ಸಾವಿನ ದಾರಿಯಾಗಿದೆ ರಾಷ್ಟ್ರೀಯ ಹೆದ್ದಾರಿ -75


Team Udayavani, Aug 26, 2019, 2:40 PM IST

hasan-tdy-2

ಹಾಸನ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಹಾಸನ – ಸಕಲೇಶಪುರ- ಬಿ.ಸಿ. ರೋಡ್‌ ನಡುವಿನ 127 ಕಿ.ಮೀ. ರಸ್ತೆ ವಾಹನ ಚಾಲಕರಿಗೆ ಸಾವಿನ ಹಾದಿಯಾಗಿ ಪರಿಣಮಿಸಿದೆ.

ರಾಷ್ಟ್ರೀಯ ಹೆದ್ದಾರಿ ಇಲಾಖೆ ನಿರ್ವಹಿಸುತ್ತಿದ್ದ ಈ ರಸ್ತೆಯನ್ನು ಚತುಷ್ಪಥ ರಸ್ತೆಯಾಗಿ ನಿರ್ಮಿಸಲು ಒಪ್ಪಂದ ಮಾಡಿಕೊಂಡ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಈಗ ಕಾಮಗಾರಿಯನ್ನು ಅರ್ಧಕ್ಕೆ ಕೈ ಬಿಟ್ಟಿರುವುದರಿಂದ ಹಾಳಾಗಿರುವ ರಸ್ತೆ ಅನಾಥವಾಗಿದೆ.

ಬೆಂಗಳೂರಿನ ನೆಲಮಂಗಲದಿಂದ ಹಾಸನದ ವರೆಗೆ ಚತುಷ್ಪಥ ರಸ್ತೆ ನಿರ್ಮಾಣವಾಗಿ 10 ವರ್ಷ ಕಳೆದಿದೆ. ಸುಸಜ್ಜಿತ ರಸ್ತೆ ಮಾದರಿಯಲ್ಲೇ ಹಾಸನ- ಸಕಲೇಶಪುರ- ಬಿ.ಸಿ.ರೋಡ್‌ (ಮಂಗಳೂರು) ನಡುವೆಯೂ ಚತುಷ್ಪಥ ರಸ್ತೆ ನಿರ್ಮಾಣವಾದರೆ ಕರಾವಳಿ ಹಾಗೂ ರಾಜಧಾನಿ ನಡುವೆ ಉತ್ತಮ ಸಂಪರ್ಕ ವ್ಯವಸ್ಥೆಯಾಗುತ್ತದೆ ಎಂಬ ಕನಸಿತ್ತು. ಆದರೆ, ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜನರ ಕನಸನ್ನು ನುಚ್ಚುನೂರು ಮಾಡಿ ಸಾವಿನ ಹೆದ್ದಾರಿ ಯಾಗಿದ್ದರೂ ಕಣ್ಣು ಮುಚ್ಚಿ ಕುಳಿತಿದೆ.

ಯುಪಿಎ ಸರ್ಕಾರದ ಅವಧಿಯಲ್ಲಿ ಅಂದು ಕೇಂದ್ರ ಭೂ ಸಾರಿಗೆ ಸಚಿವರಾಗಿದ್ದ ಆಸ್ಕರ್‌ ಫ‌ರ್ನಾಂಡೀಸ್‌ ಅವರು ಹಾಸನ-ಸಕಲೇಶಪುರ- ಬಿ.ಸಿ.ರೋಡ್‌ (ಮಂಗಳೂರು) ನಡುವೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಮಂಜೂರಾತಿ ನೀಡಿದ್ದರು. ಮಂಜೂರಾತಿ ದೊರೆತು 7 ವರ್ಷಗಳಾಗಿವೆ. ಹಾಸನ – ಮಂಗಳೂರು ನಡುವಿನ 172 ಕಿ.ಮೀ.ಪೈಕಿ ಶಿರಾಡಿಘಾಟ್‌ನ 32 ಕಿ.ಮೀ. ಮತ್ತು ಬಿ.ಸಿ.ರೋಡ್‌ – ಮಂಗಳೂರು ನಡುವಿನ 13 ಕಿ.ಮೀ.ಹೊರತುಪಡಿಸಿ 127 ಕಿ.ಮೀ. ರಸ್ತೆ ಚತುಷ್ಪಥ ರಸ್ತೆಯಾಗಿ ನಿರ್ಮಾಣ ವಾಗುವ ಸೂಚನೆಗಳಂತೂ ಕಂಡು ಬರುತ್ತಿಲ್ಲ.

