ಬಗರ್‌ ಹುಕುಂ ಭೂಮಿ ಮಾಫಿಯಾದವರ ಪಾಲು


Team Udayavani, Jul 7, 2019, 12:03 PM IST

hasan-tdy-2..

ಚನ್ನರಾಯಪಟ್ಟಣದಲ್ಲಿ ರೈತ ಸಂಘ ಹಸಿರು ಸೇನೆ ಕಾರ್ಯಕರ್ತರು ತಾಲೂಕು ಆಡಳಿತದ ವಿರುದ್ಧ ಧರಣಿ ನಡೆಸಿದರು.

ಚನ್ನರಾಯಪಟ್ಟಣ: ತಾಲೂಕಿನಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಹಣದ ಆಸೆಗೆ ಬಲಿಯಾಗಿ ಕೃಷಿ ಭೂಮಿಯನ್ನು ಭೂಗಳ್ಳಿಗೆ ಖಾತೆ ಮಾಡಿಕೊಡುತ್ತಿದ್ದಾರೆ ಎಂದು ರೈತ ಸಂಘ ಮತ್ತು ಹಸಿರು ಸೇವೆ ಜಿಲ್ಲಾಧ್ಯಕ್ಷ ಕೊಟ್ಟೂರು ಶ್ರಿನಿವಾಸ್‌ ಆರೋಪಿಸಿದರು.

ತಾಲೂಕು ಆಡಳಿತದ ವಿರುದ್ಧ ಪ್ರತಿಭಟನೆ ನೇತೃತ್ವವಹಿಸಿ ಮಾತನಾಡಿ ದರು. ಸರ್ವೆ ಇಲಾಖೆ ಅಧಿಕಾರಿಗಳು ರೈತರನ್ನು ಇಲಾಖೆಗೆ ಅಲೆಸುತ್ತಾರೆ. ಹಣ ನೀಡಿದವರ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ಕೃಷಿಕರಿಗೆ ಅನುಕೂಲ ಅಗಲೆಂದು ಬಗರ್‌ ಹುಕಂ ಜಾರಿಗೆ ತಂದರು. ಆದರೆ, ಕಂದಾಯ ಇಲಾಖೆ ಅಧಿಕಾರಿ ಗಳು ಹಣದ ದಾಹಕ್ಕಾಗಿ ಸರ್ಕಾರಿ ಭೂಮಿಯನ್ನು ಭೂಮಾಫಿಯಾ ದವರಿಗೆ ಖಾತೆ ಮಾಡುತ್ತಿದ್ದಾರೆ. ದಂಡಿಗನಹಳ್ಳಿ ಹೋಬಳಿ ದೂತನೂರು ಕಾವಲು, ಶ್ರವಣಬೆಳಗೊಳ ಹಾಗೂ ಕಸಬಾ ಹೋಬಳಿ ಕೆಲ ಭಾಗದಲ್ಲಿ ರೈತರ ಸಾಗುವಳಿ ಕೃಷಿ ಭೂಮಿಯನ್ನು ಅನ್ಯರ ಹೆಸರಿಗೆ ಖಾತೆ ಮಾಡುವ ಮೂಲಕ ತೊಂದರೆ ನೀಡುತ್ತಿದ್ದಾರೆ ಈ ಬಗ್ಗೆ ಉಪವಿಭಾಗಾಧಿಕಾರಿ ಗಮನಕ್ಕೆ ತಂದರು ಯಾವುದೇ ಪ್ರಯೋಜವಾಗಿಲ್ಲ ಎಂದರು.

