟಣದಲ್ಲಿ ಒಳಚರಂಡಿ ಯೋಜನೆ ಕೈಗೊಂಡು ಹತ್ತಾರು ವರ್ಷಗಳೇ ಕಳೆದಿದೆ. ಈ ಒಳಚರಂಡಿ ನೀರನ್ನು ಸಂಸ್ಕರಣೆ ಮಾಡಿ ನದಿಗೆ ಬಿಡಲು ಸಂಸ್ಕರಣೆ ಮಾಡಲು ಚನ್ನರಾಯಪಟ್ಟಣದ ರಸ್ತೆಯಲ್ಲಿ ದೊಡ್ಡದಾದ ಮೂರು ಗುಂಡಿಗಳನ್ನು ತೆರದು ಮೂರು ಹಂತದಲ್ಲಿ ಸಂಸ್ಕರಣೆ ಮಾಡಲು ಪುರಸಭೆ ಮುಂದಾಗಿದೆ. ಆದರೆ ಈ ಸಂಸ್ಕರಣೆ ಗುಂಡಿ ಸಮರ್ಪಕವಾಗಿ ಕಾರ್ಯನಿರ್ವಹಿಸದ ಕಾರಣ ಒಳಚರಂಡಿಯಲ್ಲಿ ಬರುವ ಕೊಳಚೆ ನೀರು ಹೇಮಾವತಿ ನದಿಯನ್ನು ಸೇರುತ್ತಿದೆ. ಇದರಿಂದ ಹೇಮಾವತಿ ನದಿಯ ನೀರು ಸೇವಿಸಲೂ ಸಾಧ್ಯವಾಗಷ್ಟು ಮಲಿನವಾಗಿದೆ.

ಅಧಿಕಾರಿಗಳ ನಿರ್ಲಕ್ಷ್ಯ: ಈ ಹಿಂದೆ ಕೊಳಚೆ ನೀರು ನದಿ ಮಡಿಲು ಸೇರುತ್ತಿರುವ ಬಗ್ಗೆ ಅನೇಕ ಬಾರಿ ಮಾಧ್ಯಮಗಳಲ್ಲಿ ವರದಿಯಾಗಿದ್ದರೂ ಜಿಲ್ಲಾಡಳಿತ ಮತ್ತು ಕೊಳಚೆ ನಿಮೂರ್ಲನಾ ಮಂಡಳಿ ಕಠಿಣ ಕ್ರಮ ಕೈಗೊಳ್ಳದೇ ಇದ್ದುದರಿಂದ ನದಿ ಕಲುಷಿತಗೊಂಡು ವಿಷಕಾರಿಯಾಗುತ್ತಿದೆ. ಈ ಹಿಂದೆ ಹೇಮಾವತಿ ನದಿ ನೀರು ಕುಡಿಯಲು ಪನ್ನೀರಿನ ರುಚಿ ಇತ್ತು ಆದರೆ ಇಂದು ನದಿ ನೀರನ್ನು ನೇರವಾಗಿ ಸೇವಿಸಿದರೆ ರೋಗದಿಂದ ಬಳಲುವುದು ಖಚಿತವಾಗಿದೆ.

ನದಿಯಲ್ಲಿ ಈಜಿದರೆ ರೋಗ ಖಚಿತ: ದಶಕದ ಹಿಂದೆ ಪಟ್ಟಣದ ಯುವಕರು ನದಿಗೆ ಈಜಾಡಲು ತೆರಳುತ್ತಿದ್ದರು. ಆದರೆ ಇಂದು ನದಿಯಲ್ಲಿ ಈಜಲು ಹೋದರೆ ಚರ್ಮ ರೋಗಗಗಳು ಬರುವುದು ಖಚಿತವಾಗಿದೆ.

ಪುರಸಭೆ ಮಾಜಿ ಸದಸ್ಯರಿಂದ ಲಿಖಿತ ದೂರು: ಹೇಮಾವತಿ ನದಿಗೆ ಚರಂಡಿ ಹಾಗೂ ಒಳ ಚರಂಡಿ ನೀರು ಸೇರ್ಪಡೆ ಯಾಗುತ್ತಿರುವ ಬಗ್ಗೆ ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್‌ ಮುಖಂಡ ಮುಜಾಹಿದ್‌ಪಾಷಾ ಜಿಲ್ಲಾಧಿಕಾರಿ ಹಾಗೂ ಕೊಳಚೆ ನಿಮೂರ್ಲನಾ ಮಂಡಳಿಗೆ ಲಿಖಿತ ದೂರು ನೀಡಿ ತಕ್ಷಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಪರಿಸ್ಥಿತಿ ಇದೇ ರೀತಿ ಮುಂದುವರಿದಲ್ಲಿ ಮುಂದಿನ ದಿನಗಳಲ್ಲಿ ನದಿ ಸಂಪೂರ್ಣ ವಿಷಕಾರಿಯಾಗುತ್ತದೆ ಎಂದು ಪತ್ರದಲ್ಲಿ ಎಚ್ಚರಿಸಿದ್ದಾರೆ.

ಅಕ್ರಮ ಮರಳು ಮಾಫಿಯಾ: ಅಕ್ರಮ ಮರಳು ತುಂಬುವ ಮಾಫಿಯಾ ನದಿಯಲ್ಲಿದ್ದ ಮರಳನ್ನೆಲ್ಲಾ ಬಗೆದು ತೆಗೆದಿದ್ದರಿಂದ ನದಿಯ ನೀರು ಕಲುಷಿತಗೊಳ್ಳಲು ಕಾರಣವಾಗಿದೆ. ಕೆಲವು ಮಂದಿ ನದಿ ದಡದಲ್ಲಿ ಅನಧಿಕೃತವಾಗಿ ದನಗಳನ್ನು ಕಡಿಯುತ್ತಿರುವುದರಿಂದ ದನಗಳ ರಕ್ತ ನದಿಯ ನೀರು ಸೇರುತ್ತಿದೆ. ಜಿಲ್ಲಾಡಳಿತ ಅಕ್ರಮ ಕಸಾಯಿ ಖಾನೆಗಳ ಮೇಲೆ ಹಲವಾರು ಬಾರಿ ದಾಳಿ ನಡೆಸಿದರೂ ಮತ್ತೆ ಕೆಲ ದಿನಗಳಲ್ಲೇ ಕಸಾಯಿ ಖಾನೆ ಆರಂಭವಾಗುತ್ತಿದೆ.

ಹೇಮಾವತಿ ನದಿಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿದೆ. ಈ ಹಿನ್ನೆಲೆಯಲ್ಲಿ ಪುರಸಭೆಯಿಂದ ನದಿಗೆ ಕೊಳಚೆ ನೀರು ಸೇರುತ್ತಿರುವುದನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.
-ವಸಂತ, ಪುರಸಭೆ ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.