ಗೂಡ್ಸ್‌ ವಾಹನದಲ್ಲಿ ಕುರಿಗಳಂತೆ ಜನರ ಸಾಗಣೆ

ಅಪಘಾತ ಸಂಭವಿಸಿದರೆ ನೂರಾರು ಮಂದಿ ಪ್ರಾಣಕ್ಕೆ ಕುತ್ತು • ಪೊಲೀಸ್‌, ಸಾರಿಗೆ ಇಲಾಖೆಯಿಂದ ಜಾಗೃತಿ ಅಗತ್ಯ

Team Udayavani, Jul 26, 2019, 11:29 AM IST

hasan-tdy-002

ಚನ್ನರಾಯಪಟ್ಟಣ ತಾಲೂಕಿನಲ್ಲಿ ಸರಕು ಸಾಗಾಣಿಕೆ ವಾಹನದಲ್ಲಿ ಕುರಿಗಳಂತೆ ಸಾರ್ವಜನಿಕರನ್ನು ತುಂಬಿಕೊಂಡು ಹೋಗಲಾಗುತ್ತಿದೆ.

ಚನ್ನರಾಯಪಟ್ಟಣ: ಸರಕು ಸಾಗಾಣಿಕೆ ವಾಹನದಲ್ಲಿ ಕುರಿಗಳಂತೆ ಜನರನ್ನು ತುಂಬಿಕೊಂಡು ಒಂದು ಕಡೆ ಯಿಂದ ಮತ್ತೂಂದು ಕಡೆಗೆ ಹೋಗುವುದು ತಾಲೂಕಿನಲ್ಲಿ ಮಾಮೂಲಾಗಿದ್ದರೂ ಪೊಲೀಸ್‌ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ.

ಕೂಲಿ ಕೆಲಸ ಮಾಡುವ ಕಾರ್ಮಿಕರು ಇಲ್ಲವೇ ವಿವಾಹ ಮಹೋತ್ಸವ ಮತ್ತು ಬೀಗರ ಔತಣ ಕೂಟಕ್ಕೆ ಗ್ರಾಮೀಣ ಭಾಗದ ಜನರನ್ನು ನಿಗದಿತ ಸ್ಥಳಕ್ಕೆ ಕರೆತರಲು ಸರಕು ಸಾಗಾಣಿಕೆ ವಾಹನಗಳಾದ ಮಿನಿ ಲಾರಿ, ಟಾಟಾ ಏಸ್‌ ಇಲ್ಲವೇ ದೊಡ್ಡಲಾರಿಯನ್ನು ಹೆಚ್ಚು ಬಳಸುವ ಮೂಲಕ ವಾಹನ ಮಾಲೀಕರಾಗಲೀ ಇಲ್ಲವೇ ಚಾಲಕರಾಗಲಿ ಸಾರಿಗೆ ನಿಯಮಕ್ಕೆ ಕವಡೆ ಕಾಸಿನ ಬೆಲೆ ನೀಡುತ್ತಿಲ್ಲ. ಇದನ್ನು ಕಣ್ಣಾರೆ ಕಾಣುವ ಸಾರಿಗೆ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ದಂಡಹಾಕಿ ಬಿಟ್ಟು ಕಳುಹಿಸುತ್ತಿದ್ದಾರೆ.

ಕಡಿವಾಣ ಹಾಕಿ: ಲೈಸೆನ್ಸ್‌ ಹೊಂದದ ಚಾಲಕರು ಹಳ್ಳಿಗಾಡಿನ ರೋಡ್‌ಗಳಲ್ಲಿ ಸ್ಟೇರಿಂಗ್‌ ಹಿಡಿಯುವುದು ಸಾಮಾನ್ಯವಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮಕ್ಕೆ ಅಧಿಕಾರಿಗಳು ಮುಂದಾದರೂ ಕೆಲ ವಾಹನ ಚಾಲಕರು ಅಧಿಕಾರಿಗಳ ಕಣ್ಣಿಗೆ ಮಣ್ಣೆರಚಿ ವಾಹನ ಓಡಿಸುತ್ತಿದ್ದಾರೆ. ಇನ್ನು ವಾರದ ಸಂತೆ ದಿವಸ ದಲ್ಲಿ ಗ್ರಾಮೀಣ ಭಾಗದಿಂದ ಆಗಮಿಸುವ ಸರಕು ಸಾಗಾಣಿಕೆ ವಾಹನಗಳಲ್ಲಿನ ಚಾಲಕರು ಅತಿ ವೇಗವಾಗಿ ವಾಹನ ಓಡಿಸುತ್ತಾರೆ ಇದಕ್ಕೆ ಕಡಿವಾಣ ಹಾಕಬೇಕಿದೆ.

ಗ್ರಾಮೀಣರೇ ಹೆಚ್ಚು: ಸಾರ್ವಜನಿಕರು ಒಂದು ಕಡೆ ಯಿಂದ ಮತ್ತೂಂದು ಕಡೆಗೆ ಸಂಚಾರ ಮಾಡಲೆಂದೇ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ನೂರಾರು ವಾಹನ ಗಳು ಗ್ರಾಮೀಣ ಭಾಗದಲ್ಲಿ ಸಂಚಾರ ಮಾಡುತ್ತಿವೆ. ಇದರೊಂದಿಗೆ ಖಾಸಗಿ ಟೆಂಪೋಗಳು, ಆಟೋಗಳು ಸೇರಿದಂತೆ ಸಾರ್ವಜನಿಕರು ಪ್ರಯಾಣಿಸುವ ನಾನಾ ವಾಹನಗಳೂ ನಿತ್ಯವೂ ರಸೆಯಲ್ಲಿ ಸಂಚಾರ ಮಾಡು ತ್ತವೆ. ಆದರೂ ಗ್ರಾಮೀಣ ಭಾಗದ ಜನತೆ ಮಾತ್ರ ಸರಕು ಸಾಗಾಣಿಕೆ ವಾಹನವನ್ನು ಏರಿ ಸಂಚಾರ ಮಾಡುತ್ತಾರೆ.

