ಕೋವಿಡ್‌ 19 ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆ


Team Udayavani, May 19, 2020, 7:59 AM IST

coro-sonkitara

ಹಾಸನ: ಮಹಾರಾಷ್ಟ್ರದಿಂದ ಬಂದವರಲ್ಲಿ ಕೋವಿಡ್‌ 19 ಪಾಟಿಸಿವ್‌ ಪ್ರಕರಣಗಳು ಪ್ರತಿ ದಿನವೂ ವರದಿಯಾಗುತ್ತಿದ್ದು, ಸೋಮವಾರ ನಾಲ್ವರಲ್ಲಿ ಕೋವಿಡ್‌ 19 ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕಿತರ ಸಂಖ್ಯೆ ಈಗ 30ಕ್ಕೇರಿದೆ. ಮಹಾರಾಷ್ಟ್ರದಿಂದ ಬಂದಿರುವ ಚನ್ನರಾಯ ಪಟ್ಟಣ ತಾಲೂಕು ಒಂದೇ ಕುಟುಂಬದ ಮೂವರಲ್ಲಿ ಕೋವಿಡ್‌ 19 ಪತ್ತೆಯಾಗಿದ್ದು, ಮಹಾರಾಷ್ಟ್ರದಲ್ಲಿದ್ದ ಸಂಬಂಧಿಕರ ಮನೆಗೆ ಹೋಗಿದ್ದ ಹೊಳೆನರಸೀಪುರ ತಾಲೂಕಿನ  ಹಳ್ಳಿಯೊಂದರ 17 ವರ್ಷದ ಶಾಲಾ ಬಾಲಕನಿಗೂ ಸೋಂಕು ದೃಢಪಟ್ಟಿದೆ.

ಸುದ್ದಿಗೋಷ್ಠಿಯಲ್ಲಿ ಕೋವಿಡ್‌ 19 ಪ್ರಕರಣ ಗಳ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಅವರು, ಚನ್ನರಾಯಪಟ್ಟಣ ತಾಲೂಕಿನ  ಮೂಲದ 40 ವರ್ಷದ ಮಹಿಳೆ, 29 ವರ್ಷದ ಮಹಿಳೆ ಹಾಗೂ 34 ವರ್ಷದ ಪುರುಷನಲ್ಲಿ ಕೋವಿಡ್‌ 19 ಪತ್ತೆಯಾಗಿದೆ. ಮೇ12 ರಂದು ಮಹಾರಾಷ್ಟ್ರ ರಾಜ್ಯದಿಂದ 5 ಜನರು ಕಾರಿನಲ್ಲಿ ಬಂದಿದ್ದು, ಅವರಲ್ಲಿ ಈಗ  ಮೂವರಿಗೆ ಕೋವಿಡ್‌ 19  ದೃಢಪಟ್ಟಿದೆ.

ಇಬ್ಬರು ಮಕ್ಕಳ ವರದಿ ನೆಗೆಟಿವ್‌ ಎಂದು ಬಂದಿದೆ. ಸೋಂಕು ದೃಢಪಟ್ಟಿರುವ ಹೊಳೆನರಸೀಪುರ ತಾಲೂಕು ಮೂಲದ 17 ವರ್ಷದ ಬಾಲಕ ಕಾರಿನಲ್ಲಿ ಐವರೊಂದಿಗೆ ಮೇ14ರಂದು ಬಂದಿದ್ದ. ಆತನನ್ನು ಹೊಳೆನರಸೀಪುರ  ತಾಲೂಕು ದೊಡ್ಡ ಕಾಡನೂರು ಕ್ವಾರಂಟೈನ್‌ ಕೇಂದ್ರದಲ್ಲಿದ್ದ. ಇನ್ನು ನಾಲ್ವರು ಮಂಡ್ಯ ಜಿಲ್ಲೆ ಕೆ.ಆರ್‌.ಪೇಟೆಗೆ ಹೋಗಿದ್ದಾರೆ ಎಂದು ವಿವರ ನೀಡಿದರು.

ಹಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ: ಎಲ್ಲ ನಾಲ್ವರು ಸೋಂಕಿತರನ್ನು ಹಾಸನದ ಹಿಮ್ಸ್‌ನ ಕೋವಿಡ್‌ 19 ಆಸ್ಪತ್ರೆಗೆ ದಾಖಲು ಮಾಡಲಾ ಗಿದೆ. ಹಿಮ್ಸ್‌ ಆಸ್ಪತ್ರೆಯಲ್ಲಿ 30 ಸೋಂಕಿತ ರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ 470 ಜನರ ಪರೀûಾ ವರದಿ ನಿರೀಕ್ಷಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ವಲಸೆ ಕಾರ್ಮಿಕರಿಗೆ ನೆರವು: ಮೇ 17 ರಂದು ರಾತ್ರಿ ಹಾಸನ ರೈಲು ನಿಲ್ದಾಣದಿಂದ 1,440 ಜನ ವಲಸೆ ಕಾರ್ಮಿಕರನ್ನು ಬಿಹಾರಕ್ಕೆ ರೈಲಿನ ಮುಖಾಂತರ ಕಳುಹಿಸಲಾಗಿದೆ. ಈ ಸಂದರ್ಭದಲ್ಲಿ ಅವರ ಆರೋಗ್ಯ ತಪಾಸಣೆ ಮಾಡಿ,  ಆಹಾರವನ್ನು ಒದಗಿಸಿ ಕಳುಹಿಸ ಲಾಗಿದೆ. ಉಳಿದವರಿಗಾಗಿ ಮತ್ತೂಂದು ರೈಲಿನ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.

ಮೇ 19ರಂದು ಮಧ್ಯಪ್ರದೇಶ ಮೂಲದ 120ಜನ ವಲಸೆ ಕಾರ್ಮಿಕರನ್ನು ಬೆಂಗಳೂರಿನ ಮೂಲಕ ಅವರ  ಸ್ವಂತ ಊರಿಗೆ ಕಳುಹಿಸ ಲಾಗುತ್ತಿದೆ ಎಂದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್‌. ಶ್ರೀನಿವಾಸಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ. ಪರಮೇಶ್‌, ಉಪಭಾಗಾಧಿಕಾರಿ ಡಾ. ನವೀನ್‌ ಭಟ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್‌ ಕುಮಾರ್‌ ಸುದ್ದಿಗೋಷ್ಠಿಯಲ್ಲಿ ದ್ದರು.

ಈವರೆಗೂ ಹೊರರಾಜ್ಯ ಗಳಿಂದ ಬಂದಿರುವ 294 ಜನರನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಮತ್ತು 878 ಜನರನ್ನು ಹಾಸ್ಟೆಲ್‌ ಗಳಲ್ಲಿ ಕ್ವಾರಂಟೈನ್‌ ಮಾಡಲಾಗಿದೆ. ಹೊರ ಜಿಲ್ಲೆ ಹಾಗೂ ಹೊರ ರಾಜ್ಯಕ್ಕೆ ಪ್ರಯಾಣಿಸುವ ಪಾಸ್‌ ಪಡೆಯುವ ಸೇವಾ  ಸಿಂಧು ಆ್ಯಪ್‌ನಲ್ಲಿ ಕಂಡು ಬಂದಿದ್ದ ತಾಂತ್ರಿಕ ದೋಷವನ್ನು ಸರಿಪಡಿಸಲಾಗಿದೆ.
-ಆರ್‌. ಗಿರೀಶ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.