ಬಗೆಹರಿಯದ ಗ್ರಂಥಾಲಯದ ಜಾಗದ ಸಮಸ್ಯೆ


Team Udayavani, Nov 14, 2019, 3:00 AM IST

bagehariyada

ಸಕಲೇಶಪುರ: ತಾಲೂಕು ಗ್ರಂಥಾಲಯ ಕಟ್ಟಲು ಬಂದಿರುವ ಅನುದಾನ ಜಾಗದ ಸಮಸ್ಯೆಯಿಂದಾಗಿ ಅನುದಾನ ಹಿಂತಿರುಗಿ ಹೋಗುವ ಸಾಧ್ಯತೆ ಇದ್ದು ಇದರಿಂದ ಸುಂದರ ಗ್ರಂಥಾಲಯ ಕಟ್ಟಡ ತಾಲೂಕಿಗೆ ಮತ್ತೊಮ್ಮೆ ಮರೀಚಿಕೆಯಾಗುವ ಸಾಧ್ಯತೆಯಿದೆ.

ಪಟ್ಟಣದ ಇಂದಿರಾ ಕ್ಯಾಂಟೀನ್‌ ಪಕ್ಕ ಸುಮಾರು 2 ಗುಂಟೆಯಷ್ಟು ಗ್ರಂಥಾಲಯಕ್ಕೆ ಮೀಸಲಾದ ಜಾಗವನ್ನು ಎತ್ತಿನಹೊಳೆ ಯೋಜನೆ ಕಚೇರಿಗೆ ನೀಡಲಾಗಿದೆ. ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಎತ್ತಿನಹೊಳೆ ಕಚೇರಿ ಪಕ್ಕದಲ್ಲೇ ಇದ್ದ ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಸೇರುವ ಹೆಂಚಿನ ಮನೆಯೊಂದನ್ನು ಗ್ರಂಥಾಲಯಕ್ಕಾಗಿ ಕೆಡವಿ ಆ ಜಾಗದಲ್ಲಿ ಗ್ರಂಥಾಲಯ ಕಟ್ಟಡ ಕಟ್ಟುವ ತೀರ್ಮಾನಕ್ಕೆ ಬರಲಾಗಿತ್ತು.

ಈ ಹಿನ್ನೆಲೆಯಲ್ಲಿ ಗ್ರಂಥಾಲಯದ ಮುಖ್ಯ ಪಾಲಕ ಚಂದ್ರಕುಮಾರ್‌ ಶಾಸಕ ಎಚ್‌.ಕೆ. ಕುಮಾರಸ್ವಾಮಿರವರ ಜೊತೆ ನಿರಂತರ ಶ್ರಮ ಹಾಕಿ ಸುಮಾರು 30 ಲಕ್ಷ ರೂ. ಅನುದಾನವನ್ನು ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ಬಿಡುಗಡೆ ಮಾಡಿಸಿದ್ದರು.

ಇದೀಗ ಗ್ರಂಥಾಲಯ ಕಟ್ಟಡ ನಿರ್ಮಾಣ ಮಾಡಲು 30 ಲಕ್ಷ ರೂ. ಅನುದಾನ ಸಿದ್ಧವಿದೆ. ಆದರೆ ಲೋಕೋಪಯೋಗಿ ಇಲಾಖೆಯವರು ಇದೀಗ ನಾವು ಸಂಪೂರ್ಣ ಜಾಗ ಬಿಟ್ಟುಕೊಡುವುದಿಲ್ಲ, ಅರ್ಧ ಜಾಗ ಮಾತ್ರ ಬಿಟ್ಟು ಕೊಡುತ್ತೇವೆ ಎನ್ನುತ್ತಿದ್ದು ಇದರಿಂದ ಬಂದಿರುವ ಹಣ ಹಿಂತಿರುಗಿ ಹೋಗುವ ಸಾಧ್ಯತೆಗಳಿದೆ.

ಅನುದಾನ ವಾಪಸ್‌: ಈ ಹಿಂದೆಯೂ ಒಮ್ಮೆ ಇದೇ ರೀತಿ ಗೊಂದಲ ಉಂಟಾಗಿ ಹಣ ಹಿಂತಿರುಗಿ ಹೋಗಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಇದೇ ರೀತಿ ಗೊಂದಲ ಮುಂದುವರಿದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ಗ್ರಂಥಾಲಯ ನಿರ್ಮಾಣಕ್ಕೆ ಯಾವುದೇ ಅನುದಾನ ಬರುವುದಿಲ್ಲ.

