ಶೋಷಣೆ ಮುಕ್ತ ಸಮಾಜ ಸಹಕಾರ ಕ್ಷೇತ್ರದ ಉದ್ದೇಶ
ರಾಜ್ಯದ 2.50 ಕೋಟಿ ಜನರಿಗೆ ಸಹಕಾರ ಸಂಘಗಳ ಪ್ರಯೋಜನ •ಸಹಕಾರ ಮಹಾ ಮಂಡಳಿ ಅಧ್ಯಕ್ಷ ಎನ್.ಗಂಗಣ್ಣ
Team Udayavani, Jul 17, 2019, 3:29 PM IST
ಹಾಸನ: ಗ್ರಾಮೀಣ ನಿರುದ್ಯೋಗಿಗಳಿಗೆ ಹಾಗೂ ಮಹಿಳೆಯರಿಗೆ ಬದುಕುವ ಆತ್ಮಸ್ಥೈರ್ಯವನ್ನು ತುಂಬುವ ಕೆಲಸವನ್ನು ಸಹಕಾರ ಸಂಘಗಳು ಮಾಡುತ್ತಿವೆ. ಸಮಾಜದಲ್ಲಿ ಬಡ್ಡಿ ವ್ಯವಹಾರ ಮಾಡುವವರ ಶೋಷಣೆಯನ್ನು ತಪ್ಪಿಸುವುದೇ ಸಹಕಾರ ಸಂಘದ ಮುಖ್ಯ ಉದ್ದೇಶವಾಗಿದೆ ಎಂದು ರಾಜ್ಯ ಸಹಕಾರ ಮಹಾ ಮಂಡಳಿ ಅಧ್ಯಕ್ಷ ಎನ್.ಗಂಗಣ್ಣ ಹೇಳಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿ ಹಾಗೂ ಹಾಸನ ಜಿಲ್ಲಾ ಸಹಕಾರ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಮೈಸೂರು ವಿಭಾಗದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ನಿರ್ದೇಶಕರಿಗೆ ರಾಜ್ಯಮಟ್ಟದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸಹಕಾರ ಸಂಘಗಳ ಸದುಪಯೋಗವನ್ನು 2.50 ಕೋಟಿ ಜನರು ಪಡೆಯುತ್ತಿದ್ದಾರೆ ಎಂದು ಹೇಳಿದರು.
ಹೆಚ್ಚಿನ ಜನರಿಗೆ ನೆರವು ನೀಡಿ: ಸಹಕಾರ ಸಂಘಗಳಿಂದ ಇನ್ನೂ ಹೆಚ್ಚು ನೆರವು ಜನರಿಗೆ ತಲುಪಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಷೇರುದಾರರಾಗಿ ಕಾರ್ಯ ನಿರ್ವಸುವುದರ ಬಗ್ಗೆ ಹೆಚ್ಚಿನ ಮಾರ್ಗದರ್ಶನ ನೀಡಬೇಕಿದೆ. ಸಹಕಾರ ಬ್ಯಾಂಕ್ಗಳಲ್ಲಿ ಕಾರ್ಯನಿರ್ವಹಿಸುವವರು ಡಿಪ್ಲೊಮಾ ಇನ್ ಕೋ – ಅಪರೇಟಿವ್ ತರಬೇತಿಯನ್ನು ಕಡ್ಡಾಯವಾಗಿ ಪಡೆದಿರಬೇಕೆಂದು ಗಂಗಣ್ಣ ತಿಳಿಸಿದರು.
