ಖಾಸಗಿ ಸಹಭಾಗಿತ್ವದಲ್ಲಿ ಪ್ರವಾಸೋದ್ಯಮ ಅಭಿವೃದಿ


Team Udayavani, Sep 4, 2019, 11:37 AM IST

hasan-tdy-2

ಹಾಸನ ಡೀಸಿ ಕಚೇರಿ ಸಭಾಂಗಣದಲ್ಲಿ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಅವರು ಅಧಿಕಾರಿಗಳ ಸಭೆ ಹಾಸನ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಯನ್ನು ಪರಿಶೀಲಿಸಿದರು.

ಹಾಸನ: ರಾಜ್ಯದಲ್ಲಿ ವಿಶ್ವದರ್ಜೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬಂಡವಾಳ ಕ್ರೋಢೀಕರಿಸಲು ಖಾಸಗಿ ಹೂಡಿಕೆದಾರರ ಸಮಾವೇಶ ನಡೆಸಲು ಚಿಂತಿಸಲಾಗಿದೆ ಎಂದು ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ‌ ಸಿ.ಟಿ.ರವಿ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳ ವಾರ ನಡೆದ ಪ್ರವಾಸೋದ್ಯಮ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಅತಿಥಿ ದೇವೋಭವ ಎಂಬುದು ಪ್ರಧಾನಿ ಮೋದಿಯವರ ಆಶಯವಾಗಿದೆ. ಇದೇ ಆಶಯಯೊಂದಿಗೆ ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯ ಗುರಿಯಿದೆ. ಸಂಚಾರ ಸೌಲಭ್ಯ, ಸ್ವಚ್ಛತೆ ಆತಿಥ್ಯ ಸತ್ಕಾರ ಮತ್ತು ಸಹಭಾಗಿತ್ವಕ್ಕೆ ವಸತಿ ವ್ಯವಸ್ಥೆಗಳ ಅಭಿವೃದ್ಧಿ ಮೂಲಕ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಬೇಕಿದೆ ಎದರು.

ಸಮಿತಿ ರಚನೆ: ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜನೆ ತಯಾರಿಗೆ ಸುಧಾಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಈಗಾ ಗಲೇ 41 ಪ್ರವಾಸಿ ವರ್ತುಲ, 319 ಪ್ರವಾಸಿ ಕೇಂದ್ರ ಗಳನ್ನು ಪ್ರವಾಸೋದ್ಯಮ ಇಲಾಖೆ ವತಿಯಿಂದ ಗುರುತಿ ಸಲಾಗಿದೆ. ಅಲ್ಲದೇ 844 ಪ್ರವಾಸಿ ತಾಣಗಳನ್ನು ಪುರಾ ತತ್ವ ಇಲಾಖೆ ವತಿಯಿಂದ ಗುರುತಿಸಲಾಗಿದೆ ಎಂದರು.

ಹಾಸನ ಜಿಲ್ಲೆಯಲ್ಲಿ 70 ಪ್ರವಾಸಿ ತಾಣ: ದೇಶದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಹಾಸನ ಜಿಲ್ಲೆ ಮಹತ್ವಪೂರ್ಣ ಸ್ಥಾನಪಡೆದಿದೆ. ಬೇಲೂರು, ಹಳೇ ಬೀಡು, ಶ್ರವಣಬೆಳಗೊಳದಂತಹ ಜಗತøಸಿದ್ಧ ಪ್ರವಾಸಿ ತಾಣಗಳಿವೆ. ಇಲ್ಲಿನ ಮೂಲಭೂತ ಸೌಕರ್ಯದ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು. ಜಿಲ್ಲೆ ಯಲ್ಲಿ ಈಗಾಗಲೇ 70 ಸ್ಥಳಗಳನ್ನು ಗುರುತಿಸಲಾಗಿದೆ ಇನ್ನೂ ಹತ್ತಾರು ಪ್ರವಾಸಿ ಪ್ರಾಮುಖ್ಯತೆಯನ್ನು ಪಡೆದಂತಹ ಸ್ಥಳಗಳನ್ನು ಗುತರ್ಯಿಸಿ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸಮಗ್ರ ವರದಿ ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಜಿಲ್ಲೆಗೆ 54 ಕೋಟಿ ರೂ. ಬಿಡುಗಡೆ: ಜಿಲ್ಲೆಯಲ್ಲಿ ಈ ಹಿಂದೆ ವಿವಿಧ ಇಲಾಖೆ, ಏಜೆನ್ಸಿಗಳ ಮೂಲಕ 53 ಪ್ರವಾಸಿ ತಾಣಗಳ ಅಭಿವೃದ್ಧಿಗೆ 56.4 ಕೋಟಿ ರೂ. ಬಿಡುಗಡೆಯಾಗಿದೆ. ಕೇಂದ್ರ ಪುರಾತತ್ವ ಇಲಾಖೆ ವತಿಯಿಂದ ಶ್ರವಣಬೆಳಗೊಳ ಹಾಗೂ ಬೇಲೂರಿನಲ್ಲಿ 9 ಕೋಟಿ ರೂ. ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಬೇಲೂರಿನ ಯಗಚಿ ಡ್ಯಾಂ ಬಳಿ 20 ಕೋಟಿ ರೂ. ವೆಚ್ಚದಲ್ಲಿ ತ್ರಿಸ್ಟಾರ್‌ ಹೋಟೆಲ್ಗಳ ನಿರ್ಮಾಣಕ್ಕೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಹೇಳಿದರು.

