ಮಂಗನ ಕಾಯಿಲೆಗೆ ನಿರ್ದಿಷ್ಟ ಔಷಧಿ ಇಲ್ಲ


Team Udayavani, Feb 12, 2019, 7:25 AM IST

managa.jpg

ರಾಮನಾಥಪುರ: ಮಂಗನ ಕಾಯಿಲೆಗೆ ಲಸಿಕೆ ಹೊರತುಪಡಿಸಿ ನಿರ್ದಿಷ್ಟವಾದ ಔಷಧಿ ಇಲ್ಲ ಎಂದು ಕೊಣನೂರು ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಎಂ.ಆರ್‌. ಆನಂದಗೌಡ ತಿಳಿಸಿದರು.

ಕೊಣನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಈ ಕಾಯಿಲೆಯು ಒಂದು ಕಡೆಯಿಂದ ಇನ್ನೊಂದು ಕಡೆಗೆ ಉಣ್ಣೆಗಳ ಮೂಲಕ ಹರಡುವುದರಿಂದ ಇಂತ ಹುದೇ ನಿರ್ದಿಷ್ಟ ಸ್ಥಳದಲ್ಲಿ ಕಾಯಿಲೆ ಬರುತ್ತದೆ ಎಂದು ಹೇಳಲಾಗದು. ಆದ್ದರಿಂದ ಚುಚ್ಚು ಮದ್ದನ್ನು ಹಾಕಿಸಿಕೊಳ್ಳಬೇಕು ಎಂದರು.

ಕ್ಯಾಸನೂರಿನಲ್ಲಿ ಪತ್ತೆ: ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕ್ಯಾಸನೂರು ಕಾಡಿನಲ್ಲಿ ಮಂಗನ ಕಾಯಿಲೆ ಪತ್ತೆಯಾದುದರಿಂದ ಈ ರೋಗಕ್ಕೆ ಕ್ಯಾಸನೂರು ಕಾಡಿನ ಕಾಯಿಲೆ ಅಥವಾ ಮಂಗನ ಕಾಯಿಲೆ ಎನ್ನುತ್ತಾರೆ. ಇದು ಕಾಡಿನಲ್ಲಿರುವ ಸೋಂಕು ಪೀಡಿತ ಉಣ್ಣೆಗಳು ಕಚ್ಚುವುದರಿಂದ ಮಾತ್ರ ಬರುತ್ತದೆ ಎಂದರು.

ರೋಗದ ಲಕ್ಷಣಗಳು: ಈ ಕಾಯಿಲೆ ಮನುಷ್ಯ ರಿಂದ ಮನುಷ್ಯರಿಗೆ ಹರಡುವುದಿಲ್ಲ. ಕಾಡಿನಲ್ಲಿ ಮಂಗಗಳು ಸಾಯುವುದೇ ಈ ಕಾಯಿಲೆಯ ಮುನ್ಸೂಚನೆಯಾಗಿದೆ. ಈ ರೋಗದ ಮುಖ್ಯ ಲಕ್ಷಣಗಳೆಂದರೆ ಸತತ ಎಂಟರಿಂದ ಹತ್ತು ದಿನಗಳವರೆಗೆ ಬಿಡದೇ ಜ್ವರ ಬರುವುದು.

ವಿಪರೀತ ತಲೆನೋವು, ಸೊಂಟ ನೋವು, ಕೈಕಾಲು ನೋವು, ನಿಶ್ಯಕ್ತಿ, ಕಣ್ಣು ಕೆಂಪಾಗು ವುದು, ಜ್ವರ ಬಂದ 2 ವಾರಗಳ ನಂತರ ಮೂಗು, ಬಾಯಿ ಹಾಗೂ ಗುದದ್ವಾರ ದಿಂದ ರಕ್ತಸ್ರಾವವಾಗುವುದು, ಸನ್ನಿವಾತ ಅಥವಾ ಮೆದುಳಿನ ಹೊದಿಕೆಯ ಜ್ವರ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ ಎಂದರು.

