ನಗರದಲ್ಲಿ ಕಳ್ಳತನ ಪ್ರಕರಣ ತಡೆಗಟ್ಟಲು ಪೊಲೀಸರ ಕಟ್ಟೆಚ್ಚರ


Team Udayavani, Sep 17, 2022, 7:32 PM IST

ನಗರದಲ್ಲಿ ಕಳ್ಳತನ ಪ್ರಕರಣ ತಡೆಗಟ್ಟಲು ಪೊಲೀಸರ ಕಟ್ಟೆಚ್ಚರ

ಹೊಳೆನರಸೀಪುರ: ಪಟ್ಟಣ ಸೇರಿದಂತೆ ತಾಲೂಕಿನ ವಿವಿಧಡೆ ಕಳೆದ ಒಂದು ತಿಂಗಳಿಂದ ಕಳವು ಪ್ರಕರಣ ಹೆಚ್ಚಾಗಿರುವ ಹಿನ್ನೆಲೆ ಪೋಲಿಸ್‌ ಇಲಾಖೆಯನ್ನು ಬೆಚ್ಚಿ ಬೀಳಿಸಿತ್ತು. ಅದರ ಹಿನ್ನೆಲೆ ತಾಲೂಕಿನಾದ್ಯಂತ ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಮುಂದಾಗಿದೆ.

ಪಟ್ಟಣ ಮತ್ತು ತಾಲೂಕಿನ ಗ್ರಾಮೀಣ ಪ್ರದೇಶ ಗಳಲ್ಲಿ ಅನುಮಾನಸ್ಪದವಾಗಿ ಓಡಾಡುವವರನ್ನು ನಗರ ಠಾಣೆ ಪೊಲೀಸರು ಠಾಣೆಗೆ ಕರೆ ತಂದು ವಿಚಾರಣೆ ನಡೆಸಿ ಕಳುಹಿಸಿಕೊಡುವಷ್ಟರ ಮಟ್ಟಿಗೆ ಚುರುಕಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಖಾವಿ ಧರಿಸಿ ಮನೆ-ಮನೆಗೆ ಭೇಟಿ ಮಾಡಿ, ಭಿಕ್ಷೆ ಬೇಡುತ್ತಿದ್ದ ಖಾವಿಧಾರಿಗಳನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿ ಕಳುಹಿಸಿದ ಘಟನೆ ನಡೆಯಿತು. ಪಟ್ಟಣದ ಕೃಷಿ ಮಾ ರುಕಟ್ಟೆ ಆವರಣದಲ್ಲಿ ರಾತ್ರಿ ತಂಗಿದ್ದು, ಬೆಳಗ್ಗೆ ಎದ್ದು ಗ್ರಾಮೀಣ ಪ್ರದೇಶಗಳಲ್ಲಿ ತೆರಳಿ ವ್ಯಾಪಾರ ಮಾಡುವವರನ್ನು ಸಹ ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿ, ಅವರಿಂದ ಅಧಿಕೃತ ಮಾಹಿತಿಯಂತೆ ಅಧಾರ್‌ ಕಾರ್ಡ್‌ ಇತ್ಯಾದಿ ಗಳನ್ನು ಪಡೆದು ಪರಿಶೀಲಿಸಿ ಕಳುಹಿಸಿಕೊಟ್ಟ ಪ್ರಸಂಗ ನಡೆಯಿತು.

