ನೀರಿನ ಸಮಸ್ಯೆ ನಿವಾರಿಸಲು ಆಗ್ರಹ
Team Udayavani, Oct 23, 2019, 12:54 PM IST
ಸಕಲೇಶಪುರ: ಚಿಮ್ಮಿಕೋಲು ಗ್ರಾಮದ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಆಗ್ರಹಿಸಿ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ಯುವಕ ಸಂಘದ ನೇತೃತ್ವದಲ್ಲಿ ಗ್ರಾಮಸ್ಥರು ತಾಲೂಕಿನ ಕ್ಯಾಮನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಖಾಲಿ ಕೊಡ ಇಟ್ಟು ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಅಂಬೇಡ್ಕರ್ ಯುವಕ ಸಂಘದ ವಿಶ್ವನಾಥ್, ಚಿಮ್ಮಿಕೋಲು ಗ್ರಾಮದಲ್ಲಿ ತೆರೆದ ಬಾವಿಯೊಂದಿದ್ದು, ಗ್ರಾಮಸ್ಥರು ಹಾಗೂ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟ ಯೋಜನೆ ಗಾಗಿ ಇದೇ ನೀರನ್ನು ಕುಡಿಯಲು ಹಾಗೂ ಇನ್ನಿತರ ಅಗತ್ಯಗಳಿಗಾಗಿ ಉಪಯೋಗಿಸ ಬೇಕಾಗಿದೆ.
ಆದರೆ ಈ ಬಾವಿಗೆ ಯಾವುದೇ ರೀತಿಯ ಸರಿಯಾದ ರಕ್ಷಣೆ ಇಲ್ಲದೇ ಬಾವಿಯಲ್ಲಿ ಮಣ್ಣು ಹಾಗೂ ಕಸ ಕಡ್ಡಿ ತುಂಬಿಕೊಳ್ಳುವುದರಿಂದ ಕೆಸರು ನೀರನ್ನೇ ಗ್ರಾಮಸ್ಥರು ಬಳಸಬೇಕಾಗಿದೆ ಎಂದರು. ಮಳೆಗಾಲದಲ್ಲಿ ಈ ಸಮಸ್ಯೆಯಾದರೆಬೇಸಿಗೆಯಲ್ಲಿ ಜಲ ಉಕ್ಕುವ ಕಡೆ ಮಣ್ಣು ಸೇರಿಕೊಂಡು ನೀರು ಬರಲು ಸಾಧ್ಯವಾಗದೇ ಗ್ರಾಮಸ್ಥರು ಕುಡಿಯುವ ನೀರಿಗೆ ತುಂಬಾ ತೊಂದರೆ ಅನುಭವಿಸಬೇಕಾಗಿದೆ. ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮಕ್ಕಳ ಬಿಸಿಯೂಟಕ್ಕಾಗಿ ಶಾಲಾ ಸಿಬ್ಬಂದಿ ಹಾನುಬಾಳು ಗ್ರಾಮದಿಂದ ಬಾಡಿಗೆ ವಾಹನ ಗಳ ಮೂಲಕ ಪ್ರತಿನಿತ್ಯ ಶಾಲೆಗೆ ನೀರನ್ನು ತರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಗ್ರಾಮದಲ್ಲಿ ಸುಮಾರು 30ಕ್ಕೂ ಹೆಚ್ಚು ದಲಿತ ಕುಟುಂಬಗಳಿದ್ದು ಈ ಬಗ್ಗೆ ಕ್ಯಾಮನಹಳ್ಳಿ ಗ್ರಾಮಪಂಚಾಯಿತಿ ಆಡಳಿತ ಮಂಡಳಿಯ ಗಮನಕ್ಕೆ ಹಲವು ಬಾರಿ ತಂದರೂ ಸಮಸ್ಯೆಯನ್ನು ಬಗೆಹರಿಸಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಸಾಂಕೇತಿಕವಾಗಿ ಪ್ರತಿಭಟನೆ ಮಾಡಲಾಗುತ್ತಿದೆ ಎಂದರು.
ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದ ಗ್ರಾಪಂ ಕಾರ್ಯದರ್ಶಿ ಧರ್ಮಪ್ಪ ಮಾತನಾಡಿ, ನಾಳೆಯಿಂದಲೇ ಗ್ರಾಮದ ಕುಡಿ ಯುವ ನೀರಿನ ಬಾವಿಯನ್ನು ಸರಿಪಡಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಯುವಕ ಸಂಘದ ಪದಾಧಿಕಾರಿಗಳಾದ ಸುನೀಲ್, ಅನಿಲ್, ಲೋಹಿತ್, ಹರೀಶ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan; ನೀರಿಗಾಗಿ ಪ್ರತಿಭಟನೆ ನಡೆಸಿದ ಜೆಡಿಎಸ್: ಎಚ್ಚರಿಕೆ
Lok Sabha Election: ತಪ್ಪು ತಿದ್ದಿಕೊಳ್ಳಲು ಅವಕಾಶ ಕೊಡಿ: ಎಚ್ಡಿಕೆ
ಶಿರಾಡಿಘಾಟಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ… ಗ್ಯಾಸ್ ಸೋರಿಕೆ, ಅಗ್ನಿಶಾಮಕ ಸಿಬ್ಬಂದಿ ದೌಡು
Stamp paper: ರೈತರು, ಜನರಿಗೆ ಛಾಪಾಕಾಗದ ದರ ಏರಿಕೆ ಬರೆ
Hijab controversy: ಹಾಸನದ ಖಾಸಗಿ ಕಾಲೇಜಿನಲ್ಲಿ ಹಿಜಾಬ್- ಕೇಸರಿ ಶಾಲು ವಿವಾದ
MUST WATCH
ಹೊಸ ಸೇರ್ಪಡೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