ಈ ಕಾಯಿಲೆ ಬರದಂತೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳೆಂದರೆ ವಾಸಸ್ಥಳದ ಸುತ್ತಮುತ್ತ ಮಂಗ ಸತ್ತಿರುವುದು ಕಂಡೊಡನೆ ಸ್ಥಳೀಯ ಆರೋಗ್ಯಾಧಿಕಾರಿಗಳಿಗೆ ತಿಳಿಸಬೇಕು. ಮಂಗಗಳು ಮೃತಪಟ್ಟಿರುವ ಕಾಡಿನಲ್ಲಿ ಸಂಚರಿಸುವಾಗ ಮೈತುಂಬಾ ಬಟ್ಟೆ ಧರಿಸಿ ಆರೋಗ್ಯ ಇಲಾಖೆಯಿಂದ ವಿತರಿಸಲಾಗುವ ಡಿಎಂಪಿ ತೈಲವನ್ನು ಕೈಕಾಲುಗಳಿಗೆ ಲೇಪಿಸಿ ಕೊಂಡು ಹೋಗಬೇಕು ಮತ್ತು ಕಾಡಿನಿಂದ ಬಂದ ನಂತರ ಸೋಪು ಹಚ್ಚಿ ಬಿಸಿನೀರಿನಿಂದ ಸ್ನಾನ ಮಾಡಬೇಕು ಎಂದು ಸಲಹೆ ನೀಡಿದರು.

ಲಸಿಕೆ ಹಾಕಿಸಿ: ಮಂಗನ ಕಾಯಿಲೆಗೆ ಲಸಿಕೆ ಲಭ್ಯವಿದೆ, ಈ ಲಸಿಕೆಯಿಂದ ಯಾವುದೇ ದುಷ್ಪರಿಣಾಮ ಇರುವುದಿಲ್ಲ. ಈ ಲಸಿಕೆಯನ್ನು ಆರೋಗ್ಯವಂತ ವ್ಯಕ್ತಿ ಸರಿಯಾದ ಪ್ರಮಾಣದಲ್ಲಿ ಆಗಸ್ಟ್‌ ಮಾಹೆಯಲ್ಲಿ ಮೊದಲ ಮತ್ತು ಒಂದು ತಿಂಗಳ ಅಂತರದಲ್ಲಿ 2ನೇ ಬಾರಿ ಲಸಿಕೆ ಪಡೆಯಬೇಕು. 2ನೇ ಸುತ್ತಿನ ಚುಚ್ಚುಮದ್ದು ಹಾಕಿಸಿ ಕೊಂಡ ನಂತರ ರೋಗ ನಿರೋಧಕ ಶಕ್ತಿ ಬರುತ್ತದೆ. ಗರ್ಭಿಣಿಯರು ಈ ಚುಚ್ಚು ಮದ್ದು ಹಾಕಿಸಿಕೊಳ್ಳಬಾರದು ಎಂದರು.

ಕುಷ್ಠರೋಗ ಚಿಕಿತ್ಸೆ ಪಡೆಯಿರಿ: ಕುಷ್ಠರೋಗವು ಮೈಕ್ರೋಬ್ಯಾಕ್ಟೀರಿಯಂಲೆಪ್ರ ಎಂಬ ಒಂದು ಸೂಕ್ಷ್ಮ ರೋಗಾಣುವಿನಿಂದ ಬರುತ್ತದೆ. ರೋಗ ಪೀಡಿತ ವ್ಯಕ್ತಿಯು ಉಗುಳಿದಾಗ ಹಾಗೂ ಸೀನಿದಾಗ ಅವನಲ್ಲಿರುವ ರೋಗಾಣುಗಳು ಗಾಳಿಯ ಮುಖಾಂತರ ಆರೋಗ್ಯವಂತನ ಶರೀರದಲ್ಲಿ ಪ್ರವೇಶಿಸುತ್ತವೆ ಈ ಕಾಯಿಲೆಗೆ ದೊರಕುವ ಬಹು ಔಷಧಿ ಚಿಕಿತ್ಸೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ದೊರೆಯುತ್ತವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಆರೋಗ್ಯ ಸಹಾ ಯಕ ಜವರೇಗೌಡ, ಶುಶ್ರೂಷಕಿ ನೇತ್ರಾವತಿ, ದಿವ್ಯಾ, ಭವ್ಯಾ, ಕಲಾವತಿ, ಸಾರ್ವಜನಿಕರು, ಆಸ್ಪತ್ರೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.