ಗ್ರಾಪಂ ಅಧಿಕಾರಕ್ಕಾಗಿ ಆಕಾಂಕ್ಷಿಗಳಿಂದ ಸದಸ್ಯರಿಗೆ ಪ್ರವಾಸ ಭಾಗ್ಯ


Team Udayavani, Jan 23, 2021, 2:39 PM IST

Traveling from aspirants to members for grama panchayath

ಚನ್ನರಾಯಪಟ್ಟಣ: ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿಯಾಗಿದ್ದು, ಫೆ.6ರೊಳಗೆ ಚುನಾವಣೆ ನಡೆಸಲು ಈಗಾಗಲೇ ಅಧಿಕಾರಿಯನ್ನೂ ನೇಮಿಸಿ, ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅತಂತ್ರ ಸ್ಥಿತಿಯಲ್ಲಿ ಇರುವ ಗ್ರಾಪಂನಲ್ಲಿ ಅಧಿಕಾರ ಹಿಡಿಯಲು ಸದಸ್ಯರನ್ನು ಪ್ರವಾಸಕ್ಕೆ ಕರೆದೊಯ್ದಿದ್ದು, ರೆಸಾರ್ಟ್‌ ರಾಜಕೀಯಕ್ಕೆ ಜೆಡಿಎಸ್‌, ಕಾಂಗ್ರೆಸ್‌ ಬೆಂಬಲಿಗರಿಂದ ಮುಂದಾಗಿದ್ದಾರೆ.

ಅಧ್ಯಕ್ಷ ಹುದ್ದೆಗೆ ಏರುವ ಉದ್ದೇಶದಿಂದ ಲಕ್ಷಾಂತರ ರೂ. ಹಣ ನೀಡಿ ಹರಾಜಿನಲ್ಲಿ ಆಯ್ಕೆಯಾಗಿರುವ ಕೆಲವರಿಗೆ ಮೀಸಲಾತಿಯಿಂದ ಅಧಿಕಾರ ಕೈ ತಪ್ಪಿದೆ. ಇದರ ಲಾಭ ಪಡೆಯಲು, ಪಕ್ಷದ ಮುಖಂಡರು, ತಮ್ಮ ಹಿಂಬಾಲಕರನ್ನು ಬಿಟ್ಟು ತಾವು ಹೇಳಿದಂತೆ ಕೇಳಿದವರಿಗೆ ಗ್ರಾಪಂ ಅಧ್ಯಕ್ಷ ಸ್ಥಾನ ನೀಡಲು ತೀರ್ಮಾನ ಮಾಡಿದ್ದು, ತೀರ್ಥ ಕ್ಷೇತ್ರಕ್ಕೆ ಪ್ರವಾಸ ಕಳುಹಿಸಿದ್ದಾರೆ.
ಪ್ರಾಬಲ್ಯ ಉಳಿಸಿಕೊಳ್ಳುವ ಉದ್ದೇಶ: ಶ್ರವಣ ಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿ ಮೂರು ದಶಕ ದಿಂದ ಜೆಡಿಎಸ್‌ ಪಕ್ಷದವರೇ ಅಧಿಕಾರದಲ್ಲಿ ಇದ್ದಾರೆ. ಕಳೆದ ಏಳು ವರ್ಷದಿಂದ ಸಿ.ಎನ್‌. ಬಾಲಕೃಷ್ಣ ಶಾಸಕರಾಗಿದ್ದಾರೆ. ಕ್ಷೇತ್ರದಲ್ಲಿ ತಮ್ಮ ಪ್ರಾಬಲ್ಯವನ್ನು ಉಳಿಸಿಕೊಳ್ಳಲು 25ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಯನ್ನು ತಮ್ಮ ವಶಕ್ಕೆ ಪಡೆದಿದ್ದಾರೆ. ಆದರೂ, ಅತಂತ್ರ ಸ್ಥಿತಿಯಲ್ಲಿ ಇರುವ ಪಂಚಾಯಿತಿ ಮೇಲೂ ಕಣ್ಣು ಇಟ್ಟಿದ್ದು, ಅದಕ್ಕಾಗಿ ತಂತ್ರಗಾರಿಕೆ ರೂಪಿಸಿದ್ದಾರೆ.