ಕಳ್ಳತನ ತಡೆಗೆ ವಾಟ್ಸಾಪ್‌ ಗ್ರೂಪ್‌: ನಗರಠಾಣೆ ಪೊಲೀಸ್‌ ಠಾಣೆ ಅಧಿಕಾರಿಗಳು ಪಟ್ಟಣದಲ್ಲಿ ನಡೆ ಯುತ್ತಿರುವ ಅಪರಾಧ ಪ್ರಕರಣ ಗಳನ್ನು ತಡೆಯುವ ಸಲುವಾಗಿ ವಾಟ್ಸಾಪ್‌ ಗ್ರೂಪ್‌ ಒಂದನ್ನು ರಚಿಸಿ ಆ ಗ್ರೂಪ್‌ನಲ್ಲಿ ಸುಮಾರು ಆರುನೂರಕ್ಕು ಹೆಚ್ಚು ಸದಸ್ಯರನ್ನು ನೋಂದಾಯಿಸಿ ಸಮಾಜದಲ್ಲಿನ ಅಪರಾಧ ಪ್ರಕರಣ ಸೇರಿದಂತೆ ಬಹಳಷ್ಟು ಮಾಹಿತಿಗಳನ್ನು ಸಾರ್ವಜನಿಕರಿಗೆ ತಿಳಿಸುವ ಹೊಸ ಪ್ರಯತ್ನ ಆರಂಭಿಸಿದೆ. ಇದರಿಂದ ಪಟ್ಟಣದಲ್ಲಿ ಇನ್ಮುಂದೆ ಯಾವುದೇ ಕಳವು ಪ್ರಕರಣ ಸೇರಿದಂತೆ ಯಾವುದೇ ಅಪರಾಧ ಪ್ರಕರಣಗಳು ನಡೆಯದಂತೆ ತಡೆಯುವುದು ಮುಖ್ಯ ಉದ್ದೇಶವಾಗಿದೆ.

ನಿವಾಸಿಗಳಿಗೆ ಆತಂಕ ಸೃಷ್ಟಿಸಿದ ಸರಣಿ ಕಳವು: ಕಳೆದ ಹದಿನೈದು ದಿನಗಳ ಹಿಂದೆ ಪಟ್ಟಣದ ಹೃದ ಯಭಾಗದಲ್ಲಿ ಒಂದೇ ದಿನದಲ್ಲಿ ಏಳು ಕಡೆ ಕಳುವು ಪ್ರಕರಣಗಳು ನಡೆದವು. ಅದರಂತೆ ಪಟ್ಟಣದ ಅಕ್ಕಕುರು ಬರ ಬೀದಿಯಲ್ಲಿ ಬೆಳ್ಳಂಬೆಳಗ್ಗೆಯೇ ಮನೆ ಮುಂದೆ ಕಸ ಗುಡಿಸುತ್ತಿದ್ದ ಮಹಿಳೆ ಕತ್ತಿನಲ್ಲಿದ್ದ ಚಿನ್ನದ ಸರ ಕದ್ದೊಯ್ದ ಘಟನೆ ಮತ್ತು ಚಿಟ್ಟನಹಳ್ಳಿ ಬಡಾವಣೆಯಲ್ಲಿ ಮನೆ ಬಾಗಿಲು ಮುರಿದ ಘಟನೆಗಳು ಪಟ್ಟಣದ ನಿವಾಸಿಗಳಿಗೆ ಆತಂಕ ಸೃಷ್ಟಿಸಿತ್ತು. ಈ ಕಳವು ಪ್ರಕರಣಗಳು ನಡೆದ ನಂತರ ಪೊಲೀಸ್‌ ಇಲಾಖೆ ಸಂಪೂರ್ಣವಾಗಿ ಅಲರ್ಟ್‌ ಅಗಿದೆ ಎಂದು ಹೇಳಬಹುದಾಗಿದೆ.

ಪ್ರಸ್ತುತ ನಗರಠಾಣೆ ಪಿಎಸ್‌ಐ ಅರುಣ್‌ ಅವರು ಕಳವು ಪ್ರಕರಣಗಳನ್ನು ತಡೆಯಲು ಬೇಕಾದ ಎಲ್ಲ ರೀತಿಯ ಕ್ರಮಕೈಗೊಳ್ಳಲು ಮುಂದಾಗಿರುವುದು ಸಾರ್ವಜ ನಿಕರ ಪ್ರಶಂಶೆಗೆ ಪಾತ್ರವಾಗಿದೆ.ಜನಸಂಖ್ಯ ಹೆಚ್ಚಾ ದಂತೆ ಪೊಲೀಸ್‌ ಸಿಬ್ಬಂದಿ ಹೆಚ್ಚಾಗಬೇಕಿದ್ದು, ಸರ್ಕಾರ ಹೆಚ್ಚಿನ ಸಿಬ್ಬಂದಿ ಒದಗಿ ಸುವಂತೆ ಸಾರ್ವಜನಿಕರು ಮತ್ತು ಸಂಘ ಸಂಸ್ಥೆ ಪದಾಧಿಕಾರಿಗಳು ರಾಜ್ಯ ಸರ್ಕಾರವನ್ನು ಆಗ್ರಹಪಡಿಸಿವೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.