ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರ ಸಹಜ ಸ್ಥಿತಿಗೆ
Team Udayavani, Sep 7, 2019, 11:48 AM IST
ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟಿ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ ಬಂಡೆಯೊಂದು ರಸ್ತೆಯ ಬದಿಯಲ್ಲಿರುವುದು.
ಸಕಲೇಶಪುರ: ಶಿರಾಡಿಘಾಟಿಯಲ್ಲಿ ಭೂ ಕುಸಿತವಾಗಿದೆ ಎಂಬ ಸುಳ್ಳು ಸುದ್ದಿ ಹರಡಿದ್ದರಿಂದ ಕೆಲ ಸಮಯ ಸಾರ್ವಜನಿಕರಲ್ಲಿ ಗೊಂದಲ ಉಂಟಾದ ಘಟನೆ ಶುಕ್ರವಾರ ನಡೆಯಿತು.
ಬೆಂಗಳೂರು-ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ತಾಲೂಕಿನ ಮಾರನಹಳ್ಳಿ ಸಮೀಪ ಕೆಲವು ಬಂಡೆಗಳು ರಸ್ತೆ ಪಕ್ಕದಲ್ಲಿ ಈ ಹಿಂದೆ ಬಿದ್ದಿದ್ದು ಇನ್ನೊಂದು ಬಂಡೆ 20 ಅಡಿ ಎತ್ತರದಿಂದ ಬೀಳುವ ಸಾಧ್ಯತೆಯಿದ್ದು ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂಬ ಸುದ್ದಿ ಹರಡಿದ್ದರಿಂದ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿದರು.
ಅಂತಿಮವಾಗಿ ಸ್ಥಳದಲ್ಲಿ ಯಾವುದೇ ಅಪಾಯ ಕಂಡು ಬಾರದಿದ್ದರಿಂದ ವಾಹನಗಳ ಸಂಚಾರ ರದ್ದುಗೊಳಿಸದೆ ಯಥಾ ಸ್ಥಿತಿಯಲ್ಲಿ ಮುಂದುವರಿಸಲಾಯಿತು.
ಕುಂಟುತ್ತಿರುವ ಚತುಷ್ಟಥ ರಸ್ತೆ ಕಾಮಗಾರಿ: ಹಾಸನದಿಂದ ಮಾರನಹಳ್ಳಿವರೆಗಿನ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಪ್ರಾರಂಭವಾಗಿ ಸುಮಾರು 3 ವರ್ಷಗಳಾಗುತ್ತಿದ್ದರೂ ಕಾಮಗಾರಿ ಶೇ.30 ಮುಗಿದಿಲ್ಲ.ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು ಗುಂಡಿಮಯವಾದ ಈ ರಸ್ತೆಯಲ್ಲಿ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಲೇ ಅಪಾಯಕಾರಿ ರಸ್ತೆಯಲ್ಲಿ ಸಂಚರಿಸುವುದು ಅನಿರ್ವಾಯ. ಚಾರ್ಮುಡಿ ಘಾಟಿ ಸಹ ಆಗಾಗ ಬಂದ್ ಆಗುವುದರಿಂದ ಅಲ್ಲಿ ಸಂಚರಿಸುವ ವಾಹನಗಳು ಈ ರಸ್ತೆಯನ್ನೇ ಆಶ್ರಯಿಸುವುದರಿಂದ ಹೆದ್ದಾರಿಯಲ್ಲಿ ವಾಹನಗಳ ದಟ್ಟಣೆ ಮತ್ತಷ್ಟು ಹೆಚ್ಚಾಗಿ ತೊಂದರೆಯಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