ಸಚಿವ ಅಧಿಕಾರದ ಬಲ ಬಳಸಿಕೊಂಡು ನಗರಾಭಿವೃದ್ಧಿ


Team Udayavani, Mar 9, 2019, 7:31 AM IST

sachiva-adi.jpg

ಹಾಸನ: ಹಾಸನ ನಗರಾಭಿವೃದ್ಧಿ ಪ್ರಾಧಿಕಾರ (ಹುಡಾ)ದ ನೂತನ ಅಧ್ಯಕ್ಷರಾಗಿ ಜಿಲ್ಲಾ ಜೆಡಿಎಸ್‌ ಹಿರಿಯ ಮುಖಂಡ ಕೆ.ಎಂ.ರಾಜೇಗೌಡ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಪ್ರಾಧಿಕಾರದ ಕಚೇರಿಯಲ್ಲಿ ಪೂಜೆ ಸಲ್ಲಿಸಿ ಅಧಿಕಾರ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

40 ವರ್ಷಗಳ ರಾಜಕಾರಣದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ತಮ್ಮನ್ನು ಗುರುತಿಸಿ ಹುಡಾ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಡಿ.ರೇವಣ್ಣ, ವಿಧಾನ ಪರಿಷತ್‌ ಮಾಜಿ ಸದಸ್ಯ ಪಟೇಲ್‌ ಶಿವರಾಂ ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರನ್ನು ಸೂಚಿಸಿದ್ದಾರೆ. ಸಚಿವ ರೇವಣ್ಣ ಅವರ ಅಧಿಕಾರದ ಬಲ ಬಳಸಿಕೊಂಡು ನಗರದ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. 

ಕಾಂಗ್ರೆಸ್‌ನಲ್ಲಿದ್ದ ನಾನು ಎರಡು ಬಾರಿ ಹಾಸನ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿ ಪಕ್ಷದೊಳಗಿನ ಭಿನ್ನ ಮತದಿಂದ ಸೋತೆ. ಆಂತಹ ಸಂದರ್ಭದಲ್ಲಿ ದೇವೇಗೌಡರು ಜೆಡಿಎಸ್‌ಗೆ ಸ್ವಾಗತಿಸಿ, ಈಗ ಹುಡಾ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಪಕ್ಷದ  ಮುಖಂಡರ ನಿರೀಕ್ಷೆಯಂತೆ ಮಾದರಿ ನಗರಾಭಿವೃದ್ಧಿ ಪ್ರಾಧಿಕಾರ ಮಾಡುವ ಭರವಸೆ ನೀಡಿದರು.

ಮಾಹಿತಿ ಪಡೆದು ಗುರಿ ಪ್ರಕಟಿಸುವೆ: ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಡಿ.ರೇವಣ್ಣ ಅವರ ವೇಗಕ್ಕೆ ತಕ್ಕಂತೆ  ಕೆಲಸ ಮಾಡಿ ಹಾಸನ ನಗರದಲ್ಲಿ ನನೆಗುದಿಗೆ ಬಿದ್ದಿರುವ ಪ್ರಮುಖ ಮೂಲ ಸೌಕರ್ಯ ಕಾಮಗಾರಿಗಳನ್ನು ಮುಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ. ನಗರಾಭಿವೃದ್ಧಿ ಪ್ರಾಧಿಕಾರದ ಸ್ಥಿತಿಗತಿ, ತುರ್ತಾಗಿ ಆಗಬೇಕಾಗಿರುವ ಯೋಜನೆಗಳ ಬಗ್ಗೆ ಇನ್ನು ಎರಡು ಮೂರು ದಿನಗಳಲ್ಲಿ ಮಾಹಿತಿ ಪಡೆದುಕೊಂಡು ನನ್ನ ಆದ್ಯತೆ, ಗುರಿಯ ಬಗ್ಗೆ ಪ್ರಕಟಿಸುವೆ ಎಂದು ರಾಜೇಗೌಡ ಹೇಳಿದರು. 

ಸಂಭ್ರಮಾಚರಣೆ: ಕೆ.ಎಂ.ರಾಜೇಗೌಡ ಅಧಿಕಾರ ಸ್ವೀಕರಿಸುತ್ತಿದ್ದಂತೆ ಜೆಡಿಎಸ್‌ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ವಿಧಾನ ಪರಿಷತ್‌ ಮಾಜಿ ಸದಸ್ಯ ಪಟೇಲ್‌ ಶಿವರಾಂ, ಪಕ್ಷದ ಹಿರಿಯ ಮುಖಂಡ ಎಂ.ಜಿ.ದೊಡ್ಡೇಗೌಡ, ನಗರಸಭಾ ಮಾಜಿ ಅಧ್ಯಕ್ಷ ಸಯ್ಯದ್‌ ಅಕರ್‌, ಜಿಪಂ ಮಾಜಿ ಉಪಾಧ್ಯಕ್ಷರಾದ ಎಸ್‌.ದ್ಯಾವೇಗೌಡ, ಬೂವನಹಳ್ಳಿ ಸ್ವಾಮಿಗೌಡ, ಪಕ್ಷದ ಮುಖಂಡರಾದ ಎಚ್‌.ಬಿ.ಗೋಪಾಲ್‌,  ಪ್ರೇಮಮ್ಮ,

ರೇಖಾ ಮಂಜುನಾಥ್‌, ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ನಾರಾಯಣಗೌಡ, ಸೇವಾದಳದ ಅಧ್ಯಕ್ಷ ಮರ್ಕುಲಿ ಗೋಪಾಲೇಗೌಡ, ಬಾಲಶಂಕರ್‌, ಶಂಕರನಹಳ್ಳಿ ನಾಗರಾಜ್‌, ಅಂಬೇಡ್ಕರ್‌ ನಗರದ ಪುಟ್ಟರಾಜ್‌ ಮತ್ತಿರರ ಮುಖಂಡರು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು. ಹೂಡಾ ಆಯುಕ್ತ ರಮೇಶ್‌, ಸಿಬ್ಬಂದಿಗಳಾದ ಮಂಜುನಾಥ್‌, ವೆಂಕಟೇಶ್‌, ಎಂಜಿನಿಯರ್‌ ಸತ್ಯನಾರಾಯಣ ಅವರೂ ಅಧ್ಯಕ್ಷರನ್ನು ಅಭಿನಂದಿಸಿದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.