ಸರ್ಕಾರಿ ಭೂಮಿಯನ್ನು ನಖಲಿ ದಾಖಲೆ ಸೃಷ್ಟಿಸಿ, ತಹಶೀಲ್ದಾರ್‌ ಸೀಲು ಸಹಿ ಮಾಡಿ ಮುಗ್ದ ರೈತರಿಗೆ ಹಕ್ಕು ಪತ್ರವೆಂದು ದಲ್ಲಾಳಿಗಳ ಮೂಲಕ ಲಕ್ಷಾಂತರ ಹಣಕ್ಕೆ ಹಂಚುವ ಕೆಲಸವನ್ನು ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಿಗರು ಮಾಡಿದ್ದಾರೆ ಎಂದು ಆರೋಪಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸ್ವಾಮಿಗೌಡ ಮಾತನಾಡಿ, ತಾಲೂಕಿನಲ್ಲಿ ಲಕ್ಷಾಂತ ತೆಂಗಿನ ಮರಗಳು ನೀರಿ ಲ್ಲದೆ ಹಾಳಾಗಿವೆ. ತೆಂಗು ಪುನಶ್ಚೇತನ ಯೋಜನೆ ಮೂಲಕ ಒಂದು ತೆಂಗಿನ ಮರಕ್ಕೆ 400 ರೂ. ನೀಡುವ ಮೂಲಕ ಮೈತ್ರಿ ಸರ್ಕಾರ ರೈತರಿಗೆ ಅಪಮಾನ ಮಾಡಿದೆ, ಕನಿಷ್ಠ ಒಂದು ತೆಂಗಿನ ಮರಕ್ಕೆ 15 ಸಾವಿರ ಹಣ ನೀಡಬೇಕು ಎಂದು ಆಗ್ರಹಿಸಿದರು.

ಕುಮಾರಸ್ವಾಮಿ ಚುನಾವಣೆ ವೇಳೆ ರೈತರ ಸಾಲ ಸಂಪೂರ್ಣ ಮನ್ನ ಮಾಡು ತ್ತೇನೆ ಎಂದು ಹೇಳಿ ಕೊಟ್ಟು ಮಾತನ್ನು ತಪ್ಪಿದ್ದಾರೆ. ಸ್ತ್ರೀಶಕ್ತಿ ಸಾಲ ಮನ್ನ ಮಾಡು ವುದಾಗಿ ಹೇಳಿ ವಚನ ಭ್ರಷ್ಟರಾಗಿದ್ದಾರೆ ಎಂದು ಆಪಾದಿಸಿದರು.

ಕೇಂದ್ರದ ಮೋದಿ ಸರ್ಕಾರ ಬಜೆಟ್ ರೈತಪರವಾಗಿಲ್ಲ, ಡಾ.ಸ್ವಾಮಿನಾಥನ್‌ ವರದಿ ಜಾರಿ ಮಾಡಿಲ್ಲ. ಹೀಗಾಗಿ ಜು.16 ರಂದು ಜಿಲ್ಲಾಧಿಕಾರಿ ಕಚೇರಿಗೆ ಟ್ರ್ಯಾಕ್ಟರ್‌ ಪ್ರವೇಶ ಮಾಡುವ ಮೂಲಕ ವಿನೂತನವಾಗಿ ಧರಣಿಗೆ ನಿರ್ಧರಿಸ ಲಾಗಿದೆ ಎಂದು ಹೇಳಿದರು.

ಮನವಿ ಸ್ವೀಕರಿಸಿ ತಹಶೀಲ್ದಾರ್‌ ಜೆ.ಬಿ. ಮಾರುತಿ ಮಾತನಾಡಿ, ತಾಲೂಕಿ ನಲ್ಲಿ ನಖಲಿ ದಾಖಲೆ ಸೃಷ್ಟಿಸಿ ಖಾತೆ ಮಾಡಿರುವ 10 ಮಂದಿ ವಿರುದ್ಧ ಇಲಾಖೆ ತನಿಖೆ ನಡೆಸುತ್ತಿದೆ. 263 ದಾಖಲೆಯನ್ನು ಮರು ಪರಿಶೀಲನೆ ಮಾಡುವ ಮೂಲಕ ತಪ್ಪಿತಸ್ಥರನ್ನು ಪತ್ತೆ ಹಚ್ಚಲಾಗುವುದು ಎಂದು ಹೇಳಿದ ಮೇಲೆ ಧರಣಿ ಕೈ ಬಿಟ್ಟರು. ರೈತ ಸಂಘ ಹಸಿರು ಸೇನೆ ತಾಲೂಕು ಅಧ್ಯಕ್ಷ ಎಂ.ಕೆ.ಸುರೇಶ್‌, ಜಿಲ್ಲಾ ವಕ್ತಾರ ಶ್ರೀಕಂಠ, ಜಿಲ್ಲಾ ಉಪಾಧ್ಯಕ್ಷ ಸಿ.ಎಲ್.ಹರೀಶ್‌, ಕಾರ್ಯದರ್ಶಿ ನಂಜೆಗೌಡ, ಖಜಾಂಚಿ ಬಾಲು ಇತರರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.