ಪುರಸಭೆ ಅಡಳಿತ ಮಂಡಳಿ ರಚನೆ ಯಾವಾಗ?

ಚುನಾವಣೆ ನಡೆದು 4 ತಿಂಗಳಾದರೂ ರಚನೆಯಾಗದ ಮಂಡಳಿ; ಅಭಿವೃದ್ಧಿ ಕಾರ್ಯಗಳಿಗೆ ತೊಡಕು

Team Udayavani, Sep 12, 2021, 4:20 PM IST

ಪುರಸಭೆ ಅಡಳಿತ ಮಂಡಳಿ ರಚನೆ ಯಾವಾಗ?

ಬೇಲೂರು: ಬೇಲೂರು ಪುರಸಭೆಗೆ ಚುನಾಯಿತ ಪ್ರತಿನಿಧಿಗಳು ಆಯ್ಕೆಯಾಗಿದ್ದರು ಆಡಳಿತ ನೆಡೆಸಲು ಅವಕಾಶ ಸಿಗದೆ ಪಟ್ಟಣ ಸಮಗ್ರ ಅಭಿವೃದ್ಧಿಯಲ್ಲಿ ಕುಂಠಿತಗೊಂಡಿದೆ.

ಇಲ್ಲಿನ ಪುರಸಭೆಗೆ ಕಳೆದ ನಾಲ್ಕು ತಿಂಗಳ ಹಿಂದೆ ಚುನಾವಣೆ ನಡೆದಿದೆ. ಅದಕ್ಕೂ ಮೊದಲು ಹಿಂದಿನ ಅವಧಿ ಮುಗಿದು ಸುಮಾರು2 ವರ್ಷಗಳು ಕಳೆದರೂ ಪುರಸಭೆ ಚುನಾವಣೆ ನೆಡೆದಿರಲಿಲ್ಲ.ಕಳೆದ ಎರಡುವರೆ ವರ್ಷಗಳಿಂದ ಚುನಾಯಿತ ಪ್ರತಿನಿಧಿಗಳು ಇಲ್ಲದೆ ಆಡಳಿತಾಧಿಕಾರಿ ನೇಮಕದಿಂದ ಪಟ್ಟಣದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದ್ದರೂ ಇದುವರೆವಿಗೂ ಸರ್ಕಾರ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ನಡೆಸದೆ ವಾರ್ಡ್‌ ಅಭಿವೃದ್ಧಿಯಾಗದೆ ಹಿಂದೆ ಬಿದ್ದಿವೆ. ಯಗಚಿ ಜಲಾಶಯ ಪಟ್ಟಣಕ್ಕೆ ಹೊಂದಿಕೊಂಡಿದ್ದರೂ ಪುರಸಭೆ ಪಟ್ಟಣದ 23 ವಾರ್ಡ್‌ಗಳಲ್ಲಿ ನದಿ
ಮೂಲದಿಂದ ಸಮರ್ಪಕ ಕುಡಿವ ನೀರಿನ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗಿಲ್ಲ. ಸುಮಾರು 16 ಕೋಟಿ ವೆಚ್ಚದಲ್ಲಿ 24×7 ನೀರು ಕೊಡುವ ಯೋಜನೆ
ರೂಪಿಸಲಾಗಿದೆ. ಆದರೂ ಜನಪ್ರತಿನಿಧಿಗಳ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ಕಳೆದ 10 ವರ್ಷಗಳಿಂದ ಈ ಯೋಜನೆ ಕಾರ್ಯರೂಪಕ್ಕೆ ಬಾರದೆ ನನೆಗುದಿಗೆ ಬಿದ್ದಿದೆ.

ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಸ್ವಚ್ಛತೆ, ವಿದ್ಯುತ್‌ ಇಲ್ಲದೆ ಜನರುಪರಿತಪಿಸುವಂತಾಗಿದೆ. ಪಟ್ಟಣದ ಹೊಸನಗರ, ಚನ್ನಕೇಶವನಗರ ಹನು ಮಂತನಗರ ಹಾಗು ಇನ್ನಿತರೆ ವಾರ್ಡ್‌ಗಳಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲದೆ ಜನರು ನಿತ್ಯ ತೊಂದರೆ ಅನು ಭವಿಸುವಂತಾಗಿದೆ. ಹಾಗೂ ಕಳೆದ 20 ವರ್ಷಗಳ ಹಿಂದೆ ಪಟ್ಟಣದಲ್ಲಿ ವಾಸವಿದ್ದವರಿಗೆ ನಿವೇಶನ ಮತ್ತು ಮನೆ ಹಂಚಲಾಗಿತ್ತು. ಆದರೆ, ಅಲ್ಲಿಂದ ಇಲ್ಲಿಯವರೆವಿಗೂ ಒಂದು ನಿವೇಶನವನ್ನೂ ಹಂಚಲು ಸಾಧ್ಯವಾಗಿಲ್ಲ. ವಿಶ್ವವಿಖ್ಯಾತ ಚನ್ನಕೇಶವ ದೇವಾಲಯ ಇರುವಪಟ್ಟಣದಲ್ಲಿ ಮುಖ್ಯ ರಸ್ತೆ ಅಗಲೀಕರಣಗೊಳ್ಳದೆ ದಿನ ನಿತ್ಯ ರಾಷ್ಟ್ರೀಯ ಹಾಗು ಅಂತಾರಾಷ್ಟ್ರೀಯ ಪ್ರವಾಸಿಗರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಷ್ಟೆಲ್ಲಾ ಸಮಸ್ಯೆ ಸುಳಿಯಲ್ಲಿರುವ ಬೇಲೂರು ಪುರಸಭೆಗೆಸ್ಥಳೀಯವಾಗಿ ಚರ್ಚೆಸಿ ಸಮಸ್ಯೆಗಳನ್ನು ಬಗೆಹರಿಸಲು ಪುರಸಭೆ ಚುನಾಯಿತ ಪ್ರತಿನಿಧಿಗಳೇ ಇಲ್ಲವಾಗಿದ್ದಾರೆ. ಈ ಬಗ್ಗೆ ಪುರಸಭೆ ಮಾಜಿ ಅಧ್ಯಕ್ಷ ಹಾಗು ಹಾಲಿ ಸದಸ್ಯ ಜಿ.ಶಾಂತಕುಮಾರ್‌ ಉದಯವಾಣಿಯೊಂದಿಗೆ ಮಾತನಾಡಿ ಪ್ರಸ್ತುತ ಸಾಂಕ್ರಮಿಕ ರೋಗ ಹಾಗು
ಕರೋನಾಬೀತಿಯಲ್ಲಿರುವ ಸಂದರ್ಭದಲ್ಲಿ ಪುರಸಭೆಗೆ ಚುನಾಯಿತ ಪ್ರತಿನಿಧಿಗಳು ಅವಶ್ಯಕವಾಗಿ ಬೇಕಾಗಿದೆ. ಜನ ಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸಲು ಪುರಸಭೆ ಆಡಳಿತ ಮಂಡಳಿ ಬಹುಮುಖ್ಯ ಎಂದರು.