ಸೇವಾ ಮನೋಭಾವ ಅಗತ್ಯ: ರಾಜ್ಯ ಸಹಕಾರ ಮಹಾ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಎಸ್.ಎನ್. ಅರುಣ್ಕುಮಾರ್ ಮಾತನಾಡಿ, ಸಹಕಾರ ಸಂಘಗಳಲ್ಲಿ ಸೇವಾ ಮನೋಭಾವನೆಯನ್ನು ಮೈಗೂಡಿಸಿಕೊಳ್ಳುವುದು ಪ್ರಮುಖವಾಗಿದೆ. ಸರ್ಕಾರದಿಂದ ಸಿಗುವಂತಹ ಸೌಲಭ್ಯವನ್ನು ಅರ್ಹ ಫಲಾನುಭಗಳಿಗೆ ತಲುಪಿಸುವಂತಹ ಸಂಪೂರ್ಣ ಜವಾಬ್ದಾರಿಯನ್ನು ಅಧಿಕಾರಿಗಳು ನಿರ್ವಹಿಸಬೇಕು ಇದರಲ್ಲಿ ಯಾವುದೇ ರೀತಿಯ ಲೋಪ ಉಂಟಾದರೆ ಅಂತಹ ಅಧಿಕಾರಿ ಅಥವಾ ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಸಹಕಾರ ಒಕ್ಕೂಟ ಅಧ್ಯಕ್ಷ ಶೇಷಾದ್ರಿ ಅವರು, ಗ್ರಾಮೀಣ ಭಾಗದಲ್ಲಿ ಪ್ರಾದೇಶಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಸಿಗುವ ಸಾಲ ಸೌಲಭ್ಯವನ್ನು ಅರ್ಹ ಫಲಾನುಭವಿಗಳು ಪಡೆದುಕೊಳ್ಳಬಹುದು. ಹಾಸನ ಜಿಲ್ಲೆಯೂ ಸಹ ಈ ಸಂಬಂಧ ಸಾಕಷ್ಟು ಒತ್ತು ನೀಡಿ ಕೆಲಸ ನಿರ್ವಹಿಸುತ್ತಿದೆ ಎಂದು ಹೇಳಿದರು.
ಎಸ್ಸಿ, ಎಸ್ಟಿ ಸಮುದಾಯದವರಿಗೆ ಸೌಲಭ್ಯ: ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕ ಆರ್.ಟಿ.ದ್ಯಾವೇಗೌಡ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಹಲವಾರು ಯೋಜನೆಗಳಿವೆ. ಆದರೆ ಫಲಾನುಭವಿಗಳ ಸಂಖ್ಯೆ ಕಡಿಮೆಯಿದೆ. ಅದಕ್ಕಾಗಿ ಈ ಕುರಿತು ಪ್ರತಿಯೊಬ್ಬರಿಗೂ ಅರಿವು ಮೂಡಿಸಬೇಕು. ಕಾರ್ಮಿಕರು, ನಿರುದ್ಯೋಗಿಗಳು, ಸಣ್ಣ ಮತ್ತು ಅತಿ ಸಣ್ಣ ರೈತರುಗಳಿಗೆ ಸಿಗುವಂತಹ ಸೌಲಭ್ಯಗಳು ಕಾಲ ಕಾಲಕ್ಕೆ ಜನರಿಗೆ ದೊರಕಬೇಕು. ಆ ನಿಟ್ಟಿನಲ್ಲಿ ಅಧಿಕಾರಿ, ಸಿಬ್ಬಂದಿ ಕೆಲಸ ನಿರ್ವಹಿಸಬೇಕು ಎಂದರು.
ಸಹಕಾರ ಸಂಘಗಳ ಅಪರ ನಿಬಂಧಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎ.ಸಿ.ದಿವಾಕರ ಅವರು ಸಣ್ಣ ಮತ್ತು ಅತಿಸಣ್ಣ ರೈತರಿಗೆ, ಮಹಿಳೆಯರಿಗೆ, ನಿರುದ್ಯೋಗಿಗಳಿಗೆ ಸಹಕಾರ ಸಂಘಗಳಿಂದ ಇರುವ ಸೌಲಭ್ಯವನ್ನು ಪಡೆದುಕೊಳ್ಳುವ ಬಗ್ಗೆ ಹಾಗೂ ಬ್ಯಾಂಕುಗಳಿಂದ ಸಾಲವನ್ನು ಪಡೆಯಬೇಕಾದರೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಉಪನ್ಯಾಸ ನೀಡಿದರು.
ಉಪನಿಬಂಧಕ ಜಿ.ಆರ್.ವಿಜಯ್ಕುಮಾರ್, ಕಾರ್ಯಕ್ರಮದ ಸಂಚಾಲಕ ಯೋಗೇಂದ್ರ ನಾಯಕ್, ಸಲಹೆಗಾರ ಪಿ.ರುದ್ರಪ್ಪ ಸೇರಿದಂತೆ ಹಾಸನ ಚಿಕ್ಕಮಗಳೂರು, ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳ ಸಹಕಾರ ಸಂಘಗಳ ನಿರ್ದೇಶಕರು, ಸಿಬ್ಬಂದಿ ವರ್ಗದವರು ಹಾಜರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