ಸಮಗ್ರ ಅಭಿವೃದ್ಧಿಯನ್ನು ದೃಷ್ಟಿಯಲ್ಲಿರಿಸಿಕೊಂಡು ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ ರೂಪಿಸ ಬೇಕು. ಭೂದೃಶ್ಯ ವೀಕ್ಷಣೆಗೆ, ಯಾವುದೇ ರೀತಿಯ ಅಡ್ಡಿಯಾಗದಂತೆ ಕಟ್ಟಡಗಳ ನಿರ್ಮಾಣವಾಗಬೇಕು ಎಂದ ಸಚಿವರು, ಬೇಲೂರು ದೇವಾಲಯದಲ್ಲಿ ಇತಿಹಾಸ ಪರಂಪರೆಗಳನ್ನು ಸಾರುವ ಧ್ವನಿಬೆಳಕು ಕಾರ್ಯಕ್ರಮದ ವ್ಯವಸ್ಥೆಗೆ ಯೋಜನೆ ತಯಾರಿಸಿ ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದರು.

ಕಲಾಭವನದ ದುರಸ್ತಿಗೆ ಕ್ರಮ: ಹಾಸನ ನಗರದ ಕಲಾಭವನದ ಅಭಿವೃದ್ಧಿಗೆ ವಿಸ್ತೃತ ಕ್ರಿಯಾ ಯೋಜನೆ ತಯಾರಿಸಿ ಪ್ರಸ್ತಾವನೆ ಸಲ್ಲಿಸಬೇಕು. ತುರ್ತಾಗಿ ಆಗ ಬೇಕಾಗಿರುವ ದುರಸ್ತಿ ಕಾರ್ಯಗಳನ್ನು ನಿರ್ಮಿತಿ ಕೇಂದ್ರದಿಂದ ಕೈಗೊಳ್ಳುವಂತೆ ಸಚಿವ ಸಿ.ಟಿ.ರವಿ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಹಾಲಿ ನಿರ್ಮಿಸಿ ಬಳಸದೇ ಇರುವ ಯಾತ್ರಿನಿವಾಸಗಳನ್ನು ಹಾಸನದ ಸೆಂಟ್ರಲ್ ಬಸ್‌ ನಿಲ್ದಾಣದ ಚನ್ನಪಟ್ಟಣ ಕೆರೆಯಲ್ಲಿ ನಿರ್ಮಿಸಿರುವ ಪ್ರವಾಸಿ ಹೋಟೆಲ್ಗಳನ್ನು ಕೆಎಸ್‌ಟಿಡಿಸಿಗೆ ವಹಿಸಿ ನಿರ್ವಹಣೆ ಮಾಡುವಂತೆ ಸಚಿವ ಸಿ.ಟಿ.ರವಿ ಸೂಚನೆ ನೀಡಿದರು.

ಶಾಸಕರಾದ ಕೆ.ಎಸ್‌.ಲಿಂಗೇಶ್‌ ಅವರು ಯಗಚಿ, ಬೇಲೂರು, ಹಳೇಬೀಡು, ಪುಷ್ಪಗಿರಿ, ವಿಷ್ಣುಸಮುದ್ರ ಕೆರೆಗಳ ಅಭಿವೃದ್ಧಿ ಬೇಲೂರು ಸಾಂಸ್ಕೃತಿಕ ಸಮುದಾಯ ನಿರ್ಮಾಣ ಕುರಿತು ಗಮನ ಸೆಳೆದರು.

ಜಿಪಂ ಅಧ್ಯಕ್ಷೆ ಬಿ.ಎಸ್‌.ಶ್ವೇತಾ, ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಅವರು ಜಿಲ್ಲೆಯ ಪ್ರವಾಸಿ ಯೋಜನಾ ವರದಿ ತಯಾರಿ, ಪ್ರವಾಸಿ ತಾಣಗಳ ಅಭಿವೃದ್ಧಿ ಕುರಿತು ಮಾಹಿತಿ ನೀಡಿದರು.

ಪ್ರಭಾರ ಅಪರ ಜಿಲ್ಲಾಧಿಕಾರಿ ಹಾಗೂ ಉತ್ತರ ವಿಭಾಗಾಧಿಕಾರಿ ನಾಗರಾಜ್‌, ಸಕಲೇಶ ಪುರ ಉಪವಿಭಾಗಾಧಿಕಾರಿ ಕವಿತಾ ರಾಜಾರಾಂ, ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಭಾರಿ ಅಧಿಕಾರಿ ಶಿವಲಿಂಗಪ್ಪ ಎಸ್‌.ಕುಂಬಾರ ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.