ಶಿರಾಡಿ ಘಾಟ್ ಸಂಚಾರಕ್ಕೆ ಮುಕ್ತ: ಶಾಸಕ ಎಚ್.ಕೆ ಕುಮಾರಸ್ವಾಮಿ ರವರಿಂದ ಪರಿಶೀಲನೆ
Team Udayavani, Aug 16, 2021, 2:48 PM IST
ಸಕಲೇಶಪುರ : ಅತೀವೃಷ್ಟಿಯಿಂದ ಹಾನಿಗೊಳಗಾಗಿದ್ದ ಶಿರಾಡಿ ಘಾಟ್ ರಸ್ತೆಯನ್ನು ಲಘು ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಿ ಜಿಲ್ಲಾಧಿಕಾರಿ ಅರ್. ಗಿರೀಶ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಶಾಸಕ ಎಚ್.ಕೆ ಕುಮಾರಸ್ವಾಮಿ ಸ್ಥಳ ಪರಿಶೀಲಿಸಿದರು.
ತಾಲೂಕಿನ ದೋಣಿಗಾಲ್ ಸಮೀಪ ಹೆದ್ದಾರಿ ದುರಸ್ಥಿ ಕಾರ್ಯವನ್ನು ಪರಿಶೀಲಿಸಿದ ದೋಣಿಗಾಲ್ ಸಮೀಪ ಭೂಕುಸಿತವಾದ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ನಲ್ಲಿ ಕಳೆದ 15 ದಿನಗಳಿಂದ ವಾಹನಗಳ ಸಂಚಾರಕ್ಕೆ ನಿಷೇದ ಹೇರಿದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ, ಶಾಲಾ ಕಾಲೇಜು ಮಕ್ಕಳಿಗೆ ಸೇರಿದಂತೆ ಈ ಭಾಗದಲ್ಲಿ ಪ್ರಯಾಣಿಸುವ ಎಲ್ಲಾರಿಗೂ ಅನಾನುಕೂಲವಾಗಿತ್ತು.ಇದೀಗ ರಸ್ತೆ ಬಹುತೇಕವಾಗಿ ದುರಸ್ಥಿವಾಗಿದ್ದು ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.
ಇದನ್ನೂ ಓದಿ : ಅಜ್ಜಿಯ ಹಲ್ಲಿನ ಸೆಟ್ ಹಾಳು ಮಾಡಿದ ಹಸುಳೆಯ ಹತ್ಯೆ: ಆರೋಪಿ ಬಂಧನ
ಲಘು ವಾಹನಗಖ ಸಂಚಾರಕ್ಕೆ ರಸ್ತೆ ಇಂದು ಮುಕ್ತಗೊಳ್ಳುವ ಸಾಧ್ಯತೆಯಿದೆ.ಇಲ್ಲದಿದ್ದಲ್ಲಿ ನಾಳೆಯಿಂದ ಆದರು ಲಘುನ ವಾಹನಗಳ ಸಂಚಾರಕ್ಕೆ ಅವಕಾಶ ನೀಡಬೇಕು ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಈ ಕಾಮಗಾರಿ ವೇಗವಾಗಿ ಮುಗಿಸಲು ಕ್ರಮ ಕೈಗೊಳ್ಳಬೇಕೆಂದು ಹೇಳಿದರು.
ಉಪವಿಭಾಗಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ ಇದೀಗ ಬಂದ ಜಿಲ್ಕಾಧಿಕಾರಿಗಳ ಆದೇಶದಂತೆ ಬೆಳಿಗ್ಗೆ ಆರು ಗಂಟೆಯಿಂದ ಸಂಜೆ ಆರರರವರೆಗೆ ವಾಹನಗಳು ಸಂಚರಿಸಬಹುದಾಗಿದೆ. ಕಾರು,ಜೀಪು,ಟೆಂಪೋ,ದ್ವಿಚಕ್ರ ವಾಹನ, ಅಂಬುಲೆನ್ಸ್ ಮತ್ತು ಇಪ್ಪತ್ತು ಟನ್ ತೂಕದ ಲಾರಿಗಳಿಗೆ ಮಾತ್ರ ಸದ್ಯ ಅನುಮತಿ ನೀಡಲಾಗಿದೆ.
ಬುಲೆಟ್ ಟ್ಯಾಂಕರ್, ಕಾರ್ಗೋ ಕಂಟೈನರ್,ಮಲ್ಟಿ ಎಕ್ಸಿಲ್ ಟ್ರಕ್ ಟ್ರೈಲರ್ ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದರು.
ಈ ವೇಳೆ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಜಿ.ಆರ್ ಹರೀಶ್, ಲೋಕೊಪಯೋಗಿ ಇಲಾಖೆ ಯ ಕಾರ್ಯಪಾಲಕ ಅಭಿಯಂತರ ಅನ್ವರ್ ಪಾಷಾ, ಶಿರಾಡಿ ಉಳಿಸಿ ಹೋರಾಟ ಸಮಿತಿ ಸಂಚಾಲಕ ಸಂಜೀತ್ ಶೆಟ್ಟಿ ಇನ್ನಿತರರು ಹಾಜರಿದ್ದರು.
ಇದನ್ನೂ ಓದಿ : ನೆಹರು ಬಗ್ಗೆ ನಿಮಗೇನು ಗೊತ್ತು ರವಿ, ಯಾರನ್ನೋ ಮೆಚ್ಚಿಸಲು ಹೇಳಿಕೆ ಕೊಡಬೇಡಿ: ವಿಶ್ವನಾಥ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ
Lok Sabha Election: ಕಾಂಗ್ರೆಸ್ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ
Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ
Hasan: ಫೋನ್ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು
Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್ಡಿಕೆ ತಿರುಗೇಟು