ಕನಸಿನ ಮಾತಾದ ಚತುಷ್ಫಥ: ಚತುಷ್ಪಥ ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, 2016 ರಲ್ಲಿಯೇ 127 ಕಿ.ಮೀ.ಯನ್ನು ವಹಿಸಿಕೊಂಡು 2019 ಮೇ ಅಂತ್ಯ ದೊಳಗೆ ಚತುಷ್ಪಥ ರಸ್ತೆಯನ್ನಾಗಿ ನಿರ್ಮಿಸುವುದಾಗಿ ಒಪ್ಪಿಕೊಂಡಿತ್ತು. ಶಿರಾಡಿಘಾಟ್‌ನ 32 ಕಿ.ಮೀ.ನಲ್ಲಿ ಚತುಷ್ಪಥ ರಸ್ತೆ ನಿರ್ಮಿಸಲು ಭೌಗೋಳಿಕವಾಗಿ ಸಾಧ್ಯವಿಲ್ಲ. ಅಲ್ಲಿ ದ್ವಿಪಥ ಕಾಂಕ್ರೀಟ್ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆಯೇ ನಿರ್ವಹಿಸುತ್ತಿದೆ.

ಬಿ.ಸಿ.ರೋಡ್‌ – ಮಂಗಳೂರು ನಡುವೆ 13 ಕಿ.ಮೀ. ಈಗಾಗಲೇ ಚತುಷ್ಪಥ ರಸ್ತೆಯಾಗಿ ನಿರ್ಮಾಣ ವಾಗಿದೆ. ಇನ್ನುಳಿದ 127 ಕಿ. ಮೀ. ಪೈಕಿ ಹಾಸನ – ಸಕಲೇಶಪುರ ತಾಲೂಕಿನ ಹೆಗ್ಗದ್ದೆವರೆಗೆ ಹಾಗೂ ಗುಂಡ್ಯಾದಿಂದ ಬಿ.ಸಿ.ರೋಡ್‌ವರೆಗೆ ಚತುಷ್ಪಥ ರಸ್ತೆ ನಿರ್ಮಾಣವಾಗಬೇಕಾಗಿದೆ. ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಡಿಕೊಂಡ ಒಪ್ಪಂದದಂತೆ ರಸ್ತೆ ನಿರ್ಮಾಣದ ಅವಧಿ ಮುಗಿದಿದೆ. ಇನ್ನೂ ಶೇ.20 ರಷ್ಟು ಕಾಮಗಾರಿಯೂ ಮುಗಿದಿಲ್ಲ. ನಾಲ್ಕೆದು ವರ್ಷ ಗಳಾದರೂ ಚತುಷ್ಪಥ ರಸ್ತೆ ನಿರ್ಮಾಣವಂತೂ ಕನಸಿನ ಮಾತೇ ಸರಿ ಎಂಬಂತಾಗಿದೆ.

ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯ: ರಾಷ್ಟ್ರೀಯ ಹೆದ್ದಾರಿ ಇಲಾಖೆ ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ 127 ಕಿ.ಮೀ. ರಸ್ತೆಯನ್ನು ಹಸ್ತಾಂತರಿಸಿ ಕೈ ತೊಳೆದು ಕೊಂಡು ನೆಮ್ಮದಿಯಾಗಿದೆ. ಆದರೆ ಚತುಷ್ಪಥ ರಸ್ತೆ ನಿರ್ಮಾಣದ ಹೊಣೆ ಹೊತ್ತ ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೂ, ಈಗ ಕೈ ಚೆಲ್ಲಿ ಕುಳಿತಿದೆ. ಈ ಹಿಂದೆ ಇದ್ದ ದ್ವಿಪಥ ರಸ್ತೆಯನ್ನೂ ಕೆಲವು ಕಡೆ ಅಗೆದು ಹಾಳು ಮಾಡಲಾಗಿದೆ. ಕಳೆದ 3 ವರ್ಷಗಳಿಂದಲೂ ದ್ವಿಪಥ ರಸ್ತೆ ಡಾಂಬರು ಕಾಣದೇ ರಸ್ತೆಯಲ್ಲಿ ವಾಹನ ಗಳು ಸಂಚರಿಸಲಾರದಷ್ಟು ಹಾಳಾಗಿ ಹೋಗಿದೆ. ಪ್ರತಿ ದಿನವೂ ಅಪಘಾತಗಳು ಸಂಭವಿಸಿ ಅಮಾಯಕರು ಬಲಿಯಾಗುತ್ತಿದ್ದಾರೆ. ಮಂದೇನು ಎಂಬುದಕ್ಕೆ ಯಾರೊಬ್ಬರಿಂದಲೂ ಉತ್ತರವಿಲ್ಲ.

ಕಾಮಗಾರಿ ನಿಲ್ಲಲು ಕಾರಣವೇನು? : ಹಾಸನ- ಸಕಲೇಶಪುರ, ಗುಂಡ್ಯ-ಬಿ.ಸಿ.ರೋಡ್‌ ನಡುವಿನ ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆ ನಿರ್ಮಾಣಕ್ಕೆ 2017 ರಲ್ಲೇ ಕಾಮಗಾರಿ ಆರಂಭವಾಯಿತು. ಕಾಮಗಾರಿ ಗುತ್ತಿಗೆ ವಹಿಸಿಕೊಂಡ ಕಂಪನಿ, ರಸ್ತೆ ಬದಿ ಮರ ತೆಗೆಯುವಲ್ಲಿ ತೋರಿದ ಉತ್ಸಾಹವನ್ನು ರಸ್ತೆ ನಿರ್ಮಾಣದಲ್ಲಿ ತೋರಲಿಲ್ಲ.