ಇದನ್ನೂ ಓದಿ:ಮಹಾದಾಯಿ,ಮೇಕೆದಾಟು ಬಗ್ಗೆ ವಿಪಕ್ಷದಲ್ಲಿದ್ದಾಗ ಮಾತನಾಡಿದ ನಾಯಕರು ಈಗ ಮಾತಾಡುತ್ತಾರೋ.:ಡಿಕೆಶಿ

ಸರ್ಕಾರ ಉಪವಿಭಾಗಾಧಿಕಾರಿಗಳನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿದೆ. ಆದರೆ, ಆಡಳಿತಾಧಿಕಾರಿಗಳು ಸಕಲೇಶಪುರ, ಅರಕಲ
ಗೂಡು ಪಟ್ಟಣದಲ್ಲೂ ಕೆಲಸ ಮಾಡಬೇಕಾಗಿದ್ದು, ಬೇಲೂರು ಪುರಸಭೆಗೆ ವಾರದಲ್ಲಿಕೇವಲ ಒಂದು ದಿನ ಕೆಲಸ ಮಾಡಿದರೆ ಪುರಸಭೆ ಅಭಿವೃದ್ಧಿ ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ಪುರಸಭೆಯಲ್ಲಿ ಜನಸಾಮನ್ಯರ ಕೆಲಸಗಳು ಸುಲಭದ ರೀತಿಯಲ್ಲಿ ನಡೆಯುತ್ತಿಲ್ಲ. ಪುರಸಭೆ ವ್ಯಾಪ್ತಿಯಲ್ಲಿ ಹಲವಾರು ಸಮಸ್ಯೆ ಎದ್ದುಕಾಣುತ್ತಿವೆ. ಇವುಗಳನ್ನು ಬಗೆ ಹರಿಸಲು ಆಡಳಿತ ಮಂಡಳಿ ಅಗತ್ಯವಾಗಿರುವುರಿಂದ ಸರ್ಕಾರ ಹಾಗು ಜಿಲ್ಲಾಧಿಕಾರಿಗಳು ಕೂಡಲೆ ಗಮನಹರಿಸಿ ಬೇಲೂರು
ಪುರಸಭೆ ಸಮಗ್ರ ಅಭಿವೃದ್ದಿ ಗಮನದಲ್ಲಿಟ್ಟು ಅಡಳಿತ ಮಂಡಳಿಗೆ ಚುನಾವಣೆ ನಡೆಸಲು ಮುಂದಾಗ ಬೇಕು ಎಂದಿದ್ದಾರೆ.

ಆಡಳಿತ ಮಂಡಳಿ ರಚನೆಯಾಗಲಿ
ಪಟ್ಟಣದ23 ವಾರ್ಡಗಳಲ್ಲಿ ಹಲವು ಸಮಸ್ಯೆಗಳಿದ್ದು, ಇವುಗಳನ್ನು ಬಗೆಹರಿಸಲು ಪುರಸಭೆಯಲ್ಲಿ ಚುನಾಯಿತ ಪ್ರತಿನಿಧಿಗಳು ಅಗತ್ಯವಾಗಿದೆ. ಈಗಾಗಲೆ ಪುರಸಭೆ ಚುನವಣೆ ನಡೆದು ಸದಸ್ಯರೂ ಸಹ ಆಯ್ಕೆಯಾಗಿದ್ದಾರೆಕೋವಿಡ್‌ ನೆಪದಲ್ಲಿ ಅಡಳಿತ ಮಂಡಳಿ ರಚನೆಯಾಗದಿದ್ದರೆ ಹೇಗೆ ಜನಸಾಮಾನ್ಯರು ಹಲವಾರು ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಪಟ್ಟಣದ ಅಭಿವೃದ್ಧಿ ಬಗ್ಗೆಕೇಳಿದರೆ ಉಪ ವಿಭಾಗಧಿಕಾರಿಗಳನ್ನು
ತೋರಿಸುತ್ತಾರೆಕೂಡಲೆ ಸರ್ಕಾರ ಮನಗಂಡು ಬೇಲೂರು ಪುರಸಭೆಗೆ ಆಡಳಿತ ಮಂಡಳಿ ಚುನಾವಣೆ ನೆಡೆಸಬೇಕು ಎಂದು ಪುರಸಭೆ ಸದಸ್ಯ ಬಿ.ಎ. ಜಮಾಲುದ್ದೀನ್‌ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.