ಬೀಗರ ಔತಣ ಕೂಟಕ್ಕೆ ಸಂಚಾರ: ಆಷಾಢ ತಿಂಗಳು ಹೊರತುಪಡಿಸಿ ವಿವಾಹ ಮಹೋತ್ಸವ ನಡೆಯುವ ಸಂದರ್ಭದಲ್ಲಿ ನಿತ್ಯವೂ ಸಾವಿರಾರು ಮಂದಿ ಸಾರ್ವಜನಿಕರು ಸರಕು ಸಾಗಾಣಿಕೆ ವಾಹನ ಮತ್ತು ಲಾರಿಗಳಲ್ಲಿ ಸಂಚಾರ ಮಾಡುತ್ತಾರೆ. ಮಾಂಸಾ ಹಾರಿಗಳು ದೇವಾಲಯಗಳು ಇರುವ ಸ್ಥಳದ‌ಲ್ಲಿ ಬೀಗರ ಔತಣ ಕೂಟ ಏರ್ಪಡಿಸುವುದರಿಂದ ಗ್ರಾಮೀಣ ಭಾಗದಿಂದ ಹೆಚ್ಚು ಜನರನ್ನು ಔತಣ ಕೂಟಕ್ಕೆ ಸೇರಿಸಲು ಸರಕು ಸಾಗಾಣಿಕೆ ವಾಹನ ವ್ಯವಸ್ಥೆ ಮಾಡುತ್ತಾರೆ. ಹಾಗಾಗಿ ಔತಣಕೂಟಕ್ಕೆ ತೆರ ಳುವ ಮಂದಿ ವಿಧಿ ಇಲ್ಲದೆ ಲಾರಿ ಹಾಗೂ ಸರಕು ಸಾಗಾಣಿಕೆ ವಾಹನದಲ್ಲಿ ಸಂಚಾರ ಮಾಡುತ್ತಾರೆ.

ಕೂಲಿ ಕಾರ್ಮಿಕರು: ರಾತ್ರಿಯಾಯಿತೆಂದರೆ ನಗರ ದಿಂದ ತಮ್ಮ ಗ್ರಾಮಕ್ಕೆ ತೆರಳುವ ಸರಕು ಸಾಗಾಣಿಕೆ ವಾಹನ ಚಾಲಕರು ತಮ್ಮ ಮಾರ್ಗದಲ್ಲಿನ ಗ್ರಾಮೀಣ ಭಾಗದ ಜನರನ್ನು ವಾಹನದಲ್ಲಿ ಹೊತ್ತು ಸಾಗುತ್ತಾರೆ. ಪಟ್ಟಣದಲ್ಲಿ ಕೂಲಿ ಕೆಲಸ ಮುಗಿಸಿ ಊರಿಗೆ ತೆರಳು ವವರು ಆದಷ್ಟು ಬೇಗ ಮನೆ ಸೇರಬೇಕೆಂಬ ತವಕದಲ್ಲಿ ಸಾರಿಗೆ ಬಸ್‌ ಕಾಯದೇ ತಮ್ಮ ಸಮಯಕ್ಕೆ ಯಾವುದು ಸಿಗುತ್ತದೆ ಅದರಲ್ಲಿ ಸಂಚಾರ ಮಾಡುತ್ತಾರೆ.

ಅರಿವು ಅಗತ್ಯ: ಸರಕು ಸಾಗಾಣಿಕೆ ವಾಹನದಲ್ಲಿ ಪ್ರಯಾಣಿಕರು ಸಂಚಾರ ಅಪಾಯಕಾರಿ ಎಂದು ಪೊಲೀಸ್‌ ಅಥವಾ ಸಾರಿಗೆ ಇಲಾಖೆ ಅಧಿಕಾರಿಗಳು ಜನರಲ್ಲಿ, ವಾಹನ ಚಾಲಕ ಹಾಗೂ ಮಾಲೀಕರಲ್ಲಿ ಜಾಗೃತಿ ಮೂಡಿಸಬೇಕಿದೆ. ವಾಹನ ತಪಾಸಣೆ ವೇಳೆ ಸಾರ್ವಜನಿಕರ ಸುರಕ್ಷತೆ ಕುರಿತು ತಿಳಿವಳಿಕೆ ನೀಡ ಬೇಕಿದೆ. ನಿಯಮ ಮೀರಿ ಪ್ರಾಯಾಣಿಕರನ್ನು ಹೊತ್ತೂ ಯ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಆದೇಶಿಸುವ ಮೂಲಕ ಸರಕು ವಾಹನದಲ್ಲಿ ಸಾರ್ವಜನಿಕರು ಪ್ರಯಾಣ ಮಾಡುವುದಕ್ಕೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕಾಗಿದೆ.

 

● ಶಾಮಸುಂದರ್‌ ಕೆ. ಅಣ್ಣೇನಹಳ್ಳಿ

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.