ಮರಗಳ ತೆರವು ನಂತರ ಅಲ್ಲಲ್ಲಿ ಚತುಷ್ಪಥ ರಸ್ತೆ ನಿರ್ಮಾಣದ ಮಣ್ಣಿನ ಕಾಮಗಾರಿ ಆರಂಭವಾದ ಕೆಲ ತಿಂಗಳಲ್ಲೇ ಕಾಮಗಾರಿ ಸ್ಥಗಿತವಾಯಿತು. ಅಂದರೆ ಗುತ್ತಿಗೆ ವಹಿಸಿಕೊಂಡ ಕಂಪನಿ ದಿವಾಳಿಯೆಂದು ಕಾಮಗಾರಿ ಕೈ ಬಿಟ್ಟಿತು. ಆನಂತರ ಕಾಮಗಾರಿಯನ್ನು ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರಾಜ್‌ಕಮಲ್ ಎಂಬ ಕಂಪನಿಗೆ ವಹಿಸಿತು. ಆ ಕಂಪನಿಯೂ ಸುಮಾರು ಶೇ.10 ಕಾಮಗಾರಿ ನಿರ್ವಹಿಸಿ ತಾನೂ ದಿವಾಳಿ ಎಂದು ಕಾಮಗಾರಿ ಕೈ ಬಿಟ್ಟು ಪರಾರಿಯಾಗಿದೆ. ರಸ್ತೆ ನಿರ್ಮಾಣಕ್ಕೆ ಮುಂಗಡವಾಗಿ ನೀಡಿದ್ದ ಮೊತ್ತವನ್ನು ವಸೂಲಿ ಮಾಡಿಕೊಂಡು ಇಎಂಡಿಯನ್ನೂ ಮುಟ್ಟು ಗೋಲು ಹಾಕಿಕೊಂಡು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸುಮ್ಮನೆ ಕುಳಿತಿದೆ. ಈಗ, ಹೊಸದಾಗ ಟೆಂಡರ್‌ ಪ್ರಕ್ರಿಯೆ ಆರಂಭಿಸಿ, ಪ್ರಕ್ರಿಯೆ ಮುಗಿದ ನಂತರವಷ್ಟೇ ರಸ್ತೆ ನಿರ್ಮಾಣ ಆರಂಭವಾಗ ಬೇಕಾಗಿದೆ. ಈ ಎಲ್ಲಾ ಪ್ರಕ್ರಿಯೆಗಳು ಸದ್ಯಕ್ಕೆ ಆರಂಭ ವಾಗುವ ಲಕ್ಷಣ ಕಾಣುತ್ತಿಲ್ಲ.

ಮುಂದೇನು ಎಂಬ ಚಿಂತನೆ: 147 ಕಿ.ಮೀ. ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬದ್ಧವಾಗಿದೆ. 573 ಕೋಟಿ ರೂ. ಅಂದಾಜಿನ ಹಾಸನ – ಸಕಲೇಶಪುರ ನಡುವಿನ ಚತುಷ್ಪಥ ರಸ್ತೆ ನಿರ್ಮಾಣದ ಕಾಮಗಾರಿ ವಹಿಸಿ ಕೊಂಡಿದ್ದ ಒಬ್ಬ ಗುತ್ತಿಗೆದಾರರು ಕೈ ಬಿಟ್ಟರು. ಆನಂತರ ಬಂದ ಮತ್ತೂಬ್ಬ ಗುತ್ತಿಗೆದಾರರೂ ಬಿಟ್ಟು ಹೋಗಿ ದ್ದಾರೆ. ರಸ್ತೆ ನಿರ್ಮಾಣಕ್ಕೆ ಸಾಮಗ್ರಿ ಸಂಗ್ರಹಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಗುತ್ತಿಗೆದಾರರಿಗೆ ನೀಡಿದ್ದ 42 ಕೋಟಿ ರೂ. ವಾಪಸ್‌ ಪಡೆದುಕೊಂಡಿದೆ. ಕಾಮಗಾರಿ ಬಿಟ್ಟು ಹೋಗಿರುವ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮತ್ತು ಮುಂದೆ ಕಾಮಗಾರಿ ಪುನಾರಂಭಿಸಲು ಏನು ಮಾಡ ಬೇಕೆಂಬುದರ ಬಗ್ಗೆ ಚಿಂತನೆ ನಡೆದಿದೆ.

 

● ಎನ್‌.ನಂಜುಂಡೇಗೌಡ

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.