ಕೋವಿಡ್‌ 19 ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆ


Team Udayavani, May 19, 2020, 7:59 AM IST

coro-sonkitara

ಹಾಸನ: ಮಹಾರಾಷ್ಟ್ರದಿಂದ ಬಂದವರಲ್ಲಿ ಕೋವಿಡ್‌ 19 ಪಾಟಿಸಿವ್‌ ಪ್ರಕರಣಗಳು ಪ್ರತಿ ದಿನವೂ ವರದಿಯಾಗುತ್ತಿದ್ದು, ಸೋಮವಾರ ನಾಲ್ವರಲ್ಲಿ ಕೋವಿಡ್‌ 19 ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕಿತರ ಸಂಖ್ಯೆ ಈಗ 30ಕ್ಕೇರಿದೆ. ಮಹಾರಾಷ್ಟ್ರದಿಂದ ಬಂದಿರುವ ಚನ್ನರಾಯ ಪಟ್ಟಣ ತಾಲೂಕು ಒಂದೇ ಕುಟುಂಬದ ಮೂವರಲ್ಲಿ ಕೋವಿಡ್‌ 19 ಪತ್ತೆಯಾಗಿದ್ದು, ಮಹಾರಾಷ್ಟ್ರದಲ್ಲಿದ್ದ ಸಂಬಂಧಿಕರ ಮನೆಗೆ ಹೋಗಿದ್ದ ಹೊಳೆನರಸೀಪುರ ತಾಲೂಕಿನ  ಹಳ್ಳಿಯೊಂದರ 17 ವರ್ಷದ ಶಾಲಾ ಬಾಲಕನಿಗೂ ಸೋಂಕು ದೃಢಪಟ್ಟಿದೆ.

ಸುದ್ದಿಗೋಷ್ಠಿಯಲ್ಲಿ ಕೋವಿಡ್‌ 19 ಪ್ರಕರಣ ಗಳ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಅವರು, ಚನ್ನರಾಯಪಟ್ಟಣ ತಾಲೂಕಿನ  ಮೂಲದ 40 ವರ್ಷದ ಮಹಿಳೆ, 29 ವರ್ಷದ ಮಹಿಳೆ ಹಾಗೂ 34 ವರ್ಷದ ಪುರುಷನಲ್ಲಿ ಕೋವಿಡ್‌ 19 ಪತ್ತೆಯಾಗಿದೆ. ಮೇ12 ರಂದು ಮಹಾರಾಷ್ಟ್ರ ರಾಜ್ಯದಿಂದ 5 ಜನರು ಕಾರಿನಲ್ಲಿ ಬಂದಿದ್ದು, ಅವರಲ್ಲಿ ಈಗ  ಮೂವರಿಗೆ ಕೋವಿಡ್‌ 19  ದೃಢಪಟ್ಟಿದೆ.

ಇಬ್ಬರು ಮಕ್ಕಳ ವರದಿ ನೆಗೆಟಿವ್‌ ಎಂದು ಬಂದಿದೆ. ಸೋಂಕು ದೃಢಪಟ್ಟಿರುವ ಹೊಳೆನರಸೀಪುರ ತಾಲೂಕು ಮೂಲದ 17 ವರ್ಷದ ಬಾಲಕ ಕಾರಿನಲ್ಲಿ ಐವರೊಂದಿಗೆ ಮೇ14ರಂದು ಬಂದಿದ್ದ. ಆತನನ್ನು ಹೊಳೆನರಸೀಪುರ  ತಾಲೂಕು ದೊಡ್ಡ ಕಾಡನೂರು ಕ್ವಾರಂಟೈನ್‌ ಕೇಂದ್ರದಲ್ಲಿದ್ದ. ಇನ್ನು ನಾಲ್ವರು ಮಂಡ್ಯ ಜಿಲ್ಲೆ ಕೆ.ಆರ್‌.ಪೇಟೆಗೆ ಹೋಗಿದ್ದಾರೆ ಎಂದು ವಿವರ ನೀಡಿದರು.

ಹಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ: ಎಲ್ಲ ನಾಲ್ವರು ಸೋಂಕಿತರನ್ನು ಹಾಸನದ ಹಿಮ್ಸ್‌ನ ಕೋವಿಡ್‌ 19 ಆಸ್ಪತ್ರೆಗೆ ದಾಖಲು ಮಾಡಲಾ ಗಿದೆ. ಹಿಮ್ಸ್‌ ಆಸ್ಪತ್ರೆಯಲ್ಲಿ 30 ಸೋಂಕಿತ ರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ 470 ಜನರ ಪರೀûಾ ವರದಿ ನಿರೀಕ್ಷಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ವಲಸೆ ಕಾರ್ಮಿಕರಿಗೆ ನೆರವು: ಮೇ 17 ರಂದು ರಾತ್ರಿ ಹಾಸನ ರೈಲು ನಿಲ್ದಾಣದಿಂದ 1,440 ಜನ ವಲಸೆ ಕಾರ್ಮಿಕರನ್ನು ಬಿಹಾರಕ್ಕೆ ರೈಲಿನ ಮುಖಾಂತರ ಕಳುಹಿಸಲಾಗಿದೆ. ಈ ಸಂದರ್ಭದಲ್ಲಿ ಅವರ ಆರೋಗ್ಯ ತಪಾಸಣೆ ಮಾಡಿ,  ಆಹಾರವನ್ನು ಒದಗಿಸಿ ಕಳುಹಿಸ ಲಾಗಿದೆ. ಉಳಿದವರಿಗಾಗಿ ಮತ್ತೂಂದು ರೈಲಿನ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.

ಮೇ 19ರಂದು ಮಧ್ಯಪ್ರದೇಶ ಮೂಲದ 120ಜನ ವಲಸೆ ಕಾರ್ಮಿಕರನ್ನು ಬೆಂಗಳೂರಿನ ಮೂಲಕ ಅವರ  ಸ್ವಂತ ಊರಿಗೆ ಕಳುಹಿಸ ಲಾಗುತ್ತಿದೆ ಎಂದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್‌. ಶ್ರೀನಿವಾಸಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ. ಪರಮೇಶ್‌, ಉಪಭಾಗಾಧಿಕಾರಿ ಡಾ. ನವೀನ್‌ ಭಟ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್‌ ಕುಮಾರ್‌ ಸುದ್ದಿಗೋಷ್ಠಿಯಲ್ಲಿ ದ್ದರು.

ಈವರೆಗೂ ಹೊರರಾಜ್ಯ ಗಳಿಂದ ಬಂದಿರುವ 294 ಜನರನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಮತ್ತು 878 ಜನರನ್ನು ಹಾಸ್ಟೆಲ್‌ ಗಳಲ್ಲಿ ಕ್ವಾರಂಟೈನ್‌ ಮಾಡಲಾಗಿದೆ. ಹೊರ ಜಿಲ್ಲೆ ಹಾಗೂ ಹೊರ ರಾಜ್ಯಕ್ಕೆ ಪ್ರಯಾಣಿಸುವ ಪಾಸ್‌ ಪಡೆಯುವ ಸೇವಾ  ಸಿಂಧು ಆ್ಯಪ್‌ನಲ್ಲಿ ಕಂಡು ಬಂದಿದ್ದ ತಾಂತ್ರಿಕ ದೋಷವನ್ನು ಸರಿಪಡಿಸಲಾಗಿದೆ.
-ಆರ್‌. ಗಿರೀಶ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdsad

Hassan; ನೀರಿಗಾಗಿ ಪ್ರತಿಭಟನೆ ನಡೆಸಿದ ಜೆಡಿಎಸ್: ಎಚ್ಚರಿಕೆ

Lok Sabha Election: ತಪ್ಪು ತಿದ್ದಿಕೊಳ್ಳಲು ಅವಕಾಶ ಕೊಡಿ: ಎಚ್‌ಡಿಕೆ

Lok Sabha Election: ತಪ್ಪು ತಿದ್ದಿಕೊಳ್ಳಲು ಅವಕಾಶ ಕೊಡಿ: ಎಚ್‌ಡಿಕೆ

ಶಿರಾಡಿಘಾಟಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ… ಗ್ಯಾಸ್ ಸೋರಿಕೆ, ಅಗ್ನಿಶಾಮಕ ಸಿಬ್ಬಂದಿ ದೌಡು

ಶಿರಾಡಿಘಾಟಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ… ಗ್ಯಾಸ್ ಸೋರಿಕೆ, ಅಗ್ನಿಶಾಮಕ ಸಿಬ್ಬಂದಿ ದೌಡು

Stamp paper: ರೈತರು, ಜನರಿಗೆ ಛಾಪಾಕಾಗದ ದರ ಏರಿಕೆ ಬರೆ

Stamp paper: ರೈತರು, ಜನರಿಗೆ ಛಾಪಾಕಾಗದ ದರ ಏರಿಕೆ ಬರೆ

21

Hijab controversy: ಹಾಸನದ ಖಾಸಗಿ ಕಾಲೇಜಿನಲ್ಲಿ  ಹಿಜಾಬ್‌- ಕೇಸರಿ ಶಾಲು ವಿವಾದ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.