ತಂತ್ರಕ್ಕೆ ಪ್ರತಿ ತಂತ್ರ: ಶಾಸಕರಿಗೆ ಸಡ್ಡು ಹೊಡೆಯಲು ಎಂಎಲ್ಸಿ ಎಂ.ಎ.ಗೋಪಾಲಸ್ವಾಮಿ ಗ್ರಾಪಂ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ, ನೂರಕ್ಕೂ ಹೆಚ್ಚು ಮಂದಿಯನ್ನು ಗೆಲ್ಲಿಸಿಕೊಂಡಿದ್ದಾರೆ. ಐದಾರು ಗ್ರಾಪಂ ಕಾಂಗ್ರೆಸ್‌ ಬೆಂಬಲಿತರ ಪಾಲಾದರೂ ಹೆಚ್ಚು ಗ್ರಾಪಂ ಅನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದ ಅತಂತ್ರ ಸ್ಥಿತಿಯ ಗ್ರಾಪಂಗಳ ಮೇಲೆ ಕಣ್ಣು ಇಟ್ಟಿದ್ದಾರೆ. ಜೆಡಿಎಸ್‌ನ ತಂತ್ರಕ್ಕ ಪ್ರತಿ ತಂತ್ರ ರೂಪಿಸುತ್ತಿದ್ದಾರೆ.

ಇದನ್ನೂ ಓದಿ:ಕಾಂಗ್ರೇಸ್ ನಲ್ಲಿ ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವೆ ಸಿಎಂ ಸ್ಪರ್ಧೆ : ಈಶ್ವರಪ್ಪ ವ್ಯಂಗ್ಯ

ಖಾತೆ ತೆರೆದ ಬಿಜೆಪಿ: ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷದ್ದೇ ಪಾರುಪತ್ಯ. ಇದರ ನಡುವೆ ಬಿಜೆಪಿ ಬೆಂಬಲಿತರು ಖಾತೆ ತೆರೆಯುವ ಮೂಲಕ ಕ್ಷೇತ್ರದಲ್ಲಿ ಬಿಜೆಪಿ ಚಿಗುರೊಡೆಯುವಂತೆ ಆ ಪಕ್ಷದ ಮುಖಂಡ ಎ.ಸಿ.ಆನಂದಕುಮಾರ್‌ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ತಾಲೂಕಿನಲ್ಲಿ ಬಿಜೆಪಿ 15ಕ್ಕೂ ಹೆಚ್ಚು ಬೆಂಬಲಿತ ಸದಸ್ಯರನ್ನು ಗ್ರಾಮ ಪಂಚಾಯಿತಿ ಮೆಟ್ಟಿಲೇರುವಂತೆ ಮಾಡಿದ್ದಾರೆ.

ತೀರ್ಥ ಕ್ಷೇತ್ರ, ರೆಸಾರ್ಟ್‌ ವಾಸ್ತವ್ಯ: ಹಲವು ಮಂದಿ ಈಗಾಗಲೆ ಧರ್ಮಸ್ಥಳ, ಸುಬ್ರಹ್ಮಣ್ಯ, ಹೊರನಾಡು, ಮಂಗಳೂರು, ಶೃಂಗೇರಿ ಸೇರಿ ಹಲವು ತೀರ್ಥ ಕ್ಷೇತ್ರದ ಪ್ರವಾಸದಲ್ಲಿ ಇದ್ದಾರೆ. ಕ್ಷೇತ್ರದ ಪ್ರವಾಸ ಮುಗಿಸಿರುವ ಅನೇಕ ಮಂದಿ ಮಡಿಕೇರಿ, ಕೇರಳ ರಾಜ್ಯದ ರೆಸಾರ್ಟ್‌ನಲ್ಲಿ ಟಿಕಾಣಿ ಹೂಡಿದ್ದಾರೆ. ಚುನಾವಣೆ ದಿನಾಂಕ ಸಮೀಪಿದ ಮೇಲೆ ಕ್ಷೇತ್ರಕ್ಕೆ ಹಿಂತಿರುಗುವ ಲೆಕ್ಕಾಚಾರದಲ್ಲಿ ಇದ್ದಾರೆ.

ಶಾಮಸುಂದರ್‌ ಕೆ.ಅಣ್ಣೇನಹಳ್ಳಿ

 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.