ಶಿಥಿಲ ಕಟ್ಟಡದಲ್ಲಿ ಗ್ರಂಥಾಲಯ: ಈಗಿರುವ ಗ್ರಂಥಾಲಯ ಕಟ್ಟಡವು ಸ್ಕೌಟ್‌ ಮತ್ತು ಗೈಡ್ಸ್‌ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುಸುತ್ತಿದೆ. ಕಟ್ಟಡ ಸಂಪೂರ್ಣವಾಗಿ ಶಿಥಿಲಗೊಂಡಿದೆ. ಮಳೆಗಾಲದಲ್ಲಿ ನೀರು ಸೋರುವುದರಿಂದ ಲಕ್ಷಾಂತರ ರೂ. ಮೌಲ್ಯದ ಪುಸ್ತಕಗಳು ಹಾಳಾಗಿವೆ. ಕಟ್ಟಡ ಯಾವುದೇ ಸಂಧರ್ಭದಲ್ಲಿ ಬೀಳುವ ಸಾಧ್ಯತೆಯಿದ್ದು ಈ ನಿಟ್ಟಿನಲ್ಲಿ ನೂತನ ಕಟ್ಟಡದ ಅವಶ್ಯಕತೆಯಿದೆ. ಇದೇ ವೇಳೆ ಶಾಸಕರು ಸಮಸ್ಯೆಯನ್ನು ಬಗೆಹರಿಸಲು ಮುಂದಾಗದೇ ಗುದ್ದಲಿ ಪೂಜೆಯನ್ನು ಮಾಡಲು ಹೊರಟಿದ್ದು ಮುಂದೇನೆಂದು ಕಾದು ನೋಡಬೇಕಾಗಿದೆ.

ಒಟ್ಟಾರೆಯಾಗಿ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ತಾಲೂಕು ಕೇಂದ್ರದಲ್ಲೆ ಸುಸಜ್ಜಿತ ಗ್ರಂಥಾಲಯದ ಭಾಗ್ಯ ಇಲ್ಲದಂತಾಗಿದ್ದು ಕೂಡಲೇ ಶಾಸಕರು ಇತ್ತ ಗಮನಹರಿಸಿ ಜಾಗದ ಸಮಸ್ಯೆಯನ್ನು ಬಗೆಹರಿಸಿ ಬಂದಿರುವ ಅನುದಾನ ಹಿಂತಿರುಗಿ ಹೋಗದಂತೆ ಎಚ್ಚರಿಕೆ ವಹಿಸಬೇಕಾಗಿದೆ ಹಾಗೂ ಗ್ರಂಥಾಲಯ ಕಟ್ಟಡದ ನಿರ್ಮಾಣಕ್ಕೆ ಇನ್ನು ಹೆಚ್ಚಿನ ಅನುದಾನ ತರಲು ಶ್ರಮ ವಹಿಸಬೇಕಾಗಿದೆ.

ಬದಲಿ ನಿವೇಶನ ನೀಡಿಲ್ಲ: ಗ್ರಂಥಾಲಯಕ್ಕೆ ಮೀಸಲಿಟ್ಟಿದ್ದ ಜಾಗವನ್ನು ಈ ಹಿಂದೆ ಎತ್ತಿನಹೊಳೆ ಯೋಜನೆಯವರಿಗೆ ನೀಡಲಾಯಿತು. ಇದರ ಬದಲಿ ಜಾಗವಾಗಿ ಪಕ್ಕದ ಜಾಗವನ್ನು ನೀಡಲು ಗುರುತಿಸಲಾಗಿತ್ತು. ಇದೀಗ ಲೋಕೋಪಯೋಗಿ ಇಲಾಖೆಯವರು ಪೂರ್ತಿ ಜಾಗ ನೀಡಲು ಮುಂದಾಗುತ್ತಿಲ್ಲ. ಕಟ್ಟಡ ಕಾಮಗಾರಿ ಆರಂಭಿಸದಿದ್ದಲ್ಲಿ ಬಂದಿರುವ ಅನುದಾನ ಹಿಂತಿರುಗಿ ಹೋಗುತ್ತದೆ ಎಂದು ಸಕಲೇಶಪುರ ಕೇಂದ್ರ ಗ್ರಂಥಾಲಯ ಗ್ರಂಥಪಾಲಕ ಚಂದ್ರಕುಮಾರ್‌ ತಿಳಿಸಿದ್ದಾರೆ.

ಗ್ರಂಥಾಲಯ ಕಟ್ಟಡ ನಿರ್ಮಾಣವಾಗಲು ಜಾಗದ ಸಮಸ್ಯೆಯನ್ನು ಕೂಡಲೇ ಶಾಸಕರು ಬಗೆಹರಿಸಬೇಕು. ಜಾಗದ ಸಮಸ್ಯೆ ಬಗೆಹರಿಸದಿದ್ದಲ್ಲಿ ಉಗ್ರ ಪ್ರತಿಭಟನೆ ಮಾಡಲಾಗುವುದು.
-ನಾರಾಯಣ ಆಳ್ವ, ಸಮಾಜ ಸೇವಕರು

* ಸುಧೀರ್‌ ಎಸ್‌.ಎಲ್‌

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.